Homeಮುಖಪುಟದ.ಆಫ್ರಿಕಾ, ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಚೀತಾ ಮರಿ ಸಾವು; 2 ತಿಂಗಳೊಳಗೆ 4 ಚೀತಾಗಳ ಸಾವು

ದ.ಆಫ್ರಿಕಾ, ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಚೀತಾ ಮರಿ ಸಾವು; 2 ತಿಂಗಳೊಳಗೆ 4 ಚೀತಾಗಳ ಸಾವು

- Advertisement -
- Advertisement -

ಮಂಗಳವಾರ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ತಿಂಗಳ ಚೀತಾ ಮರಿ ಸಾವನ್ನಪ್ಪಿದೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜ್ವಾಲಾ ಎಂಬ ಹೆಣ್ಣು ಚೀತಾಗೆ ಜನಿಸಿದ ನಾಲ್ಕು ಮರಿಗಳಲ್ಲಿ ಒಂದು ಮರಿ ಸಾವನ್ನಪ್ಪಿದೆ.ಇದು ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಗೊಂಡ 20 ಚೀತಾಗಳಲ್ಲಿ ಒಂದಾಗಿದೆ.

ಮರಿಯ ಸಾವಿನೊಂದಿಗೆ ಉದ್ಯಾನವನದಲ್ಲಿ ಎರಡು ತಿಂಗಳೊಳಗೆ ನಾಲ್ಕು ಚೀತಾಗಳು ಸಾವನ್ನಪ್ಪಿವೆ. ಮೊದಲ ಚೀತಾ ಸಶಾ ಮಾರ್ಚ್ 27 ರಂದು ಮೂತ್ರಪಿಂಡದ ಕಾಯಿಲೆಯಿಂದ ಸಾವನ್ನಪ್ಪಿತ್ತು. ಎರಡನೇ ಚೀತಾ ಉದಯ್ ಏಪ್ರಿಲ್ 24 ರಂದು ಕಾರ್ಡಿಯೋ-ಪಲ್ಮನರಿ ವೈಫಲ್ಯದಿಂದ ಸಾವನ್ನಪ್ಪಿತು. ಮೂರನೇ ಚೀತಾ ದಕ್ಷ ಮೇ 9 ರಂದು ಸಂಯೋಗದ ಪ್ರಯತ್ನದಲ್ಲಿ ಸಾವನ್ನಪ್ಪಿತು.

ಈ ಬಗ್ಗೆ ಮಂಗಳವಾರ ಮಾಹಿತಿ ನೀಡಿದ ವನ್ಯಜೀವಿ ಅಧಿಕಾರಿಗಳು, ”ಜ್ವಾಲಾ ತನ್ನ ಎಲ್ಲಾ ಮರಿಗಳೊಂದಿಗೆ  ಒಂದು ಸ್ಥಾಳದಲ್ಲಿ ಕಾಣಿಸಿಕೊಂಡಿದ್ದಾಳೆ. ಆದರೆ, ಆನಂತರ ಜ್ವಾಲಾ ನಡೆಯಲು ಪ್ರಾರಂಭಿಸಿದಾಗ, ನಾಲ್ಕನೇ ಮರಿ ಅದರ ಸ್ಥಳದಲ್ಲಿಯೇ ಮಲಗಿತ್ತು” ಎಂದು ಅವರು ಹೇಳಿದರು.

”ಸ್ವಲ್ಪ ಸಮಯದ ನಂತರ, ನಾಲ್ಕನೇ ಮರಿಯನ್ನು ಗಮಣಿಸಲಾಯಿತು. ಈ ಮರಿಯು ಎದ್ದೇಳಲು ಸಾಧ್ಯವಾಗದೆ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿತು ಮತ್ತು ಮೇಲ್ವಿಚಾರಣಾ ತಂಡವನ್ನು ನೋಡಿದ ನಂತರ ತಲೆ ಎತ್ತಲು ಪ್ರಯತ್ನಿಸಿತು” ಎಂದು ಅರಣ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

”ಈ ಚೀತಾ ಮರಿ ಸಾವಿಗೆ ಅಶಕ್ತತೆ ಕಾರಣವಾಗಿರಬಹುದು. ಎರಡು ತಿಂಗಳ ಮರಿಯು ತುಂಬಾ ದುರ್ಬಲವಾಗಿತ್ತು. ಸಾಮಾನ್ಯವಾಗಿ ದುರ್ಬಲ ಚೀತಾ ಮರಿಯು ಇತರ ಮರಿಗಳಿಗಿಂತ ಕಡಿಮೆ ಹಾಲು ಕುಡಿಯುತ್ತದೆ. ಇದರಿಂದಾಗಿ ಅದರ ಬದುಕುಳಿಯುವ ನಿರೀಕ್ಷೆ ಕಡಿಮೆಯಾಗುತ್ತದೆ ಮತ್ತು ಅಂತಿಮವಾಗಿ ಅಂತಹ ಮರಿಗಳು ದೀರ್ಘಕಾಲ ಬದುಕುವುದಿಲ್ಲ” ಎಂದು ಇಲಾಖೆ ಹೇಳಿರುವುದಾಗಿ ಹಿಂದೂ ವರದಿ ಮಾಡಿದೆ.

ಆಫ್ರಿಕಾದ ಚೀತಾಗಳು ಕಾಡಿನಲ್ಲಿ ವಾಸಿಸುವಾಗ ಚಿರತೆ ಮರಿಗಳು 10% ರಷ್ಟು ಬದುಕುಳಿಯುವ ಪ್ರಮಾಣವನ್ನು ಹೊಂದಿವೆ. 10 ಚೀತಾ ಮರಿಗಳಲ್ಲಿ 1 ಮಾತ್ರ ಕಾಡಿನಲ್ಲಿ ಪ್ರೌಢಾವಸ್ಥೆಗೆ ಬರುತ್ತವೆ” ಎಂದು ಅರಣ್ಯ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಕಳೆದ ವಾರ, ಸುಪ್ರೀಂ ಕೋರ್ಟ್ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು ಮತ್ತು ಚೀತಾಗಳು ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಸಲು ಕೇಂದ್ರ ಸರ್ಕಾರಕ್ಕೆ ಹೇಳಿತು. ಸಾವಿನ ಬಗ್ಗೆ ತಜ್ಞರ ಅಭಿಪ್ರಾಯಗಳು ಮತ್ತು ಸುದ್ದಿ ಲೇಖನಗಳನ್ನು ಉಲ್ಲೇಖಿಸಿದ ನ್ಯಾಯಾಲಯ, ಕುನೋ ರಾಷ್ಟ್ರೀಯ ಉದ್ಯಾನವನವು ಹಲವಾರು ಚೀತಾಗಳಿಗೆ ಸ್ಥಳಾವಕಾಶ ಕಲ್ಪಿಸಲು ಸಾಕಾಗುವುದಿಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...