HomeUncategorizedFact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ...

Fact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ ನಿಜವಲ್ಲ

- Advertisement -
- Advertisement -

COVID-19 ಪರೀಕ್ಷಿಸಲು ನಿರಾಕರಿಸಿದ ವೈದ್ಯೆಗೆ ಸ್ಥಳೀಯ ಮುಸ್ಲಿಮರು ಕಲ್ಲು ತೂರಿದ್ದರಿಂದ ಉತ್ತರ ಪ್ರದೇಶದ ಮಹಿಳಾ ವೈದ್ಯೆಯೊಬ್ಬಳು ಸಾವನ್ನಪ್ಪಿದ್ದಾರೆ ಎಂದು ಹೇಳುವ ಹಲವಾರು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್‌ ಆಗಿವೆ. ಆದರೆ ಆ ಸುದ್ದಿ ಸುಳ್ಳಾಗಿದ್ದು ವೈರಲ್‌ ಫೋಟೊದಲ್ಲಿರುವ ಮಹಿಳೆಯರು ಮಧ್ಯಪ್ರದೇಶ ಫಾರ್ಮಾಸಿಸ್ಟ್‌ ಆಗಿದ್ದು ಅವರು ಮಿದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಮಹಿಳೆಯೊಬ್ಬಳು ಬಾಯಿಯಲ್ಲಿ ಇಂಟ್ಯೂಬೇಶನ್ ಟ್ಯೂಬ್ ಇಟ್ಟುಕೊಂಡಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಕೋಮು ಬಣ್ಣವನ್ನು ನೀಡಲಾಗುತ್ತಿದೆ.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಮುಸ್ಲಿಮರು ಕಲ್ಲು ತೂರಾಟದಿಂದ ಗಾಯಗೊಂಡ ವೈದ್ಯ ಮಹಿಳೆ ಈಗ ಮೃತಪಟ್ಟಿದ್ದಾಳೆ. ಅಲ್ಲಿ ಅವರು ಶಂಕಿತ COVID-19 ರೋಗಿಗಳನ್ನು ಪರೀಕ್ಷಿಸಲು ಹೋಗಿದ್ದರು ಎಂದು ಒಂದು ಪೋಸ್ಟ್‌ನಲ್ಲಿ ಬರೆದಿದ್ದರೆ ಮತ್ತೊಂದು ಪೋಸ್ಟ್‌ ಈ ಕೆಳಗಿನಂತಿದೆ.

‘ಸ್ನೇಹಿತರೇ, ದುಃಖದ ಸುದ್ದಿ ಇದೆ. ಡಾಕ್ಟರ್ ವಂದನಾ ತಿವಾರಿ ಇನ್ನಿಲ್ಲ. ಕೊರೊನಾವೈರಸ್ ರೋಗಿಗಳನ್ನು ಪರೀಕ್ಷಿಸಲು ಅವರು ಕಳೆದ ವಾರ ಉತ್ತರ ಪ್ರದೇಶಕ್ಕೆ ಹೋಗಿದ್ದರು ಆದರೆ ಜಿಹಾದಿಗಳು ಅವಳ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಂಡರು. ಇತರರ ಪ್ರಾಣ ಉಳಿಸಲು ಹೋರಾಡುತ್ತಿದ್ದ ಆ ಯೋಧೆ ಏಳು ದಿನಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಇಲ್ಲವಾಗಿದ್ದಾರೆ. ಸಂತಾಪಗಳು’.

ಮಧ್ಯಪ್ರದೇಶದ ಇಂದೋರ್‌ನಲ್ಲಿ 2020ರ ಏಪ್ರಿಲ್ 2 ರಂದು ಆರೋಗ್ಯ ಅಧಿಕಾರಿಗಳ ಐದು ಸದಸ್ಯರ ತಂಡವು ಕೊರೊನಾ ಪರೀಕ್ಷೆಗಾಗಿ ಭೇಟಿ ನೀಡಿತ್ತು. ಇಂದೋರ್‌ನ ಟಾಟ್ ಪ್ಯಾಟಿ ಬಖಾಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆ ಸುದ್ದಿಗೂ ಈ ಸುದ್ದಿಗೂ ಗೊಂದಲ ಉಂಟು ಮಾಡಿರುವುದರಿಂದ ಬಹಳಷ್ಟು ಜನ ಈ ಸುದ್ದಿಯನ್ನು ನಿಜವೆಂದು ನಂಬಿಬಿಟ್ಟಿದ್ದಾರೆ. ಹಾಗಾಗಿಯೇ ಈ ಪೋಸ್ಟ್‌ಗಳನ್ನು ಸಹ ಸಾವಿರಾರು ಜನ ಲೈಕ್‌ ಮತ್ತು ಷೇರ್‌ ಮಾಡಿದ್ದಾರೆ.

ಸತ್ಯವೇನು?

ಚಿತ್ರದಲ್ಲಿರುವ ಮಹಿಳೆ ವಂದನಾ ತಿವಾರಿ ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ  ಔಷಧಿ ಅಧಿಕಾರಿಯಾಗಿದ್ದರು (pharmacist) ಎಂದು ಸ್ಥಳೀಯ ಪತ್ರಿಕೆ ಭೋಪಾಲ್ ಸಮಾಚಾರ್‌ನಲ್ಲಿನ ಲೇಖನವೊಂದು ವರದಿ ಮಾಡಿದೆ. ತಿವಾರಿ ಅವರನ್ನು ಏಪ್ರಿಲ್ 1, 2020 ರಂದು ಗ್ವಾಲಿಯರ್‌ನ ಬಿರ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಏಪ್ರಿಲ್ 7 ರಂದು ನಿಧನರಾದರು ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಮಿದುಳಿನ ರಕ್ತಸ್ರಾವವು ಅವಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ತಿವಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾರ್ಚ್ 31 ರವರೆಗೆ ಕರ್ತವ್ಯದಲ್ಲಿದ್ದಾರೆ ಎಂದು ಆಸ್ಪತ್ರೆಯ ಡೀನ್ ಇಲಾ ಗುಜರಿಯಾ ತಿಳಿಸಿದ್ದಾರೆ. “ಗ್ವಾಲಿಯರ್ನಲ್ಲಿ ಪ್ರವೇಶ ಪಡೆದಿದ್ದರಿಂದ ಆಕೆಯ ಚಿಕಿತ್ಸೆಯ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಏಪ್ರಿಲ್ 1 ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಹಾಗಾಗಿ  ವಂದನಾ ತಿವಾರಿಗೆ ಯುಪಿ ಗ್ರಾಮವೊಂದರಲ್ಲಿ ಮುಸ್ಲಿಮರಿಂದ ಹಲ್ಲೆ ನಡೆಸಲಾಗಿದೆ ಎಂಬ ಹೇಳಿಕೆ ಸುಳ್ಳು ಎಂದು ಘಟನೆಗಳ ಟೈಮ್‌ಲೈನ್ ತೋರಿಸುತ್ತದೆ.

ಪೊಲೀಸ್ ವರಿಷ್ಠಾಧಿಕಾರಿ ಶಿವಪುರಿ ರಾಜೇಶ್ ಚಂದೇಲ್ “ಆಕೆಯನ್ನು ಶಿವಪುರಿ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಗೆ ಗ್ವಾಲಿಯರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಹ ನಡೆಸಲಾಯಿತು. ಆದರೂ ಬದುಕುಳಿಯಲಿಲ್ಲ. ಇನ್ನು ಆಕೆ ಉತ್ತರ ಪ್ರದೇಶದಲ್ಲಿ ಹಲ್ಲೆಗೊಳಗಾಗಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದಿದ್ದಾರೆ.

ಯುಪಿ ಪೊಲೀಸರ ಅಧಿಕೃತ ಫ್ಯಾಕ್ಟ್ ಚೆಕ್ ಹ್ಯಾಂಡಲ್‌ ಸಹ ಟ್ವೀಟ್ ಮಾಡಿ, ವಂದನಾ ತಿವಾರಿ ಅವರ ಸಾವಿಗೆ ಉತ್ತರ ಪ್ರದೇಶದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಧ್ಯಪ್ರದೇಶ ಸರ್ಕಾರದ ಪಿಆರ್ ಇಲಾಖೆಯು ವಂದನಾ ತಿವಾರಿ ಸಾವಿನ ಬಗ್ಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಕಚೇರಿ ಶಿವಪುರಿ ನೀಡಿದ ಹೇಳಿಕೆಯನ್ನು ಟ್ವೀಟ್ ಮಾಡಿದೆ. ವೈರಲ್ ಪೋಸ್ಟ್‌ಗಳಲ್ಲಿ ಹೇಳಿರುವಂತೆ ಕಲ್ಲು ತೂರಾಟದ ಘಟನೆಯ ಬಗ್ಗೆ ಹೇಳಿಕೆಯಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ.

ಇದು ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ತಪ್ಪು ಮಾಹಿತಿ ಹರಡುತ್ತಿರುವ ಇತ್ತೀಚಿನ ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...