Homeಮುಖಪುಟಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದಂತೆಯೇ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದಾರೆ.

- Advertisement -
- Advertisement -

ನವದೆಹಲಿ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದ) ಹಿರಿಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಇದರ ಜೊತೆಗೆ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರೂ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದಾರೆ.

“ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಅದರ ಬಗ್ಗೆ ಯಾರೂ ನನಗೆ ಏನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ” ಎಂದು ಭಟ್ಟಾಚಾರ್ಯ ಅವರು ಹೇಳಿಕೆ ನೀಡಿದ್ದಾರೆ.

ಅನಾರೋಗ್ಯದ ಕಾರಣ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವವರೆಗೂ ಮತ್ತು ನಂತರವೂ ಭಟ್ಟಾಚಾರ್ಯ ಅವರು ನರೇಂದ್ರ ಮೋದಿ ಸರ್ಕಾರದ ತೀವ್ರ ಟೀಕಾಕಾರರಾಗಿದ್ದರು.

ಅಧಿಕಾರಿಯೊಬ್ಬರು ಭಟ್ಟಾಚಾರ್ಯ ಅವರ ನಿವಾಸಕ್ಕೆ ಕರೆ ಮಾಡಿ ಸರ್ಕಾರದ ನಿರ್ಧಾರದ ಬಗ್ಗೆ ಅವರ ಪತ್ನಿಗೆ ತಿಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೊಂಡಿದೆ. ಸಚಿವಾಲಯದೊಳಗಿನ ಹೆಸರು ಹೇಳಲಿಚ್ಛಿಸದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳಾದ ಎಎನ್‌ಐ ಮತ್ತು ಪಿಟಿಐ ವರದಿ ಮಾಡಿದ್ದು, “ಭಟ್ಟಾಚಾರ್ಯ ಅವರ ಕುಟುಂಬವು ಪ್ರಶಸ್ತಿಗೆ ವಿರೋಧ ವ್ಯಕ್ತಪಡಿಸಿಲ್ಲ” ಎಂದಿವೆ.

ಪದ್ಮ ಪ್ರಶಸ್ತಿಗೆ ಹೆಸರನ್ನು ಘೋಷಿಸುವ ಮೊದಲು ಕೇಂದ್ರ ಸರ್ಕಾರವು ಪ್ರಶಸ್ತಿ ಪುರಸ್ಕೃತರ ಒಪ್ಪಿಗೆಯನ್ನು ಪಡೆಯುವುದು ರೂಢಿಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.

77 ವರ್ಷದ ಕಮ್ಯುನಿಸ್ಟ್ ನಾಯಕ 2000-2011ರ ಅವಧಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು. ಪದ್ಮಭೂಷಣ ಪ್ರಶಸ್ತಿಯನ್ನು ಅವರು ನಿರಾಕರಿಸಿರುವ ಕುರಿತು ಸಿಪಿಐ(ಎಂ) ಟ್ವಿಟರ್ ಹ್ಯಾಡಲ್‌ ತಿಳಿಸಿದೆ.

“ಪದ್ಮಭೂಷಣ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಕಾಮ್ರೇಡ್ ಬುದ್ಧದೇಬ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಪ್ರಭುತ್ವದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಪ್ರಶಸ್ತಿಗಾಗಿ ಅಲ್ಲ ಜನರಿಗಾಗಿ. ಈ ಹಿಂದೆ ಪ್ರಶಸ್ತಿಯನ್ನು ನೀಡಲಾಗಿದ್ದ ಕಾಮ್ರೇಡ್ ಇಎಂಎಸ್ (ನಂಬೂದರಿಪಾಡ್) ಅದನ್ನು ನಿರಾಕರಿಸಿದ್ದರು” ಎಂದು ಸಿಪಿಐ(ಎಂ) ಟ್ವೀಟ್ ಮಾಡಿದೆ.

“ಕಮ್ಯುನಿಸ್ಟರು ಪ್ರಭುತ್ವದ ಪ್ರಶಸ್ತಿಗಳಿಗೆ ಹಾತೊರೆಯುವುದಿಲ್ಲ. ಈ ಹಿಂದೆ ಜ್ಯೋತಿ ಬಸು ಅವರು 2008ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನಿರಾಕರಿಸಿದ್ದರು. ಹಾಗಾಗಿ ಇದನ್ನೂ ನಿರೀಕ್ಷಿಸಲಾಗಿತ್ತು” ಎಂದು ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಹೇಳಿದ್ದಾರೆ.

‘ಅತ್ಯಂತ ಅವಮಾನಕರ’

ಸಂಧ್ಯಾ ಮುಖರ್ಜಿ

ಜನಪ್ರಿಯ ಹಿನ್ನೆಲೆ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪ್ರಶಸ್ತಿ ನಿರಾಕರಣೆಯನ್ನು ಮಾಡಿರುವ ಕುರಿತು ಅವರ ಪುತ್ರಿ ಸೌಮಿ ಸೇನ್‌ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆ ಮಾತನಾಡಿರುವ ಅವರು, “90ನೇ ವಯಸ್ಸಿನಲ್ಲಿ ಸಂಗೀತ ದಂತಕಥೆಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವುದು ಅತ್ಯಂತ ಅವಮಾನಕರ” ಎಂದು ಸೌಮಿ ಸೇನ್‌ಗುಪ್ತಾ ಹೇಳಿದ್ದಾರೆ.

“ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸುವ ಮುಖರ್ಜಿ ಅವರ ನಿರ್ಧಾರವು ರಾಜಕೀಯ ಪ್ರೇರಿತವಲ್ಲ” ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

”ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರು ಯಾವುದೇ ರಾಜಕೀಯವನ್ನು ಮೀರಿದವರು. ದಯವಿಟ್ಟು ಅದರಲ್ಲಿ ಯಾವುದೇ ರಾಜಕೀಯ ಕಾರಣಗಳನ್ನು ಹುಡುಕಲು ಪ್ರಯತ್ನಿಸಬೇಡಿ. ಅವರು ಅವಮಾನಿತರಾಗಿದ್ದಾರೆ ಅಷ್ಟೇ” ಎಂದು ಸೌಮಿ ಅವರು ತಿಳಿಸಿದ್ದಾರೆ.

ಸಂಧ್ಯಾ ಮುಖರ್ಜಿ ಅವರು ಪಶ್ಚಿಮ ಬಂಗಾಳ ಸರ್ಕಾರವು ನೀಡುವ ಅತ್ಯುನ್ನತ ನಾಗರಿಕ ಗೌರವವಾದ ಬಂಗಾ ಬಿಭೂಷಣವನ್ನು 2011ರಲ್ಲಿ ಪಡೆದಿದ್ದಾರೆ. ಹಾಲಿವುಡ್ ಕ್ಲಾಸಿಕ್ ‘ಸೌಂಡ್ ಆಫ್ ಮ್ಯೂಸಿಕ್’ನ ಬಂಗಾಳಿ ರಿಮೇಕ್ ಆದ ‘ಜಯ್ ಜಯಂತಿ’ಗಾಗಿ ಅವರು 1970ರಲ್ಲಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದ್ದಾರೆ.


ಇದನ್ನೂ ಓದಿರಿ: ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...