HomeUncategorizedFact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ...

Fact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ ನಿಜವಲ್ಲ

- Advertisement -
- Advertisement -

COVID-19 ಪರೀಕ್ಷಿಸಲು ನಿರಾಕರಿಸಿದ ವೈದ್ಯೆಗೆ ಸ್ಥಳೀಯ ಮುಸ್ಲಿಮರು ಕಲ್ಲು ತೂರಿದ್ದರಿಂದ ಉತ್ತರ ಪ್ರದೇಶದ ಮಹಿಳಾ ವೈದ್ಯೆಯೊಬ್ಬಳು ಸಾವನ್ನಪ್ಪಿದ್ದಾರೆ ಎಂದು ಹೇಳುವ ಹಲವಾರು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್‌ ಆಗಿವೆ. ಆದರೆ ಆ ಸುದ್ದಿ ಸುಳ್ಳಾಗಿದ್ದು ವೈರಲ್‌ ಫೋಟೊದಲ್ಲಿರುವ ಮಹಿಳೆಯರು ಮಧ್ಯಪ್ರದೇಶ ಫಾರ್ಮಾಸಿಸ್ಟ್‌ ಆಗಿದ್ದು ಅವರು ಮಿದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಮಹಿಳೆಯೊಬ್ಬಳು ಬಾಯಿಯಲ್ಲಿ ಇಂಟ್ಯೂಬೇಶನ್ ಟ್ಯೂಬ್ ಇಟ್ಟುಕೊಂಡಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಕೋಮು ಬಣ್ಣವನ್ನು ನೀಡಲಾಗುತ್ತಿದೆ.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಮುಸ್ಲಿಮರು ಕಲ್ಲು ತೂರಾಟದಿಂದ ಗಾಯಗೊಂಡ ವೈದ್ಯ ಮಹಿಳೆ ಈಗ ಮೃತಪಟ್ಟಿದ್ದಾಳೆ. ಅಲ್ಲಿ ಅವರು ಶಂಕಿತ COVID-19 ರೋಗಿಗಳನ್ನು ಪರೀಕ್ಷಿಸಲು ಹೋಗಿದ್ದರು ಎಂದು ಒಂದು ಪೋಸ್ಟ್‌ನಲ್ಲಿ ಬರೆದಿದ್ದರೆ ಮತ್ತೊಂದು ಪೋಸ್ಟ್‌ ಈ ಕೆಳಗಿನಂತಿದೆ.

‘ಸ್ನೇಹಿತರೇ, ದುಃಖದ ಸುದ್ದಿ ಇದೆ. ಡಾಕ್ಟರ್ ವಂದನಾ ತಿವಾರಿ ಇನ್ನಿಲ್ಲ. ಕೊರೊನಾವೈರಸ್ ರೋಗಿಗಳನ್ನು ಪರೀಕ್ಷಿಸಲು ಅವರು ಕಳೆದ ವಾರ ಉತ್ತರ ಪ್ರದೇಶಕ್ಕೆ ಹೋಗಿದ್ದರು ಆದರೆ ಜಿಹಾದಿಗಳು ಅವಳ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಂಡರು. ಇತರರ ಪ್ರಾಣ ಉಳಿಸಲು ಹೋರಾಡುತ್ತಿದ್ದ ಆ ಯೋಧೆ ಏಳು ದಿನಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಇಲ್ಲವಾಗಿದ್ದಾರೆ. ಸಂತಾಪಗಳು’.

ಮಧ್ಯಪ್ರದೇಶದ ಇಂದೋರ್‌ನಲ್ಲಿ 2020ರ ಏಪ್ರಿಲ್ 2 ರಂದು ಆರೋಗ್ಯ ಅಧಿಕಾರಿಗಳ ಐದು ಸದಸ್ಯರ ತಂಡವು ಕೊರೊನಾ ಪರೀಕ್ಷೆಗಾಗಿ ಭೇಟಿ ನೀಡಿತ್ತು. ಇಂದೋರ್‌ನ ಟಾಟ್ ಪ್ಯಾಟಿ ಬಖಾಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆ ಸುದ್ದಿಗೂ ಈ ಸುದ್ದಿಗೂ ಗೊಂದಲ ಉಂಟು ಮಾಡಿರುವುದರಿಂದ ಬಹಳಷ್ಟು ಜನ ಈ ಸುದ್ದಿಯನ್ನು ನಿಜವೆಂದು ನಂಬಿಬಿಟ್ಟಿದ್ದಾರೆ. ಹಾಗಾಗಿಯೇ ಈ ಪೋಸ್ಟ್‌ಗಳನ್ನು ಸಹ ಸಾವಿರಾರು ಜನ ಲೈಕ್‌ ಮತ್ತು ಷೇರ್‌ ಮಾಡಿದ್ದಾರೆ.

ಸತ್ಯವೇನು?

ಚಿತ್ರದಲ್ಲಿರುವ ಮಹಿಳೆ ವಂದನಾ ತಿವಾರಿ ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ  ಔಷಧಿ ಅಧಿಕಾರಿಯಾಗಿದ್ದರು (pharmacist) ಎಂದು ಸ್ಥಳೀಯ ಪತ್ರಿಕೆ ಭೋಪಾಲ್ ಸಮಾಚಾರ್‌ನಲ್ಲಿನ ಲೇಖನವೊಂದು ವರದಿ ಮಾಡಿದೆ. ತಿವಾರಿ ಅವರನ್ನು ಏಪ್ರಿಲ್ 1, 2020 ರಂದು ಗ್ವಾಲಿಯರ್‌ನ ಬಿರ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಏಪ್ರಿಲ್ 7 ರಂದು ನಿಧನರಾದರು ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಮಿದುಳಿನ ರಕ್ತಸ್ರಾವವು ಅವಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ತಿವಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾರ್ಚ್ 31 ರವರೆಗೆ ಕರ್ತವ್ಯದಲ್ಲಿದ್ದಾರೆ ಎಂದು ಆಸ್ಪತ್ರೆಯ ಡೀನ್ ಇಲಾ ಗುಜರಿಯಾ ತಿಳಿಸಿದ್ದಾರೆ. “ಗ್ವಾಲಿಯರ್ನಲ್ಲಿ ಪ್ರವೇಶ ಪಡೆದಿದ್ದರಿಂದ ಆಕೆಯ ಚಿಕಿತ್ಸೆಯ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಏಪ್ರಿಲ್ 1 ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಹಾಗಾಗಿ  ವಂದನಾ ತಿವಾರಿಗೆ ಯುಪಿ ಗ್ರಾಮವೊಂದರಲ್ಲಿ ಮುಸ್ಲಿಮರಿಂದ ಹಲ್ಲೆ ನಡೆಸಲಾಗಿದೆ ಎಂಬ ಹೇಳಿಕೆ ಸುಳ್ಳು ಎಂದು ಘಟನೆಗಳ ಟೈಮ್‌ಲೈನ್ ತೋರಿಸುತ್ತದೆ.

ಪೊಲೀಸ್ ವರಿಷ್ಠಾಧಿಕಾರಿ ಶಿವಪುರಿ ರಾಜೇಶ್ ಚಂದೇಲ್ “ಆಕೆಯನ್ನು ಶಿವಪುರಿ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಗೆ ಗ್ವಾಲಿಯರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಹ ನಡೆಸಲಾಯಿತು. ಆದರೂ ಬದುಕುಳಿಯಲಿಲ್ಲ. ಇನ್ನು ಆಕೆ ಉತ್ತರ ಪ್ರದೇಶದಲ್ಲಿ ಹಲ್ಲೆಗೊಳಗಾಗಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದಿದ್ದಾರೆ.

ಯುಪಿ ಪೊಲೀಸರ ಅಧಿಕೃತ ಫ್ಯಾಕ್ಟ್ ಚೆಕ್ ಹ್ಯಾಂಡಲ್‌ ಸಹ ಟ್ವೀಟ್ ಮಾಡಿ, ವಂದನಾ ತಿವಾರಿ ಅವರ ಸಾವಿಗೆ ಉತ್ತರ ಪ್ರದೇಶದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಧ್ಯಪ್ರದೇಶ ಸರ್ಕಾರದ ಪಿಆರ್ ಇಲಾಖೆಯು ವಂದನಾ ತಿವಾರಿ ಸಾವಿನ ಬಗ್ಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಕಚೇರಿ ಶಿವಪುರಿ ನೀಡಿದ ಹೇಳಿಕೆಯನ್ನು ಟ್ವೀಟ್ ಮಾಡಿದೆ. ವೈರಲ್ ಪೋಸ್ಟ್‌ಗಳಲ್ಲಿ ಹೇಳಿರುವಂತೆ ಕಲ್ಲು ತೂರಾಟದ ಘಟನೆಯ ಬಗ್ಗೆ ಹೇಳಿಕೆಯಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ.

ಇದು ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ತಪ್ಪು ಮಾಹಿತಿ ಹರಡುತ್ತಿರುವ ಇತ್ತೀಚಿನ ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...