Homeಕರ್ನಾಟಕಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ

ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಅವರು ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು, ಜಾತ್ಯಾತೀತ ತತ್ವದ ನಿಲುವು ಇರುವವರೆಲ್ಲ ಇದಕ್ಕೆ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

”ಸಂವಿಧಾನ ಉಳಿಯಬೇಕು. ಸಂವಿಧಾನ ಒಪ್ಪಿದ್ದೇವೆ, ಜಾತ್ಯಾತೀತ ರಾಷ್ಟ್ರ ಮಾಡುವುದಾಗಿ ಹೇಳಿದ್ದೇವೆ. ಭಾರತ ಅನೇಕ ಜಾತಿ, ಧರ್ಮ ಬಹುತ್ವ ಇರುವ ರಾಷ್ಟ್ರ. ಅದಕ್ಕಾಗಿ ಯೂನಿಟಿ ಇನ್ ಡೈವರ್ಸಿಟಿ ಕಾಣುತ್ತಿದ್ದೇವೆ. ಇದರಲ್ಲಿ ನಂಬಿಕೆ ಇಟ್ಟಿರುವವರಲ್ಲಿ ನಾಸಿರ್ ಹುಸೇನ್ ಎಂದು ಹೇಳಿದರ ಅತಿಶಯೋಕ್ತಿಯಲ್ಲ. ಸೆಕ್ಯೂಲರ್ ಆಗಿದ್ದರೆ ಮಾತ್ರ ಈ ದೇಶ ಉಳಿಯಲು ಸಾಧ್ಯ” ಎಂದರು.

”ಈ ದೇಶದಲ್ಲಿ ಯಾವುದೇ ಧರ್ಮದ ಮಗುವಾಗಿ ಹುಟ್ಟಿದರೂ ವಿಶ್ವ ಮಾನವನಾಗಿ ಹುಟ್ಟುತ್ತಾರೆ. ಆಮೇಲೆ ಅಲ್ಪ ಮಾನವನಾಗಿ ಆಗುತ್ತಾರೆ. ಬಿಜೆಪಿಯವರು ಅಲ್ಪಮಾನವರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಎಂದೂ ಕೂಡ ಸಂವಿಧಾನ ದ್ಯೇಯೋದ್ದೇಶ ಉಳಿಸಿಕೊಂಡು ಬರುತ್ತಿದೆ. ಸಂವಿಧಾನ ರಚನೆ ಮಾಡಿದಾಗ ಕಾಂಗ್ರೆಸ್ ದೊಡ್ಡ ಜವಾಬ್ದಾರಿ ನೀಡಿದೆ. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನ ಒಪ್ಪಿ ಹೊರ ತರುತ್ತದೆ” ಎಂದರು.

”ಸಂವಿಧಾನ ಜಾರಿಗೆ ಬಂದಾಗ, ಅದನ್ನ ವಿರೋಧ ಮಾಡಿದವರು RSS ಮತ್ತು ಹಿಂದೂ ಮಹಾಸಭಾ ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ. ಅದಕ್ಕಾಗಿ ಅವರು ಐಕ್ಯತೆಯಿಂದ ಇರಲು ಬಿಡುವುದಿಲ್ಲ. ಈ ದೇಶವನ್ನು ಹಿಂದೂ ರಾಷ್ಟ್ರ ಮಾಡುವುದಾಗಿ ಹೇಳುತ್ತಾರೆ. ಈ ದೇಶ ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ. 140 ಕೋಟಿ ಜನರು ಇಲ್ಲಿ ಇದ್ದಾರೆ, ಎಲ್ಲರಿಗೂ ಸೇರಿದ್ದು. ಬಿಜೆಪಿಯವರು ಇದನ್ನೇ ಅಜೆಂಡಾ ಆಗಿ ಇಟ್ಟುಕೊಂಡಿದ್ದಾರೆ” ಎಂದರು.

ಇದನ್ನೂ ಓದಿ: INDIA vs ಭಾರತ: ಹೆಸರು ಬದಲಾವಣೆ ವಿರೋಧಿಸುವವರು ದೇಶ ಬಿಟ್ಟುಹೋಗಬಹುದು- ಬಿಜೆಪಿ ನಾಯಕ

”ಇಂಡಿಯಾ ಬದಲು ಭಾರತ ಎಂದು ಹೆಸರು ಬದಲಾಯಿಸಲು ಮುಂದಾಗಿದ್ದಾರೆ. ನೀವು ನಾವು ಎಲ್ಲರೂ ಇಂಡಿಯಾದವರು, ಭಾರತೀಯರೂ ಕೂಡ ಹೌದು. ಜನರನ್ನ ದಾರಿ ತಪ್ಪಿಸು ಕೆಲಸ ಮಾಡುತ್ತಿದ್ದಾರೆ. ಇಂಡಿಯಾ ಬ್ರಿಟೀಷರು ಇಟ್ಟ ಹೆಸರು ಎಂದು ಹೇಳುತ್ತಿದ್ದಾರೆ. ಮೇಕ್ ಇನ್ ಇಂಡಿಯಾ ಅಂದವರ್ಯಾರು? ನರೇಂದ್ರ ಮೋದಿ ಮಾತ್ರ ಭಾರತೀಯನಾ? ನಾವು, ನೀವೆಲ್ಲಾ ಇಂಡಿಯಾದವರಲ್ವಾ? ನಮ್ಮ ನಡುವೆ ಹುಳಿ ಇಂಡುವ ಕೆಲಸ ಮಾಡುತ್ತಿದ್ದಾರೆ. ಇವರ ತಂತ್ರ ಫಲಿಸಲ್ಲ” ಎಂದು ಕಿಡಿಕಾರಿದರು.

”ನಾವು ಕರ್ನಾಟಕದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಮಾಡಲು ಬದ್ಧರಾಗಿದ್ದೇವೆ. ಯಾರಿಗೂ ಕಾನೂನು ಕೈಗೆ ತೆಗೆದುಕೊಳ್ಳಲು ಬಿಡಲ್ಲ. ಕೋಮು ಗಲಭೆ ಆಗದಂತೆ ಹತ್ತಿಕ್ಕುತ್ತೇವೆ. ಪ್ರತಿ ನಿತ್ಯ ಸಾಮಾಜಿಕ ಜಾಲತಾಣದಲ್ಲಿ ಕೋಮು ಸಂಘರ್ಷ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರಿಗೆ ಸೂಚನೆ ನೀಡಿದ್ದೇನೆ‌. ಯಾರಾದರು ಕೋಮು ಸಂಘರ್ಷಕ್ಕೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಆದರೆ ನಿಮ್ಮ ಮೇಲೆ ಯಾವುದೇ ರೀತಿಯ ಪರಿಣಾಮ ಆಗದಂತೆ ಕ್ರಮ ಕೈಗೊಳ್ಳುತ್ತೇವೆ‌” ಎಂದು ಹೇಳಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ 135 ಕ್ಷೇತ ಗೆದ್ದಿದೆ. ಇದಕ್ಕೆ ಅಲ್ಪಸಂಖ್ಯಾತರ ಪಾತ್ರ ಬಹುಮುಖ್ಯ. ಹೀಗಾಗಿ ಅಲ್ಪಸಂಖ್ಯಾತರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಯಕ್ರಮದ ಬಳಿಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ”ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದೆ. ಬಹುತ್ವವು ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ” ಎಂದಿದ್ದಾರೆ.

”ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರ ಮಾಡುತ್ತಾ ಡ್ರಾಮಾ ಮಾಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ , ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿ, ಕೇಂದ್ರ ಸರ್ಕಾರವೇ ಈಗ “INDIA” ಹೆಸರಿಗೆ ಬೆಚ್ಚಿ ಬಿದ್ದು ದೇಶದ ಹೆಸರು “ಭಾರತ” ಎಂದು ಹೊಸದಾಗಿ ಹೇಳಲು ಹೊರಟಿದೆ. “ನಾವು ಭಾರತ್ ಜೋಡೋ ನಡೆಸಿದವರು”. ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ. ಭಾರತದ ಬಹುತ್ವ ಸಂಸ್ಕೃತಿ, ಸಂವಿಧಾನ ಕಾಂಗ್ರೆಸ್ ಕೈಗಳಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೆ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...