Homeಕರ್ನಾಟಕಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ - ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ...

ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

- Advertisement -
- Advertisement -

ಕರ್ನಾಟಕದಲ್ಲಿ ವಿವಾದಾತ್ಮಕ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದ ನಂತರ, ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕೆ ರಾಜ್ಯದಲ್ಲಿ ದಾಖಲಾದ ಮೊದಲ ಪ್ರಕರಣದ ಮೇಲೆ ಹಲವಾರು ಸಂಶಯಗಳೆದ್ದಿವೆ. ಹೊಸ ಕಾಯಿದೆಯ ಅನ್ವಯ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ. ಅಲ್ಲದೆ ಜಾನುವಾರು ಸಾಗಾಟಗಾರನ ಮೇಲೆ ಶೃಂಗೇರಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದಾವಣೆಗೆರೆಯ ಆಬಿದ್ ಅಲಿ (45) ಹಲವು ವರ್ಷಗಳಿಂದ ಅಧಿಕೃತವಾಗಿ ಜಾನುವಾರು ಸಾಗಾಟ ಮಾಡುವ ವೃತ್ತಿ ಮಾಡುತ್ತಿದ್ದರು. ನೂತನ ಕಾಯ್ದೆಯ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಜನವರಿ 7ರ ಗುರುವಾರದಂದು ರಾಣಿಬೆನ್ನೂರಿನಿಂದ ಮಂಗಳೂರಿಗೆ ಕೆಲವು ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ನಡುವೆ ಶೃಂಗೇರಿಯ ತನಿಕೋಡ್ ಚೆಕ್‌ಪೋಸ್ಟ್‌ ಬಳಿ ಲಾರಿಯನ್ನು ತಡೆಗಟ್ಟಿದ ಗುಂಪೊಂದು ಆಬಿದ್ ಅಲಿಯವರಿಗೆ ಕಬ್ಭಿಣದ ರಾಡ್‌ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಲಾರಿಯಲ್ಲಿದ್ದ ಮತ್ತೊಬ್ಬ ಹಲ್ಲೆಕೋರರ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ನಂತರ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ, ಹಲ್ಲೆಗೊಳಗಾದ ಆಬಿದ್‌ ಅಲಿಯ ಮೇಲೆಯೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

ಹಲ್ಲೆಗೊಳಗಾದ ಆಬಿದ್ ಅಲಿಯನ್ನು ಪ್ರಾಥಮಿಕ ಚಿಕಿತ್ಸೆಗೆ ಶೃಂಗೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಾದ ನಂತರ, ಇನ್ನೂ ಹೆಚ್ಚಿನ ಚಿಕಿತ್ಸೆಗೆ ದಾವಣೆಗೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ಕಾರದ ಎಲ್ಲಾ ಅನುಮತಿಗಳನ್ನು ಪಡೆದೆ ತಾನು ಜಾನುವಾರು ಸಾಗಾಟ ಮಾಡಿದ್ದೇನೆ ಅಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾಡನಾಡಿದ ಆಬಿದ್ ಅಲಿ, “ನೂತನ ಕಾನೂನಿನ ಪ್ರಕಾರ ಸರ್ಕಾರದ ಪರವಾನಿಗೆ ಮತ್ತು ಪಶುವೈದ್ಯರ ಅನುಮತಿ ಪತ್ರ ಪಡೆದು ನಾನು ಜಾನುವಾರು ಸಾಗಣೆ ಮಾಡುತ್ತಿದ್ದೆ. ಹೀಗಿರುವಾಗ ನನ್ನ ಮೇಲೆಯೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್‌ ಇಲಾಖೆ ಸೂಕ್ತ ತನಿಖೆ ನಡೆಸಿ ನನ್ನ ಮೇಲೆ ಹಾಕಿರುವ ಪ್ರಕರಣವವನ್ನು ಹಿಂಪಡೆಯಬೇಕು. ಅಲ್ಲದೆ ನನ್ನ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ಆಬಿದ್ ಅಲಿಗೆ ಹಲ್ಲೆ ಮಾಡಿದ್ದಲ್ಲದೆ ಅವರ ಎರಡು ಮೊಬೈಲ್, 22 ಸಾವಿರ ರೂಗಳಷ್ಟು ಹಣವನ್ನು ದೋಚಲಾಗಿದೆ. ಜೊತೆಗೆ ವಾಹನದಲ್ಲಿದ್ದ ಅವರ ಅಣ್ಣನ ಫೋನ್ ನಂಬರ್‌ಗಳನ್ನು ಪಡೆದು ಅವರಿಗೂ ಜೀವ ಬೆದರಿಕೆ ಹಾಕಲಾಗಿದೆ. ಆಬಿದ್ ಅಲಿಯವರಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ನಾಲ್ಕು ಜನರ ಮೇಲೆ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಇದುವರೆಗೂ ಅವರನ್ನು ಬಂಧಿಸಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಗೋಹತ್ಯೆ ಕಾನೂನಿನ ಕಾರಣಕ್ಕೆ ಈ ಪ್ರಕರಣವು ಕರ್ನಾಟಕದಾದ್ಯಂತ ಸುದ್ದಿಯಾಗಿತ್ತು. ಹೊಸ ಕಾಯ್ದೆಯಡಿ ರಾಜ್ಯದಲ್ಲಿ ಹತ್ಯೆಗಾಗಿ ಗೋವು ಮಾರಾಟ, ಸಾಗಣೆಯ ಮೇಲೆ ನಿರ್ಬಂಧ ವಿಧಿಸಲಾಗಿದೆ. ಆರೋಪ ಸಾಬೀತಾದರೆ 3 ರಿಂದ 7 ವರ್ಷ ಜೈಲು ಶಿಕ್ಷೆ, ಜೊತೆಗೆ 50 ಸಾವಿರದಿಂದ 5 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಇದೆ. ಆದರೆ ವಯಸ್ಸಾದ ಜಾನುವಾರಗಳನ್ನು ಅಧಿಕೃತ ದಾಖಲೆಯೊಂದಿಗೆ ಮಾಂಸಕ್ಕೆ ಬಳಸಬಹುದಾಗಿದೆ.


ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....