Homeಮುಖಪುಟದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

“ಪಕ್ಷಗಳ ಟೀಕೆಗೆ ಕುಟುಂಬ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ” ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

- Advertisement -
- Advertisement -

ದೇಶಕ್ಕೆ ಅಪಾಯ ಇರುವುದು ʼಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

“ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು” ಎಂದು ಪ್ರಧಾನಿ ಮೋದಿ ಹೇಳಿರುವುದನ್ನು ಖಂಡಿಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಹೊಸ ಉಪದೇಶವಿದು” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಾಸ್ತವ ಗುರುತಿಸಿ, ಬಿಜೆಪಿಯ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ. ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ ನಿಜವಾದ ದೊಡ್ಡ ಶತ್ರು. ಸಂವಿಧಾನಕ್ಕೆ ಗಂಡಾಂತರಕಾರಿ. ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

ಕುಟುಂಬ ಪಕ್ಷಗಳ ಟೀಕೆಗೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದು ತಿಳಿಸಿದ್ದಾರೆ.

ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು. ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ? ಎಂದು ಕೇಳಿದ್ದಾರೆ.

ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ. ಏಕೆ? ಎಂದು ವ್ಯಂಗ್ಯವಾಡಿದ್ದಾರೆ.

ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ? ಒಂದೆಡೆ, ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ, ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ!! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿರಿ: ಗಂಡ, ಮೈದುನ, ಮಾವ, ಗಂಡನ ಸ್ನೇಹಿತನಿಂದ ಎರಡು ವರ್ಷ ಕಾಲ ಅತ್ಯಾಚಾರ; ವಿವಾದಿತ ಹಿಂದೂ ಮಹಾಪಂಚಾಯತ್‌ ಸಂಘಟಕನ ಪತ್ನಿ ಆರೋಪ

“ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ, ಸ್ವತಃ ಬಿಜೆಪಿ ಶಾಸಕರೇ! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ ಎಂದು ಕುಟುಕಿದ್ದಾರೆ.

ಹೋಗಲಿ.. ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್‌ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? ಎಂದು ಪ್ರಶ್ನಿಸಿದ್ದಾರೆ.

ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಕಿವಿಮಾತು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...