Homeಮುಖಪುಟಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

ಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

- Advertisement -
- Advertisement -

ಬೆಂಗಳೂರಿನ ಸ್ಫೂರ್ತಿಧಾಮದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಯೋಜಿಸಿದ್ದ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವ ಬಹುತ್ವ ಬದುಕಿನ ಸಂದೇಶ ಸಾರಿತು.

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ವಂದಿಸುವ ಮೂಲಕ ಆರಂಭಿಸಲಾಯಿತು. ‘ಅರಿವೇ ಅಂಬೇಡ್ಕರ, ಗುರುವೇ ಅಂಬೇಡ್ಕರ’ ಎಂದು ನಮಿಸಿ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ನಾಡಿನ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ ಅವರ ಮುಂದಾಳ್ವದಲ್ಲಿ ಅಂಬೇಡ್ಕರ್‌ ಪ್ರತಿಮೆಯಿಂದ, ಬುದ್ಧನ ಪ್ರತಿಮೆಯವರೆಗೂ ಮೆರವಣಿಗೆ ನಡೆಸಲಾಯಿತು. ಸ್ಫೂರ್ತಿಧಾಮದ ಪ್ರಶಾಂತ ವಾತಾವರಣದಲ್ಲಿ ನಿರ್ಮಿಸಲಾಗಿರುವ ಬುದ್ಧನ ಪ್ರತಿಮೆಯ ಮುಂದೆ ವಿಜಯಮ್ಮ ಹಾಗೂ ಹಂಸಲೇಖ ಅವರು ದೀಪ ಬೆಳಗಿಸಿದರು. ಒನಕೆ ಓಬವ್ವ ಕಹಳೆ ವಾದನ ಕಲಾವಿದರು ಮೆರವಣಿಗೆಯನ್ನು ಮುನ್ನಡೆಸಿದರು. ಮೆರವಣಿಗೆಯುದ್ದಕ್ಕೂ ಕೊಂಬು, ಕಹಳೆ, ತಮಟೆ ಸದ್ದು ಸಾಂಸ್ಕೃತಿಕ ಸಂಕೇತಗಳನ್ನು ಪ್ರತಿಧ್ವನಿಸಿದವು.

ವಿಜಯಸ್ತಂಬದ ಬಳಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ವಿ.ಎಸ್‌. ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆಯವರು ರೈತ ಹೋರಾಟದ ವಿಜಯವನ್ನು ಸ್ಮರಿಸಿದರು. ಜೊತೆಗೆ ಬರಗೂರಿನ ಅಲೈ ತಂಡದವರು ‘ಮೊಹರಂ ಅಲೈ ಕುಣಿತ’ ನಡೆಸಿಕೊಡುವ ಮೂಲಕ ‘ಹಿಂದೂ-ಮುಸ್ಲಿಂ’ ಭಾವೈಕ್ಯತೆಯನ್ನು ಸಾರಿದರು.

ಸ್ಫೂರ್ತಿಧಾಮದ ವೇದಿಕೆ ಸಜ್ಜಾಗಿತ್ತು. ಗಾಯಕ ಚಿಂತನ್‌ ವಿಕಾಸ್ ಅವರು, ಕುವೆಂಪು ರಚಿತ ವಿಶ್ವಮಾನವ ಗೀತೆ ‘ಓ ನನ್ನ ಚೇತನ, ಆಗು ನೀ ಅನಿಕೇತನ’ವನ್ನು ವಿಶಿಷ್ಟ ರಾಗ ಸಂಯೋಜನೆಯಲ್ಲಿ ಹಾಡುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ಫ್ಯಾಸಿಸ್ಟ್‌ ಶಕ್ತಿಗಳನ್ನು ಎದುರಿಸುವ ಬಗೆಯನ್ನು ಕಾರ್ಯಕ್ರಮದ ಮೂಲಕ ತೋರಿಸಿಕೊಟ್ಟರು.

ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿ ಹೊಮ್ಮಿದ ‘ದೇಸಿ ಪದ’ದಲ್ಲಿ ಮಂಡ್ಯದ ಮಹಿಳಾ ನಗಾರಿ ತಂಡದ ಕಲಾ ಪ್ರದರ್ಶನ ಮನಸೂರೆಗೊಂಡಿತು. ಧಾರಾವಾಡದ ನಾದ ಝೇಂಕಾರ ಸಾಂಸ್ಕೃತಿಕ ಸಂಘವು, ‘ಎಲ್ಲಿಕಾಣೆಲ್ಲಿಕಾಣಿರೋ ನಮ್ಮ ಎಲ್ಲವ್ವ’ ಹಾಡನ್ನು ಸೊಗಸಾಗಿ ಹಾಡಿದರು.

ಮನಸೂರೆಗೊಂಡ ಜೇನುಕುರುಬರ ಕಲಾ ಪ್ರದರ್ಶನ

ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ರಸ್ತೆ ಯಾವುದೂ ಸರಿಯಾಗಿ ಇಲ್ಲದ ಕುಗ್ರಾಮವೊಂದರಿಂದ ಬಂದ ಕೊಡಗು ಜಿಲ್ಲೆಯ ಜೇನು ಕುರುಬರ ಯುಜಜನರ ತಂಡ ನೀಡಿದ ಕಲಾ ಪ್ರದರ್ಶನಕ್ಕೆ ಇಡೀ ಸಭಾಂಗಣ ಒನ್ಸ್‌ ಮೋರ್‌ ಹೇಳಿತು. ಈ ತಂಡದ ಪ್ರದರ್ಶನದಿಂದ ಸಂತೋಷಗೊಂಡ ನಾದಬ್ರಹ್ಮ ಹಂಸಲೇಖ ಅವರು, 25,000 ರೂ. ಬಹುಮಾನವನ್ನು ಘೋಷಿಸಿದ್ದಲ್ಲದೆ, ಝೀ ಕನ್ನಡ ವಾಹಿನಿಗೆ ಜೇನುಕುರುಬ ಸಮುದಾಯದ ಕಲಾ ಪ್ರದರ್ಶನವನ್ನು ತರುವುದಾಗಿ ತಿಳಿಸಿದರು.

ಮಧ್ಯಾಹ್ನದ ಬಳಿಕ ಜಾನಪದ ಗಾಯಕಿ ವೈ.ಜಿ.ಉಮಾ, ನಾದ ಮಣಿನಾಲ್ಕೂರು ಅವರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವೇದಿಕೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ವಿಜಯಮ್ಮ, ಸ್ಫೂರ್ತಿಧಾಮದ ಅಧ್ಯಕ್ಷರಾದ ಮರಿಸ್ವಾಮಿ, ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕರಾದ ಮಂಸೋರೆ, ಬಿ.ಎಂ.ಗಿರಿರಾಜ್‌ ಹಾಜರಿದ್ದರು.


ಇದನ್ನೂ ಓದಿರಿ: ವರ್ತಮಾನದ ತಲ್ಲಣಗಳ ನುಡಿಗನ್ನಡಿ ಕುವೆಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...