Homeರಾಷ್ಟ್ರೀಯಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್‌ ಜುಬೇರ್‌‌ ಅವರನ್ನು ನ್ಯಾಯಾಲಯವು ಮತ್ತೇ ನಾಲ್ಕು ದಿನಗಳ ಪೊಲೀಸರ ವಶಕ್ಕೆ ನೀಡಿದೆ. ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983 ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದರು. ಅದರ ನಂತರ ಡ್ಯೂಟಿ ಮ್ಯಾಜಿಸ್ಟ್ರೇಟ್ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಜುಬೇರ್‌‌ ಅವರು ಈ ಟ್ವೀಟ್ ಅನ್ನು 2018 ರಲ್ಲಿ ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅನಾಮಧೇಯ ಟ್ವಿಟರ್‌ ಖಾತೆಯೊಂದು ದೆಹಲಿ ಪೊಲೀಸರಿಗೆ ದೂರಿಕೊಂಡಿತ್ತು. ಇದರ ನಂತರ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೇರ್‌ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ ಖ್ಯಾತ ವಕೀಲೆ ವೃಂದಾ ಗ್ರೋವರ್‌‌, “ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983 ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ತನ್ನನ್ನು ಬಂಧಿಸಿದ್ದಾರೆ. ಇದೇ ರೀತಿಯ ಟ್ವೀಟ್‌ಅನ್ನು ಅನೇಕರು ಮಾಡಿದ್ದಾರೆ. ಆದರೆ ಆ ಖಾತೆ ಮತ್ತು ನನ್ನ ನಡುವಿನ ಏಕೈಕ ವ್ಯತ್ಯಾಸವೆಂದರೆ ನನ್ನ ಧರ್ಮ, ನನ್ನ ಹೆಸರು ಮತ್ತು ನನ್ನ ವೃತ್ತಿ” ಎಂದು ಜುಬೇರ್ ಮುಸ್ಲಿಂ ಮತ್ತು ಪತ್ರಕರ್ತ ಎಂದು ಉಲ್ಲೇಖಿಸಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಿಸಿ ಸೆ ನಾ ಕೆಹನಾ’: ಮೊಹಮ್ಮದ್ ಜುಬೇರ್‌ ಬಂಧನಕ್ಕೆ ಕಾರಣವಾದ ಹಳೆಯ ಹಿಂದಿ ಸಿನಿಮಾ ದೃಶ್ಯ!

ಜುಬೈರ್ ಅವರು ಟ್ವೀಟ್ ಮಾಡಿದ್ದ ಚಿತ್ರ, 1983ರ ಹೃಷಿಕೇಶ್ ಮುಖರ್ಜಿ ಅವರ ‘ಕಿಸಿ ಸೆ ನಾ ಕೆಹನಾ’ ಚಲನಚಿತ್ರದ ಸ್ಕ್ರೀನ್‌ ಶಾರ್ಟ್ ಆಗಿದೆ. ಅವರು ಮಾಡಿದ್ದ ಟ್ವೀಟ್‌ನಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸುವ ಚಿತ್ರಣವಿದೆ.

ಈ ಚಿತ್ರವನ್ನು ಜುಬೇರ್ ಎಡಿಟ್‌ ಮಾಡಿದ್ದಾರೆ ಎಂಬ ಪೊಲೀಸರ ಹೇಳಿಕೆಯನ್ನು ಅವರ ವಕೀಲರು ತಳ್ಳಿಹಾಕಿದ್ದು, ‘ಇದರಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಅಥವಾ ದ್ವೇಷವನ್ನು ಉತ್ತೇಜಿಸುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಹೇಳಿದ್ದಾರೆ.

“ಅದು ಪೂಜಾ ಸ್ಥಳವಲ್ಲ, ಇದು ಹನಿಮೂನ್‌ ಮೇಲೆ ಮಾಡಲಾಗಿರುವ ತಮಾಷೆಯಾಗಿದೆ…ಇಡೀ ಪ್ರಕರಣವು ಅಸಂಬದ್ಧತೆಯಿಂದ ಕೂಡಿದೆ” ಎಂದು ಅವರು ಹೇಳಿದ್ದಾರೆ.

ಜುಬೇರ್‌ಗೆ ಜಾಮೀನು ನೀಡುವಂತೆ ವಾದ ಮಂಡಿಸಿದ ಅವರು, “ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಟ್ವೀಟ್‌ನಿಂದಾಗಿ 2018ರಿಂದ 2022 ರ ನಡುವೆ ಏನಾದರೂ ನಡೆಯಿತೆ?… ನನ್ನ ಕಕ್ಷಿದಾರ ತಾನು ಮಾಡುವ ಕೆಲಸದಿಂದಾಗಿ ಗುರಿಯಾಗಿದ್ದಾರೆ. ಅವರು ಶಕ್ತಿಶಾಲಿ ಜನರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕಿರುಕುಳಕ್ಕೆ ಒಳಪಡಿಸಬಾರದು” ಎಂದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಜುಬೇರ್‌ ‘ಜನಪ್ರಿಯತೆಗಾಗಿ ಫ್ಯಾಕ್ಟ್‌ಚೆಕ್’ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಹೇಳಿದ್ದು, ಅವರ ವಿರುದ್ಧ ದಾಖಲಾಗಿರುವ ಇತರ ಎಫ್‌ಐಆರ್‌ಗಳನ್ನು ಉಲ್ಲೇಖಿಸಿ ಐದು ದಿನಗಳ ಕಸ್ಟಡಿಗೆ ಕೋರಿದ್ದರು.

“ಇದು ಅಪರಾಧದ ಮುಂದುವರಿಕೆಯಾಗಿದ್ದು, ಹನುಮಂತನನ್ನು ಪ್ರಾರ್ಥಿಸಿ, ಕೋತಿಗಳು ನಿಮಗೆ ತೊಂದರೆ ನೀಡುವುದಿಲ್ಲ” ಎಂದು ಜುಬೇರ್ ಟ್ವೀಟ್ ಮಾಡಿದ್ದಾರೆ ಎಂದು ಪೋಲೀಸರ ವಕೀಲರು ವಾದಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಜುಬೇರ್‌ ಪರ ವಕೀಲರು, “ಅದ ಮುಖ್ಯಮಂತ್ರಿಯೊಬ್ಬರ (ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್) ಹೇಳಿಕೆಯಾಗಿದ್ದು, ಅದನ್ನು ಜುಬೇರ್‌ ಪುನರುಚ್ಚರಿಸಿದ್ದರು” ಎಂದು ಹೇಳಿದ್ದಾರೆ.

ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ವೀಡಿಯೊವನ್ನು ಜುಬೇರ್‌ ಎತ್ತಿ ತೋರಿಸಿದ್ದರು. ಇದಾಗಿ ಕೆಲವು ದಿನಗಳ ನಂತರ ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಡ್ಯೂಟಿ ಮ್ಯಾಜಿಸ್ಟ್ರೇಟ್ ನಿನ್ನೆ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

2020 ರ ಪ್ರಕರಣದಲ್ಲಿ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಎಂದು ಅವರ ವಕೀಲರು ಒತ್ತಿಹೇಳಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಈಗಾಗಲೇ ಬಂಧನದ ವಿರುದ್ಧ ರಕ್ಷಣೆ ನೀಡಿದೆ. ಆದರೆ ಪೊಲೀಸ್ ಅಧಿಕಾರಿಯ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

2017 ರಲ್ಲಿ ಲಾಭರಹಿತವಾಗಿ ಸ್ಥಾಪಿತವಾದ ಆಲ್ಟ್ ನ್ಯೂಸ್ ವಿಶ್ವದ ಅತ್ಯಂತ ಪ್ರಮುಖವಾದ ಫ್ಯಾಕ್ಟ್‌‌ಚೆಕ್‌ ಔಟ್‌ಲೆಟ್‌ಗಳಲ್ಲಿ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....