Homeಕರ್ನಾಟಕಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಮಾಯಕರು: ವಿಧಾನಸಭಾ ಅಧಿವೇಶನದಲ್ಲಿ ಕುಮಾರಸ್ವಾಮಿ

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಮಾಯಕರು: ವಿಧಾನಸಭಾ ಅಧಿವೇಶನದಲ್ಲಿ ಕುಮಾರಸ್ವಾಮಿ

- Advertisement -
- Advertisement -

ವಿಧಾನಸಭಾ ಅಧಿವೇಶನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡುತ್ತಾ, ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಮಾಯಕರೇ ಆಗಿದ್ದಾರೆ. ಅವರು ಅಮಾಯಕರಲ್ಲ ಎನ್ನುವ ಆಡಳಿತ ಪಕ್ಷಕ್ಕೆ ಈ ಮೊದಲು ಅವರು ಯಾವುದಾದರೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಬಾಗಿಯಾಗಿರುವ ಮಾಹಿತಿ ಇದೆಯೇ , ಇದ್ದರೆ ಗೃಹ ಸಚಿವರು ಅದನ್ನು ಬಹಿರಂಗ ಪಡಿಸಲಿ ಎಂದು ಸವಾಲೆಸೆದರು.

ಅಧಿವೇಶನದಲ್ಲಿ ಮಾತನಾಡುತ್ತಾ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ “ಮಂಗಳೂರಿನ ಗೋಲಿಬಾರ್ ಗೆ ಕಾರಣಗಳೇನು? ರಾಜ್ಯದಾದ್ಯಂತ ಪ್ರತಿಭಟನೆಗಳಾಗಿವೆ , ರಾಮಚಂದ್ರ ಗುಹಾ ಅವರನ್ನು ಬಲವಂತವಾಗಿ ತಳ್ಳಾಡಿಕೊಂಡು ಬಂಧಿಸಲಾಗಿತ್ತು , ಈ ರೀತಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಅವಶ್ಯಕತೆ ಇತ್ತೇ?” ಎಂದು ಪ್ರಶ್ನಿಸಿದರು.

ಅಲ್ಲದೆ “ಮಂಗಳೂರಿನ ಪ್ರತಿಭಟನೆಯ ಬಗ್ಗೆ ನಾನು ಸಂಗ್ರಹಿಸಿದ ವೀಡಿಯೋ ಸಭಾಧ್ಯಕ್ಷರಿಗೆ ನೀಡುತ್ತೇನೆ. ಪ್ರತಿಭಟನೆಯ ದಿನ ಮಂಗಳೂರಿನ ಬಸ್ಟಾಂಡಲ್ಲಿ ದಿಕ್ಕಾರ ಕೂಗಿದವನನ್ನು ಬಿಟ್ಟು ಅಮಾಯಕರ ಮೇಲೆ ಪೋಲಿಸರು ದೌರ್ಜನ್ಯ ಎಸಗಿದ್ದಾರೆ” ಎಂದು ಕುಮಾರಸ್ವಾಮಿ ಹೇಳಿದರು.

ನಂತರ ಪತ್ರಿಕೆಯೊಂದರ ವರದಿಯನ್ನು ಓದಿದ ಕುಮಾರಸ್ವಾಮಿ ಘಟನೆಯಲ್ಲಿ ಪ್ರತಿಭಟನಾಕಾರರ ವಿರುದ್ಧ ಪೋಲಿಸರೇ ಮೊದಲಿಗೆ ಲಾಠಿ ಚಾರ್ಜ್ ಮಾಡಿದರು ಎಂಬುದನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದರು.

ಕಾಲೇಜಿನ ವಿದ್ಯಾರ್ಥಿಗಳ ಮೇಲೆ, ಅಮಾಯಕ ಜನರ ಮೇಲೆ ಪೋಲಿಸರು ದೌರ್ಜನ್ಯ ಎಸಗಿದ್ದಾರೆ. ಅದರಿಂದ ಇಬ್ಬರು ಅಮಾಯಕರು ಸಾವಿಗೀಡಾದರು. ಗೋಲಿಬಾರ್ ಗೆ ಈಡಾದ ಇಬ್ಬರೂ ಅಮಾಯಕರು ಎಂದು ಒತ್ತಿ ಹೇಳಿದ ಕುಮಾರಸ್ವಾಮಿ, ಅವರನ್ನು ಅಮಾಯಕರಲ್ಲ ಎನ್ನುವ ಆಡಳಿತ ಪಕ್ಷವು, ಈ ಮೊದಲು ಅವರ ವಿರುದ್ಧ ದಾಖಲಾದ ಯಾವುದಾದರೂ ಕಾನೂನು ಬಾಹಿರ ಚಟುವಟಿಕೆಗಳ ಮಾಹಿತಿ ಇದೆಯೆ? ಇದ್ದರೆ ಗೃಹ ಸಚಿವರು ಬಹಿರಂಗ ಪಡಿಸಲಿ ಎಂದರು.

ನಂತರ ಮಂಗಳೂರು ಗೋಲಿಬಾರ್ ಬಗ್ಗೆ ಘಟನೆಯ ದಿನ ಗೋಲಿಬಾರ್ ಮಾಡುವಂತೆ ಆಡಿದ ಪೋಲಿಸರ ಮಾತಿನ ವೀಡಿಯೋಗಳ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...