HomeUncategorizedFact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ...

Fact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ ನಿಜವಲ್ಲ

- Advertisement -
- Advertisement -

COVID-19 ಪರೀಕ್ಷಿಸಲು ನಿರಾಕರಿಸಿದ ವೈದ್ಯೆಗೆ ಸ್ಥಳೀಯ ಮುಸ್ಲಿಮರು ಕಲ್ಲು ತೂರಿದ್ದರಿಂದ ಉತ್ತರ ಪ್ರದೇಶದ ಮಹಿಳಾ ವೈದ್ಯೆಯೊಬ್ಬಳು ಸಾವನ್ನಪ್ಪಿದ್ದಾರೆ ಎಂದು ಹೇಳುವ ಹಲವಾರು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್‌ ಆಗಿವೆ. ಆದರೆ ಆ ಸುದ್ದಿ ಸುಳ್ಳಾಗಿದ್ದು ವೈರಲ್‌ ಫೋಟೊದಲ್ಲಿರುವ ಮಹಿಳೆಯರು ಮಧ್ಯಪ್ರದೇಶ ಫಾರ್ಮಾಸಿಸ್ಟ್‌ ಆಗಿದ್ದು ಅವರು ಮಿದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಮಹಿಳೆಯೊಬ್ಬಳು ಬಾಯಿಯಲ್ಲಿ ಇಂಟ್ಯೂಬೇಶನ್ ಟ್ಯೂಬ್ ಇಟ್ಟುಕೊಂಡಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಕೋಮು ಬಣ್ಣವನ್ನು ನೀಡಲಾಗುತ್ತಿದೆ.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಮುಸ್ಲಿಮರು ಕಲ್ಲು ತೂರಾಟದಿಂದ ಗಾಯಗೊಂಡ ವೈದ್ಯ ಮಹಿಳೆ ಈಗ ಮೃತಪಟ್ಟಿದ್ದಾಳೆ. ಅಲ್ಲಿ ಅವರು ಶಂಕಿತ COVID-19 ರೋಗಿಗಳನ್ನು ಪರೀಕ್ಷಿಸಲು ಹೋಗಿದ್ದರು ಎಂದು ಒಂದು ಪೋಸ್ಟ್‌ನಲ್ಲಿ ಬರೆದಿದ್ದರೆ ಮತ್ತೊಂದು ಪೋಸ್ಟ್‌ ಈ ಕೆಳಗಿನಂತಿದೆ.

‘ಸ್ನೇಹಿತರೇ, ದುಃಖದ ಸುದ್ದಿ ಇದೆ. ಡಾಕ್ಟರ್ ವಂದನಾ ತಿವಾರಿ ಇನ್ನಿಲ್ಲ. ಕೊರೊನಾವೈರಸ್ ರೋಗಿಗಳನ್ನು ಪರೀಕ್ಷಿಸಲು ಅವರು ಕಳೆದ ವಾರ ಉತ್ತರ ಪ್ರದೇಶಕ್ಕೆ ಹೋಗಿದ್ದರು ಆದರೆ ಜಿಹಾದಿಗಳು ಅವಳ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಂಡರು. ಇತರರ ಪ್ರಾಣ ಉಳಿಸಲು ಹೋರಾಡುತ್ತಿದ್ದ ಆ ಯೋಧೆ ಏಳು ದಿನಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಇಲ್ಲವಾಗಿದ್ದಾರೆ. ಸಂತಾಪಗಳು’.

ಮಧ್ಯಪ್ರದೇಶದ ಇಂದೋರ್‌ನಲ್ಲಿ 2020ರ ಏಪ್ರಿಲ್ 2 ರಂದು ಆರೋಗ್ಯ ಅಧಿಕಾರಿಗಳ ಐದು ಸದಸ್ಯರ ತಂಡವು ಕೊರೊನಾ ಪರೀಕ್ಷೆಗಾಗಿ ಭೇಟಿ ನೀಡಿತ್ತು. ಇಂದೋರ್‌ನ ಟಾಟ್ ಪ್ಯಾಟಿ ಬಖಾಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆ ಸುದ್ದಿಗೂ ಈ ಸುದ್ದಿಗೂ ಗೊಂದಲ ಉಂಟು ಮಾಡಿರುವುದರಿಂದ ಬಹಳಷ್ಟು ಜನ ಈ ಸುದ್ದಿಯನ್ನು ನಿಜವೆಂದು ನಂಬಿಬಿಟ್ಟಿದ್ದಾರೆ. ಹಾಗಾಗಿಯೇ ಈ ಪೋಸ್ಟ್‌ಗಳನ್ನು ಸಹ ಸಾವಿರಾರು ಜನ ಲೈಕ್‌ ಮತ್ತು ಷೇರ್‌ ಮಾಡಿದ್ದಾರೆ.

ಸತ್ಯವೇನು?

ಚಿತ್ರದಲ್ಲಿರುವ ಮಹಿಳೆ ವಂದನಾ ತಿವಾರಿ ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ  ಔಷಧಿ ಅಧಿಕಾರಿಯಾಗಿದ್ದರು (pharmacist) ಎಂದು ಸ್ಥಳೀಯ ಪತ್ರಿಕೆ ಭೋಪಾಲ್ ಸಮಾಚಾರ್‌ನಲ್ಲಿನ ಲೇಖನವೊಂದು ವರದಿ ಮಾಡಿದೆ. ತಿವಾರಿ ಅವರನ್ನು ಏಪ್ರಿಲ್ 1, 2020 ರಂದು ಗ್ವಾಲಿಯರ್‌ನ ಬಿರ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಏಪ್ರಿಲ್ 7 ರಂದು ನಿಧನರಾದರು ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಮಿದುಳಿನ ರಕ್ತಸ್ರಾವವು ಅವಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ತಿವಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾರ್ಚ್ 31 ರವರೆಗೆ ಕರ್ತವ್ಯದಲ್ಲಿದ್ದಾರೆ ಎಂದು ಆಸ್ಪತ್ರೆಯ ಡೀನ್ ಇಲಾ ಗುಜರಿಯಾ ತಿಳಿಸಿದ್ದಾರೆ. “ಗ್ವಾಲಿಯರ್ನಲ್ಲಿ ಪ್ರವೇಶ ಪಡೆದಿದ್ದರಿಂದ ಆಕೆಯ ಚಿಕಿತ್ಸೆಯ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಏಪ್ರಿಲ್ 1 ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಹಾಗಾಗಿ  ವಂದನಾ ತಿವಾರಿಗೆ ಯುಪಿ ಗ್ರಾಮವೊಂದರಲ್ಲಿ ಮುಸ್ಲಿಮರಿಂದ ಹಲ್ಲೆ ನಡೆಸಲಾಗಿದೆ ಎಂಬ ಹೇಳಿಕೆ ಸುಳ್ಳು ಎಂದು ಘಟನೆಗಳ ಟೈಮ್‌ಲೈನ್ ತೋರಿಸುತ್ತದೆ.

ಪೊಲೀಸ್ ವರಿಷ್ಠಾಧಿಕಾರಿ ಶಿವಪುರಿ ರಾಜೇಶ್ ಚಂದೇಲ್ “ಆಕೆಯನ್ನು ಶಿವಪುರಿ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಗೆ ಗ್ವಾಲಿಯರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಹ ನಡೆಸಲಾಯಿತು. ಆದರೂ ಬದುಕುಳಿಯಲಿಲ್ಲ. ಇನ್ನು ಆಕೆ ಉತ್ತರ ಪ್ರದೇಶದಲ್ಲಿ ಹಲ್ಲೆಗೊಳಗಾಗಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದಿದ್ದಾರೆ.

ಯುಪಿ ಪೊಲೀಸರ ಅಧಿಕೃತ ಫ್ಯಾಕ್ಟ್ ಚೆಕ್ ಹ್ಯಾಂಡಲ್‌ ಸಹ ಟ್ವೀಟ್ ಮಾಡಿ, ವಂದನಾ ತಿವಾರಿ ಅವರ ಸಾವಿಗೆ ಉತ್ತರ ಪ್ರದೇಶದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಧ್ಯಪ್ರದೇಶ ಸರ್ಕಾರದ ಪಿಆರ್ ಇಲಾಖೆಯು ವಂದನಾ ತಿವಾರಿ ಸಾವಿನ ಬಗ್ಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಕಚೇರಿ ಶಿವಪುರಿ ನೀಡಿದ ಹೇಳಿಕೆಯನ್ನು ಟ್ವೀಟ್ ಮಾಡಿದೆ. ವೈರಲ್ ಪೋಸ್ಟ್‌ಗಳಲ್ಲಿ ಹೇಳಿರುವಂತೆ ಕಲ್ಲು ತೂರಾಟದ ಘಟನೆಯ ಬಗ್ಗೆ ಹೇಳಿಕೆಯಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ.

ಇದು ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ತಪ್ಪು ಮಾಹಿತಿ ಹರಡುತ್ತಿರುವ ಇತ್ತೀಚಿನ ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...