Homeಮುಖಪುಟಬಂಡವಾಳಶಾಹಿಯ ಬಿಕ್ಕಟ್ಟೂ... ಕೊರೊನಾ ಸಂಚೂ...

ಬಂಡವಾಳಶಾಹಿಯ ಬಿಕ್ಕಟ್ಟೂ… ಕೊರೊನಾ ಸಂಚೂ…

ಕೊರೊನಾ ಎಂಬ ಭೀತಿಗೆ ಸಮಾಜವನ್ನು ಖುದ್ಧು ಸರ್ಕಾರವೇ ದೂಡಿದೆ ಎನ್ನುವುದಕ್ಕೂ ಕೆಲವೊಂದು ಘಟನೆಗಳೂ ಪುಷ್ಟಿ ನೀಡುತ್ತಿದೆ- ಆಲುವಳ್ಳಿ ಆರ್ ಅಣ್ಣಪ್ಪ

- Advertisement -
- Advertisement -

ಕೊರೊನಾ ಕಾರಣದಿಂದ ಲಾಕ್‌ಡೌನ್ ಘೋಷಣೆಯಾದ ಆರಂಭದಲ್ಲಿ ಕೊರೊನಾಕ್ಕೆ ತಮ್ಮಲ್ಲಿ ಅದೆಷ್ಟು ಮಂದಿ ಬಲಿಯಾಗಿ ಹೋಗುತ್ತೇವೋ ಎಂಬ ಭೀತಿ-ಹತಾಶೆಗೆ ನಾವು ತಳ್ಳಲ್ಪಟ್ಟಿದ್ದೆವು. ಆದರೆ ದಿನಗಳುರುಳಿದಂತೆ ಕೊರೊನಾ ಎಂಬುದು ಒಂದು ರೋಗವೇ ಅಲ್ಲ ಎನ್ನುವ ಮನಃಸ್ಥಿತಿಗೆ ಜನತೆ ಬರುತ್ತಿದ್ದಾರೆ. ಕೊರೊನಾ ಕುರಿತಾಗಿ ಮೂಡಿಸಿದ್ದ ಭಯ ನಿಧಾನವಾಗಿ ಕರಗುತ್ತಿದೆ.

ದೇವಾಲಯಗಳಲ್ಲಿ ಮಾಮೂಲಿಯಂತೆ ಭಕ್ತಾದಿಗಳು ಕಿಕ್ಕಿರಿದಿದ್ದರೂ ರೋಗ ಕಾಣಿಸಿಕೊಳ್ಳದಿರುವುದು, ಯಾವುದೇ ಸುರಕ್ಷತೆ, ಮುಂಜಾಗರೂಕತೆ ಇರದಿದ್ದರೂ ಬಿಕ್ಷುಕರು, ಚಿಂದಿ ಆಯುವವರಲ್ಲಿ ಒಬ್ಬರೂ ಈ ರೋಗಕ್ಕೆ ತುತ್ತಾದವರು ಕಾಣದಿರುವುದು, ಇತ್ತೀಚೆಗೆ ನಡೆದ ಉಪ ಚುಣಾವಣೆ, ಬಿಹಾರ ಚುಣಾವಣೆಯಲ್ಲಿ ಸಾವಿರಾರು ಜನರಜಂಗುಳಿ ಇದ್ದರೂ ಕೊರೊನಾ ಸುಳಿಯದಿರುವುದು ಜನರಲ್ಲಿ ಕೊರೊನಾ ಕುರಿತಾದ ಭೀತಿ ದೂರಾಗಲು ಕಾರಣವಾಗುತ್ತಿದೆ.

ಇದನ್ನೂ ಓದಿ: ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

ವಾಸ್ತವದಲ್ಲಿ ಕೊರೊನಾಕ್ಕೆ ತುತ್ತಾಗಿ ಪ್ರಾಣ ಕಳೆದುಕೊಂಡವರೆಲ್ಲರೂ ಅನ್ಯ ರೋಗದಿಂದ ಬಳಲುತ್ತಿದ್ದವರೇ ಆಗಿದ್ದು, ಅವೆಲ್ಲವನ್ನೂ ಕೊರೊನಾದೊಂದಿಗೆ ತಳುಕು ಹಾಕಲಾಯಿತು. ಕೊರೊನಾಕ್ಕೆ ಯಾವುದೇ ಲಸಿಕೆ ಇಲ್ಲದಿದ್ದರೂ ಚಿಕಿತ್ಸೆ ನೀಡುವ ನಾಟಕ ಆಡಲಾಯಿತು ಮತ್ತು ಗುಣಪಡಿಸಲಾಗಿದೆ ಎಂದು ವರದಿ ಮಾಡಲಾಯಿತು. ಲಸಿಕೆಯಿಲ್ಲದೆ ಗುಣಪಡಿಸಲು ಸಾಧ್ಯವೆಂದಾದರೆ ಅಂಥಹ ರೋಗಕ್ಕೆ ಅಂಜಿ ಲಾಕ್‌ಡೌನ್ ಮಾಡುವ ಅವಶ್ಯಕತೆ ಈ ದೇಶಕ್ಕೆ- ಸಮಾಜಕ್ಕೆ ಇತ್ತೆ?

ಇಷ್ಟೇ ಅಲ್ಲದೆ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಲಾಕ್‌ಡೌನ್ ಹೊರತಾಗಿ ಯಾವುದೇ ಕ್ರಮ ಕೈಗೊಳ್ಳದಿದ್ದದ್ದು, ಕೊರೊನಾ ಎಂಬ ಪಿಡುಗು ಈ ಸಮಾಜವನ್ನು ಕಾಡುತ್ತಿಲ್ಲ ಎಂಬ ಖಚಿತತೆ ಈ ಸರ್ಕಾರಕ್ಕೆ ಇತ್ತು ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲವೇ..? ದೇಹಲಿ ಗಡಿಯಲ್ಲಿ ಕೋಟ್ಯಾಂತರ ರೈತರು, ಸರ್ಕಾರ-ಆರೋಗ್ಯ ಇಲಾಖೆ ನೀಡಿರುವ ಎಲ್ಲ ಮಾರ್ಗದರ್ಶನಗಳನ್ನು ಧಿಕ್ಕರಿಸಿ, ಸಾಮೂಹಿಕ ಗುಂಪು ಹೂಡಿ ತಿಂಗಳು ಕಳೆದರೂ, ಅಲ್ಲಿ ಕೊರೊನಾ ಪ್ರಕರಣ ವರದಿಯಾಗಿಲ್ಲ. ಒಂದು ವೇಳೆ ಕೊರೊನಾವು ಪ್ರಚಾರ ಪಡಿಸಿದಷ್ಟು ಭೀಕರವಾಗಿದ್ದಿದ್ದರೆ ಅಲ್ಲಿ ಮರಣ ಮೃದಂಗವೇ ನಡೆಯಬೇಕಿತ್ತು. ಆದರೆ ಹೀಗಾಗದಿರುವುದು, ಆಲೋಚನೆ ಮಾಡುವ ಶಕ್ತಿ ಇರುವ ಮಾನವ ಸಮಾಜಕ್ಕೆ ಕೊರೊನಾ ಎಂಬ ರೋಗ ಈ ಭೂಮಿಯ ಮೇಲೆ ಇಲ್ಲ ಎಂದು ಖಚಿತ ಪಡಿಸಿಕೊಳ್ಳಲು ಆಧಾರ ಒದಗಿಸುತ್ತಿದೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ಜೊತೆಗೆ ಕೊರೊನಾ ಎಂಬ ಭೀತಿಗೆ ಸಮಾಜವನ್ನು ಖುದ್ದು ಸರ್ಕಾರವೇ ದೂಡಿದೆ ಎನ್ನುವುದಕ್ಕೂ ಕೆಲವೊಂದು ಘಟನೆಗಳೂ ಪುಷ್ಟಿ ನೀಡುತ್ತಿದೆ.

ಮೊದಲನೆಯದಾಗಿ ಹೇಳಬೇಕೆಂದರೆ, ಸಮಾಜ ಕೊರೊನಾ ಭೀತಿಯಲ್ಲಿ ಸಂತ್ರಸ್ಥವಾಗಿ ಅಸಹಾಯಕ ಸ್ಥಿತಿಯಲ್ಲಿರುವಾಗಲೇ ತುರಾತುರಿಯಲ್ಲಿ ಕಾರ್ಮಿಕ ಕಾನೂನು, ಭೂ ಸುಧಾರಣಾ ಕಾಯಿದೆ, APMC ಕಾಯಿದೆಗಳಿಗೆ ತಿದ್ದುಪಡಿ ತಂದು ಜಾರಿ ಮಾಡ ಹೊರಟಿರುವುದು.

ಎರಡನೆಯದಾಗಿ ಪಟ್ಟಿ ಮಾಡಬಹುದಾದದ್ದೆಂದರೆ, ಬೆಳಕಿಗೆ ಬರುತ್ತಿರುವ ಕೈಗಾರಿಕೋತ್ಪನ್ನಗಳ ಅತಿಯಾದ ಉತ್ಪಾದನೆ ಮತ್ತು ಸಂಗ್ರಹ. ಒಮ್ಮೆ ಮಾರುಕಟ್ಟೆಯ ಪರಿಸ್ಥಿತಿಯನ್ನು ಅವಲೋಕಿಸಿದಾಗ ಇದರ ಅರಿವಾಗುತ್ತದೆ. ನಿರಂತರವಾಗಿ 9 ತಿಂಗಳಿನಿಂದ ಉತ್ಪಾದನೆ ಸ್ಥಗಿತಗೊಂಡಿದ್ದರೂ ಇಂದು ಮಾರುಕಟ್ಟೆಯಲ್ಲಿ ಯಾವುದೆ ವಸ್ತುಗಳ ಕೊರತೆ ಕಾಣುತ್ತಿಲ್ಲ. ಎಲ್ಲ ಮಾರಾಟ ಮಳಿಗೆಳಲ್ಲಿ ಲಾಕ್‌ಡೌನ್ ಪೂರ್ವದಲ್ಲಿದ್ದಂತೆಯೇ ವಸ್ತುಗಳ ಲಭ್ಯತೆಯಿದೆ. ಬಟ್ಟೆ ಖರೀದಿಸಲು ಹೋದರೆ ಯಾವುದೆ ಕೊರತೆಯಿಲ್ಲ. ದೂರದರ್ಶನ, ಫ್ರಿಡ್ಜ್, ವಾಹನ, ಶೃಂಗಾರ ಸಾಮಗ್ರಿ, ಪಾದರಕ್ಷೆ ಯಾವುದರಲ್ಲಿಯೂ ಕೊರತೆ ಕಾಣುತ್ತಿಲ್ಲ. ಎಲ್ಲದರ ಸರಬರಾಜು ನಿರಂತರವಾಗಿದೆ. ಎಂದಿನಂತೆ ವಿದ್ಯುತ್ ಸರಬರಾಜು ಇದೆ. ನಿರ್ಮಾಣ ಕಾರ್ಯಕ್ಕೆ ಬೇಕಾಗುವ ಸಿಮೆಂಟ್, ಕಬ್ಬಿಣ, ಸ್ಯಾನಿಟರಿಗೆ ಸಂಬಂಧಿಸಿದ ವಸ್ತುಗಳು, ಗೃಹಲಂಕಾರ ವಸ್ತುಗಳು ಹೀಗೆ ಯಾವುದರಲ್ಲಿಯೂ ಕೊರತೆಯಿಲ್ಲ. ಎಲ್ಲವೂ ಎಲ್ಲ ಅಂಗಡಿಗಳಲ್ಲಿ ತುಂಬಿ ತುಳುಕುತ್ತಿವೆ. ಜೊತೆಗೆ ಹೊಸ ಹೊಸ ವ್ಯಾಪಾರ ಮಳಿಗೆಗಳನ್ನೂ ತೆರೆಯಲಾಗುತ್ತಿದೆ.

ಮತ್ತೂ ವಿಚಿತ್ರವೆಂದರೆ, ಆರ್ಥಿಕ ಕುಸಿತ ಕಾಣುತ್ತಿದೆ ಎನ್ನಲಾಗುತ್ತಿದ್ದ ವ್ಯವಸ್ಥೆಯಲ್ಲಿ ಕುಸಿತ ಕಾಣ ಬೇಕಾಗಿದ್ದ ಬೆಲೆ, ಏರಿಕೆ ಕಾಣುತ್ತಿರುವುದು. ಸಾಮಾನ್ಯವಾಗಿ ಆರ್ಥಿಕ ಕುಸಿತಕ್ಕೆ ತುತ್ತಾದ ಸಮಾಜದಲ್ಲಿ ಎಂದೂ ಬೆಲೆಯೇರಿಕೆ ಕಾಣಲಾರದು. ಅಂತಹ ಸಮಾಜದಲ್ಲಿ ಆರ್ಥಿಕತೆಯ ಪುನಃಶ್ಚೇತನಕ್ಕೆ ಸರ್ಕಾರದ ವತಿಯಿಂದ ನಾನಾ ಕಸರತ್ತು ನಡೆಯುತ್ತಿರುತ್ತದೆ. ಆರ್ಥಿಕ ಶಕ್ತಿಗಳಿಂದ ಸರ್ಕಾರದ ಮೇಲೆ ಅಂತಹ ಕಾರ್ಯಕ್ರಮಗಳಿಗೆ ನಿರಂತರವಾದ ಒತ್ತಡವಿರುತ್ತದೆ. ನಮ್ಮಲ್ಲಿ ಸರ್ಕಾರಗಳು ತಟಸ್ಥವಾಗಿರುವುದನ್ನು ಗಮನಿಸಿದರೆ ಈ ಬಿಕ್ಕಟ್ಟು ಪಟ್ಟಭದ್ರ ಹಿತಾಸಕ್ತಿಗಳ ಕೃಪಾಪೋಷಿತ ಎನಿಸುತ್ತದೆ.

ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

ಹಾಗೆಯೇ ಲಾಕ್ ಡೌನ್ ತೆರವಾಗಿ ಕೊರೊನಾ ಭೀತಿಯಿಂದ ಜನತೆ ಹೊರಬಂದು ಉದ್ಯೋಗ ಅರಸುತ್ತಿದ್ದಾಗ್ಯೂ ಕೈಗಾರಿಕೆಗಳು ಮಾತ್ರ ಉತ್ಪಾದನೆಗೆ ಇಳಿಯದಿರುವುದೂ ಹಲವು ಅನುಮಾನಗಳನ್ನೂ ಹುಟ್ಟು ಹಾಕುತ್ತಿದೆ. ಈಗಾಗಲೇ ಇವರ ಗೋದಾಮುಗಳಲ್ಲಿ ಮಿತಿ ಮೀರಿ ಸಂಗ್ರಹಗೊಂಡಿರುವ ಉತ್ಪನ್ನಗಳೆಲ್ಲ ಬಿಕರಿಯಾಗಿ ಖಾಲಿಯಾಗುವುದಕ್ಕಾಗಿ ಕಾದುಕುಳಿತಿರುವುದನ್ನು ಸ್ಪಷ್ಟ ಪಡಿಸುತ್ತಿದೆ.

ಸದ್ಯದ ಪರಿಸ್ಥಿತಿ ಗಮನಿಸಿದರೆ ಯಾವ ಕೈಗಾರಿಕೆಗಳೂ ಸದ್ಯಕ್ಕೆ ಉತ್ಪಾದನೆ ಆರಂಭಿಸುವ ಲಕ್ಷಣಗಳಂತೂ ಕಂಡುಬರುತ್ತಿಲ್ಲ. ಹೇಳಬೇಕೆಂದರೆ ಇವರ ಗೋದಾಮುಗಳಲ್ಲಿ ತುಂಬಿರುವ ಎಲ್ಲ ಸರಕುಗಳೂ ಮುಗಿಯುವವರೆಗೂ ಉತ್ಪಾದನೆ ಆರಂಭಿಸಲಾರವು ಎನಿಸುತ್ತಿದೆ.

ಈ ಹಿನ್ನೆಲೆಯಿಂದ ನೋಡಿದಾಗ ಬಂಡವಾಳಿಗರು ತಮ್ಮ ಬಿಕ್ಕಟ್ಟನ್ನು ಕೊರೊನಾ-ಲಾಕ್‌ಡೌನ್ ಹೆಸರಿನಲ್ಲಿ ಜನತೆಯ ಮೇಲೆ- ಸಮಾಜದ ಮೇಲೆ ಹೇರಿರುವುದು ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ಮಾರುಕಟ್ಟೆಯಲ್ಲಿ ತುಂಬಿ ತುಳುಕುತ್ತಿರುವ ಸರಕುಗಳು ಮತ್ತು ಪರಿಸ್ಥಿತಿ ತಿಳಿಯಾಗಿರುವ ಎಲ್ಲ ಲಕ್ಷಣ ಇದ್ದರೂ, ಉತ್ಪಾದನೆ ಆರಂಭಿಸದಿರುವ ಇವರ ಮನಸ್ಥಿತಿ ಗಮನಿಸಿದರೆ ದೇಶವನ್ನು ಮುಂಬರಲಿರುವ ದಿನಗಳಲ್ಲಿ ಬೀಕರವಾದ ಆರ್ಥಿಕ ಕುಸಿತದೆಡೆಗೆ ಕೊಂಡೊಯ್ಯುತ್ತಿರುವಂತಿದೆ. ಇದು ಭಾರತದ ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಗಳಿಗೆ ದೂಡುವ ಸಾಧ್ಯತೆ ಎದ್ದು ಕಾಣುತ್ತಿದೆ.

ಇದರಿಂದ ಸಮಾಜ ಕಲಿಯಬೇಕಿರುವುದೂ ಇದೆ. ಕೊರೊನಾ ಲಾಕ್‌ಡೌನ್ ನಂತಹ ಬಿಕ್ಕಟ್ಟುಗಳು, ಬಿಕ್ಕಟ್ಟುಗಳನ್ನು ತನ್ನೊಡಲಲ್ಲಿ ಇಟ್ಟುಕೊಂಡಿರುವ ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಆಗಿಂದಾಗ್ಗೆ ಮರುಕಳಿಸುತ್ತಲೆ ಇರುತ್ತದೆ. ಆಳುವ ಹಾಗು ವಿರೋಧ ಪಕ್ಷಗಳು ಬಂಡವಾಳಶಾಹಿ ಪಕ್ಷಗಳೇ ಆಗಿರುವುದರಿಂದ ಈ ಸತ್ಯ ಜನರ ಗಮನಕ್ಕೆ ಬರದಂತೆ ತಡೆಯುವಲ್ಲಿ ಯಶಸ್ವಿಯಾಗುತ್ತವೆ.

ಕಮ್ಯುನಿಸ್ಟ್‌ ದೃಷ್ಟಾರ ಮಾರ್ಕ್ಸ್ ಹೇಳುವಂತೆ ಬಂಡವಾಳಶಾಹಿ ಬೆಳೆದಂತೆಲ್ಲ ಬಿಕ್ಕಟ್ಟನ್ನೂ ತನ್ನೊಂದಿಗೆ ತರುತ್ತಾನೆ ಮತ್ತು ಒಂದು ಹಂತದಲ್ಲಿ ಅದು ಹತೋಟಿ ಮೀರಿ, ಅದೇ ಕ್ರಾಂತಿಗೆ ಹಾದಿ ಮಾಡಿಕೊಟ್ಟು ಬಂಡವಾಳವಾದ ಅಂತ್ಯ ಕಾಣುತ್ತದೆ. ಆದರೆ ಮಾರ್ಕ್ಸ್ ಅವರ ಈ ಎಲ್ಲ ಗ್ರಹಿಕೆಳನ್ನೂ ಸುಳ್ಳಾಗಿಸುವ ಎಲ್ಲಾ ಚಾಲಾಕಿತನವನ್ನು ಬಂಡವಾಳಿಗರು ಇಂದು ಮೈಗೂಡಿಸಿಕೊಂಡಿಸಿದ್ದಾರೆ. ಮಾರ್ಕ್ಸ್ ವಾದದಿಂದ ಕಮ್ಯುನಿಸ್ಟರಿಗಿಂತಲೂ ಬಂಡವಾಳಶಾಹಿಗಳು ತಮ್ಮ ಸಾಮ್ರಾಜ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕೆಂಬುದನ್ನು ಕಲಿತುಕೊಂಡಿದ್ದಾರೆ. ಇಲ್ಲಿ ಕಮ್ಯುನಿಸ್ಟರು ತುಂಬ ಎಳಸು ಎನಿಸುತ್ತದೆ.


ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...