Homeಮುಖಪುಟಮುರುಘಾ ಶರಣರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ವಿಚಾರಕ್ಕೆ ಕಿಡಿಕಾರಿದ ನ್ಯಾಯಾಲಯ

ಮುರುಘಾ ಶರಣರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ವಿಚಾರಕ್ಕೆ ಕಿಡಿಕಾರಿದ ನ್ಯಾಯಾಲಯ

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನವಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಎದೆ ನೋವು ಕಾರಣದಿಂದ ಬೆಂಗಳೂರಿಗೆ ಶಿಫ್ಟ್ ಮಾಡುವುದಕ್ಕೆ ಚಿತ್ರದುರ್ಗದ ನ್ಯಾಯಾಲಯ ಕಿಡಿಕಾರಿದೆ.

ತಮ್ಮ ಅನುಮತಿಯಿಲ್ಲದೆ ಅವರನ್ನು ಜಿಲ್ಲಾಸ್ಪತ್ರೆಗೆ ಹೇಗೆ ದಾಖಲು ಮಾಡಲಾಯಿತು ಎಂಬುದಕ್ಕೆ ವಿವರಣೆ ನೀಡಬೇಕೆಂದು ಜೈಲು ಅಧಿಕಾರಿಗಳಿಗೆ ಚಿತ್ರದುರ್ಗದ 2ನೇ ಸೆಷನ್ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ ಕೋಮಲಾರವರು ತಾಕೀತು ಮಾಡಿದ್ದಾರೆ. ಅಲ್ಲದೇ ಮುರುಘಾ ಶರಣರನ್ನು ಯಾವ ವೈದ್ಯಕೀಯ ದಾಖಲೆಗಳ ಆಧಾರದಲ್ಲಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಆರೋಪಿಯನ್ನು ಖುದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಆದೇಶಿಸಿದ್ದಾರೆ.

ಕೋರ್ಟ್ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಭಾರೀ ಭದ್ರತೆಯಲ್ಲಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆ ನಂತರ ಆರೋಪಿಯನ್ನು ಮೂರು ದಿನಗಳ ಕಾಲ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.

ಅತ್ತ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲು ನ್ಯಾಯಾಲಯ ಒಪ್ಪದಿದ್ದಾಗ ಮುರುಘಾ ಶರಣರನ್ನು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಐಸಿಯು ಘಟಕಕ್ಕೆ ದಾಖಲಿಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಪೋಕ್ಸೊ ಪ್ರಕರಣದಡಿಯಲ್ಲಿ ಮುರುಘಾ ಶರಣರನ್ನು ಬಂಧಿಸಲಾಗಿತ್ತು. ಎಲ್ಲಾ ವೈದ್ಯಕೀಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು. ಅದರಂತೆ ಬೆಳಗ್ಗಿನ ಜಾವ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ಬಂಧೀಖಾನೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಪದೇ ಪದೇ ಎದೆ ನೋವು ಎಂದು ಹೇಳಿದ್ದರು. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿಸಲಾಗಿತ್ತು. ಆನಂತರ ಇಸಿಜಿ ಮಾಡಿಸಲಾಗಿತ್ತು ಎಂದು ವರದಿಯಾಗಿದೆ.

ಮೌನಮುರಿದ ಸಿದ್ದರಾಮಯ್ಯ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಾದರೂ ಪ್ರತಿಪಕ್ಷಗಳು ಹಾಗೂ ಅವುಗಳ ನಾಯಕರು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬ ಆರೋಪಗಳು ಬಂದಿದ್ದವು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

“ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನು ಮೊದಲು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಾ.ಎಚ್‌.ಸಿ.ಮಹಾದೇವಪ್ಪ ಅವರು ಪ್ರಕರಣವನ್ನು ಖಂಡಿಸಿದ್ದರು.

“ಮುರುಘಾ ಮಠದ ಸುತ್ತ ನಡೆಯುತ್ತಿರುವ ಬೆಳವಣಿಗೆಗಳು ನನ್ನಲ್ಲಿ ಏಕ ಕಾಲಕ್ಕೆ ನೋವು ಮತ್ತು ದಿಗ್ಭ್ರಮೆಯನ್ನು ಉಂಟು ಮಾಡಿದೆ. ಈ ಪ್ರಕರಣದಲ್ಲಿ ಮಠದ ಶ್ರೀಗಳು ತಮ್ಮ ಮೇಲಿನ ಪಿತೂರಿಯ ಬಗ್ಗೆ ಪ್ರಸ್ತಾಪಿಸಿದ್ದು ಈ ನೆಲದ ಕಾನೂನನ್ನು ಗೌರವಿಸುತ್ತೇನೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಸಮಾಜದಲ್ಲಿ ಹೆಚ್ಚಿನ ಗೌರವ ಹೊಂದಿರುವ ಮಠ ಮಾನ್ಯಗಳ ಮೇಲಿನ ನಂಬಿಕೆ ಮತ್ತು ಅವುಗಳ ಮೇಲಿನ ಜನರ ವಿಶ್ವಾಸದ ಉಳಿವು ಹಾಗೂ ಆ ಹೆಣ್ಣು ಮಕ್ಕಳ ದೌರ್ಜನ್ಯದ ವಿಷಯದಲ್ಲಿ ಕಾನೂನು ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಪ್ರಜ್ಞೆಯನ್ನು ಎತ್ತಿ ಹಿಡಿಯಲಿ ಎಂದು ಈ ವೇಳೆ ಮನದುಂಬಿ ವಿನಂತಿಸುತ್ತೇನೆ” ಎಂದು ಮಹದೇವಪ್ಪ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಮೌನಮುರಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....