Homeಕರ್ನಾಟಕರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

ರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

- Advertisement -
- Advertisement -

ಅವರು ಅಲೆಮಾರಿಗಳು, ಒಂದು ಕಡೆ ನಿಂತವರಲ್ಲ, ನಿಲ್ಲುವವರೂ ಅಲ್ಲ, ನೆಲೆ ನಿಂತರೂ ಒಂದು ಹಗಲು ಒಂದು ರಾತ್ರಿ ಮಾತ್ರ. ಮತ್ತೆ ಮನಸ್ಸು ಹರಿದತ್ತ ಹೆಜ್ಜೆ ಹಾಕುತ್ತಲೇ ಬದುಕು ಕಟ್ಟಿಕೊಂಡವರು. ಆಧುನಿಕತೆ ವ್ಯಾಪಿಸಿದಂತೆ ಈ ಅಲೆಮಾರಿ ಕುಟುಂಬಗಳು ನೆಲೆ ಕಂಡುಕೊಂಡು ಅವರ ಮಕ್ಕಳು ಶಾಲೆಯ ಮುಖವನ್ನು ಕಾಣುವಂತೆ ಆಗಿದೆ. ಇಂತಹ ಅಲೆಮಾರಿ ಸಮುದಾಯ ತಮ್ಮ ಸಾಂಸ್ಕೃತಿಕ ಕಥನಗಳನ್ನು ಕಟ್ಟಿಕೊಡುವ, ಸಾಂಸ್ಕೃತಿಕ ಕಲೆಗಳನ್ನು ನಗರೀಕರಣದ ಮುಂದೆ ಅನಾವರಣಗೊಳಿಸುವ ಕೆಲಸ ರಾಯಚೂರಿನಲ್ಲಿ ನಡೆಯಿತು. ನೆಲಮೂಲ ಸಂಸ್ಕೃತಿಯ ಒಂದೊಂದು ಕಲೆಯೂ ನಗರೀಕರಣಕ್ಕೆ ಸವಾಲೊಡ್ಡುವ ರೀತಿಯಲ್ಲಿ ವ್ಯಕ್ತವಾಯಿತು.

ಕೊಳೆಗೇರಿ ಪ್ರದೇಶದಲ್ಲಿ ವಾಸಿಸುವ ಬಗೆಬಗೆಯ ಬುಡಕಟ್ಟುಗಳು ಮತ್ತು ಅಲೆಮಾರಿ ಸಮುದಾಯ ತಮ್ಮಲ್ಲಿನ ಸಾಂಸ್ಕೃತಿಕ ಸಂಪತ್ತನ್ನು ಪ್ರದರ್ಶನಗೊಳಿಸುವುದಕ್ಕೆ ವೇದಿಕೆ ಒದಗಿಸಲಾಗಿತ್ತು. ಸ್ಲಂ ಜನಾಂದೋಲನ – ಕರ್ನಾಟಕ ನೇತೃತ್ವದಲ್ಲಿ ನಮ್ ಹಾಡು, ನಮ್ ಕುಣಿತ, ನಮ್ ಖುಷಿ ಶೀರ್ಷಿಕೆಯಡಿ ಸಾಂಸ್ಕೃತಿಕ ಕಲೆಗಳ ಸ್ಲಂಹಬ್ಬ ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ಅಳಿವಿನಂಚಿನಲ್ಲಿರುವ ಹಕ್ಕಿಪಿಕ್ಕಿಯವರ ಕಾಡಿನ ಹಾಡುಗಳು, ಪೋತರಾಜರ ನೃತ್ಯ, ಅಸ್ಪೃಶ್ಯಯ ಸಮುದಾಯಕ್ಕೆ ಸೇರಿದ ದರವೇಸಿಗಳ ಜನಸಮೂಹದ ಕಷ್ಟಕೋಟಲೆಗಳನ್ನು ಒಳಗೊಂಡ ಕವಾಲಿಗಳು, ಸುಡುಗಾಡು ಸಿದ್ದರ ಮಾಯಾಜಾಲ ಅಥವಾ ಕಣ್ಕಟ್ಟು, ಶಿಳ್ಳೇಕ್ಯಾತರ ಆಟಗಳು, ದುರ್ಗಿಮುರ್ಗಿಯ ಕುಣಿತ, ಲಂಬಾಣಿ ಜನರ ಕೋಲಾಟ, ಮಂಗಳಮುಖಿಯರ ಕಲೆಗಳು ವೇದಿಕೆಯಲ್ಲಿ ಅನಾವರಣಗೊಂಡು ಪ್ರೇಕ್ಷಕರ ಗಮನ ಸೆಳೆದವು.

2007 ರಿಂದ ಆರಂಭವಾಗಿರುವ ಸ್ಲಂಹಬ್ಬ ಇದುವರೆಗೆ ಮೂರು ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಸ್ಲಂಹಬ್ಬ ಗಳನ್ನು ಆಯೋಜಿಸಿ ರಾಜ್ಯದ ಗಮನ ಸೆಳೆಯಲಾಗಿದೆ. ಈ ಮೂಲಕ ಅಲೆಮಾರಿಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳು ನಡೆದಿವೆ. ನಗರದ ಜಂಝಡದ ಗದ್ದಲದ ನಡುವೆ ಶ್ರಮದಾನದಿಂದಲೇ ನಲುಗಿ ಹೋಗುತ್ತಿರುವ ಈ ಸಮುದಾಯದ ಸಾಂಸ್ಕೃತಿಕ ಪರಂಪರೆಯನ್ನು ಮುಖ್ಯವಾಹಿನಿಗೆ ತಲುಪಿಸುವ ಉದ್ದೇಶವನ್ನು ಇಟ್ಟುಕೊಂಡು ಸ್ಲಂಹಬ್ಬಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ಡೊಮಿನಿಕ್, “ಅಸ್ಪೃಶ್ಯರು ಮತ್ತು ಅಲೆಮಾರಿ ಸಮುದಾಯಗಳ ಕಲಾ ಪ್ರಕಾರಗಳು ಸ್ಥಾಪಿತ ಪರಂಪರೆ, ಅಮಾನವೀಯ ಸಾಂಸ್ಕೃತಿಕ ಪರಿಸರವನ್ನು ಬದಿಗೆ ಸರಿಸಿ, ಕೇವಲ ಮನೋರಂಜನೆಗಾಗಿ ಪ್ರದರ್ಶನಗೊಳ್ಳುವ ಕಲೆಗಳೆಂದು ಭಾವಿಸಲಾಗಿದ್ದ ಆಚರಣೆಗಳನ್ನು ಇಂದು ಸ್ಲಂ-ನಿವಾಸಿಗಳು ತಮ್ಮ ದುಡಿಮೆ ಸಾಂಸ್ಕೃತಿಕ ಗುರುತುಗಳನ್ನಾಗಿ ನೆಲೆಗೊಳಿಸುತ್ತಿದ್ದಾರೆ. ಹೀಗೆ ಮಾಡುವ ಮೂಲಕ, ಆ ಕಲೆಗಳ ಹಿಂದಿರುವ ಶ್ರೀಮಂತಿಕೆ ಹಾಗೂ ಮಾನವೀಯ ಮೌಲ್ಯಗಳನ್ನು ಮತ್ತೆ ಹೊಸ ಸಮಾಜ ನಿರ್ಮಾಣಕ್ಕೆ ಕೊಳಗೇರಿ ಸಮುದಾಯಗಳು ತೊಡಗಿರುವುದನ್ನು ನಾವು ನೋಡಬಹುದು” ಎಂದು ಹೇಳಿದ್ದಾರೆ.

ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ನಾನುಗೌರಿ.ಕಾಂ ಜೊತೆ ಮಾತನಾಡಿ ನಗರದಲ್ಲಿ ಅಲೆಮಾರಿ ಸಂಸ್ಕೃತಿಗಳ ಮೇಲೆ ದಾಳಿ, ದೌರ್ಜನ್ಯ ದಬ್ಬಾಳಿಕೆ ನಡೆದರೂ ಅದರ ವಿರುದ್ಧವೇ ತಿರುಗಿಬಿದ್ದಿರುವ ನೆಲಮೂಲ ಸಂಸ್ಕೃತಿಯ ಕಲೆಯ ಅನಾವರಣದ ಮೂಲಕ ಈ ಸಮುದಾಯದ ಜನರಿಗೆ ಹಕ್ಕುಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಆಧುನಿಕತೆಯ ಪರಿಣಾಮ ಅಲೆಮಾರಿಗಳು ಇಂದು ನೆಲೆ ನಿಲ್ಲುವಂತಹ ಸ್ಥಿಗೆ ಬರುವಂತೆ ಆಗಿದೆ. ಇದರಿಂದ ಆಧಾರ್, ರೇಷನ್ ಕಾರ್ಡುಗಳು ದೊರೆತಿವೆ. ಕೆಲ ಸಮುದಾಯಗಳಿಗೆ ಈ ಸೌಲಭ್ಯಗಳು ದೊರೆತಿಲ್ಲ. ಅಲೆಮಾರಿ ಕುಟುಂಬಗಳ ಮಕ್ಕಳು ಶಾಲೆಯ ಮುಖ ನೋಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದರು.

ಪ್ರತಿವರ್ಷ ಸರ್ಕಾರಗಳು ಕೊಳೆಗೇರಿಗಳಲ್ಲಿ ವಾಸಿಸುವ ಅಲೆಮಾರಿಗಳ ಶೈಕ್ಷಣಿಕ ಮೊದಲಾದ ಅಭಿವೃದ್ಧಿ ಕೆಲಸಗಳಿಗೆ 50-70 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ. ಈ ಹಣದಲ್ಲಿ ಕೇವಲ ಪ್ರತಿಶತ 20ರಷ್ಟು ಹಣ ಮಾತ್ರ ವೆಚ್ಚವಾಗುತ್ತಿದೆ. ಉಳಿದ ಹಣ ಸರ್ಕಾರಕ್ಕೆ ವಾಪಸ್ಸಾಗುತ್ತಿದೆ. ಕಾರಣ ಅಲೆಮಾರಿ ಸಮುದಾಯ ಶಿಕ್ಷಣ ಪಡೆದಿಲ್ಲ. ಹಾಗಾಗಿ ಸರ್ಕಾರ ಕೇಳುವ ದಾಖಲೆಗಳು ಅವರ ಬಳಿ ಸಿಗುತ್ತಿಲ್ಲ. ಇದು ಕೂಡ ಅಲೆಮಾರಿ ಗಳಿಗೆ ಮೀಸಲಿಟ್ಟ ಹಣ ಹಾಗೇ ಉಳಿಯಲು ಕಾರಣ’ ಎಂದು ತಿಳಿಸಿದರು.

ಸರ್ಕಾರ ಭೂ ಮಂಜೂರಾತಿ ಕೊಡುತ್ತಿದೆ. ಅಲೆಮಾರಿ ಸಮುದಾಯಗಳಿಗೂ ಭೂಮಿ ಕೊಡಬೇಕು. ಘನತೆ ಗೌರವದಿಂದ ಬದುಕಲು ವಸತಿ ವ್ಯವಸ್ಥೆ ಮಾಡಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಿದರೆ ಈ ಸಮುದಾಯಗಳ ಅಭಿವೃದ್ಧಿ ಸಾಧ್ಯ. ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಅಲೆಮಾರಿಗಳಲ್ಲಿ ಕೆಲ ಸಮುದಾಯಗಳು ಹಿಂದುಳಿದ ವರ್ಗಕ್ಕೆ ಬರುತ್ತವೆಯೇ? ಪರಿಶಿಷ್ಟ ಸಮುದಾಯಕ್ಕೆ ಸೇರುತ್ತವೆಯೇ ಎಂಬುದೇ ಗೊತ್ತಿಲ್ಲ. ಇದು ಕೂಡ ಈ ಅಲೆಮಾರಿಗಳು ಹಿಂದುಳಿಯಲು ಕಾರಣವಾಗಿದೆ. ಸರ್ಕಾರ ಈಗಲಾದರೂ ಅಲೆಮಾರಿಗಳ ಜನಗಣತಿ ಮಾಡಿ ಅವರ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಬೇಕಾಗಿದೆ.


ಇದನ್ನೂ ಓದಿ; ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...