Homeರಾಷ್ಟ್ರೀಯಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್‌ ಜುಬೇರ್‌‌ ಅವರನ್ನು ನ್ಯಾಯಾಲಯವು ಮತ್ತೇ ನಾಲ್ಕು ದಿನಗಳ ಪೊಲೀಸರ ವಶಕ್ಕೆ ನೀಡಿದೆ. ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983 ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದರು. ಅದರ ನಂತರ ಡ್ಯೂಟಿ ಮ್ಯಾಜಿಸ್ಟ್ರೇಟ್ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಜುಬೇರ್‌‌ ಅವರು ಈ ಟ್ವೀಟ್ ಅನ್ನು 2018 ರಲ್ಲಿ ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅನಾಮಧೇಯ ಟ್ವಿಟರ್‌ ಖಾತೆಯೊಂದು ದೆಹಲಿ ಪೊಲೀಸರಿಗೆ ದೂರಿಕೊಂಡಿತ್ತು. ಇದರ ನಂತರ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೇರ್‌ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ ಖ್ಯಾತ ವಕೀಲೆ ವೃಂದಾ ಗ್ರೋವರ್‌‌, “ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983 ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ತನ್ನನ್ನು ಬಂಧಿಸಿದ್ದಾರೆ. ಇದೇ ರೀತಿಯ ಟ್ವೀಟ್‌ಅನ್ನು ಅನೇಕರು ಮಾಡಿದ್ದಾರೆ. ಆದರೆ ಆ ಖಾತೆ ಮತ್ತು ನನ್ನ ನಡುವಿನ ಏಕೈಕ ವ್ಯತ್ಯಾಸವೆಂದರೆ ನನ್ನ ಧರ್ಮ, ನನ್ನ ಹೆಸರು ಮತ್ತು ನನ್ನ ವೃತ್ತಿ” ಎಂದು ಜುಬೇರ್ ಮುಸ್ಲಿಂ ಮತ್ತು ಪತ್ರಕರ್ತ ಎಂದು ಉಲ್ಲೇಖಿಸಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಿಸಿ ಸೆ ನಾ ಕೆಹನಾ’: ಮೊಹಮ್ಮದ್ ಜುಬೇರ್‌ ಬಂಧನಕ್ಕೆ ಕಾರಣವಾದ ಹಳೆಯ ಹಿಂದಿ ಸಿನಿಮಾ ದೃಶ್ಯ!

ಜುಬೈರ್ ಅವರು ಟ್ವೀಟ್ ಮಾಡಿದ್ದ ಚಿತ್ರ, 1983ರ ಹೃಷಿಕೇಶ್ ಮುಖರ್ಜಿ ಅವರ ‘ಕಿಸಿ ಸೆ ನಾ ಕೆಹನಾ’ ಚಲನಚಿತ್ರದ ಸ್ಕ್ರೀನ್‌ ಶಾರ್ಟ್ ಆಗಿದೆ. ಅವರು ಮಾಡಿದ್ದ ಟ್ವೀಟ್‌ನಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸುವ ಚಿತ್ರಣವಿದೆ.

ಈ ಚಿತ್ರವನ್ನು ಜುಬೇರ್ ಎಡಿಟ್‌ ಮಾಡಿದ್ದಾರೆ ಎಂಬ ಪೊಲೀಸರ ಹೇಳಿಕೆಯನ್ನು ಅವರ ವಕೀಲರು ತಳ್ಳಿಹಾಕಿದ್ದು, ‘ಇದರಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಅಥವಾ ದ್ವೇಷವನ್ನು ಉತ್ತೇಜಿಸುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಹೇಳಿದ್ದಾರೆ.

“ಅದು ಪೂಜಾ ಸ್ಥಳವಲ್ಲ, ಇದು ಹನಿಮೂನ್‌ ಮೇಲೆ ಮಾಡಲಾಗಿರುವ ತಮಾಷೆಯಾಗಿದೆ…ಇಡೀ ಪ್ರಕರಣವು ಅಸಂಬದ್ಧತೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

ಜುಬೇರ್‌ಗೆ ಜಾಮೀನು ನೀಡುವಂತೆ ವಾದ ಮಂಡಿಸಿದ ಅವರು, “ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಟ್ವೀಟ್‌ನಿಂದಾಗಿ 2018ರಿಂದ 2022 ರ ನಡುವೆ ಏನಾದರೂ ನಡೆಯಿತೆ?… ನನ್ನ ಕಕ್ಷಿದಾರ ತಾನು ಮಾಡುವ ಕೆಲಸದಿಂದಾಗಿ ಗುರಿಯಾಗಿದ್ದಾರೆ. ಅವರು ಶಕ್ತಿಶಾಲಿ ಜನರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕಿರುಕುಳಕ್ಕೆ ಒಳಪಡಿಸಬಾರದು” ಎಂದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಜುಬೇರ್‌ ‘ಜನಪ್ರಿಯತೆಗಾಗಿ ಫ್ಯಾಕ್ಟ್‌ಚೆಕ್’ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಹೇಳಿದ್ದು, ಅವರ ವಿರುದ್ಧ ದಾಖಲಾಗಿರುವ ಇತರ ಎಫ್‌ಐಆರ್‌ಗಳನ್ನು ಉಲ್ಲೇಖಿಸಿ ಐದು ದಿನಗಳ ಕಸ್ಟಡಿಗೆ ಕೋರಿದ್ದರು.

“ಇದು ಅಪರಾಧದ ಮುಂದುವರಿಕೆಯಾಗಿದ್ದು, ಹನುಮಂತನನ್ನು ಪ್ರಾರ್ಥಿಸಿ, ಕೋತಿಗಳು ನಿಮಗೆ ತೊಂದರೆ ನೀಡುವುದಿಲ್ಲ” ಎಂದು ಜುಬೇರ್ ಟ್ವೀಟ್ ಮಾಡಿದ್ದಾರೆ ಎಂದು ಪೋಲೀಸರ ವಕೀಲರು ವಾದಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಜುಬೇರ್‌ ಪರ ವಕೀಲರು, “ಅದ ಮುಖ್ಯಮಂತ್ರಿಯೊಬ್ಬರ (ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್) ಹೇಳಿಕೆಯಾಗಿದ್ದು, ಅದನ್ನು ಜುಬೇರ್‌ ಪುನರುಚ್ಚರಿಸಿದ್ದರು” ಎಂದು ಹೇಳಿದ್ದಾರೆ.

ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ವೀಡಿಯೊವನ್ನು ಜುಬೇರ್‌ ಎತ್ತಿ ತೋರಿಸಿದ್ದರು. ಇದಾಗಿ ಕೆಲವು ದಿನಗಳ ನಂತರ ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಡ್ಯೂಟಿ ಮ್ಯಾಜಿಸ್ಟ್ರೇಟ್ ನಿನ್ನೆ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

2020 ರ ಪ್ರಕರಣದಲ್ಲಿ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಎಂದು ಅವರ ವಕೀಲರು ಒತ್ತಿಹೇಳಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಈಗಾಗಲೇ ಬಂಧನದ ವಿರುದ್ಧ ರಕ್ಷಣೆ ನೀಡಿದೆ. ಆದರೆ ಪೊಲೀಸ್ ಅಧಿಕಾರಿಯ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

2017 ರಲ್ಲಿ ಲಾಭರಹಿತವಾಗಿ ಸ್ಥಾಪಿತವಾದ ಆಲ್ಟ್ ನ್ಯೂಸ್ ವಿಶ್ವದ ಅತ್ಯಂತ ಪ್ರಮುಖವಾದ ಫ್ಯಾಕ್ಟ್‌‌ಚೆಕ್‌ ಔಟ್‌ಲೆಟ್‌ಗಳಲ್ಲಿ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...