Homeಮುಖಪುಟಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP...

ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನೆ ತಿಳಿಸಿದೆ.

- Advertisement -
- Advertisement -

ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ತನ್ನ ಮುಂಬೈ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಸಾಂದರ್ಭಿಕ ಸಾಕ್ಷ್ಯಗಳು ಮತ್ತು ಪ್ರಾಥಮಿಕ ತನಿಖೆಯನ್ನಾಧರಿಸಿ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆಯೆಂದು ಕರೆದಿದ್ದರು. ಆದರೆ ಅದು ಕೊಲೆಯೆಂದು, ಮುಂಬೈ ಪೊಲೀಸರು ಪ್ರಕರಣ ಮುಚ್ಚಿಹಾಕುತ್ತಿದ್ದಾರೆ ಎಂದು ಆರೋಪಿಸಿ, ಸುಶಾಂತ್ ಸಿಂಗ್‌ಗೆ ನ್ಯಾಯ ಬೇಕೆಂದು ಆಗ್ರಹಿಸಿ ದೊಡ್ಡ ಪ್ರಚಾರಾಂದೋಲನ ನಡೆದಿತ್ತು. ಇದಕ್ಕಾಗಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸುಮಾರು 80,000ಕ್ಕೂ ಹೆಚ್ಚು ಫೇಕ್ ಅಕೌಂಟ್‌ಗಳನ್ನು ರಚಿಸಲಾಗಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ವಿದೇಶಗಳಿಂದಲೂ ಖಾತೆ ತೆರೆದು ವಿದೇಶಿ ಭಾಷೆಗಳಿಂದಲೂ ಸೇರಿ #justiceforsushant, #sushantsinghrajput #SSR ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್‌ ಮಾಡಲಾಗಿತ್ತು. ಹಲವಾರು ಟ್ವೀಟ್‌ಗಳು ಇಟಲಿ, ಜಪಾನ್, ಪೋಲಾಂಡ್, ಸ್ಲೋವೇನಿಯ, ಇಂಡೋನೇಷ್ಯ, ತುರ್ಕಿ, ಫ್ರಾನ್ಸ್, ಥೈಲ್ಯಾಂಡ್, ರೋಮೇನಿಯ ದೇಶಗಳಿಂದ ದಾಖಲಾಗಿವೆ ಎಂದು ಮುಂಬೈ ಪೊಲೀಸರ ಸೈಬರ್ ವಿಭಾಗ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.

ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್
Courtesy: www.jagran.com

ಮುಂಬೈ ಪೊಲೀಸರನ್ನು ಕೆಳಮಟ್ಟದ ಭಾಷೆಯಲ್ಲಿ ಹಣಿಯಲು ಮತ್ತು ಅದು ಕೊಲೆ ಎಂದು ಬಿಂಬಿಸಲು ವ್ಯವಸ್ಥಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸಲಾಗಿತ್ತು. ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಸುಶಾಂತ್ ಕುಟುಂಬ ಕೊಲೆ ಎಂದು ಆರೋಪಿಸಿದ ನಂತರ ಬಿಹಾರ ಪೊಲೀಸರ ಒತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಎರಡು ತಿಂಗಳು ಕಳೆದರೂ ಕೊಲೆ ಎಂದು ಸಾಬೀತುಪಡಿಸಲು ಸಿಬಿಐಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಮೊನ್ನೆ ಏಮ್ಸ್‌ನ 7 ವೈದ್ಯರ ತಂಡವು ಸುಶಾಂತ್ ಸಿಂಗ್ ಸಾವಿನ ಕುರಿತು ವೈದ್ಯಕೀಯ ತನಿಖೆ ಪೂರ್ಣಗೊಳಿಸಿದ್ದು, ಇದು ಸ್ಪಷ್ಟವಾದ ಆತ್ಮಹತ್ಯೆ, ಕೊಲೆಯಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ಈ ಅಕೌಂಟ್‌ಗಳ ಕುರಿತು ತನಿಖೆ ನಡೆಸಲು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಸೈಬರ್ ವಿಭಾಗಕ್ಕೆ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ನಿರ್ದೇಶಿಸಿದ್ದಾರೆ.

ಕೊಲೆ ಎಂಬ ಪ್ರಚಾರದ ಹಿಂದಿದೆ ಬಿಜೆಪಿ ಪಾತ್ರ

ಸುಶಾಂತ್ ಕೊಲೆ ಸಿದ್ಧಾಂತದ ಹಿಂದೆ ಬಿಜೆಪಿ ಪಕ್ಷದ ಕಾರ್ಯಕರ್ತರು ವ್ಯವಸ್ಥಿತವಾಗಿ ಕೆಲಸ ಮಾಡಿದೆ ಎಂದು ಮಿಚಿಗನ್ ವಿಶ್ವವಿದ್ಯಾಲಯದ ಇತ್ತೀಚಿನ ಸಂಶೋಧನೆ ತಿಳಿಸಿದೆ. ಜೂನ್ 14 (ಸುಶಾಂತ್ ಸಾವಿನ ದಿನ) ರಿಂದ ಸೆಪ್ಟಂಬರ್ 12 ರವರೆಗಿನ ಸಾಮಾಜಿಕ ಜಾಲತಾಣದಲ್ಲಿನ ಟ್ರೆಂಡ್‌ಗಳು, ಪ್ರವೃತ್ತಿಗಳು, ಹ್ಯಾಂಡಲ್‌ಗಳು ಮತ್ತು ರಾಜಕಾರಣಿಗಳು, ಬಾಲಿವುಡ್ ನಟ-ನಟಿಯರು ಮತ್ತು ಮಾಧ್ಯಮಗಳ ಟ್ವೀಟ್‌ಗಳನ್ನು ಅಧ್ಯಯನ ಮಾಡಲಾಗಿದೆ. ಇವೆಲ್ಲವುಗಳ ಆಧಾರದಲ್ಲಿ ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನಾ ವರದಿಯಲ್ಲಿ ತಿಳಿಸಲಾಗಿದೆ.

Image Courtesy: IChowk

ಮಹಾರಾಷ್ಟ್ರ ಸರ್ಕಾರ ಎಕ್ಸ್‌ಪೊಸ್ಡ್‌, ಗೃಹಮಂತ್ರಿ ಅನಿಲ್ ದೇಶ್ಮುಖ್ ಸುಶಾಂತ್ ಕೊಲೆಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ, ಮುಂಬೈ ಪೊಲೀಸರು ಅಡಿಯಾಳುಗಳು ಎಂದೆಲ್ಲಾ ಪ್ರಚಾರ ಮಾಡಲಾಯ್ತು. ನಿಜವಾಗಿಯೂ ಸುಶಾಂತ್ ಆತ್ಮಹತ್ಯೆಯನ್ನು ಮಾನಸಿಕ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಚರ್ಚಿಸಲು ಇದ್ದ ಅವಕಾಶವನ್ನು ಕೊಲೆ ಎಂದು ದಿಕ್ಕುತಪ್ಪಿಸಲಾಯ್ತು ಎಂದು ಸಂಶೋಧನೆ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಸುಶಾಂತ್ ಸಾವನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧ ಕಲ್ಪಿಸಲಾಯ್ತು. ಬಿಜೆಪಿ ಪಕ್ಷವು ತನ್ನ ಬ್ಯಾನರ್‌ಗಳಲ್ಲಿ ಸುಶಾಂತ್‌ಗೆ ನ್ಯಾಯಕೊಡಿಸುತ್ತೇವೆ ಎಂದು ಚಿತ್ರ ಸಮೇತ ಪ್ರಕಟಿಸಿಕೊಂಡಿದ್ದರು. ರಿಪಬ್ಲಿಕ್ ಟಿವಿ ಸೇರಿದಂತೆ ಕೆಲ ಮಾಧ್ಯಮಗಳು ಪ್ರತಿದಿನ ಇದೇ ಸುದ್ದಿಯನ್ನು ಬಿತ್ತರಿಸಿದ್ದರು. ಒಟ್ಟಿನಲ್ಲಿ ನಟನೊಬ್ಬನ ಸಾವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ದೇಶದ ದುರಂತವಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...