Homeಮುಖಪುಟಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

ಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

- Advertisement -
- Advertisement -

ಬೆಂಗಳೂರಿನ ಸ್ಫೂರ್ತಿಧಾಮದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಯೋಜಿಸಿದ್ದ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವ ಬಹುತ್ವ ಬದುಕಿನ ಸಂದೇಶ ಸಾರಿತು.

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ವಂದಿಸುವ ಮೂಲಕ ಆರಂಭಿಸಲಾಯಿತು. ‘ಅರಿವೇ ಅಂಬೇಡ್ಕರ, ಗುರುವೇ ಅಂಬೇಡ್ಕರ’ ಎಂದು ನಮಿಸಿ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ನಾಡಿನ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ ಅವರ ಮುಂದಾಳ್ವದಲ್ಲಿ ಅಂಬೇಡ್ಕರ್‌ ಪ್ರತಿಮೆಯಿಂದ, ಬುದ್ಧನ ಪ್ರತಿಮೆಯವರೆಗೂ ಮೆರವಣಿಗೆ ನಡೆಸಲಾಯಿತು. ಸ್ಫೂರ್ತಿಧಾಮದ ಪ್ರಶಾಂತ ವಾತಾವರಣದಲ್ಲಿ ನಿರ್ಮಿಸಲಾಗಿರುವ ಬುದ್ಧನ ಪ್ರತಿಮೆಯ ಮುಂದೆ ವಿಜಯಮ್ಮ ಹಾಗೂ ಹಂಸಲೇಖ ಅವರು ದೀಪ ಬೆಳಗಿಸಿದರು. ಒನಕೆ ಓಬವ್ವ ಕಹಳೆ ವಾದನ ಕಲಾವಿದರು ಮೆರವಣಿಗೆಯನ್ನು ಮುನ್ನಡೆಸಿದರು. ಮೆರವಣಿಗೆಯುದ್ದಕ್ಕೂ ಕೊಂಬು, ಕಹಳೆ, ತಮಟೆ ಸದ್ದು ಸಾಂಸ್ಕೃತಿಕ ಸಂಕೇತಗಳನ್ನು ಪ್ರತಿಧ್ವನಿಸಿದವು.

ವಿಜಯಸ್ತಂಬದ ಬಳಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ವಿ.ಎಸ್‌. ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆಯವರು ರೈತ ಹೋರಾಟದ ವಿಜಯವನ್ನು ಸ್ಮರಿಸಿದರು. ಜೊತೆಗೆ ಬರಗೂರಿನ ಅಲೈ ತಂಡದವರು ‘ಮೊಹರಂ ಅಲೈ ಕುಣಿತ’ ನಡೆಸಿಕೊಡುವ ಮೂಲಕ ‘ಹಿಂದೂ-ಮುಸ್ಲಿಂ’ ಭಾವೈಕ್ಯತೆಯನ್ನು ಸಾರಿದರು.

ಸ್ಫೂರ್ತಿಧಾಮದ ವೇದಿಕೆ ಸಜ್ಜಾಗಿತ್ತು. ಗಾಯಕ ಚಿಂತನ್‌ ವಿಕಾಸ್ ಅವರು, ಕುವೆಂಪು ರಚಿತ ವಿಶ್ವಮಾನವ ಗೀತೆ ‘ಓ ನನ್ನ ಚೇತನ, ಆಗು ನೀ ಅನಿಕೇತನ’ವನ್ನು ವಿಶಿಷ್ಟ ರಾಗ ಸಂಯೋಜನೆಯಲ್ಲಿ ಹಾಡುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ಫ್ಯಾಸಿಸ್ಟ್‌ ಶಕ್ತಿಗಳನ್ನು ಎದುರಿಸುವ ಬಗೆಯನ್ನು ಕಾರ್ಯಕ್ರಮದ ಮೂಲಕ ತೋರಿಸಿಕೊಟ್ಟರು.

ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿ ಹೊಮ್ಮಿದ ‘ದೇಸಿ ಪದ’ದಲ್ಲಿ ಮಂಡ್ಯದ ಮಹಿಳಾ ನಗಾರಿ ತಂಡದ ಕಲಾ ಪ್ರದರ್ಶನ ಮನಸೂರೆಗೊಂಡಿತು. ಧಾರಾವಾಡದ ನಾದ ಝೇಂಕಾರ ಸಾಂಸ್ಕೃತಿಕ ಸಂಘವು, ‘ಎಲ್ಲಿಕಾಣೆಲ್ಲಿಕಾಣಿರೋ ನಮ್ಮ ಎಲ್ಲವ್ವ’ ಹಾಡನ್ನು ಸೊಗಸಾಗಿ ಹಾಡಿದರು.

ಮನಸೂರೆಗೊಂಡ ಜೇನುಕುರುಬರ ಕಲಾ ಪ್ರದರ್ಶನ

ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ರಸ್ತೆ ಯಾವುದೂ ಸರಿಯಾಗಿ ಇಲ್ಲದ ಕುಗ್ರಾಮವೊಂದರಿಂದ ಬಂದ ಕೊಡಗು ಜಿಲ್ಲೆಯ ಜೇನು ಕುರುಬರ ಯುಜಜನರ ತಂಡ ನೀಡಿದ ಕಲಾ ಪ್ರದರ್ಶನಕ್ಕೆ ಇಡೀ ಸಭಾಂಗಣ ಒನ್ಸ್‌ ಮೋರ್‌ ಹೇಳಿತು. ಈ ತಂಡದ ಪ್ರದರ್ಶನದಿಂದ ಸಂತೋಷಗೊಂಡ ನಾದಬ್ರಹ್ಮ ಹಂಸಲೇಖ ಅವರು, 25,000 ರೂ. ಬಹುಮಾನವನ್ನು ಘೋಷಿಸಿದ್ದಲ್ಲದೆ, ಝೀ ಕನ್ನಡ ವಾಹಿನಿಗೆ ಜೇನುಕುರುಬ ಸಮುದಾಯದ ಕಲಾ ಪ್ರದರ್ಶನವನ್ನು ತರುವುದಾಗಿ ತಿಳಿಸಿದರು.

ಮಧ್ಯಾಹ್ನದ ಬಳಿಕ ಜಾನಪದ ಗಾಯಕಿ ವೈ.ಜಿ.ಉಮಾ, ನಾದ ಮಣಿನಾಲ್ಕೂರು ಅವರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವೇದಿಕೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ವಿಜಯಮ್ಮ, ಸ್ಫೂರ್ತಿಧಾಮದ ಅಧ್ಯಕ್ಷರಾದ ಮರಿಸ್ವಾಮಿ, ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕರಾದ ಮಂಸೋರೆ, ಬಿ.ಎಂ.ಗಿರಿರಾಜ್‌ ಹಾಜರಿದ್ದರು.


ಇದನ್ನೂ ಓದಿರಿ: ವರ್ತಮಾನದ ತಲ್ಲಣಗಳ ನುಡಿಗನ್ನಡಿ ಕುವೆಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...