Homeಕರ್ನಾಟಕರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

ರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

- Advertisement -
- Advertisement -

ಅವರು ಅಲೆಮಾರಿಗಳು, ಒಂದು ಕಡೆ ನಿಂತವರಲ್ಲ, ನಿಲ್ಲುವವರೂ ಅಲ್ಲ, ನೆಲೆ ನಿಂತರೂ ಒಂದು ಹಗಲು ಒಂದು ರಾತ್ರಿ ಮಾತ್ರ. ಮತ್ತೆ ಮನಸ್ಸು ಹರಿದತ್ತ ಹೆಜ್ಜೆ ಹಾಕುತ್ತಲೇ ಬದುಕು ಕಟ್ಟಿಕೊಂಡವರು. ಆಧುನಿಕತೆ ವ್ಯಾಪಿಸಿದಂತೆ ಈ ಅಲೆಮಾರಿ ಕುಟುಂಬಗಳು ನೆಲೆ ಕಂಡುಕೊಂಡು ಅವರ ಮಕ್ಕಳು ಶಾಲೆಯ ಮುಖವನ್ನು ಕಾಣುವಂತೆ ಆಗಿದೆ. ಇಂತಹ ಅಲೆಮಾರಿ ಸಮುದಾಯ ತಮ್ಮ ಸಾಂಸ್ಕೃತಿಕ ಕಥನಗಳನ್ನು ಕಟ್ಟಿಕೊಡುವ, ಸಾಂಸ್ಕೃತಿಕ ಕಲೆಗಳನ್ನು ನಗರೀಕರಣದ ಮುಂದೆ ಅನಾವರಣಗೊಳಿಸುವ ಕೆಲಸ ರಾಯಚೂರಿನಲ್ಲಿ ನಡೆಯಿತು. ನೆಲಮೂಲ ಸಂಸ್ಕೃತಿಯ ಒಂದೊಂದು ಕಲೆಯೂ ನಗರೀಕರಣಕ್ಕೆ ಸವಾಲೊಡ್ಡುವ ರೀತಿಯಲ್ಲಿ ವ್ಯಕ್ತವಾಯಿತು.

ಕೊಳೆಗೇರಿ ಪ್ರದೇಶದಲ್ಲಿ ವಾಸಿಸುವ ಬಗೆಬಗೆಯ ಬುಡಕಟ್ಟುಗಳು ಮತ್ತು ಅಲೆಮಾರಿ ಸಮುದಾಯ ತಮ್ಮಲ್ಲಿನ ಸಾಂಸ್ಕೃತಿಕ ಸಂಪತ್ತನ್ನು ಪ್ರದರ್ಶನಗೊಳಿಸುವುದಕ್ಕೆ ವೇದಿಕೆ ಒದಗಿಸಲಾಗಿತ್ತು. ಸ್ಲಂ ಜನಾಂದೋಲನ – ಕರ್ನಾಟಕ ನೇತೃತ್ವದಲ್ಲಿ ನಮ್ ಹಾಡು, ನಮ್ ಕುಣಿತ, ನಮ್ ಖುಷಿ ಶೀರ್ಷಿಕೆಯಡಿ ಸಾಂಸ್ಕೃತಿಕ ಕಲೆಗಳ ಸ್ಲಂಹಬ್ಬ ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ಅಳಿವಿನಂಚಿನಲ್ಲಿರುವ ಹಕ್ಕಿಪಿಕ್ಕಿಯವರ ಕಾಡಿನ ಹಾಡುಗಳು, ಪೋತರಾಜರ ನೃತ್ಯ, ಅಸ್ಪೃಶ್ಯಯ ಸಮುದಾಯಕ್ಕೆ ಸೇರಿದ ದರವೇಸಿಗಳ ಜನಸಮೂಹದ ಕಷ್ಟಕೋಟಲೆಗಳನ್ನು ಒಳಗೊಂಡ ಕವಾಲಿಗಳು, ಸುಡುಗಾಡು ಸಿದ್ದರ ಮಾಯಾಜಾಲ ಅಥವಾ ಕಣ್ಕಟ್ಟು, ಶಿಳ್ಳೇಕ್ಯಾತರ ಆಟಗಳು, ದುರ್ಗಿಮುರ್ಗಿಯ ಕುಣಿತ, ಲಂಬಾಣಿ ಜನರ ಕೋಲಾಟ, ಮಂಗಳಮುಖಿಯರ ಕಲೆಗಳು ವೇದಿಕೆಯಲ್ಲಿ ಅನಾವರಣಗೊಂಡು ಪ್ರೇಕ್ಷಕರ ಗಮನ ಸೆಳೆದವು.

2007 ರಿಂದ ಆರಂಭವಾಗಿರುವ ಸ್ಲಂಹಬ್ಬ ಇದುವರೆಗೆ ಮೂರು ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಸ್ಲಂಹಬ್ಬ ಗಳನ್ನು ಆಯೋಜಿಸಿ ರಾಜ್ಯದ ಗಮನ ಸೆಳೆಯಲಾಗಿದೆ. ಈ ಮೂಲಕ ಅಲೆಮಾರಿಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳು ನಡೆದಿವೆ. ನಗರದ ಜಂಝಡದ ಗದ್ದಲದ ನಡುವೆ ಶ್ರಮದಾನದಿಂದಲೇ ನಲುಗಿ ಹೋಗುತ್ತಿರುವ ಈ ಸಮುದಾಯದ ಸಾಂಸ್ಕೃತಿಕ ಪರಂಪರೆಯನ್ನು ಮುಖ್ಯವಾಹಿನಿಗೆ ತಲುಪಿಸುವ ಉದ್ದೇಶವನ್ನು ಇಟ್ಟುಕೊಂಡು ಸ್ಲಂಹಬ್ಬಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ಡೊಮಿನಿಕ್, “ಅಸ್ಪೃಶ್ಯರು ಮತ್ತು ಅಲೆಮಾರಿ ಸಮುದಾಯಗಳ ಕಲಾ ಪ್ರಕಾರಗಳು ಸ್ಥಾಪಿತ ಪರಂಪರೆ, ಅಮಾನವೀಯ ಸಾಂಸ್ಕೃತಿಕ ಪರಿಸರವನ್ನು ಬದಿಗೆ ಸರಿಸಿ, ಕೇವಲ ಮನೋರಂಜನೆಗಾಗಿ ಪ್ರದರ್ಶನಗೊಳ್ಳುವ ಕಲೆಗಳೆಂದು ಭಾವಿಸಲಾಗಿದ್ದ ಆಚರಣೆಗಳನ್ನು ಇಂದು ಸ್ಲಂ-ನಿವಾಸಿಗಳು ತಮ್ಮ ದುಡಿಮೆ ಸಾಂಸ್ಕೃತಿಕ ಗುರುತುಗಳನ್ನಾಗಿ ನೆಲೆಗೊಳಿಸುತ್ತಿದ್ದಾರೆ. ಹೀಗೆ ಮಾಡುವ ಮೂಲಕ, ಆ ಕಲೆಗಳ ಹಿಂದಿರುವ ಶ್ರೀಮಂತಿಕೆ ಹಾಗೂ ಮಾನವೀಯ ಮೌಲ್ಯಗಳನ್ನು ಮತ್ತೆ ಹೊಸ ಸಮಾಜ ನಿರ್ಮಾಣಕ್ಕೆ ಕೊಳಗೇರಿ ಸಮುದಾಯಗಳು ತೊಡಗಿರುವುದನ್ನು ನಾವು ನೋಡಬಹುದು” ಎಂದು ಹೇಳಿದ್ದಾರೆ.

ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ನಾನುಗೌರಿ.ಕಾಂ ಜೊತೆ ಮಾತನಾಡಿ ನಗರದಲ್ಲಿ ಅಲೆಮಾರಿ ಸಂಸ್ಕೃತಿಗಳ ಮೇಲೆ ದಾಳಿ, ದೌರ್ಜನ್ಯ ದಬ್ಬಾಳಿಕೆ ನಡೆದರೂ ಅದರ ವಿರುದ್ಧವೇ ತಿರುಗಿಬಿದ್ದಿರುವ ನೆಲಮೂಲ ಸಂಸ್ಕೃತಿಯ ಕಲೆಯ ಅನಾವರಣದ ಮೂಲಕ ಈ ಸಮುದಾಯದ ಜನರಿಗೆ ಹಕ್ಕುಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಆಧುನಿಕತೆಯ ಪರಿಣಾಮ ಅಲೆಮಾರಿಗಳು ಇಂದು ನೆಲೆ ನಿಲ್ಲುವಂತಹ ಸ್ಥಿಗೆ ಬರುವಂತೆ ಆಗಿದೆ. ಇದರಿಂದ ಆಧಾರ್, ರೇಷನ್ ಕಾರ್ಡುಗಳು ದೊರೆತಿವೆ. ಕೆಲ ಸಮುದಾಯಗಳಿಗೆ ಈ ಸೌಲಭ್ಯಗಳು ದೊರೆತಿಲ್ಲ. ಅಲೆಮಾರಿ ಕುಟುಂಬಗಳ ಮಕ್ಕಳು ಶಾಲೆಯ ಮುಖ ನೋಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದರು.

ಪ್ರತಿವರ್ಷ ಸರ್ಕಾರಗಳು ಕೊಳೆಗೇರಿಗಳಲ್ಲಿ ವಾಸಿಸುವ ಅಲೆಮಾರಿಗಳ ಶೈಕ್ಷಣಿಕ ಮೊದಲಾದ ಅಭಿವೃದ್ಧಿ ಕೆಲಸಗಳಿಗೆ 50-70 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ. ಈ ಹಣದಲ್ಲಿ ಕೇವಲ ಪ್ರತಿಶತ 20ರಷ್ಟು ಹಣ ಮಾತ್ರ ವೆಚ್ಚವಾಗುತ್ತಿದೆ. ಉಳಿದ ಹಣ ಸರ್ಕಾರಕ್ಕೆ ವಾಪಸ್ಸಾಗುತ್ತಿದೆ. ಕಾರಣ ಅಲೆಮಾರಿ ಸಮುದಾಯ ಶಿಕ್ಷಣ ಪಡೆದಿಲ್ಲ. ಹಾಗಾಗಿ ಸರ್ಕಾರ ಕೇಳುವ ದಾಖಲೆಗಳು ಅವರ ಬಳಿ ಸಿಗುತ್ತಿಲ್ಲ. ಇದು ಕೂಡ ಅಲೆಮಾರಿ ಗಳಿಗೆ ಮೀಸಲಿಟ್ಟ ಹಣ ಹಾಗೇ ಉಳಿಯಲು ಕಾರಣ’ ಎಂದು ತಿಳಿಸಿದರು.

ಸರ್ಕಾರ ಭೂ ಮಂಜೂರಾತಿ ಕೊಡುತ್ತಿದೆ. ಅಲೆಮಾರಿ ಸಮುದಾಯಗಳಿಗೂ ಭೂಮಿ ಕೊಡಬೇಕು. ಘನತೆ ಗೌರವದಿಂದ ಬದುಕಲು ವಸತಿ ವ್ಯವಸ್ಥೆ ಮಾಡಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಿದರೆ ಈ ಸಮುದಾಯಗಳ ಅಭಿವೃದ್ಧಿ ಸಾಧ್ಯ. ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಅಲೆಮಾರಿಗಳಲ್ಲಿ ಕೆಲ ಸಮುದಾಯಗಳು ಹಿಂದುಳಿದ ವರ್ಗಕ್ಕೆ ಬರುತ್ತವೆಯೇ? ಪರಿಶಿಷ್ಟ ಸಮುದಾಯಕ್ಕೆ ಸೇರುತ್ತವೆಯೇ ಎಂಬುದೇ ಗೊತ್ತಿಲ್ಲ. ಇದು ಕೂಡ ಈ ಅಲೆಮಾರಿಗಳು ಹಿಂದುಳಿಯಲು ಕಾರಣವಾಗಿದೆ. ಸರ್ಕಾರ ಈಗಲಾದರೂ ಅಲೆಮಾರಿಗಳ ಜನಗಣತಿ ಮಾಡಿ ಅವರ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಬೇಕಾಗಿದೆ.


ಇದನ್ನೂ ಓದಿ; ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...