Homeಮುಖಪುಟಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

- Advertisement -
- Advertisement -

ಆರೋಗ್ಯ ಮತ್ತು ವೈಧ್ಯಕೀಯ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆರ್.ಆಂಜನೇಯ ರೆಡ್ಡಿಯವರು ಸಚಿವ ಸುಧಾಕರ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮ್ಮೆ ಅರ್ಜಿಯನ್ನು ಪರೀಶೀಲಿಸಿದ ನ್ಯಾಯಾಲಯವು, ಸುಪ್ರೀಂ ಕೋರ್ಟ್ ಉಲ್ಲೇಖದ ಆಧಾರದಲ್ಲಿ ಮಾನನಷ್ಟ ಪ್ರಕರಣವನ್ನು ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಿ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ

2019ರಲ್ಲಿ ಡಾ.ಕೆ ಸುಧಾಕರ್‌ರವರನ್ನು ಅಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆಗ ಸುಧಾಕರ್‌ರವರ ಅರ್ಹತೆ ಮತ್ತು ಮಾನದಂಡವನ್ನು ಪ್ರಶ್ನಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆರ್.ಆಂಜನೇಯ ರೆಡ್ಡಿಯವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಸುಧಾಕರ್, “ಕಾನೂನು ಹೋರಾಟದಲ್ಲಿ ಜಯ ನನ್ನದೆ, ರೈತರಿಗೆ ಕಳ್ಳಭಟ್ಟಿ ಕುಡಿಸಿ ಜೈಲು ಸೇರಿದ್ದ ವ್ಯಕ್ತಿ ನನ್ನ ವಿರುದ್ಧ ಹೋರಾಡುತ್ತಿದ್ದಾರೆ. ಒಂದು ಪಕ್ಷದಲ್ಲಿ ಗುರುತಿಸಿಕೊಂಡ ರೈತ ವಿರೋಧಿ ವ್ಯಕ್ತಿ ನನ್ನ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ” ಎಂದು ಆರೋಪಿಸಿದ್ದರು.

ಇದರ ವಿರುದ್ಧ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಆಂಜನೇಯ ರೆಡ್ಡಿಯವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಮೇಲ್ನೋಟಕ್ಕೆ ಆರೋಪ ಸರಿ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ವಿರುದ್ಧ ಮತ್ತು ಅದನ್ನು ಪ್ರಕಟಿಸಿದ ಉದಯವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಯ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಆದೇಶಿಸಿದೆ.

ರಾಜಕಾರಣಿಗಳಿಗೆ ಇದು ಪಾಠವಾಗಲಿ – ಆರ್.ಆಂಜನೇಯ ರೆಡ್ಡಿ

ಪ್ರಕರಣದ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಆಂಜನೇಯರೆಡ್ಡಿಯವರು, “ನಮ್ಮ ರಾಜ್ಯದಲ್ಲಿ ಹಲವಾರು ವಿಚಾರಗಳನ್ನಿಟ್ಟು ಸಾವಿರಾರು ಜನರು ಹೋರಾಟ ನಡೆಸುತ್ತಿದ್ದಾರೆ. ಆದರೆ ಹೋರಾಟಗಾರರನ್ನು ಸರ್ಕಾರ ಮತ್ತು ರಾಜಕಾರಣಿಗಳು ಲಘುವಾಗಿ ಕಾಣುವ ಪರಿಪಾಠ ಬೆಳೆಯುತ್ತಿದೆ. ಚಳವಳಿಗಾರರ ವಿರುದ್ಧ ಪೊಲೀಸರನ್ನು ಬಿಟ್ಟು ಸುಳ್ಳು ಕೇಸುಗಳನ್ನು ಹಾಕಿಸುವುದು, ಅವರ ಧ್ವನಿಯನ್ನು ದಮನಿಸುವ ಕೆಲಸ ನಡೆಯುತ್ತಿದೆ. ಅಂತಹವರಿಗೆ ಇಂದಿನ ತೀರ್ಪು ಪಾಠವಾಗಬೇಕು” ಎಂದರು.

ಆರ್.ಆಂಜನೇಯ ರೆಡ್ಡಿ

ನಾನು ಸುಧಾಕರ್‌ರವರ ವಿರುದ್ಧ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದಾಗ ಅದನ್ನು ಅವರು ನ್ಯಾಯಯುತವಾಗಿ ಹೋರಾಡಬೇಕಿತ್ತು. ಅದನ್ನು ಬಿಟ್ಟು ನಿಂದನೆ ಮಾಡುವುದು, ತೇಜೋವಧೆ ಮಾಡಿದ್ದನ್ನು ಸಹಿಸಲು ಸಾಧ್ಯವಿಲ್ಲ. ಇದು ಹೋರಾಟಗಾರರ ಸ್ವಾಭಿಮಾನದ ಪ್ರಶ್ನೆಯಾಗಿದ್ದು, ಚಳವಳಿಕಾರರ ನೈತಿಕ ಶಕ್ತಿಯನ್ನು ಕುಂದಿಸುವ ಉದ್ದೇಶದಿಂದ ಕೂಡಿತ್ತು. ಹಾಗಾಗಿ ರಾಜಕಾರಣಿಗಳು ಈ ರೀತಿ ವರ್ತಿಸದಂತೆ ತಡೆಯಲು ನಾವು ಗಂಭೀರವಾಗಿ ಪರಿಗಣಿಸಿ ದೂರು ನೀಡಿದೆವು. ಒಬ್ಬರಿಗೆ ಬುದ್ಧಿ ಕಲಿಸಿದರೆ ಉಳಿದವರು ಸಹ ಎಚ್ಚೆತ್ತುಕೊಳ್ಳುತ್ತಾರೆ ಎಂದು ನಿರಂತರವಾಗಿ ಪ್ರಕರಣವನ್ನು ಫಾಲೋಅಪ್ ಮಾಡಿದೆವು. ಸಾಕ್ಷಿ ಆಧಾರಗಳನ್ನು ನೋಡಿದ ಮೇಲೆ ಕೋರ್ಟ್ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ. ಇಂದಿನ ಆದೇಶದಿಂದ ಹೋರಾಟಗಾರರಲ್ಲಿ ನಂಬಿಕೆ ಮತ್ತು ವಿಶ್ವಾಸ ಬರಬೇಕು ಎಂದು ಆಶಿಸಿದರು.

ಇದನ್ನೂ ಓದಿ: ರಾಜಕೀಯ ನಿರ್ಧಾರಕ್ಕೆ ಅಣಿಯಾಗಬೇಕಿರುವ ರೈತ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆಂಜನೇಯರೆಡ್ಡಿ ರವರ ಹೋರಾಟದ ಫಲವಾಗಿ ಸರ್ಕಾರ ಮತ್ತು ರಾಜಕಾರಣಿಗಳಿಗೆ ತಕ್ಕ ಪಾಠವನ್ನು ಕಲಿಸಿದೆ
    ಜೈ ಭೀಮ್ 👍🙏

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...