Homeಮುಖಪುಟಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

ಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

- Advertisement -
- Advertisement -

ಬೆಂಗಳೂರಿನ ಸ್ಫೂರ್ತಿಧಾಮದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಯೋಜಿಸಿದ್ದ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವ ಬಹುತ್ವ ಬದುಕಿನ ಸಂದೇಶ ಸಾರಿತು.

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ವಂದಿಸುವ ಮೂಲಕ ಆರಂಭಿಸಲಾಯಿತು. ‘ಅರಿವೇ ಅಂಬೇಡ್ಕರ, ಗುರುವೇ ಅಂಬೇಡ್ಕರ’ ಎಂದು ನಮಿಸಿ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ನಾಡಿನ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ ಅವರ ಮುಂದಾಳ್ವದಲ್ಲಿ ಅಂಬೇಡ್ಕರ್‌ ಪ್ರತಿಮೆಯಿಂದ, ಬುದ್ಧನ ಪ್ರತಿಮೆಯವರೆಗೂ ಮೆರವಣಿಗೆ ನಡೆಸಲಾಯಿತು. ಸ್ಫೂರ್ತಿಧಾಮದ ಪ್ರಶಾಂತ ವಾತಾವರಣದಲ್ಲಿ ನಿರ್ಮಿಸಲಾಗಿರುವ ಬುದ್ಧನ ಪ್ರತಿಮೆಯ ಮುಂದೆ ವಿಜಯಮ್ಮ ಹಾಗೂ ಹಂಸಲೇಖ ಅವರು ದೀಪ ಬೆಳಗಿಸಿದರು. ಒನಕೆ ಓಬವ್ವ ಕಹಳೆ ವಾದನ ಕಲಾವಿದರು ಮೆರವಣಿಗೆಯನ್ನು ಮುನ್ನಡೆಸಿದರು. ಮೆರವಣಿಗೆಯುದ್ದಕ್ಕೂ ಕೊಂಬು, ಕಹಳೆ, ತಮಟೆ ಸದ್ದು ಸಾಂಸ್ಕೃತಿಕ ಸಂಕೇತಗಳನ್ನು ಪ್ರತಿಧ್ವನಿಸಿದವು.

ವಿಜಯಸ್ತಂಬದ ಬಳಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ವಿ.ಎಸ್‌. ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆಯವರು ರೈತ ಹೋರಾಟದ ವಿಜಯವನ್ನು ಸ್ಮರಿಸಿದರು. ಜೊತೆಗೆ ಬರಗೂರಿನ ಅಲೈ ತಂಡದವರು ‘ಮೊಹರಂ ಅಲೈ ಕುಣಿತ’ ನಡೆಸಿಕೊಡುವ ಮೂಲಕ ‘ಹಿಂದೂ-ಮುಸ್ಲಿಂ’ ಭಾವೈಕ್ಯತೆಯನ್ನು ಸಾರಿದರು.

ಸ್ಫೂರ್ತಿಧಾಮದ ವೇದಿಕೆ ಸಜ್ಜಾಗಿತ್ತು. ಗಾಯಕ ಚಿಂತನ್‌ ವಿಕಾಸ್ ಅವರು, ಕುವೆಂಪು ರಚಿತ ವಿಶ್ವಮಾನವ ಗೀತೆ ‘ಓ ನನ್ನ ಚೇತನ, ಆಗು ನೀ ಅನಿಕೇತನ’ವನ್ನು ವಿಶಿಷ್ಟ ರಾಗ ಸಂಯೋಜನೆಯಲ್ಲಿ ಹಾಡುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ಫ್ಯಾಸಿಸ್ಟ್‌ ಶಕ್ತಿಗಳನ್ನು ಎದುರಿಸುವ ಬಗೆಯನ್ನು ಕಾರ್ಯಕ್ರಮದ ಮೂಲಕ ತೋರಿಸಿಕೊಟ್ಟರು.

ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿ ಹೊಮ್ಮಿದ ‘ದೇಸಿ ಪದ’ದಲ್ಲಿ ಮಂಡ್ಯದ ಮಹಿಳಾ ನಗಾರಿ ತಂಡದ ಕಲಾ ಪ್ರದರ್ಶನ ಮನಸೂರೆಗೊಂಡಿತು. ಧಾರಾವಾಡದ ನಾದ ಝೇಂಕಾರ ಸಾಂಸ್ಕೃತಿಕ ಸಂಘವು, ‘ಎಲ್ಲಿಕಾಣೆಲ್ಲಿಕಾಣಿರೋ ನಮ್ಮ ಎಲ್ಲವ್ವ’ ಹಾಡನ್ನು ಸೊಗಸಾಗಿ ಹಾಡಿದರು.

ಮನಸೂರೆಗೊಂಡ ಜೇನುಕುರುಬರ ಕಲಾ ಪ್ರದರ್ಶನ

ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ರಸ್ತೆ ಯಾವುದೂ ಸರಿಯಾಗಿ ಇಲ್ಲದ ಕುಗ್ರಾಮವೊಂದರಿಂದ ಬಂದ ಕೊಡಗು ಜಿಲ್ಲೆಯ ಜೇನು ಕುರುಬರ ಯುಜಜನರ ತಂಡ ನೀಡಿದ ಕಲಾ ಪ್ರದರ್ಶನಕ್ಕೆ ಇಡೀ ಸಭಾಂಗಣ ಒನ್ಸ್‌ ಮೋರ್‌ ಹೇಳಿತು. ಈ ತಂಡದ ಪ್ರದರ್ಶನದಿಂದ ಸಂತೋಷಗೊಂಡ ನಾದಬ್ರಹ್ಮ ಹಂಸಲೇಖ ಅವರು, 25,000 ರೂ. ಬಹುಮಾನವನ್ನು ಘೋಷಿಸಿದ್ದಲ್ಲದೆ, ಝೀ ಕನ್ನಡ ವಾಹಿನಿಗೆ ಜೇನುಕುರುಬ ಸಮುದಾಯದ ಕಲಾ ಪ್ರದರ್ಶನವನ್ನು ತರುವುದಾಗಿ ತಿಳಿಸಿದರು.

ಮಧ್ಯಾಹ್ನದ ಬಳಿಕ ಜಾನಪದ ಗಾಯಕಿ ವೈ.ಜಿ.ಉಮಾ, ನಾದ ಮಣಿನಾಲ್ಕೂರು ಅವರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವೇದಿಕೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ವಿಜಯಮ್ಮ, ಸ್ಫೂರ್ತಿಧಾಮದ ಅಧ್ಯಕ್ಷರಾದ ಮರಿಸ್ವಾಮಿ, ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕರಾದ ಮಂಸೋರೆ, ಬಿ.ಎಂ.ಗಿರಿರಾಜ್‌ ಹಾಜರಿದ್ದರು.


ಇದನ್ನೂ ಓದಿರಿ: ವರ್ತಮಾನದ ತಲ್ಲಣಗಳ ನುಡಿಗನ್ನಡಿ ಕುವೆಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...