Homeಮುಖಪುಟಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP...

ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನೆ ತಿಳಿಸಿದೆ.

- Advertisement -
- Advertisement -

ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ತನ್ನ ಮುಂಬೈ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಸಾಂದರ್ಭಿಕ ಸಾಕ್ಷ್ಯಗಳು ಮತ್ತು ಪ್ರಾಥಮಿಕ ತನಿಖೆಯನ್ನಾಧರಿಸಿ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆಯೆಂದು ಕರೆದಿದ್ದರು. ಆದರೆ ಅದು ಕೊಲೆಯೆಂದು, ಮುಂಬೈ ಪೊಲೀಸರು ಪ್ರಕರಣ ಮುಚ್ಚಿಹಾಕುತ್ತಿದ್ದಾರೆ ಎಂದು ಆರೋಪಿಸಿ, ಸುಶಾಂತ್ ಸಿಂಗ್‌ಗೆ ನ್ಯಾಯ ಬೇಕೆಂದು ಆಗ್ರಹಿಸಿ ದೊಡ್ಡ ಪ್ರಚಾರಾಂದೋಲನ ನಡೆದಿತ್ತು. ಇದಕ್ಕಾಗಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸುಮಾರು 80,000ಕ್ಕೂ ಹೆಚ್ಚು ಫೇಕ್ ಅಕೌಂಟ್‌ಗಳನ್ನು ರಚಿಸಲಾಗಿತ್ತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ವಿದೇಶಗಳಿಂದಲೂ ಖಾತೆ ತೆರೆದು ವಿದೇಶಿ ಭಾಷೆಗಳಿಂದಲೂ ಸೇರಿ #justiceforsushant, #sushantsinghrajput #SSR ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್‌ ಮಾಡಲಾಗಿತ್ತು. ಹಲವಾರು ಟ್ವೀಟ್‌ಗಳು ಇಟಲಿ, ಜಪಾನ್, ಪೋಲಾಂಡ್, ಸ್ಲೋವೇನಿಯ, ಇಂಡೋನೇಷ್ಯ, ತುರ್ಕಿ, ಫ್ರಾನ್ಸ್, ಥೈಲ್ಯಾಂಡ್, ರೋಮೇನಿಯ ದೇಶಗಳಿಂದ ದಾಖಲಾಗಿವೆ ಎಂದು ಮುಂಬೈ ಪೊಲೀಸರ ಸೈಬರ್ ವಿಭಾಗ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.

ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್
Courtesy: www.jagran.com

ಮುಂಬೈ ಪೊಲೀಸರನ್ನು ಕೆಳಮಟ್ಟದ ಭಾಷೆಯಲ್ಲಿ ಹಣಿಯಲು ಮತ್ತು ಅದು ಕೊಲೆ ಎಂದು ಬಿಂಬಿಸಲು ವ್ಯವಸ್ಥಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸಲಾಗಿತ್ತು. ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಸುಶಾಂತ್ ಕುಟುಂಬ ಕೊಲೆ ಎಂದು ಆರೋಪಿಸಿದ ನಂತರ ಬಿಹಾರ ಪೊಲೀಸರ ಒತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಎರಡು ತಿಂಗಳು ಕಳೆದರೂ ಕೊಲೆ ಎಂದು ಸಾಬೀತುಪಡಿಸಲು ಸಿಬಿಐಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಮೊನ್ನೆ ಏಮ್ಸ್‌ನ 7 ವೈದ್ಯರ ತಂಡವು ಸುಶಾಂತ್ ಸಿಂಗ್ ಸಾವಿನ ಕುರಿತು ವೈದ್ಯಕೀಯ ತನಿಖೆ ಪೂರ್ಣಗೊಳಿಸಿದ್ದು, ಇದು ಸ್ಪಷ್ಟವಾದ ಆತ್ಮಹತ್ಯೆ, ಕೊಲೆಯಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ಈ ಅಕೌಂಟ್‌ಗಳ ಕುರಿತು ತನಿಖೆ ನಡೆಸಲು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಸೈಬರ್ ವಿಭಾಗಕ್ಕೆ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ನಿರ್ದೇಶಿಸಿದ್ದಾರೆ.

ಕೊಲೆ ಎಂಬ ಪ್ರಚಾರದ ಹಿಂದಿದೆ ಬಿಜೆಪಿ ಪಾತ್ರ

ಸುಶಾಂತ್ ಕೊಲೆ ಸಿದ್ಧಾಂತದ ಹಿಂದೆ ಬಿಜೆಪಿ ಪಕ್ಷದ ಕಾರ್ಯಕರ್ತರು ವ್ಯವಸ್ಥಿತವಾಗಿ ಕೆಲಸ ಮಾಡಿದೆ ಎಂದು ಮಿಚಿಗನ್ ವಿಶ್ವವಿದ್ಯಾಲಯದ ಇತ್ತೀಚಿನ ಸಂಶೋಧನೆ ತಿಳಿಸಿದೆ. ಜೂನ್ 14 (ಸುಶಾಂತ್ ಸಾವಿನ ದಿನ) ರಿಂದ ಸೆಪ್ಟಂಬರ್ 12 ರವರೆಗಿನ ಸಾಮಾಜಿಕ ಜಾಲತಾಣದಲ್ಲಿನ ಟ್ರೆಂಡ್‌ಗಳು, ಪ್ರವೃತ್ತಿಗಳು, ಹ್ಯಾಂಡಲ್‌ಗಳು ಮತ್ತು ರಾಜಕಾರಣಿಗಳು, ಬಾಲಿವುಡ್ ನಟ-ನಟಿಯರು ಮತ್ತು ಮಾಧ್ಯಮಗಳ ಟ್ವೀಟ್‌ಗಳನ್ನು ಅಧ್ಯಯನ ಮಾಡಲಾಗಿದೆ. ಇವೆಲ್ಲವುಗಳ ಆಧಾರದಲ್ಲಿ ಬಿಜೆಪಿ ಮತ್ತು ಬಿಜೆಪಿ ಪರವಿರುವ ಕಾರ್ಯಕರ್ತರು ಕೊಲೆ ಸಿದ್ಧಾಂತವನ್ನು, ಊಹಾಪೋಹಗಳನ್ನು ಹರಿಯಬಿಟ್ಟಿದ್ದಾರೆ. ಹಲವು ಟ್ರೋಲ್ ಪೇಜ್‌ಗಳು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡಿವೆ ಎಂದು ಸಂಶೋಧನಾ ವರದಿಯಲ್ಲಿ ತಿಳಿಸಲಾಗಿದೆ.

Image Courtesy: IChowk

ಮಹಾರಾಷ್ಟ್ರ ಸರ್ಕಾರ ಎಕ್ಸ್‌ಪೊಸ್ಡ್‌, ಗೃಹಮಂತ್ರಿ ಅನಿಲ್ ದೇಶ್ಮುಖ್ ಸುಶಾಂತ್ ಕೊಲೆಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ, ಮುಂಬೈ ಪೊಲೀಸರು ಅಡಿಯಾಳುಗಳು ಎಂದೆಲ್ಲಾ ಪ್ರಚಾರ ಮಾಡಲಾಯ್ತು. ನಿಜವಾಗಿಯೂ ಸುಶಾಂತ್ ಆತ್ಮಹತ್ಯೆಯನ್ನು ಮಾನಸಿಕ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಚರ್ಚಿಸಲು ಇದ್ದ ಅವಕಾಶವನ್ನು ಕೊಲೆ ಎಂದು ದಿಕ್ಕುತಪ್ಪಿಸಲಾಯ್ತು ಎಂದು ಸಂಶೋಧನೆ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಸುಶಾಂತ್ ಸಾವನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧ ಕಲ್ಪಿಸಲಾಯ್ತು. ಬಿಜೆಪಿ ಪಕ್ಷವು ತನ್ನ ಬ್ಯಾನರ್‌ಗಳಲ್ಲಿ ಸುಶಾಂತ್‌ಗೆ ನ್ಯಾಯಕೊಡಿಸುತ್ತೇವೆ ಎಂದು ಚಿತ್ರ ಸಮೇತ ಪ್ರಕಟಿಸಿಕೊಂಡಿದ್ದರು. ರಿಪಬ್ಲಿಕ್ ಟಿವಿ ಸೇರಿದಂತೆ ಕೆಲ ಮಾಧ್ಯಮಗಳು ಪ್ರತಿದಿನ ಇದೇ ಸುದ್ದಿಯನ್ನು ಬಿತ್ತರಿಸಿದ್ದರು. ಒಟ್ಟಿನಲ್ಲಿ ನಟನೊಬ್ಬನ ಸಾವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ದೇಶದ ದುರಂತವಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...