Homeಮುಖಪುಟದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

- Advertisement -
- Advertisement -

“ತಮ್ಮ ಮೇಲಿನ ಉಡುಪನ್ನು ತೆಗೆದುಹಾಕಿದ ನಂತರ ದೇವಾಲಯಗಳಿಗೆ ಪ್ರವೇಶಿಸುವ ಅಭ್ಯಾಸವು ಕೆಟ್ಟದ್ದು, ಅದನ್ನು ತ್ಯಜಿಸಬೇಕು” ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥರಾಗಿರುವ ಪ್ರಮುಖ ಹಿಂದೂ ಸನ್ಯಾಸಿಯೊಬ್ಬರು ಹೇಳಿದ್ದಾರೆ.

ಈ ಸಲಹೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲಿಸಿದ್ದು, ಇದು ಸಾಮಾಜಿಕ ಕ್ರಾಂತಿಯಾಗಿ ಬದಲಾಗಬಹುದು ಎಂದು ಹೇಳಿದ್ದಾರೆ.

ವಿಷಯ ಪ್ರಸ್ತಾಪಿಸಿದ ಸ್ವಾಮಿ ಸಚ್ಚಿದಾನಂದ, ಸಮಾಜ ಸುಧಾರಕ ಶ್ರೀನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ಅಧ್ಯಕ್ಷರು. ಇದು ಶ್ರೀ ನಾರಾಯಣ ಧರ್ಮ ಸಂಘದ ಪ್ರಧಾನ ಕಛೇರಿಯಾಗಿದೆ, ಗುರುಗಳು ತಮ್ಮ ಒಂದು ಜಾತಿ, ಒಂದು ಧರ್ಮ, ಒಂದೇ ದೇವರು ಎಂಬ ಪರಿಕಲ್ಪನೆಯನ್ನು ಪ್ರಚಾರ ಮಾಡಲು ಸ್ಥಾಪಿಸಿದ ಸಂಸ್ಥೆಯಾಗಿದೆ.

ಮಠವು ಕೇರಳದ ಹಿಂದುಳಿದ ಈಜವ ಹಿಂದೂ ಸಮುದಾಯದ ಪ್ರಮುಖ ಯಾತ್ರಾ ಕೇಂದ್ರವಾಗಿದೆ. ಸಮಾಜ ಸುಧಾರಕರಾಗಿ, ಗುರು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಕೆಳವರ್ಗದವರಿಗೆ ದೇವಾಲಯಗಳಿಗೆ ಪ್ರವೇಶಿಸುವ ಮತ್ತು ಪೂಜಿಸುವ ಹಕ್ಕನ್ನು ಪ್ರತಿಪಾದಿಸಿದರು.

ಮಠದಲ್ಲಿ ವಾರ್ಷಿಕ ಶಿವಗಿರಿ ಯಾತ್ರೆಯ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಸತ್ಚಿಂದನಾದನವರು, “ಇದು ಅನಿಷ್ಟ ಪದ್ಧತಿ. ಹಿಂದೆ, ಪುಣೂಲ್ (ಮೇಲ್ವರ್ಗದವರು ಧರಿಸುವ ಪವಿತ್ರ ದಾರ) ನೋಡಬಹುದೆಂದು ಖಚಿತಪಡಿಸಿಕೊಳ್ಳಲು ಈ ಅಭ್ಯಾಸವನ್ನು (ಮೇಲಿನ ಉಡುಪನ್ನು ತೆಗೆಯುವುದು) ಪ್ರಾರಂಭಿಸಲಾಯಿತು. ಆ ಪದ್ಧತಿ ಇಂದಿಗೂ ದೇವಸ್ಥಾನಗಳಲ್ಲಿ ಮುಂದುವರಿದಿದೆ. ಆ ಪದ್ಧತಿ ಬದಲಾಗಬೇಕು ಎಂದು ಶ್ರೀನಾರಾಯಣ ಸಮಾಜ ಬಯಸುತ್ತದೆ. ಇದೊಂದು ಅನಿಷ್ಟ ಪದ್ಧತಿ ಎಂಬುದರಲ್ಲಿ ಎರಡು ಮಾತಿಲ್ಲ. ಶ್ರೀನಾರಾಯಣ ದೇವಸ್ಥಾನಗಳಲ್ಲಿ ಈ ಪದ್ಧತಿ ಇಲ್ಲ. ಈ ನಿಟ್ಟಿನಲ್ಲಿ ಸಮಯೋಚಿತ ಬದಲಾವಣೆ ಅಗತ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯನ್, ಶ್ರೀಗಳ ಅಭಿಪ್ರಾಯವನ್ನು ಬೆಂಬಲಿಸಿದರು. “ಸ್ವಾಮಿ ಅವರು ಒಂದು ಸಂದೇಶವನ್ನು ಉಲ್ಲೇಖಿಸಿದ್ದಾರೆ, ಅದು ಪ್ರಮುಖ ಸಾಮಾಜಿಕ ಹಸ್ತಕ್ಷೇಪವಾಗಿ ಬದಲಾಗಬಹುದು. ಗುರುವಿನ ಉದಾತ್ತ ಸಂಪ್ರದಾಯವನ್ನು ಎತ್ತಿ ಹಿಡಿಯುವ ಸಲಹೆಯನ್ನು ಸ್ವಾಮಿಗಳು ಮುಂದಿಟ್ಟಿದ್ದಾರೆ. ಅನೇಕ ಪೂಜಾ ಸ್ಥಳಗಳು ಇದನ್ನು ಅನುಸರಿಸುತ್ತವೆ ಎಂದು ನನಗೆ ಖಾತ್ರಿಯಿದೆ. ಯಾರನ್ನೂ ಒತ್ತಾಯಿಸುವ ಅಗತ್ಯವಿಲ್ಲ. ಕಾಲಕ್ಕೆ ತಕ್ಕಂತೆ ಹಲವು ಆಚರಣೆಗಳು ಬದಲಾಗಿರುವುದು ಸತ್ಯ. ಶ್ರೀ ನಾರಾಯಣ ಚಳವಳಿಗೆ ಸಂಬಂಧಿಸಿದ ದೇವಾಲಯಗಳು ಆ ಬದಲಾವಣೆಯನ್ನು ಅಳವಡಿಸಿಕೊಂಡಿವೆ. ಆ ಬದಲಾವಣೆಯನ್ನು ಇತರ ಪೂಜಾ ಸ್ಥಳಗಳು (ದೇವಾಲಯಗಳು) ಅನುಸರಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಕೇರಳದಲ್ಲಿ, ಅನೇಕ ಪ್ರಮುಖ ದೇವಾಲಯಗಳು ಇಂದಿಗೂ ಭಕ್ತರಿಗೆ ಡ್ರೆಸ್ ಕೋಡ್ ಅನ್ನು ಹೊಂದಿವೆ.

ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಡ್ರೆಸ್ ಕೋಡ್ ಬಗ್ಗೆ ಕೇರಳದಲ್ಲಿ ಈ ಹಿಂದೆಯೂ ಚರ್ಚೆಯಾಗಿತ್ತು. ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಮಹಿಳಾ ಭಕ್ತರು ಸಲ್ವಾರ್ ಕಮೀಜ್ ಅಥವಾ ಚೂಡಿದಾರ್ ಧರಿಸಲು ಅವಕಾಶ ನೀಡಬಾರದು ಎಂದು ಕೇರಳ ಹೈಕೋರ್ಟ್ 2016 ರಲ್ಲಿ ಹೇಳಿತ್ತು; ಬದಲಾಗಿ, ಅವರು ಪ್ರವೇಶಿಸಲು ತಮ್ಮ ಉಡುಪಿನ ಮೇಲೆ (ಚೂಡಿದಾರ್ ಅಥವಾ ಸಲ್ವಾರ್ ಕಮೀಜ್) ಧೋತಿಯನ್ನು ಧರಿಸಬೇಕು.

ಇದನ್ನೂ ಓದಿ; ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...