Homeಮುಖಪುಟದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

- Advertisement -
- Advertisement -

“ತಮ್ಮ ಮೇಲಿನ ಉಡುಪನ್ನು ತೆಗೆದುಹಾಕಿದ ನಂತರ ದೇವಾಲಯಗಳಿಗೆ ಪ್ರವೇಶಿಸುವ ಅಭ್ಯಾಸವು ಕೆಟ್ಟದ್ದು, ಅದನ್ನು ತ್ಯಜಿಸಬೇಕು” ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥರಾಗಿರುವ ಪ್ರಮುಖ ಹಿಂದೂ ಸನ್ಯಾಸಿಯೊಬ್ಬರು ಹೇಳಿದ್ದಾರೆ.

ಈ ಸಲಹೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲಿಸಿದ್ದು, ಇದು ಸಾಮಾಜಿಕ ಕ್ರಾಂತಿಯಾಗಿ ಬದಲಾಗಬಹುದು ಎಂದು ಹೇಳಿದ್ದಾರೆ.

ವಿಷಯ ಪ್ರಸ್ತಾಪಿಸಿದ ಸ್ವಾಮಿ ಸಚ್ಚಿದಾನಂದ, ಸಮಾಜ ಸುಧಾರಕ ಶ್ರೀನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ಅಧ್ಯಕ್ಷರು. ಇದು ಶ್ರೀ ನಾರಾಯಣ ಧರ್ಮ ಸಂಘದ ಪ್ರಧಾನ ಕಛೇರಿಯಾಗಿದೆ, ಗುರುಗಳು ತಮ್ಮ ಒಂದು ಜಾತಿ, ಒಂದು ಧರ್ಮ, ಒಂದೇ ದೇವರು ಎಂಬ ಪರಿಕಲ್ಪನೆಯನ್ನು ಪ್ರಚಾರ ಮಾಡಲು ಸ್ಥಾಪಿಸಿದ ಸಂಸ್ಥೆಯಾಗಿದೆ.

ಮಠವು ಕೇರಳದ ಹಿಂದುಳಿದ ಈಜವ ಹಿಂದೂ ಸಮುದಾಯದ ಪ್ರಮುಖ ಯಾತ್ರಾ ಕೇಂದ್ರವಾಗಿದೆ. ಸಮಾಜ ಸುಧಾರಕರಾಗಿ, ಗುರು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಕೆಳವರ್ಗದವರಿಗೆ ದೇವಾಲಯಗಳಿಗೆ ಪ್ರವೇಶಿಸುವ ಮತ್ತು ಪೂಜಿಸುವ ಹಕ್ಕನ್ನು ಪ್ರತಿಪಾದಿಸಿದರು.

ಮಠದಲ್ಲಿ ವಾರ್ಷಿಕ ಶಿವಗಿರಿ ಯಾತ್ರೆಯ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಸತ್ಚಿಂದನಾದನವರು, “ಇದು ಅನಿಷ್ಟ ಪದ್ಧತಿ. ಹಿಂದೆ, ಪುಣೂಲ್ (ಮೇಲ್ವರ್ಗದವರು ಧರಿಸುವ ಪವಿತ್ರ ದಾರ) ನೋಡಬಹುದೆಂದು ಖಚಿತಪಡಿಸಿಕೊಳ್ಳಲು ಈ ಅಭ್ಯಾಸವನ್ನು (ಮೇಲಿನ ಉಡುಪನ್ನು ತೆಗೆಯುವುದು) ಪ್ರಾರಂಭಿಸಲಾಯಿತು. ಆ ಪದ್ಧತಿ ಇಂದಿಗೂ ದೇವಸ್ಥಾನಗಳಲ್ಲಿ ಮುಂದುವರಿದಿದೆ. ಆ ಪದ್ಧತಿ ಬದಲಾಗಬೇಕು ಎಂದು ಶ್ರೀನಾರಾಯಣ ಸಮಾಜ ಬಯಸುತ್ತದೆ. ಇದೊಂದು ಅನಿಷ್ಟ ಪದ್ಧತಿ ಎಂಬುದರಲ್ಲಿ ಎರಡು ಮಾತಿಲ್ಲ. ಶ್ರೀನಾರಾಯಣ ದೇವಸ್ಥಾನಗಳಲ್ಲಿ ಈ ಪದ್ಧತಿ ಇಲ್ಲ. ಈ ನಿಟ್ಟಿನಲ್ಲಿ ಸಮಯೋಚಿತ ಬದಲಾವಣೆ ಅಗತ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯನ್, ಶ್ರೀಗಳ ಅಭಿಪ್ರಾಯವನ್ನು ಬೆಂಬಲಿಸಿದರು. “ಸ್ವಾಮಿ ಅವರು ಒಂದು ಸಂದೇಶವನ್ನು ಉಲ್ಲೇಖಿಸಿದ್ದಾರೆ, ಅದು ಪ್ರಮುಖ ಸಾಮಾಜಿಕ ಹಸ್ತಕ್ಷೇಪವಾಗಿ ಬದಲಾಗಬಹುದು. ಗುರುವಿನ ಉದಾತ್ತ ಸಂಪ್ರದಾಯವನ್ನು ಎತ್ತಿ ಹಿಡಿಯುವ ಸಲಹೆಯನ್ನು ಸ್ವಾಮಿಗಳು ಮುಂದಿಟ್ಟಿದ್ದಾರೆ. ಅನೇಕ ಪೂಜಾ ಸ್ಥಳಗಳು ಇದನ್ನು ಅನುಸರಿಸುತ್ತವೆ ಎಂದು ನನಗೆ ಖಾತ್ರಿಯಿದೆ. ಯಾರನ್ನೂ ಒತ್ತಾಯಿಸುವ ಅಗತ್ಯವಿಲ್ಲ. ಕಾಲಕ್ಕೆ ತಕ್ಕಂತೆ ಹಲವು ಆಚರಣೆಗಳು ಬದಲಾಗಿರುವುದು ಸತ್ಯ. ಶ್ರೀ ನಾರಾಯಣ ಚಳವಳಿಗೆ ಸಂಬಂಧಿಸಿದ ದೇವಾಲಯಗಳು ಆ ಬದಲಾವಣೆಯನ್ನು ಅಳವಡಿಸಿಕೊಂಡಿವೆ. ಆ ಬದಲಾವಣೆಯನ್ನು ಇತರ ಪೂಜಾ ಸ್ಥಳಗಳು (ದೇವಾಲಯಗಳು) ಅನುಸರಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಕೇರಳದಲ್ಲಿ, ಅನೇಕ ಪ್ರಮುಖ ದೇವಾಲಯಗಳು ಇಂದಿಗೂ ಭಕ್ತರಿಗೆ ಡ್ರೆಸ್ ಕೋಡ್ ಅನ್ನು ಹೊಂದಿವೆ.

ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಡ್ರೆಸ್ ಕೋಡ್ ಬಗ್ಗೆ ಕೇರಳದಲ್ಲಿ ಈ ಹಿಂದೆಯೂ ಚರ್ಚೆಯಾಗಿತ್ತು. ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಮಹಿಳಾ ಭಕ್ತರು ಸಲ್ವಾರ್ ಕಮೀಜ್ ಅಥವಾ ಚೂಡಿದಾರ್ ಧರಿಸಲು ಅವಕಾಶ ನೀಡಬಾರದು ಎಂದು ಕೇರಳ ಹೈಕೋರ್ಟ್ 2016 ರಲ್ಲಿ ಹೇಳಿತ್ತು; ಬದಲಾಗಿ, ಅವರು ಪ್ರವೇಶಿಸಲು ತಮ್ಮ ಉಡುಪಿನ ಮೇಲೆ (ಚೂಡಿದಾರ್ ಅಥವಾ ಸಲ್ವಾರ್ ಕಮೀಜ್) ಧೋತಿಯನ್ನು ಧರಿಸಬೇಕು.

ಇದನ್ನೂ ಓದಿ; ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...