Homeಕರ್ನಾಟಕದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

'ಮಹಾಡ್ ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿ'

- Advertisement -
- Advertisement -

“ನಮಗೆಲ್ಲಾ (ಪರಿಶಿಷ್ಟರಿಗೆ) ದಲಿತ ಚಳವಳಿ ಘನತೆ ಬದುಕು ಕೊಟ್ಟಿದೆ; ನಮ್ಮ ಮೇಲಾಗುವ ದೌರ್ಜನ್ಯಗಳಿಗೆ ಆಕ್ರೋಶ ಹಾಗೂ ಸಂಘಟನಾತ್ಮಕ ಹೋರಾಟ ಕಲಿಸಿದೆ. ಆದ್ದರಿಂದ, ನಾವೆಲ್ಲರೂ ಹಂಚಿಕೊಂಡು ತಿನ್ನುವುದನ್ನು ಕಲಿಯಬೇಕು” ಎಂದು ಹೇಳಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರಾಜ್ಯ ಸರ್ಕಾರ ಆದಷ್ಟು ಬೇಗ ಪರಿಶಿಷ್ಟರ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ, ಮಹಾಡ್ ಸತ್ಯಾಗ್ರಹ ನೆನಪಿನಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ‘ಶೋಷಿತರ ಸಂಘರ್ಷ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, “ಮಹಾಡ್ ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿ, ಎಲ್ಲಿ ನೆನೆಪು ಇರುವುದಿಲ್ಲವೋ ಅಲ್ಲಿ ಕನಸು ಚಿಗೋರೋದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಉದಾತ್ತ ತ್ಯಾಗ ಹಾಗೂ ಬಲಿದಾನದ ಕಾರಣಕ್ಕೆ ಇಂದು ನಾವಿಲ್ಲಿದ್ದೇವೆ. ಅವರ ಸಮಾನತೆ ಕನಸು ಬಿತ್ತುವ ಹೋರಾಟಗಳೆಲ್ಲಾ ನಮಗೆ ಮಾದರಿ ಆಗಬೇಕು; ಅವುಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವುದು ನಮ್ಮ ಜವಾಬ್ದಾರಿ. ದಲಿತ ಸಂಘರ್ಷ ಸಮಿತಿ ದೀರ್ಘ ಕಾಲದಿಂದ ನಡೆಸಿರುವ ಹೋರಾಟವನ್ನು ನಾವು ಅರ್ಥ ಮಾಡಿಕೊಳ್ಳಬೇಕು” ಎಂದು ದಸಂಸ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

“ದಲಿತರ ಸಬಲೀಕರಣಕ್ಕೆ ಕರ್ನಾಟಕ ಸರ್ಕಾರ ನಿಧಾನಕ್ಕೆ ಕಣ್ಣು ತೆರೆಯುತ್ತಿದೆ, ಬಾಬಾ ಸಾಹೇಬರು ಹೋರಾಟಕ್ಕೆ ಅಣಿಯಾದ ಹಾಗೆ ನಾವೂ ಸಿದ್ಧರಾಗಬೇಕು; ಅವರು ಯಾರಿಗಾಗಿ ಹೋರಾಟ ನಡೆಸಿದರು ಎಂಬುದರ ಬಗ್ಗೆಯೂ ಯೋಚಿಸಬೇಕು. ನೈಸರ್ಗಿಕವಾಗಿ ಸಿಗುವ ನೀರಿನ ಮೇಲೆ ನಿರ್ಬಂಧ ಹಾಗೂ ಧಾರ್ಮಿಕ ನಿಷೇಧ ಬೇರೆ ಯಾವ ದೇಶದಲ್ಲೂ ಇಲ್ಲ. ಮನುಷ್ಯರ ಜೀವನಾವಶ್ಯಕ ವಸ್ತುಗಳ ಮೇಲಿನ ನಿರಾಕರಣೆ ಹಾಗೂ ಅವರ ಬದುಕುವ ಹಕ್ಕುಗಳ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಬಾಬಾ ಸಾಹೇಬರು ನಡೆಸಿದ ಹೋರಾಟ ಮಹತ್ವದ್ದು” ಎಂದರು.

“ನೀರು ಮುಟ್ಟುವುದರಿಂದ ನನಗೆ ಸ್ವರ್ಗ ಸಿಗುತ್ತದೆ ಅಥವಾ ಪವಿತ್ರನಾಗುತ್ತೇನೆ ಎಂಬ ಕಾರಣಕ್ಕೆ ಮುಟ್ಟುತ್ತಿಲ್ಲ; ಮಾನವ ಹಕ್ಕುಗಳಿಗಾಗಿ ಈ ನೀರನ್ನು ಮುಟ್ಟುತ್ತಿದ್ದೇನೆ. ನೀರು ಎಲ್ಲರಿಗೂ ಸೇರಿದ್ದು ಎಂಬ ಕಾರಣಕ್ಕೆ ಹೋರಾಟ ಮಾಡಿದ್ದೇನೆ ಎಂದು ಅಂಬೇಡ್ಕರ್ ಹೇಳಿದರು” ಎಂದು ವಿವರಿಸಿದರು.

“ನನ್ನ ಹೋರಾಟ ಮನುಷ್ಯರ ಘನತೆಗಾಗಿ, ನನ್ನ ಬದುಕಿನ ಹೋರಾಟಗಳು ಗೌರವ ಹಾಗೂ ಅಭಿಮಾನ ತಂದುಕೊಟ್ಟಿದೆ ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಹೋರಾಟ ನಡೆಯುವಾಗಲೇ ಅವರಿಗೆ ಸಾಕಷ್ಟು ಅಡ್ಡಿ-ಆತಂಕ ಎದುರಾಗಿದ್ದವು. ಅಲ್ಲಿ ಟೆಂಟ್ ಹಾಕುವುದಕ್ಕೆ ಒಬ್ಬ ಮುಸ್ಲಿಂ ವ್ಯಕ್ತಿ ಜಾಗ ನೀಡಿ, ಅವರೂ ಕೂಡ ಹೋರಾಟದಲ್ಲಿ ಭಾಗಿಯಾಗಿದ್ದರು. ಧರ್ಮಾತೀತವಾಗಿ ನಡೆದ ಮಹಾಡ್ ಸತ್ಯಾಗ್ರಹದಲ್ಲಿ ಬ್ರಾಹ್ಮಣರು ಭಾಗಿಯಾಗಿದ್ದರು. ಕಮ್ಯುನಿಸ್ಟ್ ನಾಯಕರೊಬ್ಬರು ಆರಂಭಿಸಿದ ಹೋರಾಟಕ್ಕೆ ಅಂಬೇಡ್ಕರ್ ತಾರ್ಕಿಕ ಅಂತ್ಯ ನೀಡಿದರು” ಎಂದರು.

‘ಕಲಾರಾಮ್ ದೇವಸ್ಥಾನ ಹೋರಾಟ ಸಂದರ್ಭದಲ್ಲಿ ಕೂಡ ಅಂಬೇಡ್ಕರ್ ಇದನ್ನೇ ಹೇಳುತ್ತಾರೆ’
ದೇವರ ಮೇಲಿನ ಭಕ್ತಿಯಿಂದ ದೇವಸ್ಥಾನ ಪ್ರವೇಶಿಸುತ್ತಿಲ್ಲ, ನಮಗೂ ಅವಕಾಶ ಸಿಗಬೇಕು ಎಂಬ ಕಾರಣಕ್ಕೆ ಹೋರಾಟ ನಡೆಸುತ್ತೇವೆ ಎಂದು ಹೇಳುತ್ತಾರೆ. ಹೋರಾಟದ ಬಳಿಕ, ಎಲ್ಲ ಜಾತಿ ಜನರೂ ಸೇರಿ ರಥದ ಹಗ್ಗ ಎಳೆಯಬೇಕು ಎಂಬ ಒಪ್ಪಂದ ಆಗುತ್ತದೆ. ಆದರೆ, ಅದಕ್ಕೆ ಸವರ್ಣೀಯರು ಅವಕಾಶ ನೀಡದ ಕಾರಣಕ್ಕೆ ಮತ್ತೆ ಸಂಘರ್ಷ ಉಂಟಾಗುತ್ತದೆ. ಇದೇ ಕಾರಣಕ್ಕೆ, ದಲಿತರು ಹಿಂದೂಗಳಲ್ಲ; ನಮ್ಮದು ಪ್ರತ್ಯೇಕ ಘಟಕ ಎಂದು ದುಂಡುಮೇಜಿನ ಸಭೆಯಲ್ಲಿ ಅಂಬೇಡ್ಕರ್  ಹೇಳುತ್ತಾರೆ. ಅವರದ್ದೇ ಆದ ದಲಿತರಿಗೆ ಪ್ರತ್ಯೇಕ ಗುರುತು ಇದೆ ಎನ್ನುತ್ತಾರೆ. ಆದರೆ, ಇಂದು ಅದೇ ಕೆಸರಿನಲ್ಲಿ ಅಂಬೇಡ್ಕರ್ ಹೋರಾಟಗಳು ಮುಳುಗಿ ಹೋಗುತ್ತಿದೆ, ಇದು ದುರಂತ” ಎಂದು ಬೇಸರ ವ್ಯಕ್ತಪಡಿಸಿದರು.

“ಬಾಬಾ ಸಾಹೇಬರು ಕಾಲೇಜಿನಲ್ಲಿ ಪಾಠ ಮಾಡುವಾಗ ಅವರಿಗೆ ನೀರಿನ ಮಡಿಕೆ ಮುಟ್ಟಲು ಅವಕಾಶ ನೀಡಲಿಲ್ಲ.. ಇತ್ತೀಚೆಗೆ ರಾಜಸ್ತಾನದಲ್ಲಿ ಸಣ್ಣ ಹುಡುಗ ಶಾಲೆಯಲ್ಲಿ ನೀರಿನ ಮಡಿಕೆ ಮುಟ್ಟಿದ್ದಕ್ಕೆ ಸಾಯಿಸಲಾಯಿತು. ದಲಿತರ ಮೇಲಿನ ದೌರ್ಜನ್ಯ ಇನ್ನೂ ನಿಂತಿಲ್ಲ” ಎಂದು ಹೇಳಿದರು.

“ಮಹಾತ್ಮ ಗಾಂಧಿ ನಡೆಸಿದ ಉಪ್ಪಿನ ಸತ್ಯಾಗ್ರಹಕ್ಕೆ ಸಿಕ್ಕ ಮನ್ನಣೆ ಚೌಡಾರ್ ಕೆರೆ ಸತ್ಯಾಗ್ರಹಕ್ಕೆ ಸಿಗಲಿಲ್ಲ. ಐತಿಹಾಸಿಕ ಹೋರಾಟವೊಂದು ಯಾಕೆ ಪ್ರಸಿದ್ಧಿ ಆಗಲಿಲ್ಲ ಎಂಬುದನ್ನು ನಾವು ಪ್ರಶ್ನೆ ಮಾಡಿಕೊಳ್ಳಬೇಕು.. ಭಾರತದ ಮಟ್ಟಿಗೆ ಇದು ಅತ್ಯಂತ ಮಹತ್ವದ ಹೋರಾಟವಾಗಿದೆ” ಎಂದರು.

“ಕುಂಭಮೇಳದ ಸಂಗಮದಲ್ಲಿ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಿಲ್ಲ ಎಂದು ಎನ್‌ಜಿಟಿ ಹೇಳಿದರೂ ಅದನ್ನು ವೀರೋಧಿಸುವ ಜನ ನಮ್ಮಲ್ಲಿದ್ದಾರೆ. ಇಂದು ಪ್ರಭುತ್ವದ ವಿರುದ್ಧ ಮಾತನಾಡಿದರೆ ದೇಶದ್ರೋಹ ಆಗುತ್ತದೆ. ಅಂದರೆ, ಅವರು ಏನೇ ಮಾಡಿದರೂ ನಾವು ಸಹಿಸಿಕೊಳ್ಳಬೇಕು ಎಂದು ನಿರೀಕ್ಷೆ ಮಾಡುತ್ತಾರೆ. ನಮ್ಮ ಸಂವಿಧಾನವೇ ಮೂಡನಂಬಿಕೆ ವಿರುದ್ಧವಾಗಿ. ಆದರೆ, ಸಮಾಜ ಇಂದು ಹಿಮ್ಮುಖವಾಗಿ ಚಲಿಸುತ್ತಿದೆ” ಎಂದರು.

ಪ್ರಣಾಳಿಕೆಯಲ್ಲಿ ಹೇಳಿದ್ದಕ್ಕೆ ವಿರುದ್ಧವಾಗಿರುವ ಕಾಂಗ್ರೆಸ್ ಸರ್ಕಾರ

“ಬಂಡವಾಳ ಶಾಹಿಗಳಿಗೆ ಕರ್ನಾಟಕದಲ್ಲಿ ಸಾವಿರಾರು ಎಕರೆ ಭೂಮಿಯನ್ನು ಪರಭಾರೆ ಮಾಡಲಾಗುತ್ತಿದೆ. ಗುಜರಾತ್ ಸೇರಿದಂತೆ ದೇಶದ ಯಾವ ರಾಜ್ಯದಲ್ಲೂ ಈ ಪದ್ಧತಿ ಇಲ್ಲ. ಕಾಂಗ್ರೆಸ್ ಸರ್ಕಾರ ತಾನು ಚುನಾವಣೆಗೆ ಮುಂಚಿತವಾಗಿ ನೀಡಿದ ಪ್ರಣಾಳಿಕೆಯ ಭರವಸೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ನೀಡಿದ್ದ ಭರವಸೆ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ದೇವನಹಳ್ಳಿಯ ಚನ್ನರಾಯಪಟ್ಟಣದ ರೈತರು ಮೂರು ವರ್ಷದಿಂದ ಭೂಮಿ ಬಿಟ್ಟುಕೊಡಲ್ಲ ಎಂದು ಪಟ್ಟುಹಿಡಿದಿದ್ದಾರೆ.
ಮುಖ್ಯಮಂತ್ರಿಗಳನ್ನು ಹಲವು ಭಾರಿ ಭೇಟಿ ಮಾಡಿ ಚರ್ಚಿಸಿದರೂ ಒಂದು ನಿರ್ಧಾರಕ್ಕೆ ಬಂದಿಲ್ಲ. ಅವರು ಬೆಳೆದು ಉತ್ಪಾದಿಸುತ್ತಿರುವ ತರಕಾರಿ-ಹಾಲನ್ನೇ ನಾವು ಬಳಸುತ್ತಿದ್ದೇವೆ” ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಾಬಾ ಸಾಹೇಬರು ಕೇಳಿದ್ದು ರಾಜಕೀಯ ಮೀಸಲಾತಿಯಲ್ಲ; ಪ್ರತ್ಯೇಕ ಮತ ಕ್ಷೇತ್ರ

“ಬಾಬಾ ಸಾಹೇಬರು ಕೇಳಿದ್ದು ರಾಜಕೀಯ ಅಧಿಕಾರ ಅಥವಾ ಮೀಸಲಾತಿಯಲ್ಲ; ಪ್ರತ್ಯೇಕ ಮತಕ್ಷೇತ್ರಕ್ಕೆ ಬದಲಾಗಿ ಮೀಸಲು ಕ್ಷೇತ್ರ ನೀಡಿದರು. ‘ನನ್ನ ಜನರಿಗೆ ಸ್ವಂತ ಅಧಿಕಾರ ಬೇಕು’ ಎಂದು ಬೇಡಿಕೆ ಇಟ್ಟಿದ್ದರು. ಅದಕ್ಕಾಗಿಯೇ, ಮಹಾತ್ಮ ಗಾಂಧಿ ದುಂಡು ಮೇಜಿನ ಸಭೆಯ ನಿರ್ಣಯಗಳಿಗೆ ಸಹಿ ಮಾಡಿರಲಿಲ್ಲ. ಅವರು ಪ್ರತ್ಯೇಕ ಮತಕ್ಷೇತ್ರ ವಿರೋಧಿಸಿ ಉಪವಾಸ ಮಾಡಿದರು. ಒಂದು ವೇಳೆ ಅವರು ಸತ್ತರೆ ದಲಿತರ ಮೇಲೆ ದೇಶದಾದ್ಯಂತ ಹಲ್ಲೆ ನಡೆಯುತ್ತದೆ, ಇತಿಹಾಸದಲ್ಲಿ ನಾನು ಕಳನಾಯಕ ಆಗುತ್ತೇನೆ; ನಮ್ಮನ್ನು ದ್ರೋಹಿಗಳು ಎಂದು ಬಿಂಬಿಸುತ್ತಾರೆ ಎಂಬ ಕಾರಣಕ್ಕೆ ಪೂನಾ ಒಪ್ಪಂದಕ್ಕೆ ಸಹಿ ಹಾಕಿದರು. ಅದರ ಪರಿಣಾಮವೇ ಮೀಸಲು ಕ್ಷೇತ್ರ. ಮೀಸಲು ಕ್ಷೇತ್ರಗಳಲ್ಲಿ ಗೆಲ್ಲುತ್ತಿರುವ ನಮ್ಮ ಶಾಸಕರಿಗೆ ಪೂನಾ ಒಪ್ಪಂದದ ಬಗ್ಗೆ ಗೊತ್ತಿಲ್ಲ. ಅದಕ್ಕಾಗಿಯೇ ಅವರು ದಲಿತರಿಗೆ ಅನ್ಯಾಯ ಅದಾಗ ಮಾತನಾಡುವುದಿಲ್ಲ” ಎಂದರು ಆಕ್ರೋಶ ಹೊರಹಾಕಿದರು.

“ಕರ್ನಾಟಕ ಸರ್ಕಾರ ತಕ್ಷಣವೇ ಒಳ ಮೀಸಲಾತಿ ವಿವಾದ ಇತ್ಯರ್ಥ ಮಾಡಬೇಕು; ಸಲಿತ ಸಮುದಾಯದ ಒಳಗೆ ಕ್ಷೋಭೆ ಉಂಟಾಗಿ, ಪರಸ್ಪರ ಅಪನಂಬಿಕೆ ಮೂಡುತ್ತಿದೆ. ಈ ಬಗ್ಗೆ ಯಾರೂ ಕೂಡ ಮುಕ್ತವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಕೂಡಲೇ ವೈಜ್ಞಾನಿಕವಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. 2011 ರ ಜನಗಣತಿ ಪ್ರಕಾರ ರಾಜ್ಯದಲ್ಲಿ 1.25 ಲಕ್ಷ ದಲಿತರಿದ್ದಾರೆ. ಇಷ್ಟು ಜನರನ್ನು ಸಮೀಕ್ಷೆ ಮಾಡುವುದು ಸರ್ಕಾರಕ್ಕೆ ದೊಡ್ಡ ಕೆಲಸವಲ್ಲ; ಕೂಡಲೇ ಸರ್ವೆ ಮಾಡಲು ಮುಂದಾಗಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ ಹಾಗೂ ಆದಿ ಆಂಧ್ರ ನಡುವಿನ ಗೊಂದಲ ನಿವಾರಣೆ ಮಾಡಬೇಕು. ಕಾಲ ಮಿತಿಯೊಳಗೆ ಸರ್ವೇ ಮಾಡಿ ಒಳ ಮೀಸಲಾತಿ ಜಾರಿ ಮಾಡಬೇಕು” ಎಂದು ಒತ್ತಾಯಿಸಿದರು.

“ಮಲದ ಗುಂಡಿಯಲ್ಲಿ ಸಾಯುವ ಭಂಗಿಗಳು, ಊರೂರು ಅಲೆಯುತ್ತಿರುವ ಅಲೆಮಾರಿಗಳ ಬಗ್ಗೆ ಮಾತನಾಡುವವರು ಇಲ್ಲದಂತಾಗಿದೆ. ಬದುಕಿನ ಘನತೆ ಗೊತ್ತಿಲ್ಲದೆ ಟೆಂಟ್‌ಗಳಲ್ಲಿ ಬದುಕುವ ಜನರ ಬಗ್ಗೆ ಕಾಳಜಿ ವಹಿಸಬೇಕು. ಸರ್ಕಾರ ಇದನ್ನೆಲ್ಲ ನೋಡಿಕೊಂಡು ದೀರ್ಘ ಕಾಲ ಸುಮ್ಮನೆ ಕೂರಬಾರದು. ಸಮುದಾಯದ ಸಚಿವರು ಹಾಗೂ ಶಾಸಕರು ನಮಗೆ ನ್ಯಾಯ ಕೊಡಿಸಬೇಕು. ದಲಿತ ಚಳವಳಿ ನಮಗೆ ಘನತೆಯ ಬದುಕು  ನೀಡಿದೆ. ಅನ್ಯಾಯದ ವಿರುದ್ಧ ಆಕ್ರೋಶ ಹಾಗೂ ಸಂಘಟನಾತ್ಮಕ ಬದುಕು ಕಲಿಸಿದೆ. ಆದ್ದರಿಂದ, ನಾವು ಹಂಚಿಕೊಂಡು ತಿನ್ನುವುದನ್ನು ನಾವು ಕಲಿಯಬೇಕು” ಎಂದರು.

ಉಡುಪಿ | ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...