Homeಕರ್ನಾಟಕರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

ರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

- Advertisement -
- Advertisement -

ಅವರು ಅಲೆಮಾರಿಗಳು, ಒಂದು ಕಡೆ ನಿಂತವರಲ್ಲ, ನಿಲ್ಲುವವರೂ ಅಲ್ಲ, ನೆಲೆ ನಿಂತರೂ ಒಂದು ಹಗಲು ಒಂದು ರಾತ್ರಿ ಮಾತ್ರ. ಮತ್ತೆ ಮನಸ್ಸು ಹರಿದತ್ತ ಹೆಜ್ಜೆ ಹಾಕುತ್ತಲೇ ಬದುಕು ಕಟ್ಟಿಕೊಂಡವರು. ಆಧುನಿಕತೆ ವ್ಯಾಪಿಸಿದಂತೆ ಈ ಅಲೆಮಾರಿ ಕುಟುಂಬಗಳು ನೆಲೆ ಕಂಡುಕೊಂಡು ಅವರ ಮಕ್ಕಳು ಶಾಲೆಯ ಮುಖವನ್ನು ಕಾಣುವಂತೆ ಆಗಿದೆ. ಇಂತಹ ಅಲೆಮಾರಿ ಸಮುದಾಯ ತಮ್ಮ ಸಾಂಸ್ಕೃತಿಕ ಕಥನಗಳನ್ನು ಕಟ್ಟಿಕೊಡುವ, ಸಾಂಸ್ಕೃತಿಕ ಕಲೆಗಳನ್ನು ನಗರೀಕರಣದ ಮುಂದೆ ಅನಾವರಣಗೊಳಿಸುವ ಕೆಲಸ ರಾಯಚೂರಿನಲ್ಲಿ ನಡೆಯಿತು. ನೆಲಮೂಲ ಸಂಸ್ಕೃತಿಯ ಒಂದೊಂದು ಕಲೆಯೂ ನಗರೀಕರಣಕ್ಕೆ ಸವಾಲೊಡ್ಡುವ ರೀತಿಯಲ್ಲಿ ವ್ಯಕ್ತವಾಯಿತು.

ಕೊಳೆಗೇರಿ ಪ್ರದೇಶದಲ್ಲಿ ವಾಸಿಸುವ ಬಗೆಬಗೆಯ ಬುಡಕಟ್ಟುಗಳು ಮತ್ತು ಅಲೆಮಾರಿ ಸಮುದಾಯ ತಮ್ಮಲ್ಲಿನ ಸಾಂಸ್ಕೃತಿಕ ಸಂಪತ್ತನ್ನು ಪ್ರದರ್ಶನಗೊಳಿಸುವುದಕ್ಕೆ ವೇದಿಕೆ ಒದಗಿಸಲಾಗಿತ್ತು. ಸ್ಲಂ ಜನಾಂದೋಲನ – ಕರ್ನಾಟಕ ನೇತೃತ್ವದಲ್ಲಿ ನಮ್ ಹಾಡು, ನಮ್ ಕುಣಿತ, ನಮ್ ಖುಷಿ ಶೀರ್ಷಿಕೆಯಡಿ ಸಾಂಸ್ಕೃತಿಕ ಕಲೆಗಳ ಸ್ಲಂಹಬ್ಬ ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ಅಳಿವಿನಂಚಿನಲ್ಲಿರುವ ಹಕ್ಕಿಪಿಕ್ಕಿಯವರ ಕಾಡಿನ ಹಾಡುಗಳು, ಪೋತರಾಜರ ನೃತ್ಯ, ಅಸ್ಪೃಶ್ಯಯ ಸಮುದಾಯಕ್ಕೆ ಸೇರಿದ ದರವೇಸಿಗಳ ಜನಸಮೂಹದ ಕಷ್ಟಕೋಟಲೆಗಳನ್ನು ಒಳಗೊಂಡ ಕವಾಲಿಗಳು, ಸುಡುಗಾಡು ಸಿದ್ದರ ಮಾಯಾಜಾಲ ಅಥವಾ ಕಣ್ಕಟ್ಟು, ಶಿಳ್ಳೇಕ್ಯಾತರ ಆಟಗಳು, ದುರ್ಗಿಮುರ್ಗಿಯ ಕುಣಿತ, ಲಂಬಾಣಿ ಜನರ ಕೋಲಾಟ, ಮಂಗಳಮುಖಿಯರ ಕಲೆಗಳು ವೇದಿಕೆಯಲ್ಲಿ ಅನಾವರಣಗೊಂಡು ಪ್ರೇಕ್ಷಕರ ಗಮನ ಸೆಳೆದವು.

2007 ರಿಂದ ಆರಂಭವಾಗಿರುವ ಸ್ಲಂಹಬ್ಬ ಇದುವರೆಗೆ ಮೂರು ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಸ್ಲಂಹಬ್ಬ ಗಳನ್ನು ಆಯೋಜಿಸಿ ರಾಜ್ಯದ ಗಮನ ಸೆಳೆಯಲಾಗಿದೆ. ಈ ಮೂಲಕ ಅಲೆಮಾರಿಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳು ನಡೆದಿವೆ. ನಗರದ ಜಂಝಡದ ಗದ್ದಲದ ನಡುವೆ ಶ್ರಮದಾನದಿಂದಲೇ ನಲುಗಿ ಹೋಗುತ್ತಿರುವ ಈ ಸಮುದಾಯದ ಸಾಂಸ್ಕೃತಿಕ ಪರಂಪರೆಯನ್ನು ಮುಖ್ಯವಾಹಿನಿಗೆ ತಲುಪಿಸುವ ಉದ್ದೇಶವನ್ನು ಇಟ್ಟುಕೊಂಡು ಸ್ಲಂಹಬ್ಬಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ಡೊಮಿನಿಕ್, “ಅಸ್ಪೃಶ್ಯರು ಮತ್ತು ಅಲೆಮಾರಿ ಸಮುದಾಯಗಳ ಕಲಾ ಪ್ರಕಾರಗಳು ಸ್ಥಾಪಿತ ಪರಂಪರೆ, ಅಮಾನವೀಯ ಸಾಂಸ್ಕೃತಿಕ ಪರಿಸರವನ್ನು ಬದಿಗೆ ಸರಿಸಿ, ಕೇವಲ ಮನೋರಂಜನೆಗಾಗಿ ಪ್ರದರ್ಶನಗೊಳ್ಳುವ ಕಲೆಗಳೆಂದು ಭಾವಿಸಲಾಗಿದ್ದ ಆಚರಣೆಗಳನ್ನು ಇಂದು ಸ್ಲಂ-ನಿವಾಸಿಗಳು ತಮ್ಮ ದುಡಿಮೆ ಸಾಂಸ್ಕೃತಿಕ ಗುರುತುಗಳನ್ನಾಗಿ ನೆಲೆಗೊಳಿಸುತ್ತಿದ್ದಾರೆ. ಹೀಗೆ ಮಾಡುವ ಮೂಲಕ, ಆ ಕಲೆಗಳ ಹಿಂದಿರುವ ಶ್ರೀಮಂತಿಕೆ ಹಾಗೂ ಮಾನವೀಯ ಮೌಲ್ಯಗಳನ್ನು ಮತ್ತೆ ಹೊಸ ಸಮಾಜ ನಿರ್ಮಾಣಕ್ಕೆ ಕೊಳಗೇರಿ ಸಮುದಾಯಗಳು ತೊಡಗಿರುವುದನ್ನು ನಾವು ನೋಡಬಹುದು” ಎಂದು ಹೇಳಿದ್ದಾರೆ.

ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ನಾನುಗೌರಿ.ಕಾಂ ಜೊತೆ ಮಾತನಾಡಿ ನಗರದಲ್ಲಿ ಅಲೆಮಾರಿ ಸಂಸ್ಕೃತಿಗಳ ಮೇಲೆ ದಾಳಿ, ದೌರ್ಜನ್ಯ ದಬ್ಬಾಳಿಕೆ ನಡೆದರೂ ಅದರ ವಿರುದ್ಧವೇ ತಿರುಗಿಬಿದ್ದಿರುವ ನೆಲಮೂಲ ಸಂಸ್ಕೃತಿಯ ಕಲೆಯ ಅನಾವರಣದ ಮೂಲಕ ಈ ಸಮುದಾಯದ ಜನರಿಗೆ ಹಕ್ಕುಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಆಧುನಿಕತೆಯ ಪರಿಣಾಮ ಅಲೆಮಾರಿಗಳು ಇಂದು ನೆಲೆ ನಿಲ್ಲುವಂತಹ ಸ್ಥಿಗೆ ಬರುವಂತೆ ಆಗಿದೆ. ಇದರಿಂದ ಆಧಾರ್, ರೇಷನ್ ಕಾರ್ಡುಗಳು ದೊರೆತಿವೆ. ಕೆಲ ಸಮುದಾಯಗಳಿಗೆ ಈ ಸೌಲಭ್ಯಗಳು ದೊರೆತಿಲ್ಲ. ಅಲೆಮಾರಿ ಕುಟುಂಬಗಳ ಮಕ್ಕಳು ಶಾಲೆಯ ಮುಖ ನೋಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದರು.

ಪ್ರತಿವರ್ಷ ಸರ್ಕಾರಗಳು ಕೊಳೆಗೇರಿಗಳಲ್ಲಿ ವಾಸಿಸುವ ಅಲೆಮಾರಿಗಳ ಶೈಕ್ಷಣಿಕ ಮೊದಲಾದ ಅಭಿವೃದ್ಧಿ ಕೆಲಸಗಳಿಗೆ 50-70 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ. ಈ ಹಣದಲ್ಲಿ ಕೇವಲ ಪ್ರತಿಶತ 20ರಷ್ಟು ಹಣ ಮಾತ್ರ ವೆಚ್ಚವಾಗುತ್ತಿದೆ. ಉಳಿದ ಹಣ ಸರ್ಕಾರಕ್ಕೆ ವಾಪಸ್ಸಾಗುತ್ತಿದೆ. ಕಾರಣ ಅಲೆಮಾರಿ ಸಮುದಾಯ ಶಿಕ್ಷಣ ಪಡೆದಿಲ್ಲ. ಹಾಗಾಗಿ ಸರ್ಕಾರ ಕೇಳುವ ದಾಖಲೆಗಳು ಅವರ ಬಳಿ ಸಿಗುತ್ತಿಲ್ಲ. ಇದು ಕೂಡ ಅಲೆಮಾರಿ ಗಳಿಗೆ ಮೀಸಲಿಟ್ಟ ಹಣ ಹಾಗೇ ಉಳಿಯಲು ಕಾರಣ’ ಎಂದು ತಿಳಿಸಿದರು.

ಸರ್ಕಾರ ಭೂ ಮಂಜೂರಾತಿ ಕೊಡುತ್ತಿದೆ. ಅಲೆಮಾರಿ ಸಮುದಾಯಗಳಿಗೂ ಭೂಮಿ ಕೊಡಬೇಕು. ಘನತೆ ಗೌರವದಿಂದ ಬದುಕಲು ವಸತಿ ವ್ಯವಸ್ಥೆ ಮಾಡಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಿದರೆ ಈ ಸಮುದಾಯಗಳ ಅಭಿವೃದ್ಧಿ ಸಾಧ್ಯ. ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಅಲೆಮಾರಿಗಳಲ್ಲಿ ಕೆಲ ಸಮುದಾಯಗಳು ಹಿಂದುಳಿದ ವರ್ಗಕ್ಕೆ ಬರುತ್ತವೆಯೇ? ಪರಿಶಿಷ್ಟ ಸಮುದಾಯಕ್ಕೆ ಸೇರುತ್ತವೆಯೇ ಎಂಬುದೇ ಗೊತ್ತಿಲ್ಲ. ಇದು ಕೂಡ ಈ ಅಲೆಮಾರಿಗಳು ಹಿಂದುಳಿಯಲು ಕಾರಣವಾಗಿದೆ. ಸರ್ಕಾರ ಈಗಲಾದರೂ ಅಲೆಮಾರಿಗಳ ಜನಗಣತಿ ಮಾಡಿ ಅವರ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಬೇಕಾಗಿದೆ.


ಇದನ್ನೂ ಓದಿ; ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...