Homeಮುಖಪುಟಬಂಡವಾಳಶಾಹಿಯ ಬಿಕ್ಕಟ್ಟೂ... ಕೊರೊನಾ ಸಂಚೂ...

ಬಂಡವಾಳಶಾಹಿಯ ಬಿಕ್ಕಟ್ಟೂ… ಕೊರೊನಾ ಸಂಚೂ…

ಕೊರೊನಾ ಎಂಬ ಭೀತಿಗೆ ಸಮಾಜವನ್ನು ಖುದ್ಧು ಸರ್ಕಾರವೇ ದೂಡಿದೆ ಎನ್ನುವುದಕ್ಕೂ ಕೆಲವೊಂದು ಘಟನೆಗಳೂ ಪುಷ್ಟಿ ನೀಡುತ್ತಿದೆ- ಆಲುವಳ್ಳಿ ಆರ್ ಅಣ್ಣಪ್ಪ

- Advertisement -
- Advertisement -

ಕೊರೊನಾ ಕಾರಣದಿಂದ ಲಾಕ್‌ಡೌನ್ ಘೋಷಣೆಯಾದ ಆರಂಭದಲ್ಲಿ ಕೊರೊನಾಕ್ಕೆ ತಮ್ಮಲ್ಲಿ ಅದೆಷ್ಟು ಮಂದಿ ಬಲಿಯಾಗಿ ಹೋಗುತ್ತೇವೋ ಎಂಬ ಭೀತಿ-ಹತಾಶೆಗೆ ನಾವು ತಳ್ಳಲ್ಪಟ್ಟಿದ್ದೆವು. ಆದರೆ ದಿನಗಳುರುಳಿದಂತೆ ಕೊರೊನಾ ಎಂಬುದು ಒಂದು ರೋಗವೇ ಅಲ್ಲ ಎನ್ನುವ ಮನಃಸ್ಥಿತಿಗೆ ಜನತೆ ಬರುತ್ತಿದ್ದಾರೆ. ಕೊರೊನಾ ಕುರಿತಾಗಿ ಮೂಡಿಸಿದ್ದ ಭಯ ನಿಧಾನವಾಗಿ ಕರಗುತ್ತಿದೆ.

ದೇವಾಲಯಗಳಲ್ಲಿ ಮಾಮೂಲಿಯಂತೆ ಭಕ್ತಾದಿಗಳು ಕಿಕ್ಕಿರಿದಿದ್ದರೂ ರೋಗ ಕಾಣಿಸಿಕೊಳ್ಳದಿರುವುದು, ಯಾವುದೇ ಸುರಕ್ಷತೆ, ಮುಂಜಾಗರೂಕತೆ ಇರದಿದ್ದರೂ ಬಿಕ್ಷುಕರು, ಚಿಂದಿ ಆಯುವವರಲ್ಲಿ ಒಬ್ಬರೂ ಈ ರೋಗಕ್ಕೆ ತುತ್ತಾದವರು ಕಾಣದಿರುವುದು, ಇತ್ತೀಚೆಗೆ ನಡೆದ ಉಪ ಚುಣಾವಣೆ, ಬಿಹಾರ ಚುಣಾವಣೆಯಲ್ಲಿ ಸಾವಿರಾರು ಜನರಜಂಗುಳಿ ಇದ್ದರೂ ಕೊರೊನಾ ಸುಳಿಯದಿರುವುದು ಜನರಲ್ಲಿ ಕೊರೊನಾ ಕುರಿತಾದ ಭೀತಿ ದೂರಾಗಲು ಕಾರಣವಾಗುತ್ತಿದೆ.

ಇದನ್ನೂ ಓದಿ: ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

ವಾಸ್ತವದಲ್ಲಿ ಕೊರೊನಾಕ್ಕೆ ತುತ್ತಾಗಿ ಪ್ರಾಣ ಕಳೆದುಕೊಂಡವರೆಲ್ಲರೂ ಅನ್ಯ ರೋಗದಿಂದ ಬಳಲುತ್ತಿದ್ದವರೇ ಆಗಿದ್ದು, ಅವೆಲ್ಲವನ್ನೂ ಕೊರೊನಾದೊಂದಿಗೆ ತಳುಕು ಹಾಕಲಾಯಿತು. ಕೊರೊನಾಕ್ಕೆ ಯಾವುದೇ ಲಸಿಕೆ ಇಲ್ಲದಿದ್ದರೂ ಚಿಕಿತ್ಸೆ ನೀಡುವ ನಾಟಕ ಆಡಲಾಯಿತು ಮತ್ತು ಗುಣಪಡಿಸಲಾಗಿದೆ ಎಂದು ವರದಿ ಮಾಡಲಾಯಿತು. ಲಸಿಕೆಯಿಲ್ಲದೆ ಗುಣಪಡಿಸಲು ಸಾಧ್ಯವೆಂದಾದರೆ ಅಂಥಹ ರೋಗಕ್ಕೆ ಅಂಜಿ ಲಾಕ್‌ಡೌನ್ ಮಾಡುವ ಅವಶ್ಯಕತೆ ಈ ದೇಶಕ್ಕೆ- ಸಮಾಜಕ್ಕೆ ಇತ್ತೆ?

ಇಷ್ಟೇ ಅಲ್ಲದೆ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಲಾಕ್‌ಡೌನ್ ಹೊರತಾಗಿ ಯಾವುದೇ ಕ್ರಮ ಕೈಗೊಳ್ಳದಿದ್ದದ್ದು, ಕೊರೊನಾ ಎಂಬ ಪಿಡುಗು ಈ ಸಮಾಜವನ್ನು ಕಾಡುತ್ತಿಲ್ಲ ಎಂಬ ಖಚಿತತೆ ಈ ಸರ್ಕಾರಕ್ಕೆ ಇತ್ತು ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲವೇ..? ದೇಹಲಿ ಗಡಿಯಲ್ಲಿ ಕೋಟ್ಯಾಂತರ ರೈತರು, ಸರ್ಕಾರ-ಆರೋಗ್ಯ ಇಲಾಖೆ ನೀಡಿರುವ ಎಲ್ಲ ಮಾರ್ಗದರ್ಶನಗಳನ್ನು ಧಿಕ್ಕರಿಸಿ, ಸಾಮೂಹಿಕ ಗುಂಪು ಹೂಡಿ ತಿಂಗಳು ಕಳೆದರೂ, ಅಲ್ಲಿ ಕೊರೊನಾ ಪ್ರಕರಣ ವರದಿಯಾಗಿಲ್ಲ. ಒಂದು ವೇಳೆ ಕೊರೊನಾವು ಪ್ರಚಾರ ಪಡಿಸಿದಷ್ಟು ಭೀಕರವಾಗಿದ್ದಿದ್ದರೆ ಅಲ್ಲಿ ಮರಣ ಮೃದಂಗವೇ ನಡೆಯಬೇಕಿತ್ತು. ಆದರೆ ಹೀಗಾಗದಿರುವುದು, ಆಲೋಚನೆ ಮಾಡುವ ಶಕ್ತಿ ಇರುವ ಮಾನವ ಸಮಾಜಕ್ಕೆ ಕೊರೊನಾ ಎಂಬ ರೋಗ ಈ ಭೂಮಿಯ ಮೇಲೆ ಇಲ್ಲ ಎಂದು ಖಚಿತ ಪಡಿಸಿಕೊಳ್ಳಲು ಆಧಾರ ಒದಗಿಸುತ್ತಿದೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ಜೊತೆಗೆ ಕೊರೊನಾ ಎಂಬ ಭೀತಿಗೆ ಸಮಾಜವನ್ನು ಖುದ್ದು ಸರ್ಕಾರವೇ ದೂಡಿದೆ ಎನ್ನುವುದಕ್ಕೂ ಕೆಲವೊಂದು ಘಟನೆಗಳೂ ಪುಷ್ಟಿ ನೀಡುತ್ತಿದೆ.

ಮೊದಲನೆಯದಾಗಿ ಹೇಳಬೇಕೆಂದರೆ, ಸಮಾಜ ಕೊರೊನಾ ಭೀತಿಯಲ್ಲಿ ಸಂತ್ರಸ್ಥವಾಗಿ ಅಸಹಾಯಕ ಸ್ಥಿತಿಯಲ್ಲಿರುವಾಗಲೇ ತುರಾತುರಿಯಲ್ಲಿ ಕಾರ್ಮಿಕ ಕಾನೂನು, ಭೂ ಸುಧಾರಣಾ ಕಾಯಿದೆ, APMC ಕಾಯಿದೆಗಳಿಗೆ ತಿದ್ದುಪಡಿ ತಂದು ಜಾರಿ ಮಾಡ ಹೊರಟಿರುವುದು.

ಎರಡನೆಯದಾಗಿ ಪಟ್ಟಿ ಮಾಡಬಹುದಾದದ್ದೆಂದರೆ, ಬೆಳಕಿಗೆ ಬರುತ್ತಿರುವ ಕೈಗಾರಿಕೋತ್ಪನ್ನಗಳ ಅತಿಯಾದ ಉತ್ಪಾದನೆ ಮತ್ತು ಸಂಗ್ರಹ. ಒಮ್ಮೆ ಮಾರುಕಟ್ಟೆಯ ಪರಿಸ್ಥಿತಿಯನ್ನು ಅವಲೋಕಿಸಿದಾಗ ಇದರ ಅರಿವಾಗುತ್ತದೆ. ನಿರಂತರವಾಗಿ 9 ತಿಂಗಳಿನಿಂದ ಉತ್ಪಾದನೆ ಸ್ಥಗಿತಗೊಂಡಿದ್ದರೂ ಇಂದು ಮಾರುಕಟ್ಟೆಯಲ್ಲಿ ಯಾವುದೆ ವಸ್ತುಗಳ ಕೊರತೆ ಕಾಣುತ್ತಿಲ್ಲ. ಎಲ್ಲ ಮಾರಾಟ ಮಳಿಗೆಳಲ್ಲಿ ಲಾಕ್‌ಡೌನ್ ಪೂರ್ವದಲ್ಲಿದ್ದಂತೆಯೇ ವಸ್ತುಗಳ ಲಭ್ಯತೆಯಿದೆ. ಬಟ್ಟೆ ಖರೀದಿಸಲು ಹೋದರೆ ಯಾವುದೆ ಕೊರತೆಯಿಲ್ಲ. ದೂರದರ್ಶನ, ಫ್ರಿಡ್ಜ್, ವಾಹನ, ಶೃಂಗಾರ ಸಾಮಗ್ರಿ, ಪಾದರಕ್ಷೆ ಯಾವುದರಲ್ಲಿಯೂ ಕೊರತೆ ಕಾಣುತ್ತಿಲ್ಲ. ಎಲ್ಲದರ ಸರಬರಾಜು ನಿರಂತರವಾಗಿದೆ. ಎಂದಿನಂತೆ ವಿದ್ಯುತ್ ಸರಬರಾಜು ಇದೆ. ನಿರ್ಮಾಣ ಕಾರ್ಯಕ್ಕೆ ಬೇಕಾಗುವ ಸಿಮೆಂಟ್, ಕಬ್ಬಿಣ, ಸ್ಯಾನಿಟರಿಗೆ ಸಂಬಂಧಿಸಿದ ವಸ್ತುಗಳು, ಗೃಹಲಂಕಾರ ವಸ್ತುಗಳು ಹೀಗೆ ಯಾವುದರಲ್ಲಿಯೂ ಕೊರತೆಯಿಲ್ಲ. ಎಲ್ಲವೂ ಎಲ್ಲ ಅಂಗಡಿಗಳಲ್ಲಿ ತುಂಬಿ ತುಳುಕುತ್ತಿವೆ. ಜೊತೆಗೆ ಹೊಸ ಹೊಸ ವ್ಯಾಪಾರ ಮಳಿಗೆಗಳನ್ನೂ ತೆರೆಯಲಾಗುತ್ತಿದೆ.

ಮತ್ತೂ ವಿಚಿತ್ರವೆಂದರೆ, ಆರ್ಥಿಕ ಕುಸಿತ ಕಾಣುತ್ತಿದೆ ಎನ್ನಲಾಗುತ್ತಿದ್ದ ವ್ಯವಸ್ಥೆಯಲ್ಲಿ ಕುಸಿತ ಕಾಣ ಬೇಕಾಗಿದ್ದ ಬೆಲೆ, ಏರಿಕೆ ಕಾಣುತ್ತಿರುವುದು. ಸಾಮಾನ್ಯವಾಗಿ ಆರ್ಥಿಕ ಕುಸಿತಕ್ಕೆ ತುತ್ತಾದ ಸಮಾಜದಲ್ಲಿ ಎಂದೂ ಬೆಲೆಯೇರಿಕೆ ಕಾಣಲಾರದು. ಅಂತಹ ಸಮಾಜದಲ್ಲಿ ಆರ್ಥಿಕತೆಯ ಪುನಃಶ್ಚೇತನಕ್ಕೆ ಸರ್ಕಾರದ ವತಿಯಿಂದ ನಾನಾ ಕಸರತ್ತು ನಡೆಯುತ್ತಿರುತ್ತದೆ. ಆರ್ಥಿಕ ಶಕ್ತಿಗಳಿಂದ ಸರ್ಕಾರದ ಮೇಲೆ ಅಂತಹ ಕಾರ್ಯಕ್ರಮಗಳಿಗೆ ನಿರಂತರವಾದ ಒತ್ತಡವಿರುತ್ತದೆ. ನಮ್ಮಲ್ಲಿ ಸರ್ಕಾರಗಳು ತಟಸ್ಥವಾಗಿರುವುದನ್ನು ಗಮನಿಸಿದರೆ ಈ ಬಿಕ್ಕಟ್ಟು ಪಟ್ಟಭದ್ರ ಹಿತಾಸಕ್ತಿಗಳ ಕೃಪಾಪೋಷಿತ ಎನಿಸುತ್ತದೆ.

ಇದನ್ನೂ ಓದಿ: ಸ್ಥಾನಮಾನ ಸಿಕ್ಕರೆ ಬಿಜೆಪಿ ಸೇರ್ಪಡೆ ಖಚಿತ: ಶಾಸಕ ಎನ್‌ ಮಹೇಶ್

ಹಾಗೆಯೇ ಲಾಕ್ ಡೌನ್ ತೆರವಾಗಿ ಕೊರೊನಾ ಭೀತಿಯಿಂದ ಜನತೆ ಹೊರಬಂದು ಉದ್ಯೋಗ ಅರಸುತ್ತಿದ್ದಾಗ್ಯೂ ಕೈಗಾರಿಕೆಗಳು ಮಾತ್ರ ಉತ್ಪಾದನೆಗೆ ಇಳಿಯದಿರುವುದೂ ಹಲವು ಅನುಮಾನಗಳನ್ನೂ ಹುಟ್ಟು ಹಾಕುತ್ತಿದೆ. ಈಗಾಗಲೇ ಇವರ ಗೋದಾಮುಗಳಲ್ಲಿ ಮಿತಿ ಮೀರಿ ಸಂಗ್ರಹಗೊಂಡಿರುವ ಉತ್ಪನ್ನಗಳೆಲ್ಲ ಬಿಕರಿಯಾಗಿ ಖಾಲಿಯಾಗುವುದಕ್ಕಾಗಿ ಕಾದುಕುಳಿತಿರುವುದನ್ನು ಸ್ಪಷ್ಟ ಪಡಿಸುತ್ತಿದೆ.

ಸದ್ಯದ ಪರಿಸ್ಥಿತಿ ಗಮನಿಸಿದರೆ ಯಾವ ಕೈಗಾರಿಕೆಗಳೂ ಸದ್ಯಕ್ಕೆ ಉತ್ಪಾದನೆ ಆರಂಭಿಸುವ ಲಕ್ಷಣಗಳಂತೂ ಕಂಡುಬರುತ್ತಿಲ್ಲ. ಹೇಳಬೇಕೆಂದರೆ ಇವರ ಗೋದಾಮುಗಳಲ್ಲಿ ತುಂಬಿರುವ ಎಲ್ಲ ಸರಕುಗಳೂ ಮುಗಿಯುವವರೆಗೂ ಉತ್ಪಾದನೆ ಆರಂಭಿಸಲಾರವು ಎನಿಸುತ್ತಿದೆ.

ಈ ಹಿನ್ನೆಲೆಯಿಂದ ನೋಡಿದಾಗ ಬಂಡವಾಳಿಗರು ತಮ್ಮ ಬಿಕ್ಕಟ್ಟನ್ನು ಕೊರೊನಾ-ಲಾಕ್‌ಡೌನ್ ಹೆಸರಿನಲ್ಲಿ ಜನತೆಯ ಮೇಲೆ- ಸಮಾಜದ ಮೇಲೆ ಹೇರಿರುವುದು ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ಮಾರುಕಟ್ಟೆಯಲ್ಲಿ ತುಂಬಿ ತುಳುಕುತ್ತಿರುವ ಸರಕುಗಳು ಮತ್ತು ಪರಿಸ್ಥಿತಿ ತಿಳಿಯಾಗಿರುವ ಎಲ್ಲ ಲಕ್ಷಣ ಇದ್ದರೂ, ಉತ್ಪಾದನೆ ಆರಂಭಿಸದಿರುವ ಇವರ ಮನಸ್ಥಿತಿ ಗಮನಿಸಿದರೆ ದೇಶವನ್ನು ಮುಂಬರಲಿರುವ ದಿನಗಳಲ್ಲಿ ಬೀಕರವಾದ ಆರ್ಥಿಕ ಕುಸಿತದೆಡೆಗೆ ಕೊಂಡೊಯ್ಯುತ್ತಿರುವಂತಿದೆ. ಇದು ಭಾರತದ ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಗಳಿಗೆ ದೂಡುವ ಸಾಧ್ಯತೆ ಎದ್ದು ಕಾಣುತ್ತಿದೆ.

ಇದರಿಂದ ಸಮಾಜ ಕಲಿಯಬೇಕಿರುವುದೂ ಇದೆ. ಕೊರೊನಾ ಲಾಕ್‌ಡೌನ್ ನಂತಹ ಬಿಕ್ಕಟ್ಟುಗಳು, ಬಿಕ್ಕಟ್ಟುಗಳನ್ನು ತನ್ನೊಡಲಲ್ಲಿ ಇಟ್ಟುಕೊಂಡಿರುವ ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಆಗಿಂದಾಗ್ಗೆ ಮರುಕಳಿಸುತ್ತಲೆ ಇರುತ್ತದೆ. ಆಳುವ ಹಾಗು ವಿರೋಧ ಪಕ್ಷಗಳು ಬಂಡವಾಳಶಾಹಿ ಪಕ್ಷಗಳೇ ಆಗಿರುವುದರಿಂದ ಈ ಸತ್ಯ ಜನರ ಗಮನಕ್ಕೆ ಬರದಂತೆ ತಡೆಯುವಲ್ಲಿ ಯಶಸ್ವಿಯಾಗುತ್ತವೆ.

ಕಮ್ಯುನಿಸ್ಟ್‌ ದೃಷ್ಟಾರ ಮಾರ್ಕ್ಸ್ ಹೇಳುವಂತೆ ಬಂಡವಾಳಶಾಹಿ ಬೆಳೆದಂತೆಲ್ಲ ಬಿಕ್ಕಟ್ಟನ್ನೂ ತನ್ನೊಂದಿಗೆ ತರುತ್ತಾನೆ ಮತ್ತು ಒಂದು ಹಂತದಲ್ಲಿ ಅದು ಹತೋಟಿ ಮೀರಿ, ಅದೇ ಕ್ರಾಂತಿಗೆ ಹಾದಿ ಮಾಡಿಕೊಟ್ಟು ಬಂಡವಾಳವಾದ ಅಂತ್ಯ ಕಾಣುತ್ತದೆ. ಆದರೆ ಮಾರ್ಕ್ಸ್ ಅವರ ಈ ಎಲ್ಲ ಗ್ರಹಿಕೆಳನ್ನೂ ಸುಳ್ಳಾಗಿಸುವ ಎಲ್ಲಾ ಚಾಲಾಕಿತನವನ್ನು ಬಂಡವಾಳಿಗರು ಇಂದು ಮೈಗೂಡಿಸಿಕೊಂಡಿಸಿದ್ದಾರೆ. ಮಾರ್ಕ್ಸ್ ವಾದದಿಂದ ಕಮ್ಯುನಿಸ್ಟರಿಗಿಂತಲೂ ಬಂಡವಾಳಶಾಹಿಗಳು ತಮ್ಮ ಸಾಮ್ರಾಜ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕೆಂಬುದನ್ನು ಕಲಿತುಕೊಂಡಿದ್ದಾರೆ. ಇಲ್ಲಿ ಕಮ್ಯುನಿಸ್ಟರು ತುಂಬ ಎಳಸು ಎನಿಸುತ್ತದೆ.


ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...