Homeಮುಖಪುಟಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದಂತೆಯೇ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದಾರೆ.

- Advertisement -
- Advertisement -

ನವದೆಹಲಿ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದ) ಹಿರಿಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಇದರ ಜೊತೆಗೆ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರೂ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದಾರೆ.

“ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಅದರ ಬಗ್ಗೆ ಯಾರೂ ನನಗೆ ಏನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ” ಎಂದು ಭಟ್ಟಾಚಾರ್ಯ ಅವರು ಹೇಳಿಕೆ ನೀಡಿದ್ದಾರೆ.

ಅನಾರೋಗ್ಯದ ಕಾರಣ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವವರೆಗೂ ಮತ್ತು ನಂತರವೂ ಭಟ್ಟಾಚಾರ್ಯ ಅವರು ನರೇಂದ್ರ ಮೋದಿ ಸರ್ಕಾರದ ತೀವ್ರ ಟೀಕಾಕಾರರಾಗಿದ್ದರು.

ಅಧಿಕಾರಿಯೊಬ್ಬರು ಭಟ್ಟಾಚಾರ್ಯ ಅವರ ನಿವಾಸಕ್ಕೆ ಕರೆ ಮಾಡಿ ಸರ್ಕಾರದ ನಿರ್ಧಾರದ ಬಗ್ಗೆ ಅವರ ಪತ್ನಿಗೆ ತಿಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೊಂಡಿದೆ. ಸಚಿವಾಲಯದೊಳಗಿನ ಹೆಸರು ಹೇಳಲಿಚ್ಛಿಸದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳಾದ ಎಎನ್‌ಐ ಮತ್ತು ಪಿಟಿಐ ವರದಿ ಮಾಡಿದ್ದು, “ಭಟ್ಟಾಚಾರ್ಯ ಅವರ ಕುಟುಂಬವು ಪ್ರಶಸ್ತಿಗೆ ವಿರೋಧ ವ್ಯಕ್ತಪಡಿಸಿಲ್ಲ” ಎಂದಿವೆ.

ಪದ್ಮ ಪ್ರಶಸ್ತಿಗೆ ಹೆಸರನ್ನು ಘೋಷಿಸುವ ಮೊದಲು ಕೇಂದ್ರ ಸರ್ಕಾರವು ಪ್ರಶಸ್ತಿ ಪುರಸ್ಕೃತರ ಒಪ್ಪಿಗೆಯನ್ನು ಪಡೆಯುವುದು ರೂಢಿಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.

77 ವರ್ಷದ ಕಮ್ಯುನಿಸ್ಟ್ ನಾಯಕ 2000-2011ರ ಅವಧಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು. ಪದ್ಮಭೂಷಣ ಪ್ರಶಸ್ತಿಯನ್ನು ಅವರು ನಿರಾಕರಿಸಿರುವ ಕುರಿತು ಸಿಪಿಐ(ಎಂ) ಟ್ವಿಟರ್ ಹ್ಯಾಡಲ್‌ ತಿಳಿಸಿದೆ.

“ಪದ್ಮಭೂಷಣ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಕಾಮ್ರೇಡ್ ಬುದ್ಧದೇಬ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಪ್ರಭುತ್ವದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಪ್ರಶಸ್ತಿಗಾಗಿ ಅಲ್ಲ ಜನರಿಗಾಗಿ. ಈ ಹಿಂದೆ ಪ್ರಶಸ್ತಿಯನ್ನು ನೀಡಲಾಗಿದ್ದ ಕಾಮ್ರೇಡ್ ಇಎಂಎಸ್ (ನಂಬೂದರಿಪಾಡ್) ಅದನ್ನು ನಿರಾಕರಿಸಿದ್ದರು” ಎಂದು ಸಿಪಿಐ(ಎಂ) ಟ್ವೀಟ್ ಮಾಡಿದೆ.

“ಕಮ್ಯುನಿಸ್ಟರು ಪ್ರಭುತ್ವದ ಪ್ರಶಸ್ತಿಗಳಿಗೆ ಹಾತೊರೆಯುವುದಿಲ್ಲ. ಈ ಹಿಂದೆ ಜ್ಯೋತಿ ಬಸು ಅವರು 2008ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನಿರಾಕರಿಸಿದ್ದರು. ಹಾಗಾಗಿ ಇದನ್ನೂ ನಿರೀಕ್ಷಿಸಲಾಗಿತ್ತು” ಎಂದು ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಹೇಳಿದ್ದಾರೆ.

‘ಅತ್ಯಂತ ಅವಮಾನಕರ’

ಸಂಧ್ಯಾ ಮುಖರ್ಜಿ

ಜನಪ್ರಿಯ ಹಿನ್ನೆಲೆ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪ್ರಶಸ್ತಿ ನಿರಾಕರಣೆಯನ್ನು ಮಾಡಿರುವ ಕುರಿತು ಅವರ ಪುತ್ರಿ ಸೌಮಿ ಸೇನ್‌ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆ ಮಾತನಾಡಿರುವ ಅವರು, “90ನೇ ವಯಸ್ಸಿನಲ್ಲಿ ಸಂಗೀತ ದಂತಕಥೆಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವುದು ಅತ್ಯಂತ ಅವಮಾನಕರ” ಎಂದು ಸೌಮಿ ಸೇನ್‌ಗುಪ್ತಾ ಹೇಳಿದ್ದಾರೆ.

“ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸುವ ಮುಖರ್ಜಿ ಅವರ ನಿರ್ಧಾರವು ರಾಜಕೀಯ ಪ್ರೇರಿತವಲ್ಲ” ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

”ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರು ಯಾವುದೇ ರಾಜಕೀಯವನ್ನು ಮೀರಿದವರು. ದಯವಿಟ್ಟು ಅದರಲ್ಲಿ ಯಾವುದೇ ರಾಜಕೀಯ ಕಾರಣಗಳನ್ನು ಹುಡುಕಲು ಪ್ರಯತ್ನಿಸಬೇಡಿ. ಅವರು ಅವಮಾನಿತರಾಗಿದ್ದಾರೆ ಅಷ್ಟೇ” ಎಂದು ಸೌಮಿ ಅವರು ತಿಳಿಸಿದ್ದಾರೆ.

ಸಂಧ್ಯಾ ಮುಖರ್ಜಿ ಅವರು ಪಶ್ಚಿಮ ಬಂಗಾಳ ಸರ್ಕಾರವು ನೀಡುವ ಅತ್ಯುನ್ನತ ನಾಗರಿಕ ಗೌರವವಾದ ಬಂಗಾ ಬಿಭೂಷಣವನ್ನು 2011ರಲ್ಲಿ ಪಡೆದಿದ್ದಾರೆ. ಹಾಲಿವುಡ್ ಕ್ಲಾಸಿಕ್ ‘ಸೌಂಡ್ ಆಫ್ ಮ್ಯೂಸಿಕ್’ನ ಬಂಗಾಳಿ ರಿಮೇಕ್ ಆದ ‘ಜಯ್ ಜಯಂತಿ’ಗಾಗಿ ಅವರು 1970ರಲ್ಲಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದ್ದಾರೆ.


ಇದನ್ನೂ ಓದಿರಿ: ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...