HomeUncategorizedFact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ...

Fact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ ನಿಜವಲ್ಲ

- Advertisement -
- Advertisement -

COVID-19 ಪರೀಕ್ಷಿಸಲು ನಿರಾಕರಿಸಿದ ವೈದ್ಯೆಗೆ ಸ್ಥಳೀಯ ಮುಸ್ಲಿಮರು ಕಲ್ಲು ತೂರಿದ್ದರಿಂದ ಉತ್ತರ ಪ್ರದೇಶದ ಮಹಿಳಾ ವೈದ್ಯೆಯೊಬ್ಬಳು ಸಾವನ್ನಪ್ಪಿದ್ದಾರೆ ಎಂದು ಹೇಳುವ ಹಲವಾರು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್‌ ಆಗಿವೆ. ಆದರೆ ಆ ಸುದ್ದಿ ಸುಳ್ಳಾಗಿದ್ದು ವೈರಲ್‌ ಫೋಟೊದಲ್ಲಿರುವ ಮಹಿಳೆಯರು ಮಧ್ಯಪ್ರದೇಶ ಫಾರ್ಮಾಸಿಸ್ಟ್‌ ಆಗಿದ್ದು ಅವರು ಮಿದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಮಹಿಳೆಯೊಬ್ಬಳು ಬಾಯಿಯಲ್ಲಿ ಇಂಟ್ಯೂಬೇಶನ್ ಟ್ಯೂಬ್ ಇಟ್ಟುಕೊಂಡಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಕೋಮು ಬಣ್ಣವನ್ನು ನೀಡಲಾಗುತ್ತಿದೆ.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಮುಸ್ಲಿಮರು ಕಲ್ಲು ತೂರಾಟದಿಂದ ಗಾಯಗೊಂಡ ವೈದ್ಯ ಮಹಿಳೆ ಈಗ ಮೃತಪಟ್ಟಿದ್ದಾಳೆ. ಅಲ್ಲಿ ಅವರು ಶಂಕಿತ COVID-19 ರೋಗಿಗಳನ್ನು ಪರೀಕ್ಷಿಸಲು ಹೋಗಿದ್ದರು ಎಂದು ಒಂದು ಪೋಸ್ಟ್‌ನಲ್ಲಿ ಬರೆದಿದ್ದರೆ ಮತ್ತೊಂದು ಪೋಸ್ಟ್‌ ಈ ಕೆಳಗಿನಂತಿದೆ.

‘ಸ್ನೇಹಿತರೇ, ದುಃಖದ ಸುದ್ದಿ ಇದೆ. ಡಾಕ್ಟರ್ ವಂದನಾ ತಿವಾರಿ ಇನ್ನಿಲ್ಲ. ಕೊರೊನಾವೈರಸ್ ರೋಗಿಗಳನ್ನು ಪರೀಕ್ಷಿಸಲು ಅವರು ಕಳೆದ ವಾರ ಉತ್ತರ ಪ್ರದೇಶಕ್ಕೆ ಹೋಗಿದ್ದರು ಆದರೆ ಜಿಹಾದಿಗಳು ಅವಳ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಂಡರು. ಇತರರ ಪ್ರಾಣ ಉಳಿಸಲು ಹೋರಾಡುತ್ತಿದ್ದ ಆ ಯೋಧೆ ಏಳು ದಿನಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಇಲ್ಲವಾಗಿದ್ದಾರೆ. ಸಂತಾಪಗಳು’.

ಮಧ್ಯಪ್ರದೇಶದ ಇಂದೋರ್‌ನಲ್ಲಿ 2020ರ ಏಪ್ರಿಲ್ 2 ರಂದು ಆರೋಗ್ಯ ಅಧಿಕಾರಿಗಳ ಐದು ಸದಸ್ಯರ ತಂಡವು ಕೊರೊನಾ ಪರೀಕ್ಷೆಗಾಗಿ ಭೇಟಿ ನೀಡಿತ್ತು. ಇಂದೋರ್‌ನ ಟಾಟ್ ಪ್ಯಾಟಿ ಬಖಾಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆ ಸುದ್ದಿಗೂ ಈ ಸುದ್ದಿಗೂ ಗೊಂದಲ ಉಂಟು ಮಾಡಿರುವುದರಿಂದ ಬಹಳಷ್ಟು ಜನ ಈ ಸುದ್ದಿಯನ್ನು ನಿಜವೆಂದು ನಂಬಿಬಿಟ್ಟಿದ್ದಾರೆ. ಹಾಗಾಗಿಯೇ ಈ ಪೋಸ್ಟ್‌ಗಳನ್ನು ಸಹ ಸಾವಿರಾರು ಜನ ಲೈಕ್‌ ಮತ್ತು ಷೇರ್‌ ಮಾಡಿದ್ದಾರೆ.

ಸತ್ಯವೇನು?

ಚಿತ್ರದಲ್ಲಿರುವ ಮಹಿಳೆ ವಂದನಾ ತಿವಾರಿ ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ  ಔಷಧಿ ಅಧಿಕಾರಿಯಾಗಿದ್ದರು (pharmacist) ಎಂದು ಸ್ಥಳೀಯ ಪತ್ರಿಕೆ ಭೋಪಾಲ್ ಸಮಾಚಾರ್‌ನಲ್ಲಿನ ಲೇಖನವೊಂದು ವರದಿ ಮಾಡಿದೆ. ತಿವಾರಿ ಅವರನ್ನು ಏಪ್ರಿಲ್ 1, 2020 ರಂದು ಗ್ವಾಲಿಯರ್‌ನ ಬಿರ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಏಪ್ರಿಲ್ 7 ರಂದು ನಿಧನರಾದರು ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಮಿದುಳಿನ ರಕ್ತಸ್ರಾವವು ಅವಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ತಿವಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾರ್ಚ್ 31 ರವರೆಗೆ ಕರ್ತವ್ಯದಲ್ಲಿದ್ದಾರೆ ಎಂದು ಆಸ್ಪತ್ರೆಯ ಡೀನ್ ಇಲಾ ಗುಜರಿಯಾ ತಿಳಿಸಿದ್ದಾರೆ. “ಗ್ವಾಲಿಯರ್ನಲ್ಲಿ ಪ್ರವೇಶ ಪಡೆದಿದ್ದರಿಂದ ಆಕೆಯ ಚಿಕಿತ್ಸೆಯ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಏಪ್ರಿಲ್ 1 ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಹಾಗಾಗಿ  ವಂದನಾ ತಿವಾರಿಗೆ ಯುಪಿ ಗ್ರಾಮವೊಂದರಲ್ಲಿ ಮುಸ್ಲಿಮರಿಂದ ಹಲ್ಲೆ ನಡೆಸಲಾಗಿದೆ ಎಂಬ ಹೇಳಿಕೆ ಸುಳ್ಳು ಎಂದು ಘಟನೆಗಳ ಟೈಮ್‌ಲೈನ್ ತೋರಿಸುತ್ತದೆ.

ಪೊಲೀಸ್ ವರಿಷ್ಠಾಧಿಕಾರಿ ಶಿವಪುರಿ ರಾಜೇಶ್ ಚಂದೇಲ್ “ಆಕೆಯನ್ನು ಶಿವಪುರಿ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಗೆ ಗ್ವಾಲಿಯರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಹ ನಡೆಸಲಾಯಿತು. ಆದರೂ ಬದುಕುಳಿಯಲಿಲ್ಲ. ಇನ್ನು ಆಕೆ ಉತ್ತರ ಪ್ರದೇಶದಲ್ಲಿ ಹಲ್ಲೆಗೊಳಗಾಗಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದಿದ್ದಾರೆ.

ಯುಪಿ ಪೊಲೀಸರ ಅಧಿಕೃತ ಫ್ಯಾಕ್ಟ್ ಚೆಕ್ ಹ್ಯಾಂಡಲ್‌ ಸಹ ಟ್ವೀಟ್ ಮಾಡಿ, ವಂದನಾ ತಿವಾರಿ ಅವರ ಸಾವಿಗೆ ಉತ್ತರ ಪ್ರದೇಶದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಧ್ಯಪ್ರದೇಶ ಸರ್ಕಾರದ ಪಿಆರ್ ಇಲಾಖೆಯು ವಂದನಾ ತಿವಾರಿ ಸಾವಿನ ಬಗ್ಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಕಚೇರಿ ಶಿವಪುರಿ ನೀಡಿದ ಹೇಳಿಕೆಯನ್ನು ಟ್ವೀಟ್ ಮಾಡಿದೆ. ವೈರಲ್ ಪೋಸ್ಟ್‌ಗಳಲ್ಲಿ ಹೇಳಿರುವಂತೆ ಕಲ್ಲು ತೂರಾಟದ ಘಟನೆಯ ಬಗ್ಗೆ ಹೇಳಿಕೆಯಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ.

ಇದು ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ತಪ್ಪು ಮಾಹಿತಿ ಹರಡುತ್ತಿರುವ ಇತ್ತೀಚಿನ ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...