Homeಮುಖಪುಟದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

- Advertisement -
- Advertisement -

“ತಮ್ಮ ಮೇಲಿನ ಉಡುಪನ್ನು ತೆಗೆದುಹಾಕಿದ ನಂತರ ದೇವಾಲಯಗಳಿಗೆ ಪ್ರವೇಶಿಸುವ ಅಭ್ಯಾಸವು ಕೆಟ್ಟದ್ದು, ಅದನ್ನು ತ್ಯಜಿಸಬೇಕು” ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥರಾಗಿರುವ ಪ್ರಮುಖ ಹಿಂದೂ ಸನ್ಯಾಸಿಯೊಬ್ಬರು ಹೇಳಿದ್ದಾರೆ.

ಈ ಸಲಹೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲಿಸಿದ್ದು, ಇದು ಸಾಮಾಜಿಕ ಕ್ರಾಂತಿಯಾಗಿ ಬದಲಾಗಬಹುದು ಎಂದು ಹೇಳಿದ್ದಾರೆ.

ವಿಷಯ ಪ್ರಸ್ತಾಪಿಸಿದ ಸ್ವಾಮಿ ಸಚ್ಚಿದಾನಂದ, ಸಮಾಜ ಸುಧಾರಕ ಶ್ರೀನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ಅಧ್ಯಕ್ಷರು. ಇದು ಶ್ರೀ ನಾರಾಯಣ ಧರ್ಮ ಸಂಘದ ಪ್ರಧಾನ ಕಛೇರಿಯಾಗಿದೆ, ಗುರುಗಳು ತಮ್ಮ ಒಂದು ಜಾತಿ, ಒಂದು ಧರ್ಮ, ಒಂದೇ ದೇವರು ಎಂಬ ಪರಿಕಲ್ಪನೆಯನ್ನು ಪ್ರಚಾರ ಮಾಡಲು ಸ್ಥಾಪಿಸಿದ ಸಂಸ್ಥೆಯಾಗಿದೆ.

ಮಠವು ಕೇರಳದ ಹಿಂದುಳಿದ ಈಜವ ಹಿಂದೂ ಸಮುದಾಯದ ಪ್ರಮುಖ ಯಾತ್ರಾ ಕೇಂದ್ರವಾಗಿದೆ. ಸಮಾಜ ಸುಧಾರಕರಾಗಿ, ಗುರು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಕೆಳವರ್ಗದವರಿಗೆ ದೇವಾಲಯಗಳಿಗೆ ಪ್ರವೇಶಿಸುವ ಮತ್ತು ಪೂಜಿಸುವ ಹಕ್ಕನ್ನು ಪ್ರತಿಪಾದಿಸಿದರು.

ಮಠದಲ್ಲಿ ವಾರ್ಷಿಕ ಶಿವಗಿರಿ ಯಾತ್ರೆಯ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಸತ್ಚಿಂದನಾದನವರು, “ಇದು ಅನಿಷ್ಟ ಪದ್ಧತಿ. ಹಿಂದೆ, ಪುಣೂಲ್ (ಮೇಲ್ವರ್ಗದವರು ಧರಿಸುವ ಪವಿತ್ರ ದಾರ) ನೋಡಬಹುದೆಂದು ಖಚಿತಪಡಿಸಿಕೊಳ್ಳಲು ಈ ಅಭ್ಯಾಸವನ್ನು (ಮೇಲಿನ ಉಡುಪನ್ನು ತೆಗೆಯುವುದು) ಪ್ರಾರಂಭಿಸಲಾಯಿತು. ಆ ಪದ್ಧತಿ ಇಂದಿಗೂ ದೇವಸ್ಥಾನಗಳಲ್ಲಿ ಮುಂದುವರಿದಿದೆ. ಆ ಪದ್ಧತಿ ಬದಲಾಗಬೇಕು ಎಂದು ಶ್ರೀನಾರಾಯಣ ಸಮಾಜ ಬಯಸುತ್ತದೆ. ಇದೊಂದು ಅನಿಷ್ಟ ಪದ್ಧತಿ ಎಂಬುದರಲ್ಲಿ ಎರಡು ಮಾತಿಲ್ಲ. ಶ್ರೀನಾರಾಯಣ ದೇವಸ್ಥಾನಗಳಲ್ಲಿ ಈ ಪದ್ಧತಿ ಇಲ್ಲ. ಈ ನಿಟ್ಟಿನಲ್ಲಿ ಸಮಯೋಚಿತ ಬದಲಾವಣೆ ಅಗತ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯನ್, ಶ್ರೀಗಳ ಅಭಿಪ್ರಾಯವನ್ನು ಬೆಂಬಲಿಸಿದರು. “ಸ್ವಾಮಿ ಅವರು ಒಂದು ಸಂದೇಶವನ್ನು ಉಲ್ಲೇಖಿಸಿದ್ದಾರೆ, ಅದು ಪ್ರಮುಖ ಸಾಮಾಜಿಕ ಹಸ್ತಕ್ಷೇಪವಾಗಿ ಬದಲಾಗಬಹುದು. ಗುರುವಿನ ಉದಾತ್ತ ಸಂಪ್ರದಾಯವನ್ನು ಎತ್ತಿ ಹಿಡಿಯುವ ಸಲಹೆಯನ್ನು ಸ್ವಾಮಿಗಳು ಮುಂದಿಟ್ಟಿದ್ದಾರೆ. ಅನೇಕ ಪೂಜಾ ಸ್ಥಳಗಳು ಇದನ್ನು ಅನುಸರಿಸುತ್ತವೆ ಎಂದು ನನಗೆ ಖಾತ್ರಿಯಿದೆ. ಯಾರನ್ನೂ ಒತ್ತಾಯಿಸುವ ಅಗತ್ಯವಿಲ್ಲ. ಕಾಲಕ್ಕೆ ತಕ್ಕಂತೆ ಹಲವು ಆಚರಣೆಗಳು ಬದಲಾಗಿರುವುದು ಸತ್ಯ. ಶ್ರೀ ನಾರಾಯಣ ಚಳವಳಿಗೆ ಸಂಬಂಧಿಸಿದ ದೇವಾಲಯಗಳು ಆ ಬದಲಾವಣೆಯನ್ನು ಅಳವಡಿಸಿಕೊಂಡಿವೆ. ಆ ಬದಲಾವಣೆಯನ್ನು ಇತರ ಪೂಜಾ ಸ್ಥಳಗಳು (ದೇವಾಲಯಗಳು) ಅನುಸರಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಕೇರಳದಲ್ಲಿ, ಅನೇಕ ಪ್ರಮುಖ ದೇವಾಲಯಗಳು ಇಂದಿಗೂ ಭಕ್ತರಿಗೆ ಡ್ರೆಸ್ ಕೋಡ್ ಅನ್ನು ಹೊಂದಿವೆ.

ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಡ್ರೆಸ್ ಕೋಡ್ ಬಗ್ಗೆ ಕೇರಳದಲ್ಲಿ ಈ ಹಿಂದೆಯೂ ಚರ್ಚೆಯಾಗಿತ್ತು. ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಮಹಿಳಾ ಭಕ್ತರು ಸಲ್ವಾರ್ ಕಮೀಜ್ ಅಥವಾ ಚೂಡಿದಾರ್ ಧರಿಸಲು ಅವಕಾಶ ನೀಡಬಾರದು ಎಂದು ಕೇರಳ ಹೈಕೋರ್ಟ್ 2016 ರಲ್ಲಿ ಹೇಳಿತ್ತು; ಬದಲಾಗಿ, ಅವರು ಪ್ರವೇಶಿಸಲು ತಮ್ಮ ಉಡುಪಿನ ಮೇಲೆ (ಚೂಡಿದಾರ್ ಅಥವಾ ಸಲ್ವಾರ್ ಕಮೀಜ್) ಧೋತಿಯನ್ನು ಧರಿಸಬೇಕು.

ಇದನ್ನೂ ಓದಿ; ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...