HomeUncategorizedFact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ...

Fact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ ನಿಜವಲ್ಲ

- Advertisement -
- Advertisement -

COVID-19 ಪರೀಕ್ಷಿಸಲು ನಿರಾಕರಿಸಿದ ವೈದ್ಯೆಗೆ ಸ್ಥಳೀಯ ಮುಸ್ಲಿಮರು ಕಲ್ಲು ತೂರಿದ್ದರಿಂದ ಉತ್ತರ ಪ್ರದೇಶದ ಮಹಿಳಾ ವೈದ್ಯೆಯೊಬ್ಬಳು ಸಾವನ್ನಪ್ಪಿದ್ದಾರೆ ಎಂದು ಹೇಳುವ ಹಲವಾರು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್‌ ಆಗಿವೆ. ಆದರೆ ಆ ಸುದ್ದಿ ಸುಳ್ಳಾಗಿದ್ದು ವೈರಲ್‌ ಫೋಟೊದಲ್ಲಿರುವ ಮಹಿಳೆಯರು ಮಧ್ಯಪ್ರದೇಶ ಫಾರ್ಮಾಸಿಸ್ಟ್‌ ಆಗಿದ್ದು ಅವರು ಮಿದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಮಹಿಳೆಯೊಬ್ಬಳು ಬಾಯಿಯಲ್ಲಿ ಇಂಟ್ಯೂಬೇಶನ್ ಟ್ಯೂಬ್ ಇಟ್ಟುಕೊಂಡಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಕೋಮು ಬಣ್ಣವನ್ನು ನೀಡಲಾಗುತ್ತಿದೆ.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಮುಸ್ಲಿಮರು ಕಲ್ಲು ತೂರಾಟದಿಂದ ಗಾಯಗೊಂಡ ವೈದ್ಯ ಮಹಿಳೆ ಈಗ ಮೃತಪಟ್ಟಿದ್ದಾಳೆ. ಅಲ್ಲಿ ಅವರು ಶಂಕಿತ COVID-19 ರೋಗಿಗಳನ್ನು ಪರೀಕ್ಷಿಸಲು ಹೋಗಿದ್ದರು ಎಂದು ಒಂದು ಪೋಸ್ಟ್‌ನಲ್ಲಿ ಬರೆದಿದ್ದರೆ ಮತ್ತೊಂದು ಪೋಸ್ಟ್‌ ಈ ಕೆಳಗಿನಂತಿದೆ.

‘ಸ್ನೇಹಿತರೇ, ದುಃಖದ ಸುದ್ದಿ ಇದೆ. ಡಾಕ್ಟರ್ ವಂದನಾ ತಿವಾರಿ ಇನ್ನಿಲ್ಲ. ಕೊರೊನಾವೈರಸ್ ರೋಗಿಗಳನ್ನು ಪರೀಕ್ಷಿಸಲು ಅವರು ಕಳೆದ ವಾರ ಉತ್ತರ ಪ್ರದೇಶಕ್ಕೆ ಹೋಗಿದ್ದರು ಆದರೆ ಜಿಹಾದಿಗಳು ಅವಳ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಂಡರು. ಇತರರ ಪ್ರಾಣ ಉಳಿಸಲು ಹೋರಾಡುತ್ತಿದ್ದ ಆ ಯೋಧೆ ಏಳು ದಿನಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಇಲ್ಲವಾಗಿದ್ದಾರೆ. ಸಂತಾಪಗಳು’.

ಮಧ್ಯಪ್ರದೇಶದ ಇಂದೋರ್‌ನಲ್ಲಿ 2020ರ ಏಪ್ರಿಲ್ 2 ರಂದು ಆರೋಗ್ಯ ಅಧಿಕಾರಿಗಳ ಐದು ಸದಸ್ಯರ ತಂಡವು ಕೊರೊನಾ ಪರೀಕ್ಷೆಗಾಗಿ ಭೇಟಿ ನೀಡಿತ್ತು. ಇಂದೋರ್‌ನ ಟಾಟ್ ಪ್ಯಾಟಿ ಬಖಾಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆ ಸುದ್ದಿಗೂ ಈ ಸುದ್ದಿಗೂ ಗೊಂದಲ ಉಂಟು ಮಾಡಿರುವುದರಿಂದ ಬಹಳಷ್ಟು ಜನ ಈ ಸುದ್ದಿಯನ್ನು ನಿಜವೆಂದು ನಂಬಿಬಿಟ್ಟಿದ್ದಾರೆ. ಹಾಗಾಗಿಯೇ ಈ ಪೋಸ್ಟ್‌ಗಳನ್ನು ಸಹ ಸಾವಿರಾರು ಜನ ಲೈಕ್‌ ಮತ್ತು ಷೇರ್‌ ಮಾಡಿದ್ದಾರೆ.

ಸತ್ಯವೇನು?

ಚಿತ್ರದಲ್ಲಿರುವ ಮಹಿಳೆ ವಂದನಾ ತಿವಾರಿ ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ  ಔಷಧಿ ಅಧಿಕಾರಿಯಾಗಿದ್ದರು (pharmacist) ಎಂದು ಸ್ಥಳೀಯ ಪತ್ರಿಕೆ ಭೋಪಾಲ್ ಸಮಾಚಾರ್‌ನಲ್ಲಿನ ಲೇಖನವೊಂದು ವರದಿ ಮಾಡಿದೆ. ತಿವಾರಿ ಅವರನ್ನು ಏಪ್ರಿಲ್ 1, 2020 ರಂದು ಗ್ವಾಲಿಯರ್‌ನ ಬಿರ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಏಪ್ರಿಲ್ 7 ರಂದು ನಿಧನರಾದರು ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಮಿದುಳಿನ ರಕ್ತಸ್ರಾವವು ಅವಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ತಿವಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾರ್ಚ್ 31 ರವರೆಗೆ ಕರ್ತವ್ಯದಲ್ಲಿದ್ದಾರೆ ಎಂದು ಆಸ್ಪತ್ರೆಯ ಡೀನ್ ಇಲಾ ಗುಜರಿಯಾ ತಿಳಿಸಿದ್ದಾರೆ. “ಗ್ವಾಲಿಯರ್ನಲ್ಲಿ ಪ್ರವೇಶ ಪಡೆದಿದ್ದರಿಂದ ಆಕೆಯ ಚಿಕಿತ್ಸೆಯ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಏಪ್ರಿಲ್ 1 ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಹಾಗಾಗಿ  ವಂದನಾ ತಿವಾರಿಗೆ ಯುಪಿ ಗ್ರಾಮವೊಂದರಲ್ಲಿ ಮುಸ್ಲಿಮರಿಂದ ಹಲ್ಲೆ ನಡೆಸಲಾಗಿದೆ ಎಂಬ ಹೇಳಿಕೆ ಸುಳ್ಳು ಎಂದು ಘಟನೆಗಳ ಟೈಮ್‌ಲೈನ್ ತೋರಿಸುತ್ತದೆ.

ಪೊಲೀಸ್ ವರಿಷ್ಠಾಧಿಕಾರಿ ಶಿವಪುರಿ ರಾಜೇಶ್ ಚಂದೇಲ್ “ಆಕೆಯನ್ನು ಶಿವಪುರಿ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಗೆ ಗ್ವಾಲಿಯರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಹ ನಡೆಸಲಾಯಿತು. ಆದರೂ ಬದುಕುಳಿಯಲಿಲ್ಲ. ಇನ್ನು ಆಕೆ ಉತ್ತರ ಪ್ರದೇಶದಲ್ಲಿ ಹಲ್ಲೆಗೊಳಗಾಗಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದಿದ್ದಾರೆ.

ಯುಪಿ ಪೊಲೀಸರ ಅಧಿಕೃತ ಫ್ಯಾಕ್ಟ್ ಚೆಕ್ ಹ್ಯಾಂಡಲ್‌ ಸಹ ಟ್ವೀಟ್ ಮಾಡಿ, ವಂದನಾ ತಿವಾರಿ ಅವರ ಸಾವಿಗೆ ಉತ್ತರ ಪ್ರದೇಶದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಧ್ಯಪ್ರದೇಶ ಸರ್ಕಾರದ ಪಿಆರ್ ಇಲಾಖೆಯು ವಂದನಾ ತಿವಾರಿ ಸಾವಿನ ಬಗ್ಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಕಚೇರಿ ಶಿವಪುರಿ ನೀಡಿದ ಹೇಳಿಕೆಯನ್ನು ಟ್ವೀಟ್ ಮಾಡಿದೆ. ವೈರಲ್ ಪೋಸ್ಟ್‌ಗಳಲ್ಲಿ ಹೇಳಿರುವಂತೆ ಕಲ್ಲು ತೂರಾಟದ ಘಟನೆಯ ಬಗ್ಗೆ ಹೇಳಿಕೆಯಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ.

ಇದು ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ತಪ್ಪು ಮಾಹಿತಿ ಹರಡುತ್ತಿರುವ ಇತ್ತೀಚಿನ ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...