Homeಮುಖಪುಟಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

- Advertisement -
- Advertisement -

ಆರೋಗ್ಯ ಮತ್ತು ವೈಧ್ಯಕೀಯ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆರ್.ಆಂಜನೇಯ ರೆಡ್ಡಿಯವರು ಸಚಿವ ಸುಧಾಕರ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮ್ಮೆ ಅರ್ಜಿಯನ್ನು ಪರೀಶೀಲಿಸಿದ ನ್ಯಾಯಾಲಯವು, ಸುಪ್ರೀಂ ಕೋರ್ಟ್ ಉಲ್ಲೇಖದ ಆಧಾರದಲ್ಲಿ ಮಾನನಷ್ಟ ಪ್ರಕರಣವನ್ನು ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಿ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ

2019ರಲ್ಲಿ ಡಾ.ಕೆ ಸುಧಾಕರ್‌ರವರನ್ನು ಅಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆಗ ಸುಧಾಕರ್‌ರವರ ಅರ್ಹತೆ ಮತ್ತು ಮಾನದಂಡವನ್ನು ಪ್ರಶ್ನಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆರ್.ಆಂಜನೇಯ ರೆಡ್ಡಿಯವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಸುಧಾಕರ್, “ಕಾನೂನು ಹೋರಾಟದಲ್ಲಿ ಜಯ ನನ್ನದೆ, ರೈತರಿಗೆ ಕಳ್ಳಭಟ್ಟಿ ಕುಡಿಸಿ ಜೈಲು ಸೇರಿದ್ದ ವ್ಯಕ್ತಿ ನನ್ನ ವಿರುದ್ಧ ಹೋರಾಡುತ್ತಿದ್ದಾರೆ. ಒಂದು ಪಕ್ಷದಲ್ಲಿ ಗುರುತಿಸಿಕೊಂಡ ರೈತ ವಿರೋಧಿ ವ್ಯಕ್ತಿ ನನ್ನ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ” ಎಂದು ಆರೋಪಿಸಿದ್ದರು.

ಇದರ ವಿರುದ್ಧ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಆಂಜನೇಯ ರೆಡ್ಡಿಯವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಮೇಲ್ನೋಟಕ್ಕೆ ಆರೋಪ ಸರಿ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ವಿರುದ್ಧ ಮತ್ತು ಅದನ್ನು ಪ್ರಕಟಿಸಿದ ಉದಯವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಯ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಆದೇಶಿಸಿದೆ.

ರಾಜಕಾರಣಿಗಳಿಗೆ ಇದು ಪಾಠವಾಗಲಿ – ಆರ್.ಆಂಜನೇಯ ರೆಡ್ಡಿ

ಪ್ರಕರಣದ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಆಂಜನೇಯರೆಡ್ಡಿಯವರು, “ನಮ್ಮ ರಾಜ್ಯದಲ್ಲಿ ಹಲವಾರು ವಿಚಾರಗಳನ್ನಿಟ್ಟು ಸಾವಿರಾರು ಜನರು ಹೋರಾಟ ನಡೆಸುತ್ತಿದ್ದಾರೆ. ಆದರೆ ಹೋರಾಟಗಾರರನ್ನು ಸರ್ಕಾರ ಮತ್ತು ರಾಜಕಾರಣಿಗಳು ಲಘುವಾಗಿ ಕಾಣುವ ಪರಿಪಾಠ ಬೆಳೆಯುತ್ತಿದೆ. ಚಳವಳಿಗಾರರ ವಿರುದ್ಧ ಪೊಲೀಸರನ್ನು ಬಿಟ್ಟು ಸುಳ್ಳು ಕೇಸುಗಳನ್ನು ಹಾಕಿಸುವುದು, ಅವರ ಧ್ವನಿಯನ್ನು ದಮನಿಸುವ ಕೆಲಸ ನಡೆಯುತ್ತಿದೆ. ಅಂತಹವರಿಗೆ ಇಂದಿನ ತೀರ್ಪು ಪಾಠವಾಗಬೇಕು” ಎಂದರು.

ಆರ್.ಆಂಜನೇಯ ರೆಡ್ಡಿ

ನಾನು ಸುಧಾಕರ್‌ರವರ ವಿರುದ್ಧ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದಾಗ ಅದನ್ನು ಅವರು ನ್ಯಾಯಯುತವಾಗಿ ಹೋರಾಡಬೇಕಿತ್ತು. ಅದನ್ನು ಬಿಟ್ಟು ನಿಂದನೆ ಮಾಡುವುದು, ತೇಜೋವಧೆ ಮಾಡಿದ್ದನ್ನು ಸಹಿಸಲು ಸಾಧ್ಯವಿಲ್ಲ. ಇದು ಹೋರಾಟಗಾರರ ಸ್ವಾಭಿಮಾನದ ಪ್ರಶ್ನೆಯಾಗಿದ್ದು, ಚಳವಳಿಕಾರರ ನೈತಿಕ ಶಕ್ತಿಯನ್ನು ಕುಂದಿಸುವ ಉದ್ದೇಶದಿಂದ ಕೂಡಿತ್ತು. ಹಾಗಾಗಿ ರಾಜಕಾರಣಿಗಳು ಈ ರೀತಿ ವರ್ತಿಸದಂತೆ ತಡೆಯಲು ನಾವು ಗಂಭೀರವಾಗಿ ಪರಿಗಣಿಸಿ ದೂರು ನೀಡಿದೆವು. ಒಬ್ಬರಿಗೆ ಬುದ್ಧಿ ಕಲಿಸಿದರೆ ಉಳಿದವರು ಸಹ ಎಚ್ಚೆತ್ತುಕೊಳ್ಳುತ್ತಾರೆ ಎಂದು ನಿರಂತರವಾಗಿ ಪ್ರಕರಣವನ್ನು ಫಾಲೋಅಪ್ ಮಾಡಿದೆವು. ಸಾಕ್ಷಿ ಆಧಾರಗಳನ್ನು ನೋಡಿದ ಮೇಲೆ ಕೋರ್ಟ್ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ. ಇಂದಿನ ಆದೇಶದಿಂದ ಹೋರಾಟಗಾರರಲ್ಲಿ ನಂಬಿಕೆ ಮತ್ತು ವಿಶ್ವಾಸ ಬರಬೇಕು ಎಂದು ಆಶಿಸಿದರು.

ಇದನ್ನೂ ಓದಿ: ರಾಜಕೀಯ ನಿರ್ಧಾರಕ್ಕೆ ಅಣಿಯಾಗಬೇಕಿರುವ ರೈತ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆಂಜನೇಯರೆಡ್ಡಿ ರವರ ಹೋರಾಟದ ಫಲವಾಗಿ ಸರ್ಕಾರ ಮತ್ತು ರಾಜಕಾರಣಿಗಳಿಗೆ ತಕ್ಕ ಪಾಠವನ್ನು ಕಲಿಸಿದೆ
    ಜೈ ಭೀಮ್ 👍🙏

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...