Homeಮುಖಪುಟಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

ಬಹುತ್ವ ಬದುಕಿನ ಸಂದೇಶ ಸಾರಿದ ‘ನೆಲದ ಪದ’ ಸಾಂಸ್ಕೃತಿಕ ಉತ್ಸವ

- Advertisement -
- Advertisement -

ಬೆಂಗಳೂರಿನ ಸ್ಫೂರ್ತಿಧಾಮದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಯೋಜಿಸಿದ್ದ ‘ನೆಲದ ಪದ’ ದೇಸಿ ಯುವ ಸಾಂಸ್ಕೃತಿಕ ಉತ್ಸವ ಬಹುತ್ವ ಬದುಕಿನ ಸಂದೇಶ ಸಾರಿತು.

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ವಂದಿಸುವ ಮೂಲಕ ಆರಂಭಿಸಲಾಯಿತು. ‘ಅರಿವೇ ಅಂಬೇಡ್ಕರ, ಗುರುವೇ ಅಂಬೇಡ್ಕರ’ ಎಂದು ನಮಿಸಿ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ನಾಡಿನ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ ಅವರ ಮುಂದಾಳ್ವದಲ್ಲಿ ಅಂಬೇಡ್ಕರ್‌ ಪ್ರತಿಮೆಯಿಂದ, ಬುದ್ಧನ ಪ್ರತಿಮೆಯವರೆಗೂ ಮೆರವಣಿಗೆ ನಡೆಸಲಾಯಿತು. ಸ್ಫೂರ್ತಿಧಾಮದ ಪ್ರಶಾಂತ ವಾತಾವರಣದಲ್ಲಿ ನಿರ್ಮಿಸಲಾಗಿರುವ ಬುದ್ಧನ ಪ್ರತಿಮೆಯ ಮುಂದೆ ವಿಜಯಮ್ಮ ಹಾಗೂ ಹಂಸಲೇಖ ಅವರು ದೀಪ ಬೆಳಗಿಸಿದರು. ಒನಕೆ ಓಬವ್ವ ಕಹಳೆ ವಾದನ ಕಲಾವಿದರು ಮೆರವಣಿಗೆಯನ್ನು ಮುನ್ನಡೆಸಿದರು. ಮೆರವಣಿಗೆಯುದ್ದಕ್ಕೂ ಕೊಂಬು, ಕಹಳೆ, ತಮಟೆ ಸದ್ದು ಸಾಂಸ್ಕೃತಿಕ ಸಂಕೇತಗಳನ್ನು ಪ್ರತಿಧ್ವನಿಸಿದವು.

ವಿಜಯಸ್ತಂಬದ ಬಳಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ವಿ.ಎಸ್‌. ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆಯವರು ರೈತ ಹೋರಾಟದ ವಿಜಯವನ್ನು ಸ್ಮರಿಸಿದರು. ಜೊತೆಗೆ ಬರಗೂರಿನ ಅಲೈ ತಂಡದವರು ‘ಮೊಹರಂ ಅಲೈ ಕುಣಿತ’ ನಡೆಸಿಕೊಡುವ ಮೂಲಕ ‘ಹಿಂದೂ-ಮುಸ್ಲಿಂ’ ಭಾವೈಕ್ಯತೆಯನ್ನು ಸಾರಿದರು.

ಸ್ಫೂರ್ತಿಧಾಮದ ವೇದಿಕೆ ಸಜ್ಜಾಗಿತ್ತು. ಗಾಯಕ ಚಿಂತನ್‌ ವಿಕಾಸ್ ಅವರು, ಕುವೆಂಪು ರಚಿತ ವಿಶ್ವಮಾನವ ಗೀತೆ ‘ಓ ನನ್ನ ಚೇತನ, ಆಗು ನೀ ಅನಿಕೇತನ’ವನ್ನು ವಿಶಿಷ್ಟ ರಾಗ ಸಂಯೋಜನೆಯಲ್ಲಿ ಹಾಡುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿವಿಧ ಜಾತಿ, ಧರ್ಮ,‌ ಭಾಷೆ, ಲಿಂಗ, ಪ್ರದೇಶಗಳಿಗೆ ಸೇರಿದ ಸಾಮಾನ್ಯ ಜನರ ಕೂಡಿಬಾಳುವ ಬದುಕಿನ ತತ್ವವನ್ನು ಸಾರುವ, ನಮ್ಮದೇ ನೆಲಮೂಲದ ಹಾಡು, ಕಥೆ, ಕಾವ್ಯ, ಕುಣಿತ, ವಾದ್ಯಗಳ ಲಯವನ್ನು ಮೈಗೂಡಿಸಿಕೊಂಡ ಯುವ ಸಮುದಾಯ ಫ್ಯಾಸಿಸ್ಟ್‌ ಶಕ್ತಿಗಳನ್ನು ಎದುರಿಸುವ ಬಗೆಯನ್ನು ಕಾರ್ಯಕ್ರಮದ ಮೂಲಕ ತೋರಿಸಿಕೊಟ್ಟರು.

ತಳಸಮುದಾಯಗಳ ಅಸಲೀ ಸಂಸ್ಕೃತಿಯನ್ನು, ದಮನಿಸಲ್ಪಡುತ್ತಿರುವ ಭಾಷೆ-ಧರ್ಮಗಳ ಪ್ರತಿರೋಧದ ದನಿಗಳನ್ನು ಸಮಾಜದ ಎಲ್ಲ ಸ್ತರಗಳ ಯುವಜನರೂ ಒಗ್ಗೂಡಿ ಅಭಿವ್ಯಕ್ತಿಸುವ ಮತ್ತು ಸಂಭ್ರಮಿಸುವ ವಿಶಿಷ್ಟ ಹಬ್ಬವಾಗಿ ಹೊಮ್ಮಿದ ‘ದೇಸಿ ಪದ’ದಲ್ಲಿ ಮಂಡ್ಯದ ಮಹಿಳಾ ನಗಾರಿ ತಂಡದ ಕಲಾ ಪ್ರದರ್ಶನ ಮನಸೂರೆಗೊಂಡಿತು. ಧಾರಾವಾಡದ ನಾದ ಝೇಂಕಾರ ಸಾಂಸ್ಕೃತಿಕ ಸಂಘವು, ‘ಎಲ್ಲಿಕಾಣೆಲ್ಲಿಕಾಣಿರೋ ನಮ್ಮ ಎಲ್ಲವ್ವ’ ಹಾಡನ್ನು ಸೊಗಸಾಗಿ ಹಾಡಿದರು.

ಮನಸೂರೆಗೊಂಡ ಜೇನುಕುರುಬರ ಕಲಾ ಪ್ರದರ್ಶನ

ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ರಸ್ತೆ ಯಾವುದೂ ಸರಿಯಾಗಿ ಇಲ್ಲದ ಕುಗ್ರಾಮವೊಂದರಿಂದ ಬಂದ ಕೊಡಗು ಜಿಲ್ಲೆಯ ಜೇನು ಕುರುಬರ ಯುಜಜನರ ತಂಡ ನೀಡಿದ ಕಲಾ ಪ್ರದರ್ಶನಕ್ಕೆ ಇಡೀ ಸಭಾಂಗಣ ಒನ್ಸ್‌ ಮೋರ್‌ ಹೇಳಿತು. ಈ ತಂಡದ ಪ್ರದರ್ಶನದಿಂದ ಸಂತೋಷಗೊಂಡ ನಾದಬ್ರಹ್ಮ ಹಂಸಲೇಖ ಅವರು, 25,000 ರೂ. ಬಹುಮಾನವನ್ನು ಘೋಷಿಸಿದ್ದಲ್ಲದೆ, ಝೀ ಕನ್ನಡ ವಾಹಿನಿಗೆ ಜೇನುಕುರುಬ ಸಮುದಾಯದ ಕಲಾ ಪ್ರದರ್ಶನವನ್ನು ತರುವುದಾಗಿ ತಿಳಿಸಿದರು.

ಮಧ್ಯಾಹ್ನದ ಬಳಿಕ ಜಾನಪದ ಗಾಯಕಿ ವೈ.ಜಿ.ಉಮಾ, ನಾದ ಮಣಿನಾಲ್ಕೂರು ಅವರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವೇದಿಕೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ಪತ್ರಕರ್ತರಾದ ವಿಜಯಮ್ಮ, ಸ್ಫೂರ್ತಿಧಾಮದ ಅಧ್ಯಕ್ಷರಾದ ಮರಿಸ್ವಾಮಿ, ಖ್ಯಾತ ಗಾಯಕಿ ಎಂ.ಡಿ ಪಲ್ಲವಿ, ಯುವ ನಿರ್ದೇಶಕರಾದ ಮಂಸೋರೆ, ಬಿ.ಎಂ.ಗಿರಿರಾಜ್‌ ಹಾಜರಿದ್ದರು.


ಇದನ್ನೂ ಓದಿರಿ: ವರ್ತಮಾನದ ತಲ್ಲಣಗಳ ನುಡಿಗನ್ನಡಿ ಕುವೆಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...