Homeಕರ್ನಾಟಕಮುಂದಿನ 10 ವರ್ಷದಲ್ಲಿ ದೇಶದ ಡಿಜಿಟಲ್ ಜಾಹೀರಾತು ಮಾರುಕಟ್ಟೆ 10 ಪಟ್ಟು ಹೆಚ್ಚಳ: ವರದಿ

ಮುಂದಿನ 10 ವರ್ಷದಲ್ಲಿ ದೇಶದ ಡಿಜಿಟಲ್ ಜಾಹೀರಾತು ಮಾರುಕಟ್ಟೆ 10 ಪಟ್ಟು ಹೆಚ್ಚಳ: ವರದಿ

- Advertisement -
- Advertisement -

ಭಾರತದ ಡಿಜಿಟಲ್ ಜಾಹೀರಾತು ಮಾರುಕಟ್ಟೆ ಮುಂದಿನ ಹತ್ತು ವರ್ಷದಲ್ಲಿ 10 ಪಟ್ಟು ಬೆಳೆಯುವ ನಿರೀಕ್ಷೆಯಿದ್ದು, ಇದು 2020 ರ 30 ಲಕ್ಷ ಡಾಲರ್‌ನಿಂದ 2030 ರಲ್ಲಿ 2.5-03 ಕೋಟಿ ಡಾಲರ್‌ಗೆ ಏರಿಕೆಯಾಗಲಿದೆ ಎಂದು ಹೊಸ ವರದಿ ಸೋಮವಾರ ಬಹಿರಂಗಪಡಿಸಿದೆ.

ಬೆಂಗಳೂರು ಮೂಲದ ಮಾರುಕಟ್ಟೆ ಸಂಶೋಧನಾ ಸಂಸ್ಥೆ ರೆಡ್‌ಸೀರ್‌ನ ವರದಿಯ ಪ್ರಕಾರ, ಮುಂದಿನ ಹತ್ತು ವರ್ಷಗಳಲ್ಲಿ ಡಿಜಿಟಲ್ ಜಾಹೀರಾತು ಮಾರುಕಟ್ಟೆ ಒಟ್ಟು ಜಾಹೀರಾತು ಮಾರುಕಟ್ಟೆಯ 70-85% ರಷ್ಟು ಕೊಡುಗೆ ನೀಡುವ ಸಾಧ್ಯತೆಯಿದೆ.

ಪ್ರಸ್ತುತ ದೇಶದ ಜಾಹಿರಾತು ಮಾರುಕಟ್ಟೆಯಲ್ಲಿ 33% ದಷ್ಟು ಕೊಡುಗೆಯನ್ನು ಡಿಜಿಟಲ್ ಮಾರುಕಟ್ಟೆ ನೀಡುತ್ತದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ 24×7 ಅನುಮತಿ ನೀಡಿದ ರಾಜ್ಯ ಸರ್ಕಾರ

“ಹೊಸ ತಲೆಮಾರಿನ ಕಂಪನಿಗಳು ಇತ್ತೀಚಿನ ವರ್ಷಗಳಲ್ಲಿ ಡಿಜಿಟಲ್ ಜಾಹೀರಾತುಗಳಿಗಾಗಿ ಹೆಚ್ಚಾಗಿ ಖರ್ಚು ಮಾಡುತ್ತಿದೆ. ಸಾಂಪ್ರದಾಯಿಕ ಕಂಪನಿಗಳು ಸಹ ಡಿಜಿಟಲ್‌ಗಳಿಗಾಗಿ ಹೆಚ್ಚು ಖರ್ಚು ಮಾಡುತ್ತಿವೆ. ಈ ಬೆಳೆಯುತ್ತಿರುವ ಪ್ರವೃತ್ತಿಯ ಪ್ರಮುಖ ಅಂಶವೆಂದರೆ ಕಳೆದ ಎರಡು ತಲೆಮಾರು(ಮಿಲೇನಿಯಲ್ಸ್‌ ಮತ್ತು ಜನರೇಷನ್‌ ಝೆಡ್‌) ಹೆಚ್ಚಿನ ಸಮಯವನ್ನು ಡಿಜಿಟಲ್‌ ವೇದಿಕೆಯಲ್ಲಿ ಕಳೆಯುತ್ತಿದ್ದಾರೆ” ಎಂದು ರೆಡ್‌ಸೀರ್‌ನ ಎಂಗೇಜ್‌ಮೆಂಟ್‌‌ ವ್ಯವಸ್ಥಾಪಕ ಅಭಿಷೇಕ್ ಗುಪ್ತಾ ಹೇಳಿದ್ದಾರೆ.

ಅಲ್ಲದೆ, 2 ನೇ ಶ್ರೇಣಿಯ ನಗರಗಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಪ್ರವೇಶವು ಹೊಸ ಮಾರುಕಟ್ಟೆ ಮತ್ತು ಡಿಜಿಟಲ್ ಮಾರಾಟಗಾರರಿಗೆ ಅವಕಾಶಗಳನ್ನು ಸೃಷ್ಟಿಸುತ್ತಿದೆ. ಮೆಟ್ರೋಪೊಲಿಟನ್ ನಗರಗಳನ್ನು 1 ನೇ ಶ್ರೇಣಿಯ ನಗರಗಳು ಎಂದು ಕರೆಯುತ್ತಾರೆ. ನಂತರದ ಹಂತದಲ್ಲಿ 2 ನೇ ಶ್ರೇಣಿಯ ನಗರಗಳು ಬರುತ್ತದೆ.

“ವಿಶೇಷವಾಗಿ 2 ನೇ ಶ್ರೇಣಿ ನಗರಗಳಲ್ಲಿ ಹೆಚ್ಚಿನ ಜನರು ವೆಬ್‌ಸೈಟ್‌ಗಳು, ಅಪ್ಲಿಕೇಶನ್‌ಗಳು, ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚು ಡಿಜಿಟಲ್‌ನಲ್ಲಿ ತೊಡಗಿಸಿಕೊಳ್ಳುವುದರಿಂದ ಈ ಪ್ರವೃತ್ತಿ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಪೊರೆಟ್ ಧೃತರಾಷ್ಟ್ರ ಬಾಹುಗಳಿಗೆ ವಾಣಿಜ್ಯ ಬ್ಯಾಂಕುಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...