Homeಮುಖಪುಟದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

“ಪಕ್ಷಗಳ ಟೀಕೆಗೆ ಕುಟುಂಬ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ” ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

- Advertisement -
- Advertisement -

ದೇಶಕ್ಕೆ ಅಪಾಯ ಇರುವುದು ʼಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

“ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು” ಎಂದು ಪ್ರಧಾನಿ ಮೋದಿ ಹೇಳಿರುವುದನ್ನು ಖಂಡಿಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಹೊಸ ಉಪದೇಶವಿದು” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಾಸ್ತವ ಗುರುತಿಸಿ, ಬಿಜೆಪಿಯ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ. ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ ನಿಜವಾದ ದೊಡ್ಡ ಶತ್ರು. ಸಂವಿಧಾನಕ್ಕೆ ಗಂಡಾಂತರಕಾರಿ. ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

ಕುಟುಂಬ ಪಕ್ಷಗಳ ಟೀಕೆಗೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದು ತಿಳಿಸಿದ್ದಾರೆ.

ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು. ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ? ಎಂದು ಕೇಳಿದ್ದಾರೆ.

ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ. ಏಕೆ? ಎಂದು ವ್ಯಂಗ್ಯವಾಡಿದ್ದಾರೆ.

ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ? ಒಂದೆಡೆ, ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ, ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ!! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿರಿ: ಗಂಡ, ಮೈದುನ, ಮಾವ, ಗಂಡನ ಸ್ನೇಹಿತನಿಂದ ಎರಡು ವರ್ಷ ಕಾಲ ಅತ್ಯಾಚಾರ; ವಿವಾದಿತ ಹಿಂದೂ ಮಹಾಪಂಚಾಯತ್‌ ಸಂಘಟಕನ ಪತ್ನಿ ಆರೋಪ

“ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ, ಸ್ವತಃ ಬಿಜೆಪಿ ಶಾಸಕರೇ! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ ಎಂದು ಕುಟುಕಿದ್ದಾರೆ.

ಹೋಗಲಿ.. ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್‌ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? ಎಂದು ಪ್ರಶ್ನಿಸಿದ್ದಾರೆ.

ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಕಿವಿಮಾತು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...