Homeಮುಖಪುಟಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

ಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

- Advertisement -
- Advertisement -

ಬೆಂಗಳೂರಿನ ಸ್ಫೂರ್ತಿಧಾಮದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಯೋಜಿಸಿದ್ದ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವ ಬಹುತ್ವ ಬದುಕಿನ ಸಂದೇಶ ಸಾರಿತು.

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ವಂದಿಸುವ ಮೂಲಕ ಆರಂಭಿಸಲಾಯಿತು. ‘ಅರಿವೇ ಅಂಬೇಡ್ಕರ, ಗುರುವೇ ಅಂಬೇಡ್ಕರ’ ಎಂದು ನಮಿಸಿ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ನಾಡಿನ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ ಅವರ ಮುಂದಾಳ್ವದಲ್ಲಿ ಅಂಬೇಡ್ಕರ್‌ ಪ್ರತಿಮೆಯಿಂದ, ಬುದ್ಧನ ಪ್ರತಿಮೆಯವರೆಗೂ ಮೆರವಣಿಗೆ ನಡೆಸಲಾಯಿತು. ಸ್ಫೂರ್ತಿಧಾಮದ ಪ್ರಶಾಂತ ವಾತಾವರಣದಲ್ಲಿ ನಿರ್ಮಿಸಲಾಗಿರುವ ಬುದ್ಧನ ಪ್ರತಿಮೆಯ ಮುಂದೆ ವಿಜಯಮ್ಮ ಹಾಗೂ ಹಂಸಲೇಖ ಅವರು ದೀಪ ಬೆಳಗಿಸಿದರು. ಒನಕೆ ಓಬವ್ವ ಕಹಳೆ ವಾದನ ಕಲಾವಿದರು ಮೆರವಣಿಗೆಯನ್ನು ಮುನ್ನಡೆಸಿದರು. ಮೆರವಣಿಗೆಯುದ್ದಕ್ಕೂ ಕೊಂಬು, ಕಹಳೆ, ತಮಟೆ ಸದ್ದು ಸಾಂಸ್ಕೃತಿಕ ಸಂಕೇತಗಳನ್ನು ಪ್ರತಿಧ್ವನಿಸಿದವು.

ವಿಜಯಸ್ತಂಬದ ಬಳಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ವಿ.ಎಸ್‌. ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆಯವರು ರೈತ ಹೋರಾಟದ ವಿಜಯವನ್ನು ಸ್ಮರಿಸಿದರು. ಜೊತೆಗೆ ಬರಗೂರಿನ ಅಲೈ ತಂಡದವರು ‘ಮೊಹರಂ ಅಲೈ ಕುಣಿತ’ ನಡೆಸಿಕೊಡುವ ಮೂಲಕ ‘ಹಿಂದೂ-ಮುಸ್ಲಿಂ’ ಭಾವೈಕ್ಯತೆಯನ್ನು ಸಾರಿದರು.

ಸ್ಫೂರ್ತಿಧಾಮದ ವೇದಿಕೆ ಸಜ್ಜಾಗಿತ್ತು. ಗಾಯಕ ಚಿಂತನ್‌ ವಿಕಾಸ್ ಅವರು, ಕುವೆಂಪು ರಚಿತ ವಿಶ್ವಮಾನವ ಗೀತೆ ‘ಓ ನನ್ನ ಚೇತನ, ಆಗು ನೀ ಅನಿಕೇತನ’ವನ್ನು ವಿಶಿಷ್ಟ ರಾಗ ಸಂಯೋಜನೆಯಲ್ಲಿ ಹಾಡುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ಫ್ಯಾಸಿಸ್ಟ್‌ ಶಕ್ತಿಗಳನ್ನು ಎದುರಿಸುವ ಬಗೆಯನ್ನು ಕಾರ್ಯಕ್ರಮದ ಮೂಲಕ ತೋರಿಸಿಕೊಟ್ಟರು.

ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿ ಹೊಮ್ಮಿದ ‘ದೇಸಿ ಪದ’ದಲ್ಲಿ ಮಂಡ್ಯದ ಮಹಿಳಾ ನಗಾರಿ ತಂಡದ ಕಲಾ ಪ್ರದರ್ಶನ ಮನಸೂರೆಗೊಂಡಿತು. ಧಾರಾವಾಡದ ನಾದ ಝೇಂಕಾರ ಸಾಂಸ್ಕೃತಿಕ ಸಂಘವು, ‘ಎಲ್ಲಿಕಾಣೆಲ್ಲಿಕಾಣಿರೋ ನಮ್ಮ ಎಲ್ಲವ್ವ’ ಹಾಡನ್ನು ಸೊಗಸಾಗಿ ಹಾಡಿದರು.

ಮನಸೂರೆಗೊಂಡ ಜೇನುಕುರುಬರ ಕಲಾ ಪ್ರದರ್ಶನ

ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ರಸ್ತೆ ಯಾವುದೂ ಸರಿಯಾಗಿ ಇಲ್ಲದ ಕುಗ್ರಾಮವೊಂದರಿಂದ ಬಂದ ಕೊಡಗು ಜಿಲ್ಲೆಯ ಜೇನು ಕುರುಬರ ಯುಜಜನರ ತಂಡ ನೀಡಿದ ಕಲಾ ಪ್ರದರ್ಶನಕ್ಕೆ ಇಡೀ ಸಭಾಂಗಣ ಒನ್ಸ್‌ ಮೋರ್‌ ಹೇಳಿತು. ಈ ತಂಡದ ಪ್ರದರ್ಶನದಿಂದ ಸಂತೋಷಗೊಂಡ ನಾದಬ್ರಹ್ಮ ಹಂಸಲೇಖ ಅವರು, 25,000 ರೂ. ಬಹುಮಾನವನ್ನು ಘೋಷಿಸಿದ್ದಲ್ಲದೆ, ಝೀ ಕನ್ನಡ ವಾಹಿನಿಗೆ ಜೇನುಕುರುಬ ಸಮುದಾಯದ ಕಲಾ ಪ್ರದರ್ಶನವನ್ನು ತರುವುದಾಗಿ ತಿಳಿಸಿದರು.

ಮಧ್ಯಾಹ್ನದ ಬಳಿಕ ಜಾನಪದ ಗಾಯಕಿ ವೈ.ಜಿ.ಉಮಾ, ನಾದ ಮಣಿನಾಲ್ಕೂರು ಅವರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವೇದಿಕೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ವಿಜಯಮ್ಮ, ಸ್ಫೂರ್ತಿಧಾಮದ ಅಧ್ಯಕ್ಷರಾದ ಮರಿಸ್ವಾಮಿ, ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕರಾದ ಮಂಸೋರೆ, ಬಿ.ಎಂ.ಗಿರಿರಾಜ್‌ ಹಾಜರಿದ್ದರು.


ಇದನ್ನೂ ಓದಿರಿ: ವರ್ತಮಾನದ ತಲ್ಲಣಗಳ ನುಡಿಗನ್ನಡಿ ಕುವೆಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...