Homeಮುಖಪುಟಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP...

ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನೆ ತಿಳಿಸಿದೆ.

- Advertisement -
- Advertisement -

ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ತನ್ನ ಮುಂಬೈ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಸಾಂದರ್ಭಿಕ ಸಾಕ್ಷ್ಯಗಳು ಮತ್ತು ಪ್ರಾಥಮಿಕ ತನಿಖೆಯನ್ನಾಧರಿಸಿ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆಯೆಂದು ಕರೆದಿದ್ದರು. ಆದರೆ ಅದು ಕೊಲೆಯೆಂದು, ಮುಂಬೈ ಪೊಲೀಸರು ಪ್ರಕರಣ ಮುಚ್ಚಿಹಾಕುತ್ತಿದ್ದಾರೆ ಎಂದು ಆರೋಪಿಸಿ, ಸುಶಾಂತ್ ಸಿಂಗ್‌ಗೆ ನ್ಯಾಯ ಬೇಕೆಂದು ಆಗ್ರಹಿಸಿ ದೊಡ್ಡ ಪ್ರಚಾರಾಂದೋಲನ ನಡೆದಿತ್ತು. ಇದಕ್ಕಾಗಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸುಮಾರು 80,000ಕ್ಕೂ ಹೆಚ್ಚು ಫೇಕ್ ಅಕೌಂಟ್‌ಗಳನ್ನು ರಚಿಸಲಾಗಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ವಿದೇಶಗಳಿಂದಲೂ ಖಾತೆ ತೆರೆದು ವಿದೇಶಿ ಭಾಷೆಗಳಿಂದಲೂ ಸೇರಿ #justiceforsushant, #sushantsinghrajput #SSR ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್‌ ಮಾಡಲಾಗಿತ್ತು. ಹಲವಾರು ಟ್ವೀಟ್‌ಗಳು ಇಟಲಿ, ಜಪಾನ್, ಪೋಲಾಂಡ್, ಸ್ಲೋವೇನಿಯ, ಇಂಡೋನೇಷ್ಯ, ತುರ್ಕಿ, ಫ್ರಾನ್ಸ್, ಥೈಲ್ಯಾಂಡ್, ರೋಮೇನಿಯ ದೇಶಗಳಿಂದ ದಾಖಲಾಗಿವೆ ಎಂದು ಮುಂಬೈ ಪೊಲೀಸರ ಸೈಬರ್ ವಿಭಾಗ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.

ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್
Courtesy: www.jagran.com

ಮುಂಬೈ ಪೊಲೀಸರನ್ನು ಕೆಳಮಟ್ಟದ ಭಾಷೆಯಲ್ಲಿ ಹಣಿಯಲು ಮತ್ತು ಅದು ಕೊಲೆ ಎಂದು ಬಿಂಬಿಸಲು ವ್ಯವಸ್ಥಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸಲಾಗಿತ್ತು. ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಸುಶಾಂತ್ ಕುಟುಂಬ ಕೊಲೆ ಎಂದು ಆರೋಪಿಸಿದ ನಂತರ ಬಿಹಾರ ಪೊಲೀಸರ ಒತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಎರಡು ತಿಂಗಳು ಕಳೆದರೂ ಕೊಲೆ ಎಂದು ಸಾಬೀತುಪಡಿಸಲು ಸಿಬಿಐಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಮೊನ್ನೆ ಏಮ್ಸ್‌ನ 7 ವೈದ್ಯರ ತಂಡವು ಸುಶಾಂತ್ ಸಿಂಗ್ ಸಾವಿನ ಕುರಿತು ವೈದ್ಯಕೀಯ ತನಿಖೆ ಪೂರ್ಣಗೊಳಿಸಿದ್ದು, ಇದು ಸ್ಪಷ್ಟವಾದ ಆತ್ಮಹತ್ಯೆ, ಕೊಲೆಯಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ಈ ಅಕೌಂಟ್‌ಗಳ ಕುರಿತು ತನಿಖೆ ನಡೆಸಲು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಸೈಬರ್ ವಿಭಾಗಕ್ಕೆ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ನಿರ್ದೇಶಿಸಿದ್ದಾರೆ.

ಕೊಲೆ ಎಂಬ ಪ್ರಚಾರದ ಹಿಂದಿದೆ ಬಿಜೆಪಿ ಪಾತ್ರ

ಸುಶಾಂತ್ ಕೊಲೆ ಸಿದ್ಧಾಂತದ ಹಿಂದೆ ಬಿಜೆಪಿ ಪಕ್ಷದ ಕಾರ್ಯಕರ್ತರು ವ್ಯವಸ್ಥಿತವಾಗಿ ಕೆಲಸ ಮಾಡಿದೆ ಎಂದು ಮಿಚಿಗನ್ ವಿಶ್ವವಿದ್ಯಾಲಯದ ಇತ್ತೀಚಿನ ಸಂಶೋಧನೆ ತಿಳಿಸಿದೆ. ಜೂನ್ 14 (ಸುಶಾಂತ್ ಸಾವಿನ ದಿನ) ರಿಂದ ಸೆಪ್ಟಂಬರ್ 12 ರವರೆಗಿನ ಸಾಮಾಜಿಕ ಜಾಲತಾಣದಲ್ಲಿನ ಟ್ರೆಂಡ್‌ಗಳು, ಪ್ರವೃತ್ತಿಗಳು, ಹ್ಯಾಂಡಲ್‌ಗಳು ಮತ್ತು ರಾಜಕಾರಣಿಗಳು, ಬಾಲಿವುಡ್ ನಟ-ನಟಿಯರು ಮತ್ತು ಮಾಧ್ಯಮಗಳ ಟ್ವೀಟ್‌ಗಳನ್ನು ಅಧ್ಯಯನ ಮಾಡಲಾಗಿದೆ. ಇವೆಲ್ಲವುಗಳ ಆಧಾರದಲ್ಲಿ ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನಾ ವರದಿಯಲ್ಲಿ ತಿಳಿಸಲಾಗಿದೆ.

Image Courtesy: IChowk

ಮಹಾರಾಷ್ಟ್ರ ಸರ್ಕಾರ ಎಕ್ಸ್‌ಪೊಸ್ಡ್‌, ಗೃಹಮಂತ್ರಿ ಅನಿಲ್ ದೇಶ್ಮುಖ್ ಸುಶಾಂತ್ ಕೊಲೆಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ, ಮುಂಬೈ ಪೊಲೀಸರು ಅಡಿಯಾಳುಗಳು ಎಂದೆಲ್ಲಾ ಪ್ರಚಾರ ಮಾಡಲಾಯ್ತು. ನಿಜವಾಗಿಯೂ ಸುಶಾಂತ್ ಆತ್ಮಹತ್ಯೆಯನ್ನು ಮಾನಸಿಕ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಚರ್ಚಿಸಲು ಇದ್ದ ಅವಕಾಶವನ್ನು ಕೊಲೆ ಎಂದು ದಿಕ್ಕುತಪ್ಪಿಸಲಾಯ್ತು ಎಂದು ಸಂಶೋಧನೆ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಸುಶಾಂತ್ ಸಾವನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧ ಕಲ್ಪಿಸಲಾಯ್ತು. ಬಿಜೆಪಿ ಪಕ್ಷವು ತನ್ನ ಬ್ಯಾನರ್‌ಗಳಲ್ಲಿ ಸುಶಾಂತ್‌ಗೆ ನ್ಯಾಯಕೊಡಿಸುತ್ತೇವೆ ಎಂದು ಚಿತ್ರ ಸಮೇತ ಪ್ರಕಟಿಸಿಕೊಂಡಿದ್ದರು. ರಿಪಬ್ಲಿಕ್ ಟಿವಿ ಸೇರಿದಂತೆ ಕೆಲ ಮಾಧ್ಯಮಗಳು ಪ್ರತಿದಿನ ಇದೇ ಸುದ್ದಿಯನ್ನು ಬಿತ್ತರಿಸಿದ್ದರು. ಒಟ್ಟಿನಲ್ಲಿ ನಟನೊಬ್ಬನ ಸಾವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ದೇಶದ ದುರಂತವಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...