Homeಮುಖಪುಟದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

- Advertisement -
- Advertisement -

“ತಮ್ಮ ಮೇಲಿನ ಉಡುಪನ್ನು ತೆಗೆದುಹಾಕಿದ ನಂತರ ದೇವಾಲಯಗಳಿಗೆ ಪ್ರವೇಶಿಸುವ ಅಭ್ಯಾಸವು ಕೆಟ್ಟದ್ದು, ಅದನ್ನು ತ್ಯಜಿಸಬೇಕು” ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥರಾಗಿರುವ ಪ್ರಮುಖ ಹಿಂದೂ ಸನ್ಯಾಸಿಯೊಬ್ಬರು ಹೇಳಿದ್ದಾರೆ.

ಈ ಸಲಹೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲಿಸಿದ್ದು, ಇದು ಸಾಮಾಜಿಕ ಕ್ರಾಂತಿಯಾಗಿ ಬದಲಾಗಬಹುದು ಎಂದು ಹೇಳಿದ್ದಾರೆ.

ವಿಷಯ ಪ್ರಸ್ತಾಪಿಸಿದ ಸ್ವಾಮಿ ಸಚ್ಚಿದಾನಂದ, ಸಮಾಜ ಸುಧಾರಕ ಶ್ರೀನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ಅಧ್ಯಕ್ಷರು. ಇದು ಶ್ರೀ ನಾರಾಯಣ ಧರ್ಮ ಸಂಘದ ಪ್ರಧಾನ ಕಛೇರಿಯಾಗಿದೆ, ಗುರುಗಳು ತಮ್ಮ ಒಂದು ಜಾತಿ, ಒಂದು ಧರ್ಮ, ಒಂದೇ ದೇವರು ಎಂಬ ಪರಿಕಲ್ಪನೆಯನ್ನು ಪ್ರಚಾರ ಮಾಡಲು ಸ್ಥಾಪಿಸಿದ ಸಂಸ್ಥೆಯಾಗಿದೆ.

ಮಠವು ಕೇರಳದ ಹಿಂದುಳಿದ ಈಜವ ಹಿಂದೂ ಸಮುದಾಯದ ಪ್ರಮುಖ ಯಾತ್ರಾ ಕೇಂದ್ರವಾಗಿದೆ. ಸಮಾಜ ಸುಧಾರಕರಾಗಿ, ಗುರು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಕೆಳವರ್ಗದವರಿಗೆ ದೇವಾಲಯಗಳಿಗೆ ಪ್ರವೇಶಿಸುವ ಮತ್ತು ಪೂಜಿಸುವ ಹಕ್ಕನ್ನು ಪ್ರತಿಪಾದಿಸಿದರು.

ಮಠದಲ್ಲಿ ವಾರ್ಷಿಕ ಶಿವಗಿರಿ ಯಾತ್ರೆಯ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಸತ್ಚಿಂದನಾದನವರು, “ಇದು ಅನಿಷ್ಟ ಪದ್ಧತಿ. ಹಿಂದೆ, ಪುಣೂಲ್ (ಮೇಲ್ವರ್ಗದವರು ಧರಿಸುವ ಪವಿತ್ರ ದಾರ) ನೋಡಬಹುದೆಂದು ಖಚಿತಪಡಿಸಿಕೊಳ್ಳಲು ಈ ಅಭ್ಯಾಸವನ್ನು (ಮೇಲಿನ ಉಡುಪನ್ನು ತೆಗೆಯುವುದು) ಪ್ರಾರಂಭಿಸಲಾಯಿತು. ಆ ಪದ್ಧತಿ ಇಂದಿಗೂ ದೇವಸ್ಥಾನಗಳಲ್ಲಿ ಮುಂದುವರಿದಿದೆ. ಆ ಪದ್ಧತಿ ಬದಲಾಗಬೇಕು ಎಂದು ಶ್ರೀನಾರಾಯಣ ಸಮಾಜ ಬಯಸುತ್ತದೆ. ಇದೊಂದು ಅನಿಷ್ಟ ಪದ್ಧತಿ ಎಂಬುದರಲ್ಲಿ ಎರಡು ಮಾತಿಲ್ಲ. ಶ್ರೀನಾರಾಯಣ ದೇವಸ್ಥಾನಗಳಲ್ಲಿ ಈ ಪದ್ಧತಿ ಇಲ್ಲ. ಈ ನಿಟ್ಟಿನಲ್ಲಿ ಸಮಯೋಚಿತ ಬದಲಾವಣೆ ಅಗತ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯನ್, ಶ್ರೀಗಳ ಅಭಿಪ್ರಾಯವನ್ನು ಬೆಂಬಲಿಸಿದರು. “ಸ್ವಾಮಿ ಅವರು ಒಂದು ಸಂದೇಶವನ್ನು ಉಲ್ಲೇಖಿಸಿದ್ದಾರೆ, ಅದು ಪ್ರಮುಖ ಸಾಮಾಜಿಕ ಹಸ್ತಕ್ಷೇಪವಾಗಿ ಬದಲಾಗಬಹುದು. ಗುರುವಿನ ಉದಾತ್ತ ಸಂಪ್ರದಾಯವನ್ನು ಎತ್ತಿ ಹಿಡಿಯುವ ಸಲಹೆಯನ್ನು ಸ್ವಾಮಿಗಳು ಮುಂದಿಟ್ಟಿದ್ದಾರೆ. ಅನೇಕ ಪೂಜಾ ಸ್ಥಳಗಳು ಇದನ್ನು ಅನುಸರಿಸುತ್ತವೆ ಎಂದು ನನಗೆ ಖಾತ್ರಿಯಿದೆ. ಯಾರನ್ನೂ ಒತ್ತಾಯಿಸುವ ಅಗತ್ಯವಿಲ್ಲ. ಕಾಲಕ್ಕೆ ತಕ್ಕಂತೆ ಹಲವು ಆಚರಣೆಗಳು ಬದಲಾಗಿರುವುದು ಸತ್ಯ. ಶ್ರೀ ನಾರಾಯಣ ಚಳವಳಿಗೆ ಸಂಬಂಧಿಸಿದ ದೇವಾಲಯಗಳು ಆ ಬದಲಾವಣೆಯನ್ನು ಅಳವಡಿಸಿಕೊಂಡಿವೆ. ಆ ಬದಲಾವಣೆಯನ್ನು ಇತರ ಪೂಜಾ ಸ್ಥಳಗಳು (ದೇವಾಲಯಗಳು) ಅನುಸರಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಕೇರಳದಲ್ಲಿ, ಅನೇಕ ಪ್ರಮುಖ ದೇವಾಲಯಗಳು ಇಂದಿಗೂ ಭಕ್ತರಿಗೆ ಡ್ರೆಸ್ ಕೋಡ್ ಅನ್ನು ಹೊಂದಿವೆ.

ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಡ್ರೆಸ್ ಕೋಡ್ ಬಗ್ಗೆ ಕೇರಳದಲ್ಲಿ ಈ ಹಿಂದೆಯೂ ಚರ್ಚೆಯಾಗಿತ್ತು. ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಮಹಿಳಾ ಭಕ್ತರು ಸಲ್ವಾರ್ ಕಮೀಜ್ ಅಥವಾ ಚೂಡಿದಾರ್ ಧರಿಸಲು ಅವಕಾಶ ನೀಡಬಾರದು ಎಂದು ಕೇರಳ ಹೈಕೋರ್ಟ್ 2016 ರಲ್ಲಿ ಹೇಳಿತ್ತು; ಬದಲಾಗಿ, ಅವರು ಪ್ರವೇಶಿಸಲು ತಮ್ಮ ಉಡುಪಿನ ಮೇಲೆ (ಚೂಡಿದಾರ್ ಅಥವಾ ಸಲ್ವಾರ್ ಕಮೀಜ್) ಧೋತಿಯನ್ನು ಧರಿಸಬೇಕು.

ಇದನ್ನೂ ಓದಿ; ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...