Homeಮುಖಪುಟಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

ಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

- Advertisement -
- Advertisement -

ಬೆಂಗಳೂರಿನ ಸ್ಫೂರ್ತಿಧಾಮದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಯೋಜಿಸಿದ್ದ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವ ಬಹುತ್ವ ಬದುಕಿನ ಸಂದೇಶ ಸಾರಿತು.

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ವಂದಿಸುವ ಮೂಲಕ ಆರಂಭಿಸಲಾಯಿತು. ‘ಅರಿವೇ ಅಂಬೇಡ್ಕರ, ಗುರುವೇ ಅಂಬೇಡ್ಕರ’ ಎಂದು ನಮಿಸಿ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ನಾಡಿನ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ ಅವರ ಮುಂದಾಳ್ವದಲ್ಲಿ ಅಂಬೇಡ್ಕರ್‌ ಪ್ರತಿಮೆಯಿಂದ, ಬುದ್ಧನ ಪ್ರತಿಮೆಯವರೆಗೂ ಮೆರವಣಿಗೆ ನಡೆಸಲಾಯಿತು. ಸ್ಫೂರ್ತಿಧಾಮದ ಪ್ರಶಾಂತ ವಾತಾವರಣದಲ್ಲಿ ನಿರ್ಮಿಸಲಾಗಿರುವ ಬುದ್ಧನ ಪ್ರತಿಮೆಯ ಮುಂದೆ ವಿಜಯಮ್ಮ ಹಾಗೂ ಹಂಸಲೇಖ ಅವರು ದೀಪ ಬೆಳಗಿಸಿದರು. ಒನಕೆ ಓಬವ್ವ ಕಹಳೆ ವಾದನ ಕಲಾವಿದರು ಮೆರವಣಿಗೆಯನ್ನು ಮುನ್ನಡೆಸಿದರು. ಮೆರವಣಿಗೆಯುದ್ದಕ್ಕೂ ಕೊಂಬು, ಕಹಳೆ, ತಮಟೆ ಸದ್ದು ಸಾಂಸ್ಕೃತಿಕ ಸಂಕೇತಗಳನ್ನು ಪ್ರತಿಧ್ವನಿಸಿದವು.

ವಿಜಯಸ್ತಂಬದ ಬಳಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ವಿ.ಎಸ್‌. ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆಯವರು ರೈತ ಹೋರಾಟದ ವಿಜಯವನ್ನು ಸ್ಮರಿಸಿದರು. ಜೊತೆಗೆ ಬರಗೂರಿನ ಅಲೈ ತಂಡದವರು ‘ಮೊಹರಂ ಅಲೈ ಕುಣಿತ’ ನಡೆಸಿಕೊಡುವ ಮೂಲಕ ‘ಹಿಂದೂ-ಮುಸ್ಲಿಂ’ ಭಾವೈಕ್ಯತೆಯನ್ನು ಸಾರಿದರು.

ಸ್ಫೂರ್ತಿಧಾಮದ ವೇದಿಕೆ ಸಜ್ಜಾಗಿತ್ತು. ಗಾಯಕ ಚಿಂತನ್‌ ವಿಕಾಸ್ ಅವರು, ಕುವೆಂಪು ರಚಿತ ವಿಶ್ವಮಾನವ ಗೀತೆ ‘ಓ ನನ್ನ ಚೇತನ, ಆಗು ನೀ ಅನಿಕೇತನ’ವನ್ನು ವಿಶಿಷ್ಟ ರಾಗ ಸಂಯೋಜನೆಯಲ್ಲಿ ಹಾಡುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ಫ್ಯಾಸಿಸ್ಟ್‌ ಶಕ್ತಿಗಳನ್ನು ಎದುರಿಸುವ ಬಗೆಯನ್ನು ಕಾರ್ಯಕ್ರಮದ ಮೂಲಕ ತೋರಿಸಿಕೊಟ್ಟರು.

ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿ ಹೊಮ್ಮಿದ ‘ದೇಸಿ ಪದ’ದಲ್ಲಿ ಮಂಡ್ಯದ ಮಹಿಳಾ ನಗಾರಿ ತಂಡದ ಕಲಾ ಪ್ರದರ್ಶನ ಮನಸೂರೆಗೊಂಡಿತು. ಧಾರಾವಾಡದ ನಾದ ಝೇಂಕಾರ ಸಾಂಸ್ಕೃತಿಕ ಸಂಘವು, ‘ಎಲ್ಲಿಕಾಣೆಲ್ಲಿಕಾಣಿರೋ ನಮ್ಮ ಎಲ್ಲವ್ವ’ ಹಾಡನ್ನು ಸೊಗಸಾಗಿ ಹಾಡಿದರು.

ಮನಸೂರೆಗೊಂಡ ಜೇನುಕುರುಬರ ಕಲಾ ಪ್ರದರ್ಶನ

ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ರಸ್ತೆ ಯಾವುದೂ ಸರಿಯಾಗಿ ಇಲ್ಲದ ಕುಗ್ರಾಮವೊಂದರಿಂದ ಬಂದ ಕೊಡಗು ಜಿಲ್ಲೆಯ ಜೇನು ಕುರುಬರ ಯುಜಜನರ ತಂಡ ನೀಡಿದ ಕಲಾ ಪ್ರದರ್ಶನಕ್ಕೆ ಇಡೀ ಸಭಾಂಗಣ ಒನ್ಸ್‌ ಮೋರ್‌ ಹೇಳಿತು. ಈ ತಂಡದ ಪ್ರದರ್ಶನದಿಂದ ಸಂತೋಷಗೊಂಡ ನಾದಬ್ರಹ್ಮ ಹಂಸಲೇಖ ಅವರು, 25,000 ರೂ. ಬಹುಮಾನವನ್ನು ಘೋಷಿಸಿದ್ದಲ್ಲದೆ, ಝೀ ಕನ್ನಡ ವಾಹಿನಿಗೆ ಜೇನುಕುರುಬ ಸಮುದಾಯದ ಕಲಾ ಪ್ರದರ್ಶನವನ್ನು ತರುವುದಾಗಿ ತಿಳಿಸಿದರು.

ಮಧ್ಯಾಹ್ನದ ಬಳಿಕ ಜಾನಪದ ಗಾಯಕಿ ವೈ.ಜಿ.ಉಮಾ, ನಾದ ಮಣಿನಾಲ್ಕೂರು ಅವರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವೇದಿಕೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ವಿಜಯಮ್ಮ, ಸ್ಫೂರ್ತಿಧಾಮದ ಅಧ್ಯಕ್ಷರಾದ ಮರಿಸ್ವಾಮಿ, ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕರಾದ ಮಂಸೋರೆ, ಬಿ.ಎಂ.ಗಿರಿರಾಜ್‌ ಹಾಜರಿದ್ದರು.


ಇದನ್ನೂ ಓದಿರಿ: ವರ್ತಮಾನದ ತಲ್ಲಣಗಳ ನುಡಿಗನ್ನಡಿ ಕುವೆಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...