Homeಮುಖಪುಟದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

“ಪಕ್ಷಗಳ ಟೀಕೆಗೆ ಕುಟುಂಬ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ” ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

- Advertisement -
- Advertisement -

ದೇಶಕ್ಕೆ ಅಪಾಯ ಇರುವುದು ʼಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

“ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು” ಎಂದು ಪ್ರಧಾನಿ ಮೋದಿ ಹೇಳಿರುವುದನ್ನು ಖಂಡಿಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಹೊಸ ಉಪದೇಶವಿದು” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಾಸ್ತವ ಗುರುತಿಸಿ, ಬಿಜೆಪಿಯ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ. ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ ನಿಜವಾದ ದೊಡ್ಡ ಶತ್ರು. ಸಂವಿಧಾನಕ್ಕೆ ಗಂಡಾಂತರಕಾರಿ. ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

ಕುಟುಂಬ ಪಕ್ಷಗಳ ಟೀಕೆಗೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದು ತಿಳಿಸಿದ್ದಾರೆ.

ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು. ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ? ಎಂದು ಕೇಳಿದ್ದಾರೆ.

ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ. ಏಕೆ? ಎಂದು ವ್ಯಂಗ್ಯವಾಡಿದ್ದಾರೆ.

ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ? ಒಂದೆಡೆ, ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ, ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ!! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿರಿ: ಗಂಡ, ಮೈದುನ, ಮಾವ, ಗಂಡನ ಸ್ನೇಹಿತನಿಂದ ಎರಡು ವರ್ಷ ಕಾಲ ಅತ್ಯಾಚಾರ; ವಿವಾದಿತ ಹಿಂದೂ ಮಹಾಪಂಚಾಯತ್‌ ಸಂಘಟಕನ ಪತ್ನಿ ಆರೋಪ

“ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ, ಸ್ವತಃ ಬಿಜೆಪಿ ಶಾಸಕರೇ! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ ಎಂದು ಕುಟುಕಿದ್ದಾರೆ.

ಹೋಗಲಿ.. ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್‌ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? ಎಂದು ಪ್ರಶ್ನಿಸಿದ್ದಾರೆ.

ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಕಿವಿಮಾತು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...