Homeಮುಖಪುಟದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

- Advertisement -
- Advertisement -

“ತಮ್ಮ ಮೇಲಿನ ಉಡುಪನ್ನು ತೆಗೆದುಹಾಕಿದ ನಂತರ ದೇವಾಲಯಗಳಿಗೆ ಪ್ರವೇಶಿಸುವ ಅಭ್ಯಾಸವು ಕೆಟ್ಟದ್ದು, ಅದನ್ನು ತ್ಯಜಿಸಬೇಕು” ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥರಾಗಿರುವ ಪ್ರಮುಖ ಹಿಂದೂ ಸನ್ಯಾಸಿಯೊಬ್ಬರು ಹೇಳಿದ್ದಾರೆ.

ಈ ಸಲಹೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲಿಸಿದ್ದು, ಇದು ಸಾಮಾಜಿಕ ಕ್ರಾಂತಿಯಾಗಿ ಬದಲಾಗಬಹುದು ಎಂದು ಹೇಳಿದ್ದಾರೆ.

ವಿಷಯ ಪ್ರಸ್ತಾಪಿಸಿದ ಸ್ವಾಮಿ ಸಚ್ಚಿದಾನಂದ, ಸಮಾಜ ಸುಧಾರಕ ಶ್ರೀನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ಅಧ್ಯಕ್ಷರು. ಇದು ಶ್ರೀ ನಾರಾಯಣ ಧರ್ಮ ಸಂಘದ ಪ್ರಧಾನ ಕಛೇರಿಯಾಗಿದೆ, ಗುರುಗಳು ತಮ್ಮ ಒಂದು ಜಾತಿ, ಒಂದು ಧರ್ಮ, ಒಂದೇ ದೇವರು ಎಂಬ ಪರಿಕಲ್ಪನೆಯನ್ನು ಪ್ರಚಾರ ಮಾಡಲು ಸ್ಥಾಪಿಸಿದ ಸಂಸ್ಥೆಯಾಗಿದೆ.

ಮಠವು ಕೇರಳದ ಹಿಂದುಳಿದ ಈಜವ ಹಿಂದೂ ಸಮುದಾಯದ ಪ್ರಮುಖ ಯಾತ್ರಾ ಕೇಂದ್ರವಾಗಿದೆ. ಸಮಾಜ ಸುಧಾರಕರಾಗಿ, ಗುರು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಕೆಳವರ್ಗದವರಿಗೆ ದೇವಾಲಯಗಳಿಗೆ ಪ್ರವೇಶಿಸುವ ಮತ್ತು ಪೂಜಿಸುವ ಹಕ್ಕನ್ನು ಪ್ರತಿಪಾದಿಸಿದರು.

ಮಠದಲ್ಲಿ ವಾರ್ಷಿಕ ಶಿವಗಿರಿ ಯಾತ್ರೆಯ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಸತ್ಚಿಂದನಾದನವರು, “ಇದು ಅನಿಷ್ಟ ಪದ್ಧತಿ. ಹಿಂದೆ, ಪುಣೂಲ್ (ಮೇಲ್ವರ್ಗದವರು ಧರಿಸುವ ಪವಿತ್ರ ದಾರ) ನೋಡಬಹುದೆಂದು ಖಚಿತಪಡಿಸಿಕೊಳ್ಳಲು ಈ ಅಭ್ಯಾಸವನ್ನು (ಮೇಲಿನ ಉಡುಪನ್ನು ತೆಗೆಯುವುದು) ಪ್ರಾರಂಭಿಸಲಾಯಿತು. ಆ ಪದ್ಧತಿ ಇಂದಿಗೂ ದೇವಸ್ಥಾನಗಳಲ್ಲಿ ಮುಂದುವರಿದಿದೆ. ಆ ಪದ್ಧತಿ ಬದಲಾಗಬೇಕು ಎಂದು ಶ್ರೀನಾರಾಯಣ ಸಮಾಜ ಬಯಸುತ್ತದೆ. ಇದೊಂದು ಅನಿಷ್ಟ ಪದ್ಧತಿ ಎಂಬುದರಲ್ಲಿ ಎರಡು ಮಾತಿಲ್ಲ. ಶ್ರೀನಾರಾಯಣ ದೇವಸ್ಥಾನಗಳಲ್ಲಿ ಈ ಪದ್ಧತಿ ಇಲ್ಲ. ಈ ನಿಟ್ಟಿನಲ್ಲಿ ಸಮಯೋಚಿತ ಬದಲಾವಣೆ ಅಗತ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯನ್, ಶ್ರೀಗಳ ಅಭಿಪ್ರಾಯವನ್ನು ಬೆಂಬಲಿಸಿದರು. “ಸ್ವಾಮಿ ಅವರು ಒಂದು ಸಂದೇಶವನ್ನು ಉಲ್ಲೇಖಿಸಿದ್ದಾರೆ, ಅದು ಪ್ರಮುಖ ಸಾಮಾಜಿಕ ಹಸ್ತಕ್ಷೇಪವಾಗಿ ಬದಲಾಗಬಹುದು. ಗುರುವಿನ ಉದಾತ್ತ ಸಂಪ್ರದಾಯವನ್ನು ಎತ್ತಿ ಹಿಡಿಯುವ ಸಲಹೆಯನ್ನು ಸ್ವಾಮಿಗಳು ಮುಂದಿಟ್ಟಿದ್ದಾರೆ. ಅನೇಕ ಪೂಜಾ ಸ್ಥಳಗಳು ಇದನ್ನು ಅನುಸರಿಸುತ್ತವೆ ಎಂದು ನನಗೆ ಖಾತ್ರಿಯಿದೆ. ಯಾರನ್ನೂ ಒತ್ತಾಯಿಸುವ ಅಗತ್ಯವಿಲ್ಲ. ಕಾಲಕ್ಕೆ ತಕ್ಕಂತೆ ಹಲವು ಆಚರಣೆಗಳು ಬದಲಾಗಿರುವುದು ಸತ್ಯ. ಶ್ರೀ ನಾರಾಯಣ ಚಳವಳಿಗೆ ಸಂಬಂಧಿಸಿದ ದೇವಾಲಯಗಳು ಆ ಬದಲಾವಣೆಯನ್ನು ಅಳವಡಿಸಿಕೊಂಡಿವೆ. ಆ ಬದಲಾವಣೆಯನ್ನು ಇತರ ಪೂಜಾ ಸ್ಥಳಗಳು (ದೇವಾಲಯಗಳು) ಅನುಸರಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಕೇರಳದಲ್ಲಿ, ಅನೇಕ ಪ್ರಮುಖ ದೇವಾಲಯಗಳು ಇಂದಿಗೂ ಭಕ್ತರಿಗೆ ಡ್ರೆಸ್ ಕೋಡ್ ಅನ್ನು ಹೊಂದಿವೆ.

ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಡ್ರೆಸ್ ಕೋಡ್ ಬಗ್ಗೆ ಕೇರಳದಲ್ಲಿ ಈ ಹಿಂದೆಯೂ ಚರ್ಚೆಯಾಗಿತ್ತು. ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಮಹಿಳಾ ಭಕ್ತರು ಸಲ್ವಾರ್ ಕಮೀಜ್ ಅಥವಾ ಚೂಡಿದಾರ್ ಧರಿಸಲು ಅವಕಾಶ ನೀಡಬಾರದು ಎಂದು ಕೇರಳ ಹೈಕೋರ್ಟ್ 2016 ರಲ್ಲಿ ಹೇಳಿತ್ತು; ಬದಲಾಗಿ, ಅವರು ಪ್ರವೇಶಿಸಲು ತಮ್ಮ ಉಡುಪಿನ ಮೇಲೆ (ಚೂಡಿದಾರ್ ಅಥವಾ ಸಲ್ವಾರ್ ಕಮೀಜ್) ಧೋತಿಯನ್ನು ಧರಿಸಬೇಕು.

ಇದನ್ನೂ ಓದಿ; ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....