Homeಮುಖಪುಟಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದಂತೆಯೇ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದಾರೆ.

- Advertisement -
- Advertisement -

ನವದೆಹಲಿ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದ) ಹಿರಿಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಇದರ ಜೊತೆಗೆ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರೂ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದಾರೆ.

“ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಅದರ ಬಗ್ಗೆ ಯಾರೂ ನನಗೆ ಏನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ” ಎಂದು ಭಟ್ಟಾಚಾರ್ಯ ಅವರು ಹೇಳಿಕೆ ನೀಡಿದ್ದಾರೆ.

ಅನಾರೋಗ್ಯದ ಕಾರಣ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವವರೆಗೂ ಮತ್ತು ನಂತರವೂ ಭಟ್ಟಾಚಾರ್ಯ ಅವರು ನರೇಂದ್ರ ಮೋದಿ ಸರ್ಕಾರದ ತೀವ್ರ ಟೀಕಾಕಾರರಾಗಿದ್ದರು.

ಅಧಿಕಾರಿಯೊಬ್ಬರು ಭಟ್ಟಾಚಾರ್ಯ ಅವರ ನಿವಾಸಕ್ಕೆ ಕರೆ ಮಾಡಿ ಸರ್ಕಾರದ ನಿರ್ಧಾರದ ಬಗ್ಗೆ ಅವರ ಪತ್ನಿಗೆ ತಿಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೊಂಡಿದೆ. ಸಚಿವಾಲಯದೊಳಗಿನ ಹೆಸರು ಹೇಳಲಿಚ್ಛಿಸದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳಾದ ಎಎನ್‌ಐ ಮತ್ತು ಪಿಟಿಐ ವರದಿ ಮಾಡಿದ್ದು, “ಭಟ್ಟಾಚಾರ್ಯ ಅವರ ಕುಟುಂಬವು ಪ್ರಶಸ್ತಿಗೆ ವಿರೋಧ ವ್ಯಕ್ತಪಡಿಸಿಲ್ಲ” ಎಂದಿವೆ.

ಪದ್ಮ ಪ್ರಶಸ್ತಿಗೆ ಹೆಸರನ್ನು ಘೋಷಿಸುವ ಮೊದಲು ಕೇಂದ್ರ ಸರ್ಕಾರವು ಪ್ರಶಸ್ತಿ ಪುರಸ್ಕೃತರ ಒಪ್ಪಿಗೆಯನ್ನು ಪಡೆಯುವುದು ರೂಢಿಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.

77 ವರ್ಷದ ಕಮ್ಯುನಿಸ್ಟ್ ನಾಯಕ 2000-2011ರ ಅವಧಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು. ಪದ್ಮಭೂಷಣ ಪ್ರಶಸ್ತಿಯನ್ನು ಅವರು ನಿರಾಕರಿಸಿರುವ ಕುರಿತು ಸಿಪಿಐ(ಎಂ) ಟ್ವಿಟರ್ ಹ್ಯಾಡಲ್‌ ತಿಳಿಸಿದೆ.

“ಪದ್ಮಭೂಷಣ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಕಾಮ್ರೇಡ್ ಬುದ್ಧದೇಬ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಪ್ರಭುತ್ವದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಪ್ರಶಸ್ತಿಗಾಗಿ ಅಲ್ಲ ಜನರಿಗಾಗಿ. ಈ ಹಿಂದೆ ಪ್ರಶಸ್ತಿಯನ್ನು ನೀಡಲಾಗಿದ್ದ ಕಾಮ್ರೇಡ್ ಇಎಂಎಸ್ (ನಂಬೂದರಿಪಾಡ್) ಅದನ್ನು ನಿರಾಕರಿಸಿದ್ದರು” ಎಂದು ಸಿಪಿಐ(ಎಂ) ಟ್ವೀಟ್ ಮಾಡಿದೆ.

“ಕಮ್ಯುನಿಸ್ಟರು ಪ್ರಭುತ್ವದ ಪ್ರಶಸ್ತಿಗಳಿಗೆ ಹಾತೊರೆಯುವುದಿಲ್ಲ. ಈ ಹಿಂದೆ ಜ್ಯೋತಿ ಬಸು ಅವರು 2008ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನಿರಾಕರಿಸಿದ್ದರು. ಹಾಗಾಗಿ ಇದನ್ನೂ ನಿರೀಕ್ಷಿಸಲಾಗಿತ್ತು” ಎಂದು ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಹೇಳಿದ್ದಾರೆ.

‘ಅತ್ಯಂತ ಅವಮಾನಕರ’

ಸಂಧ್ಯಾ ಮುಖರ್ಜಿ

ಜನಪ್ರಿಯ ಹಿನ್ನೆಲೆ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪ್ರಶಸ್ತಿ ನಿರಾಕರಣೆಯನ್ನು ಮಾಡಿರುವ ಕುರಿತು ಅವರ ಪುತ್ರಿ ಸೌಮಿ ಸೇನ್‌ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆ ಮಾತನಾಡಿರುವ ಅವರು, “90ನೇ ವಯಸ್ಸಿನಲ್ಲಿ ಸಂಗೀತ ದಂತಕಥೆಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವುದು ಅತ್ಯಂತ ಅವಮಾನಕರ” ಎಂದು ಸೌಮಿ ಸೇನ್‌ಗುಪ್ತಾ ಹೇಳಿದ್ದಾರೆ.

“ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸುವ ಮುಖರ್ಜಿ ಅವರ ನಿರ್ಧಾರವು ರಾಜಕೀಯ ಪ್ರೇರಿತವಲ್ಲ” ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

”ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರು ಯಾವುದೇ ರಾಜಕೀಯವನ್ನು ಮೀರಿದವರು. ದಯವಿಟ್ಟು ಅದರಲ್ಲಿ ಯಾವುದೇ ರಾಜಕೀಯ ಕಾರಣಗಳನ್ನು ಹುಡುಕಲು ಪ್ರಯತ್ನಿಸಬೇಡಿ. ಅವರು ಅವಮಾನಿತರಾಗಿದ್ದಾರೆ ಅಷ್ಟೇ” ಎಂದು ಸೌಮಿ ಅವರು ತಿಳಿಸಿದ್ದಾರೆ.

ಸಂಧ್ಯಾ ಮುಖರ್ಜಿ ಅವರು ಪಶ್ಚಿಮ ಬಂಗಾಳ ಸರ್ಕಾರವು ನೀಡುವ ಅತ್ಯುನ್ನತ ನಾಗರಿಕ ಗೌರವವಾದ ಬಂಗಾ ಬಿಭೂಷಣವನ್ನು 2011ರಲ್ಲಿ ಪಡೆದಿದ್ದಾರೆ. ಹಾಲಿವುಡ್ ಕ್ಲಾಸಿಕ್ ‘ಸೌಂಡ್ ಆಫ್ ಮ್ಯೂಸಿಕ್’ನ ಬಂಗಾಳಿ ರಿಮೇಕ್ ಆದ ‘ಜಯ್ ಜಯಂತಿ’ಗಾಗಿ ಅವರು 1970ರಲ್ಲಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದ್ದಾರೆ.


ಇದನ್ನೂ ಓದಿರಿ: ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...