Homeಮುಖಪುಟದ.ಆಫ್ರಿಕಾ, ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಚೀತಾ ಮರಿ ಸಾವು; 2 ತಿಂಗಳೊಳಗೆ 4 ಚೀತಾಗಳ ಸಾವು

ದ.ಆಫ್ರಿಕಾ, ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಚೀತಾ ಮರಿ ಸಾವು; 2 ತಿಂಗಳೊಳಗೆ 4 ಚೀತಾಗಳ ಸಾವು

- Advertisement -
- Advertisement -

ಮಂಗಳವಾರ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ತಿಂಗಳ ಚೀತಾ ಮರಿ ಸಾವನ್ನಪ್ಪಿದೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜ್ವಾಲಾ ಎಂಬ ಹೆಣ್ಣು ಚೀತಾಗೆ ಜನಿಸಿದ ನಾಲ್ಕು ಮರಿಗಳಲ್ಲಿ ಒಂದು ಮರಿ ಸಾವನ್ನಪ್ಪಿದೆ.ಇದು ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಗೊಂಡ 20 ಚೀತಾಗಳಲ್ಲಿ ಒಂದಾಗಿದೆ.

ಮರಿಯ ಸಾವಿನೊಂದಿಗೆ ಉದ್ಯಾನವನದಲ್ಲಿ ಎರಡು ತಿಂಗಳೊಳಗೆ ನಾಲ್ಕು ಚೀತಾಗಳು ಸಾವನ್ನಪ್ಪಿವೆ. ಮೊದಲ ಚೀತಾ ಸಶಾ ಮಾರ್ಚ್ 27 ರಂದು ಮೂತ್ರಪಿಂಡದ ಕಾಯಿಲೆಯಿಂದ ಸಾವನ್ನಪ್ಪಿತ್ತು. ಎರಡನೇ ಚೀತಾ ಉದಯ್ ಏಪ್ರಿಲ್ 24 ರಂದು ಕಾರ್ಡಿಯೋ-ಪಲ್ಮನರಿ ವೈಫಲ್ಯದಿಂದ ಸಾವನ್ನಪ್ಪಿತು. ಮೂರನೇ ಚೀತಾ ದಕ್ಷ ಮೇ 9 ರಂದು ಸಂಯೋಗದ ಪ್ರಯತ್ನದಲ್ಲಿ ಸಾವನ್ನಪ್ಪಿತು.

ಈ ಬಗ್ಗೆ ಮಂಗಳವಾರ ಮಾಹಿತಿ ನೀಡಿದ ವನ್ಯಜೀವಿ ಅಧಿಕಾರಿಗಳು, ”ಜ್ವಾಲಾ ತನ್ನ ಎಲ್ಲಾ ಮರಿಗಳೊಂದಿಗೆ  ಒಂದು ಸ್ಥಾಳದಲ್ಲಿ ಕಾಣಿಸಿಕೊಂಡಿದ್ದಾಳೆ. ಆದರೆ, ಆನಂತರ ಜ್ವಾಲಾ ನಡೆಯಲು ಪ್ರಾರಂಭಿಸಿದಾಗ, ನಾಲ್ಕನೇ ಮರಿ ಅದರ ಸ್ಥಳದಲ್ಲಿಯೇ ಮಲಗಿತ್ತು” ಎಂದು ಅವರು ಹೇಳಿದರು.

”ಸ್ವಲ್ಪ ಸಮಯದ ನಂತರ, ನಾಲ್ಕನೇ ಮರಿಯನ್ನು ಗಮಣಿಸಲಾಯಿತು. ಈ ಮರಿಯು ಎದ್ದೇಳಲು ಸಾಧ್ಯವಾಗದೆ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿತು ಮತ್ತು ಮೇಲ್ವಿಚಾರಣಾ ತಂಡವನ್ನು ನೋಡಿದ ನಂತರ ತಲೆ ಎತ್ತಲು ಪ್ರಯತ್ನಿಸಿತು” ಎಂದು ಅರಣ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

”ಈ ಚೀತಾ ಮರಿ ಸಾವಿಗೆ ಅಶಕ್ತತೆ ಕಾರಣವಾಗಿರಬಹುದು. ಎರಡು ತಿಂಗಳ ಮರಿಯು ತುಂಬಾ ದುರ್ಬಲವಾಗಿತ್ತು. ಸಾಮಾನ್ಯವಾಗಿ ದುರ್ಬಲ ಚೀತಾ ಮರಿಯು ಇತರ ಮರಿಗಳಿಗಿಂತ ಕಡಿಮೆ ಹಾಲು ಕುಡಿಯುತ್ತದೆ. ಇದರಿಂದಾಗಿ ಅದರ ಬದುಕುಳಿಯುವ ನಿರೀಕ್ಷೆ ಕಡಿಮೆಯಾಗುತ್ತದೆ ಮತ್ತು ಅಂತಿಮವಾಗಿ ಅಂತಹ ಮರಿಗಳು ದೀರ್ಘಕಾಲ ಬದುಕುವುದಿಲ್ಲ” ಎಂದು ಇಲಾಖೆ ಹೇಳಿರುವುದಾಗಿ ಹಿಂದೂ ವರದಿ ಮಾಡಿದೆ.

ಆಫ್ರಿಕಾದ ಚೀತಾಗಳು ಕಾಡಿನಲ್ಲಿ ವಾಸಿಸುವಾಗ ಚಿರತೆ ಮರಿಗಳು 10% ರಷ್ಟು ಬದುಕುಳಿಯುವ ಪ್ರಮಾಣವನ್ನು ಹೊಂದಿವೆ. 10 ಚೀತಾ ಮರಿಗಳಲ್ಲಿ 1 ಮಾತ್ರ ಕಾಡಿನಲ್ಲಿ ಪ್ರೌಢಾವಸ್ಥೆಗೆ ಬರುತ್ತವೆ” ಎಂದು ಅರಣ್ಯ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಕಳೆದ ವಾರ, ಸುಪ್ರೀಂ ಕೋರ್ಟ್ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು ಮತ್ತು ಚೀತಾಗಳು ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಸಲು ಕೇಂದ್ರ ಸರ್ಕಾರಕ್ಕೆ ಹೇಳಿತು. ಸಾವಿನ ಬಗ್ಗೆ ತಜ್ಞರ ಅಭಿಪ್ರಾಯಗಳು ಮತ್ತು ಸುದ್ದಿ ಲೇಖನಗಳನ್ನು ಉಲ್ಲೇಖಿಸಿದ ನ್ಯಾಯಾಲಯ, ಕುನೋ ರಾಷ್ಟ್ರೀಯ ಉದ್ಯಾನವನವು ಹಲವಾರು ಚೀತಾಗಳಿಗೆ ಸ್ಥಳಾವಕಾಶ ಕಲ್ಪಿಸಲು ಸಾಕಾಗುವುದಿಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...