Homeಮುಖಪುಟದ.ಆಫ್ರಿಕಾ, ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಚೀತಾ ಮರಿ ಸಾವು; 2 ತಿಂಗಳೊಳಗೆ 4 ಚೀತಾಗಳ ಸಾವು

ದ.ಆಫ್ರಿಕಾ, ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಚೀತಾ ಮರಿ ಸಾವು; 2 ತಿಂಗಳೊಳಗೆ 4 ಚೀತಾಗಳ ಸಾವು

- Advertisement -
- Advertisement -

ಮಂಗಳವಾರ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ತಿಂಗಳ ಚೀತಾ ಮರಿ ಸಾವನ್ನಪ್ಪಿದೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜ್ವಾಲಾ ಎಂಬ ಹೆಣ್ಣು ಚೀತಾಗೆ ಜನಿಸಿದ ನಾಲ್ಕು ಮರಿಗಳಲ್ಲಿ ಒಂದು ಮರಿ ಸಾವನ್ನಪ್ಪಿದೆ.ಇದು ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಗೊಂಡ 20 ಚೀತಾಗಳಲ್ಲಿ ಒಂದಾಗಿದೆ.

ಮರಿಯ ಸಾವಿನೊಂದಿಗೆ ಉದ್ಯಾನವನದಲ್ಲಿ ಎರಡು ತಿಂಗಳೊಳಗೆ ನಾಲ್ಕು ಚೀತಾಗಳು ಸಾವನ್ನಪ್ಪಿವೆ. ಮೊದಲ ಚೀತಾ ಸಶಾ ಮಾರ್ಚ್ 27 ರಂದು ಮೂತ್ರಪಿಂಡದ ಕಾಯಿಲೆಯಿಂದ ಸಾವನ್ನಪ್ಪಿತ್ತು. ಎರಡನೇ ಚೀತಾ ಉದಯ್ ಏಪ್ರಿಲ್ 24 ರಂದು ಕಾರ್ಡಿಯೋ-ಪಲ್ಮನರಿ ವೈಫಲ್ಯದಿಂದ ಸಾವನ್ನಪ್ಪಿತು. ಮೂರನೇ ಚೀತಾ ದಕ್ಷ ಮೇ 9 ರಂದು ಸಂಯೋಗದ ಪ್ರಯತ್ನದಲ್ಲಿ ಸಾವನ್ನಪ್ಪಿತು.

ಈ ಬಗ್ಗೆ ಮಂಗಳವಾರ ಮಾಹಿತಿ ನೀಡಿದ ವನ್ಯಜೀವಿ ಅಧಿಕಾರಿಗಳು, ”ಜ್ವಾಲಾ ತನ್ನ ಎಲ್ಲಾ ಮರಿಗಳೊಂದಿಗೆ  ಒಂದು ಸ್ಥಾಳದಲ್ಲಿ ಕಾಣಿಸಿಕೊಂಡಿದ್ದಾಳೆ. ಆದರೆ, ಆನಂತರ ಜ್ವಾಲಾ ನಡೆಯಲು ಪ್ರಾರಂಭಿಸಿದಾಗ, ನಾಲ್ಕನೇ ಮರಿ ಅದರ ಸ್ಥಳದಲ್ಲಿಯೇ ಮಲಗಿತ್ತು” ಎಂದು ಅವರು ಹೇಳಿದರು.

”ಸ್ವಲ್ಪ ಸಮಯದ ನಂತರ, ನಾಲ್ಕನೇ ಮರಿಯನ್ನು ಗಮಣಿಸಲಾಯಿತು. ಈ ಮರಿಯು ಎದ್ದೇಳಲು ಸಾಧ್ಯವಾಗದೆ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿತು ಮತ್ತು ಮೇಲ್ವಿಚಾರಣಾ ತಂಡವನ್ನು ನೋಡಿದ ನಂತರ ತಲೆ ಎತ್ತಲು ಪ್ರಯತ್ನಿಸಿತು” ಎಂದು ಅರಣ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

”ಈ ಚೀತಾ ಮರಿ ಸಾವಿಗೆ ಅಶಕ್ತತೆ ಕಾರಣವಾಗಿರಬಹುದು. ಎರಡು ತಿಂಗಳ ಮರಿಯು ತುಂಬಾ ದುರ್ಬಲವಾಗಿತ್ತು. ಸಾಮಾನ್ಯವಾಗಿ ದುರ್ಬಲ ಚೀತಾ ಮರಿಯು ಇತರ ಮರಿಗಳಿಗಿಂತ ಕಡಿಮೆ ಹಾಲು ಕುಡಿಯುತ್ತದೆ. ಇದರಿಂದಾಗಿ ಅದರ ಬದುಕುಳಿಯುವ ನಿರೀಕ್ಷೆ ಕಡಿಮೆಯಾಗುತ್ತದೆ ಮತ್ತು ಅಂತಿಮವಾಗಿ ಅಂತಹ ಮರಿಗಳು ದೀರ್ಘಕಾಲ ಬದುಕುವುದಿಲ್ಲ” ಎಂದು ಇಲಾಖೆ ಹೇಳಿರುವುದಾಗಿ ಹಿಂದೂ ವರದಿ ಮಾಡಿದೆ.

ಆಫ್ರಿಕಾದ ಚೀತಾಗಳು ಕಾಡಿನಲ್ಲಿ ವಾಸಿಸುವಾಗ ಚಿರತೆ ಮರಿಗಳು 10% ರಷ್ಟು ಬದುಕುಳಿಯುವ ಪ್ರಮಾಣವನ್ನು ಹೊಂದಿವೆ. 10 ಚೀತಾ ಮರಿಗಳಲ್ಲಿ 1 ಮಾತ್ರ ಕಾಡಿನಲ್ಲಿ ಪ್ರೌಢಾವಸ್ಥೆಗೆ ಬರುತ್ತವೆ” ಎಂದು ಅರಣ್ಯ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಕಳೆದ ವಾರ, ಸುಪ್ರೀಂ ಕೋರ್ಟ್ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು ಮತ್ತು ಚೀತಾಗಳು ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಸಲು ಕೇಂದ್ರ ಸರ್ಕಾರಕ್ಕೆ ಹೇಳಿತು. ಸಾವಿನ ಬಗ್ಗೆ ತಜ್ಞರ ಅಭಿಪ್ರಾಯಗಳು ಮತ್ತು ಸುದ್ದಿ ಲೇಖನಗಳನ್ನು ಉಲ್ಲೇಖಿಸಿದ ನ್ಯಾಯಾಲಯ, ಕುನೋ ರಾಷ್ಟ್ರೀಯ ಉದ್ಯಾನವನವು ಹಲವಾರು ಚೀತಾಗಳಿಗೆ ಸ್ಥಳಾವಕಾಶ ಕಲ್ಪಿಸಲು ಸಾಕಾಗುವುದಿಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...