Homeಮುಖಪುಟಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

- Advertisement -
- Advertisement -

ಆರೋಗ್ಯ ಮತ್ತು ವೈಧ್ಯಕೀಯ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆರ್.ಆಂಜನೇಯ ರೆಡ್ಡಿಯವರು ಸಚಿವ ಸುಧಾಕರ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮ್ಮೆ ಅರ್ಜಿಯನ್ನು ಪರೀಶೀಲಿಸಿದ ನ್ಯಾಯಾಲಯವು, ಸುಪ್ರೀಂ ಕೋರ್ಟ್ ಉಲ್ಲೇಖದ ಆಧಾರದಲ್ಲಿ ಮಾನನಷ್ಟ ಪ್ರಕರಣವನ್ನು ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಿ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ

2019ರಲ್ಲಿ ಡಾ.ಕೆ ಸುಧಾಕರ್‌ರವರನ್ನು ಅಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆಗ ಸುಧಾಕರ್‌ರವರ ಅರ್ಹತೆ ಮತ್ತು ಮಾನದಂಡವನ್ನು ಪ್ರಶ್ನಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆರ್.ಆಂಜನೇಯ ರೆಡ್ಡಿಯವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಸುಧಾಕರ್, “ಕಾನೂನು ಹೋರಾಟದಲ್ಲಿ ಜಯ ನನ್ನದೆ, ರೈತರಿಗೆ ಕಳ್ಳಭಟ್ಟಿ ಕುಡಿಸಿ ಜೈಲು ಸೇರಿದ್ದ ವ್ಯಕ್ತಿ ನನ್ನ ವಿರುದ್ಧ ಹೋರಾಡುತ್ತಿದ್ದಾರೆ. ಒಂದು ಪಕ್ಷದಲ್ಲಿ ಗುರುತಿಸಿಕೊಂಡ ರೈತ ವಿರೋಧಿ ವ್ಯಕ್ತಿ ನನ್ನ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ” ಎಂದು ಆರೋಪಿಸಿದ್ದರು.

ಇದರ ವಿರುದ್ಧ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಆಂಜನೇಯ ರೆಡ್ಡಿಯವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಮೇಲ್ನೋಟಕ್ಕೆ ಆರೋಪ ಸರಿ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ವಿರುದ್ಧ ಮತ್ತು ಅದನ್ನು ಪ್ರಕಟಿಸಿದ ಉದಯವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಯ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಆದೇಶಿಸಿದೆ.

ರಾಜಕಾರಣಿಗಳಿಗೆ ಇದು ಪಾಠವಾಗಲಿ – ಆರ್.ಆಂಜನೇಯ ರೆಡ್ಡಿ

ಪ್ರಕರಣದ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಆಂಜನೇಯರೆಡ್ಡಿಯವರು, “ನಮ್ಮ ರಾಜ್ಯದಲ್ಲಿ ಹಲವಾರು ವಿಚಾರಗಳನ್ನಿಟ್ಟು ಸಾವಿರಾರು ಜನರು ಹೋರಾಟ ನಡೆಸುತ್ತಿದ್ದಾರೆ. ಆದರೆ ಹೋರಾಟಗಾರರನ್ನು ಸರ್ಕಾರ ಮತ್ತು ರಾಜಕಾರಣಿಗಳು ಲಘುವಾಗಿ ಕಾಣುವ ಪರಿಪಾಠ ಬೆಳೆಯುತ್ತಿದೆ. ಚಳವಳಿಗಾರರ ವಿರುದ್ಧ ಪೊಲೀಸರನ್ನು ಬಿಟ್ಟು ಸುಳ್ಳು ಕೇಸುಗಳನ್ನು ಹಾಕಿಸುವುದು, ಅವರ ಧ್ವನಿಯನ್ನು ದಮನಿಸುವ ಕೆಲಸ ನಡೆಯುತ್ತಿದೆ. ಅಂತಹವರಿಗೆ ಇಂದಿನ ತೀರ್ಪು ಪಾಠವಾಗಬೇಕು” ಎಂದರು.

ಆರ್.ಆಂಜನೇಯ ರೆಡ್ಡಿ

ನಾನು ಸುಧಾಕರ್‌ರವರ ವಿರುದ್ಧ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದಾಗ ಅದನ್ನು ಅವರು ನ್ಯಾಯಯುತವಾಗಿ ಹೋರಾಡಬೇಕಿತ್ತು. ಅದನ್ನು ಬಿಟ್ಟು ನಿಂದನೆ ಮಾಡುವುದು, ತೇಜೋವಧೆ ಮಾಡಿದ್ದನ್ನು ಸಹಿಸಲು ಸಾಧ್ಯವಿಲ್ಲ. ಇದು ಹೋರಾಟಗಾರರ ಸ್ವಾಭಿಮಾನದ ಪ್ರಶ್ನೆಯಾಗಿದ್ದು, ಚಳವಳಿಕಾರರ ನೈತಿಕ ಶಕ್ತಿಯನ್ನು ಕುಂದಿಸುವ ಉದ್ದೇಶದಿಂದ ಕೂಡಿತ್ತು. ಹಾಗಾಗಿ ರಾಜಕಾರಣಿಗಳು ಈ ರೀತಿ ವರ್ತಿಸದಂತೆ ತಡೆಯಲು ನಾವು ಗಂಭೀರವಾಗಿ ಪರಿಗಣಿಸಿ ದೂರು ನೀಡಿದೆವು. ಒಬ್ಬರಿಗೆ ಬುದ್ಧಿ ಕಲಿಸಿದರೆ ಉಳಿದವರು ಸಹ ಎಚ್ಚೆತ್ತುಕೊಳ್ಳುತ್ತಾರೆ ಎಂದು ನಿರಂತರವಾಗಿ ಪ್ರಕರಣವನ್ನು ಫಾಲೋಅಪ್ ಮಾಡಿದೆವು. ಸಾಕ್ಷಿ ಆಧಾರಗಳನ್ನು ನೋಡಿದ ಮೇಲೆ ಕೋರ್ಟ್ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ. ಇಂದಿನ ಆದೇಶದಿಂದ ಹೋರಾಟಗಾರರಲ್ಲಿ ನಂಬಿಕೆ ಮತ್ತು ವಿಶ್ವಾಸ ಬರಬೇಕು ಎಂದು ಆಶಿಸಿದರು.

ಇದನ್ನೂ ಓದಿ: ರಾಜಕೀಯ ನಿರ್ಧಾರಕ್ಕೆ ಅಣಿಯಾಗಬೇಕಿರುವ ರೈತ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆಂಜನೇಯರೆಡ್ಡಿ ರವರ ಹೋರಾಟದ ಫಲವಾಗಿ ಸರ್ಕಾರ ಮತ್ತು ರಾಜಕಾರಣಿಗಳಿಗೆ ತಕ್ಕ ಪಾಠವನ್ನು ಕಲಿಸಿದೆ
    ಜೈ ಭೀಮ್ 👍🙏

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...