Homeಕರ್ನಾಟಕದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

'ಮಹಾಡ್ ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿ'

- Advertisement -
- Advertisement -

“ನಮಗೆಲ್ಲಾ (ಪರಿಶಿಷ್ಟರಿಗೆ) ದಲಿತ ಚಳವಳಿ ಘನತೆ ಬದುಕು ಕೊಟ್ಟಿದೆ; ನಮ್ಮ ಮೇಲಾಗುವ ದೌರ್ಜನ್ಯಗಳಿಗೆ ಆಕ್ರೋಶ ಹಾಗೂ ಸಂಘಟನಾತ್ಮಕ ಹೋರಾಟ ಕಲಿಸಿದೆ. ಆದ್ದರಿಂದ, ನಾವೆಲ್ಲರೂ ಹಂಚಿಕೊಂಡು ತಿನ್ನುವುದನ್ನು ಕಲಿಯಬೇಕು” ಎಂದು ಹೇಳಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರಾಜ್ಯ ಸರ್ಕಾರ ಆದಷ್ಟು ಬೇಗ ಪರಿಶಿಷ್ಟರ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ, ಮಹಾಡ್ ಸತ್ಯಾಗ್ರಹ ನೆನಪಿನಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ‘ಶೋಷಿತರ ಸಂಘರ್ಷ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, “ಮಹಾಡ್ ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿ, ಎಲ್ಲಿ ನೆನೆಪು ಇರುವುದಿಲ್ಲವೋ ಅಲ್ಲಿ ಕನಸು ಚಿಗೋರೋದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಉದಾತ್ತ ತ್ಯಾಗ ಹಾಗೂ ಬಲಿದಾನದ ಕಾರಣಕ್ಕೆ ಇಂದು ನಾವಿಲ್ಲಿದ್ದೇವೆ. ಅವರ ಸಮಾನತೆ ಕನಸು ಬಿತ್ತುವ ಹೋರಾಟಗಳೆಲ್ಲಾ ನಮಗೆ ಮಾದರಿ ಆಗಬೇಕು; ಅವುಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವುದು ನಮ್ಮ ಜವಾಬ್ದಾರಿ. ದಲಿತ ಸಂಘರ್ಷ ಸಮಿತಿ ದೀರ್ಘ ಕಾಲದಿಂದ ನಡೆಸಿರುವ ಹೋರಾಟವನ್ನು ನಾವು ಅರ್ಥ ಮಾಡಿಕೊಳ್ಳಬೇಕು” ಎಂದು ದಸಂಸ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

“ದಲಿತರ ಸಬಲೀಕರಣಕ್ಕೆ ಕರ್ನಾಟಕ ಸರ್ಕಾರ ನಿಧಾನಕ್ಕೆ ಕಣ್ಣು ತೆರೆಯುತ್ತಿದೆ, ಬಾಬಾ ಸಾಹೇಬರು ಹೋರಾಟಕ್ಕೆ ಅಣಿಯಾದ ಹಾಗೆ ನಾವೂ ಸಿದ್ಧರಾಗಬೇಕು; ಅವರು ಯಾರಿಗಾಗಿ ಹೋರಾಟ ನಡೆಸಿದರು ಎಂಬುದರ ಬಗ್ಗೆಯೂ ಯೋಚಿಸಬೇಕು. ನೈಸರ್ಗಿಕವಾಗಿ ಸಿಗುವ ನೀರಿನ ಮೇಲೆ ನಿರ್ಬಂಧ ಹಾಗೂ ಧಾರ್ಮಿಕ ನಿಷೇಧ ಬೇರೆ ಯಾವ ದೇಶದಲ್ಲೂ ಇಲ್ಲ. ಮನುಷ್ಯರ ಜೀವನಾವಶ್ಯಕ ವಸ್ತುಗಳ ಮೇಲಿನ ನಿರಾಕರಣೆ ಹಾಗೂ ಅವರ ಬದುಕುವ ಹಕ್ಕುಗಳ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಬಾಬಾ ಸಾಹೇಬರು ನಡೆಸಿದ ಹೋರಾಟ ಮಹತ್ವದ್ದು” ಎಂದರು.

“ನೀರು ಮುಟ್ಟುವುದರಿಂದ ನನಗೆ ಸ್ವರ್ಗ ಸಿಗುತ್ತದೆ ಅಥವಾ ಪವಿತ್ರನಾಗುತ್ತೇನೆ ಎಂಬ ಕಾರಣಕ್ಕೆ ಮುಟ್ಟುತ್ತಿಲ್ಲ; ಮಾನವ ಹಕ್ಕುಗಳಿಗಾಗಿ ಈ ನೀರನ್ನು ಮುಟ್ಟುತ್ತಿದ್ದೇನೆ. ನೀರು ಎಲ್ಲರಿಗೂ ಸೇರಿದ್ದು ಎಂಬ ಕಾರಣಕ್ಕೆ ಹೋರಾಟ ಮಾಡಿದ್ದೇನೆ ಎಂದು ಅಂಬೇಡ್ಕರ್ ಹೇಳಿದರು” ಎಂದು ವಿವರಿಸಿದರು.

“ನನ್ನ ಹೋರಾಟ ಮನುಷ್ಯರ ಘನತೆಗಾಗಿ, ನನ್ನ ಬದುಕಿನ ಹೋರಾಟಗಳು ಗೌರವ ಹಾಗೂ ಅಭಿಮಾನ ತಂದುಕೊಟ್ಟಿದೆ ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಹೋರಾಟ ನಡೆಯುವಾಗಲೇ ಅವರಿಗೆ ಸಾಕಷ್ಟು ಅಡ್ಡಿ-ಆತಂಕ ಎದುರಾಗಿದ್ದವು. ಅಲ್ಲಿ ಟೆಂಟ್ ಹಾಕುವುದಕ್ಕೆ ಒಬ್ಬ ಮುಸ್ಲಿಂ ವ್ಯಕ್ತಿ ಜಾಗ ನೀಡಿ, ಅವರೂ ಕೂಡ ಹೋರಾಟದಲ್ಲಿ ಭಾಗಿಯಾಗಿದ್ದರು. ಧರ್ಮಾತೀತವಾಗಿ ನಡೆದ ಮಹಾಡ್ ಸತ್ಯಾಗ್ರಹದಲ್ಲಿ ಬ್ರಾಹ್ಮಣರು ಭಾಗಿಯಾಗಿದ್ದರು. ಕಮ್ಯುನಿಸ್ಟ್ ನಾಯಕರೊಬ್ಬರು ಆರಂಭಿಸಿದ ಹೋರಾಟಕ್ಕೆ ಅಂಬೇಡ್ಕರ್ ತಾರ್ಕಿಕ ಅಂತ್ಯ ನೀಡಿದರು” ಎಂದರು.

‘ಕಲಾರಾಮ್ ದೇವಸ್ಥಾನ ಹೋರಾಟ ಸಂದರ್ಭದಲ್ಲಿ ಕೂಡ ಅಂಬೇಡ್ಕರ್ ಇದನ್ನೇ ಹೇಳುತ್ತಾರೆ’
ದೇವರ ಮೇಲಿನ ಭಕ್ತಿಯಿಂದ ದೇವಸ್ಥಾನ ಪ್ರವೇಶಿಸುತ್ತಿಲ್ಲ, ನಮಗೂ ಅವಕಾಶ ಸಿಗಬೇಕು ಎಂಬ ಕಾರಣಕ್ಕೆ ಹೋರಾಟ ನಡೆಸುತ್ತೇವೆ ಎಂದು ಹೇಳುತ್ತಾರೆ. ಹೋರಾಟದ ಬಳಿಕ, ಎಲ್ಲ ಜಾತಿ ಜನರೂ ಸೇರಿ ರಥದ ಹಗ್ಗ ಎಳೆಯಬೇಕು ಎಂಬ ಒಪ್ಪಂದ ಆಗುತ್ತದೆ. ಆದರೆ, ಅದಕ್ಕೆ ಸವರ್ಣೀಯರು ಅವಕಾಶ ನೀಡದ ಕಾರಣಕ್ಕೆ ಮತ್ತೆ ಸಂಘರ್ಷ ಉಂಟಾಗುತ್ತದೆ. ಇದೇ ಕಾರಣಕ್ಕೆ, ದಲಿತರು ಹಿಂದೂಗಳಲ್ಲ; ನಮ್ಮದು ಪ್ರತ್ಯೇಕ ಘಟಕ ಎಂದು ದುಂಡುಮೇಜಿನ ಸಭೆಯಲ್ಲಿ ಅಂಬೇಡ್ಕರ್  ಹೇಳುತ್ತಾರೆ. ಅವರದ್ದೇ ಆದ ದಲಿತರಿಗೆ ಪ್ರತ್ಯೇಕ ಗುರುತು ಇದೆ ಎನ್ನುತ್ತಾರೆ. ಆದರೆ, ಇಂದು ಅದೇ ಕೆಸರಿನಲ್ಲಿ ಅಂಬೇಡ್ಕರ್ ಹೋರಾಟಗಳು ಮುಳುಗಿ ಹೋಗುತ್ತಿದೆ, ಇದು ದುರಂತ” ಎಂದು ಬೇಸರ ವ್ಯಕ್ತಪಡಿಸಿದರು.

“ಬಾಬಾ ಸಾಹೇಬರು ಕಾಲೇಜಿನಲ್ಲಿ ಪಾಠ ಮಾಡುವಾಗ ಅವರಿಗೆ ನೀರಿನ ಮಡಿಕೆ ಮುಟ್ಟಲು ಅವಕಾಶ ನೀಡಲಿಲ್ಲ.. ಇತ್ತೀಚೆಗೆ ರಾಜಸ್ತಾನದಲ್ಲಿ ಸಣ್ಣ ಹುಡುಗ ಶಾಲೆಯಲ್ಲಿ ನೀರಿನ ಮಡಿಕೆ ಮುಟ್ಟಿದ್ದಕ್ಕೆ ಸಾಯಿಸಲಾಯಿತು. ದಲಿತರ ಮೇಲಿನ ದೌರ್ಜನ್ಯ ಇನ್ನೂ ನಿಂತಿಲ್ಲ” ಎಂದು ಹೇಳಿದರು.

“ಮಹಾತ್ಮ ಗಾಂಧಿ ನಡೆಸಿದ ಉಪ್ಪಿನ ಸತ್ಯಾಗ್ರಹಕ್ಕೆ ಸಿಕ್ಕ ಮನ್ನಣೆ ಚೌಡಾರ್ ಕೆರೆ ಸತ್ಯಾಗ್ರಹಕ್ಕೆ ಸಿಗಲಿಲ್ಲ. ಐತಿಹಾಸಿಕ ಹೋರಾಟವೊಂದು ಯಾಕೆ ಪ್ರಸಿದ್ಧಿ ಆಗಲಿಲ್ಲ ಎಂಬುದನ್ನು ನಾವು ಪ್ರಶ್ನೆ ಮಾಡಿಕೊಳ್ಳಬೇಕು.. ಭಾರತದ ಮಟ್ಟಿಗೆ ಇದು ಅತ್ಯಂತ ಮಹತ್ವದ ಹೋರಾಟವಾಗಿದೆ” ಎಂದರು.

“ಕುಂಭಮೇಳದ ಸಂಗಮದಲ್ಲಿ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಿಲ್ಲ ಎಂದು ಎನ್‌ಜಿಟಿ ಹೇಳಿದರೂ ಅದನ್ನು ವೀರೋಧಿಸುವ ಜನ ನಮ್ಮಲ್ಲಿದ್ದಾರೆ. ಇಂದು ಪ್ರಭುತ್ವದ ವಿರುದ್ಧ ಮಾತನಾಡಿದರೆ ದೇಶದ್ರೋಹ ಆಗುತ್ತದೆ. ಅಂದರೆ, ಅವರು ಏನೇ ಮಾಡಿದರೂ ನಾವು ಸಹಿಸಿಕೊಳ್ಳಬೇಕು ಎಂದು ನಿರೀಕ್ಷೆ ಮಾಡುತ್ತಾರೆ. ನಮ್ಮ ಸಂವಿಧಾನವೇ ಮೂಡನಂಬಿಕೆ ವಿರುದ್ಧವಾಗಿ. ಆದರೆ, ಸಮಾಜ ಇಂದು ಹಿಮ್ಮುಖವಾಗಿ ಚಲಿಸುತ್ತಿದೆ” ಎಂದರು.

ಪ್ರಣಾಳಿಕೆಯಲ್ಲಿ ಹೇಳಿದ್ದಕ್ಕೆ ವಿರುದ್ಧವಾಗಿರುವ ಕಾಂಗ್ರೆಸ್ ಸರ್ಕಾರ

“ಬಂಡವಾಳ ಶಾಹಿಗಳಿಗೆ ಕರ್ನಾಟಕದಲ್ಲಿ ಸಾವಿರಾರು ಎಕರೆ ಭೂಮಿಯನ್ನು ಪರಭಾರೆ ಮಾಡಲಾಗುತ್ತಿದೆ. ಗುಜರಾತ್ ಸೇರಿದಂತೆ ದೇಶದ ಯಾವ ರಾಜ್ಯದಲ್ಲೂ ಈ ಪದ್ಧತಿ ಇಲ್ಲ. ಕಾಂಗ್ರೆಸ್ ಸರ್ಕಾರ ತಾನು ಚುನಾವಣೆಗೆ ಮುಂಚಿತವಾಗಿ ನೀಡಿದ ಪ್ರಣಾಳಿಕೆಯ ಭರವಸೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ನೀಡಿದ್ದ ಭರವಸೆ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ದೇವನಹಳ್ಳಿಯ ಚನ್ನರಾಯಪಟ್ಟಣದ ರೈತರು ಮೂರು ವರ್ಷದಿಂದ ಭೂಮಿ ಬಿಟ್ಟುಕೊಡಲ್ಲ ಎಂದು ಪಟ್ಟುಹಿಡಿದಿದ್ದಾರೆ.
ಮುಖ್ಯಮಂತ್ರಿಗಳನ್ನು ಹಲವು ಭಾರಿ ಭೇಟಿ ಮಾಡಿ ಚರ್ಚಿಸಿದರೂ ಒಂದು ನಿರ್ಧಾರಕ್ಕೆ ಬಂದಿಲ್ಲ. ಅವರು ಬೆಳೆದು ಉತ್ಪಾದಿಸುತ್ತಿರುವ ತರಕಾರಿ-ಹಾಲನ್ನೇ ನಾವು ಬಳಸುತ್ತಿದ್ದೇವೆ” ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಾಬಾ ಸಾಹೇಬರು ಕೇಳಿದ್ದು ರಾಜಕೀಯ ಮೀಸಲಾತಿಯಲ್ಲ; ಪ್ರತ್ಯೇಕ ಮತ ಕ್ಷೇತ್ರ

“ಬಾಬಾ ಸಾಹೇಬರು ಕೇಳಿದ್ದು ರಾಜಕೀಯ ಅಧಿಕಾರ ಅಥವಾ ಮೀಸಲಾತಿಯಲ್ಲ; ಪ್ರತ್ಯೇಕ ಮತಕ್ಷೇತ್ರಕ್ಕೆ ಬದಲಾಗಿ ಮೀಸಲು ಕ್ಷೇತ್ರ ನೀಡಿದರು. ‘ನನ್ನ ಜನರಿಗೆ ಸ್ವಂತ ಅಧಿಕಾರ ಬೇಕು’ ಎಂದು ಬೇಡಿಕೆ ಇಟ್ಟಿದ್ದರು. ಅದಕ್ಕಾಗಿಯೇ, ಮಹಾತ್ಮ ಗಾಂಧಿ ದುಂಡು ಮೇಜಿನ ಸಭೆಯ ನಿರ್ಣಯಗಳಿಗೆ ಸಹಿ ಮಾಡಿರಲಿಲ್ಲ. ಅವರು ಪ್ರತ್ಯೇಕ ಮತಕ್ಷೇತ್ರ ವಿರೋಧಿಸಿ ಉಪವಾಸ ಮಾಡಿದರು. ಒಂದು ವೇಳೆ ಅವರು ಸತ್ತರೆ ದಲಿತರ ಮೇಲೆ ದೇಶದಾದ್ಯಂತ ಹಲ್ಲೆ ನಡೆಯುತ್ತದೆ, ಇತಿಹಾಸದಲ್ಲಿ ನಾನು ಕಳನಾಯಕ ಆಗುತ್ತೇನೆ; ನಮ್ಮನ್ನು ದ್ರೋಹಿಗಳು ಎಂದು ಬಿಂಬಿಸುತ್ತಾರೆ ಎಂಬ ಕಾರಣಕ್ಕೆ ಪೂನಾ ಒಪ್ಪಂದಕ್ಕೆ ಸಹಿ ಹಾಕಿದರು. ಅದರ ಪರಿಣಾಮವೇ ಮೀಸಲು ಕ್ಷೇತ್ರ. ಮೀಸಲು ಕ್ಷೇತ್ರಗಳಲ್ಲಿ ಗೆಲ್ಲುತ್ತಿರುವ ನಮ್ಮ ಶಾಸಕರಿಗೆ ಪೂನಾ ಒಪ್ಪಂದದ ಬಗ್ಗೆ ಗೊತ್ತಿಲ್ಲ. ಅದಕ್ಕಾಗಿಯೇ ಅವರು ದಲಿತರಿಗೆ ಅನ್ಯಾಯ ಅದಾಗ ಮಾತನಾಡುವುದಿಲ್ಲ” ಎಂದರು ಆಕ್ರೋಶ ಹೊರಹಾಕಿದರು.

“ಕರ್ನಾಟಕ ಸರ್ಕಾರ ತಕ್ಷಣವೇ ಒಳ ಮೀಸಲಾತಿ ವಿವಾದ ಇತ್ಯರ್ಥ ಮಾಡಬೇಕು; ಸಲಿತ ಸಮುದಾಯದ ಒಳಗೆ ಕ್ಷೋಭೆ ಉಂಟಾಗಿ, ಪರಸ್ಪರ ಅಪನಂಬಿಕೆ ಮೂಡುತ್ತಿದೆ. ಈ ಬಗ್ಗೆ ಯಾರೂ ಕೂಡ ಮುಕ್ತವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಕೂಡಲೇ ವೈಜ್ಞಾನಿಕವಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. 2011 ರ ಜನಗಣತಿ ಪ್ರಕಾರ ರಾಜ್ಯದಲ್ಲಿ 1.25 ಲಕ್ಷ ದಲಿತರಿದ್ದಾರೆ. ಇಷ್ಟು ಜನರನ್ನು ಸಮೀಕ್ಷೆ ಮಾಡುವುದು ಸರ್ಕಾರಕ್ಕೆ ದೊಡ್ಡ ಕೆಲಸವಲ್ಲ; ಕೂಡಲೇ ಸರ್ವೆ ಮಾಡಲು ಮುಂದಾಗಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ ಹಾಗೂ ಆದಿ ಆಂಧ್ರ ನಡುವಿನ ಗೊಂದಲ ನಿವಾರಣೆ ಮಾಡಬೇಕು. ಕಾಲ ಮಿತಿಯೊಳಗೆ ಸರ್ವೇ ಮಾಡಿ ಒಳ ಮೀಸಲಾತಿ ಜಾರಿ ಮಾಡಬೇಕು” ಎಂದು ಒತ್ತಾಯಿಸಿದರು.

“ಮಲದ ಗುಂಡಿಯಲ್ಲಿ ಸಾಯುವ ಭಂಗಿಗಳು, ಊರೂರು ಅಲೆಯುತ್ತಿರುವ ಅಲೆಮಾರಿಗಳ ಬಗ್ಗೆ ಮಾತನಾಡುವವರು ಇಲ್ಲದಂತಾಗಿದೆ. ಬದುಕಿನ ಘನತೆ ಗೊತ್ತಿಲ್ಲದೆ ಟೆಂಟ್‌ಗಳಲ್ಲಿ ಬದುಕುವ ಜನರ ಬಗ್ಗೆ ಕಾಳಜಿ ವಹಿಸಬೇಕು. ಸರ್ಕಾರ ಇದನ್ನೆಲ್ಲ ನೋಡಿಕೊಂಡು ದೀರ್ಘ ಕಾಲ ಸುಮ್ಮನೆ ಕೂರಬಾರದು. ಸಮುದಾಯದ ಸಚಿವರು ಹಾಗೂ ಶಾಸಕರು ನಮಗೆ ನ್ಯಾಯ ಕೊಡಿಸಬೇಕು. ದಲಿತ ಚಳವಳಿ ನಮಗೆ ಘನತೆಯ ಬದುಕು  ನೀಡಿದೆ. ಅನ್ಯಾಯದ ವಿರುದ್ಧ ಆಕ್ರೋಶ ಹಾಗೂ ಸಂಘಟನಾತ್ಮಕ ಬದುಕು ಕಲಿಸಿದೆ. ಆದ್ದರಿಂದ, ನಾವು ಹಂಚಿಕೊಂಡು ತಿನ್ನುವುದನ್ನು ನಾವು ಕಲಿಯಬೇಕು” ಎಂದರು.

ಉಡುಪಿ | ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...