Homeಮುಖಪುಟರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ರಾಷ್ಟ್ರಗೀತೆ ಹಾಡುವಂತೆ ರಾಡುಗಳಿಂದ ಹೊಡೆಯಲ್ಪಟ್ಟವರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.

ದೆಹಲಿಯ ವೈರಲ್ ವಿಡಿಯೋವೊಂದರಲ್ಲಿ 23 ವರ್ಷದ ಯುವಕನೊಬ್ಬ ಕಾಣಿಸಿಕೊಂಡಿದ್ದು, ಇದರಲ್ಲಿ ಪೊಲೀಸರು ಮತ್ತು ಇತರ ನಾಲ್ಕು ಯುವಕರು ಸೇರಿ ರಾಷ್ಟ್ರಗೀತೆ ಹಾಡುವಂತೆ ಹಿಂಸೆಗೊಳಪಡಿಸಿದ್ದರು. ಇದನ್ನು ಆಲ್ಟ್ ನ್ಯೂಸ್ ಪರಿಶೀಲಿಸಿತ್ತು.

ಹಿಂಸಾಚಾರಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಯನ್ನು ಈಶಾನ್ಯ ದೆಹಲಿಯ ಕಾರ್ಡಂಪುರಿಯ ನಿವಾಸಿ “ಫೈಜಾನ್” ಎಂದು ಗುರುತಿಸಲಾಗಿದೆ. ಫೈಜಾನ್ ಗುರುವಾರ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಫೈಜಾನ್ ಮೃತಪಟ್ಟಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಗಾಯಗೊಂಡು ಬಿದ್ದಿರುವವರೊಂದಿಗೆ ದುಷ್ಕರ್ಮಿಯೊಬ್ಬ “ಚೆನ್ನಾಗಿ ಹಾಡಿ” ಎನ್ನುವ ಧ್ವನಿಯನ್ನು ಆ ವಿಡಿಯೊದಲ್ಲಿ ಕೇಳಬಹುದು.

ಪೊಲೀಸರು ಫೈಜಾನ್ ರನ್ನು ಕಸ್ಟಡಿಗೆ ತೆಗೆದುಕೊಂಡ ನಂತರವೂ ಥಳಿಸಲಾಯಿತು ಎಂದು ಅವರ ಕುಟುಂಬ ಆರೋಪಿಸಿದೆ.

“ಅವನನ್ನು ಮತ್ತು ಇತರರೊಂದಿಗೆ ತೀವ್ರವಾಗಿ ಥಳಿಸಲಾಗಿದೆ. ಅವನಿಗೆ ಕಬ್ಬಿಣದ ರಾಡ್ ಗಳಿಂದ ಹೊಡೆದಿದ್ದಾರೆ. ಇದರಿಂದಾಗಿ ಅವನ ಕಾಲುಗಳು ಮುರಿದುಹೋಗಿದ್ದವು. ಹೊಡೆತದಿಂದಾಗಿ ಅವನ ಇಡೀ ದೇಹವು ಕಪ್ಪಾಗಿತ್ತು. ಮೊದಲು ಅವನನ್ನು ರಸ್ತೆಯಲ್ಲಿ ಥಳಿಸಲಾಯಿತು. ನಂತರ ಪೊಲೀಸ್ ಅವನನ್ನು ಕರೆದೊಯ್ದಿರಬೇಕು, ಆದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಫೈಜಾನ್ ತಾಯಿ ಹೇಳಿದ್ದಾರೆ.

ಫೈಜಾನ್ ತಾಯಿ “ನನಗೆ ಮಾಹಿತಿ ತಿಳಿದ ನಂತರ ನಾನು ಆಸ್ಪತ್ರೆಗೆ ಹೋದೆ. ಅಲ್ಲಿ ಅವನನ್ನು ಕಾಣದಿದ್ದಾಗ ಜ್ಯೋತಿ ಕಾಲೋನಿಯಲ್ಲಿರುವ ಪೊಲೀಸ್ ಠಾಣೆಗೆ ಹೋದೆ. ಅಲ್ಲಿ ಪೊಲೀಸರಿಗೆ ಫೈಝನ್ ಫೋಟೋವನ್ನು ತೋರಿಸಿದ ನಂತರ ಅವನು ಅಲ್ಲಿದ್ದಾನೆ ಎಂದು ಪೊಲೀಸರು ದೃಡಪಡಿಸಿದರು. ನಾನು ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆ ಪೊಲೀಸರು ನನ್ನನ್ನು ಭೇಟಿಯಾಗಲು ಬಿಡಲಿಲ್ಲ” ಎಂದರಲ್ಲದೆ “ಮರುದಿನ ಬೆಳಿಗ್ಗೆ ಇತರ ಇಬ್ಬರೊಂದಿಗೆ ಪೊಲೀಸ್ ಠಾಣೆಗೆ ಮರಳಿದಾಗ ಬಂಧನದ ಬೆದರಿಕೆ ಹಾಕಲಾಯಿತು. ನಂತರ ರಾತ್ರಿ 11 ಗಂಟೆಗೆ ಅವನು ಸಾಯುತ್ತಿರುವಾಗ ನನ್ನನ್ನು ಕರೆದರು” ಎಂದು ಹೇಳಿದ್ದಾರೆ.

ಫೈಜಾನ್ ಅವರನ್ನು ಪೊಲೀಸರು ಬಿಡುಗಡೆ ಮಾಡಿದ ನಂತರ, ಕುಟುಂಬವು ಅವರನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದೊಯ್ಯಿದಿದ್ದಾರೆ. ಅಲ್ಲಿಗೆ ತಲುಪಿದಾಗ ಫೈಜಾನ್ ರ ರಕ್ತದೊತ್ತಡ ಮತ್ತು ನಾಡಿಮಿಡಿತ ಕಡಿಮೆಯಾಗಿತ್ತು. ತಲೆಗೆ ಮತ್ತು ಆಂತರಿಕ ಗಾಯಗಳಾಗಿದ್ದವು. ಗಾಯಗಳಿಂದ ಬೆನ್ನು ನೀಲಿ ಬಣ್ಣವಾಗಿತ್ತು ಎಂದು ಅಲ್ಲಿನ ವೈದ್ಯರಾದ ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

“ಅವನನ್ನು ನನ್ನ ಬಳಿಗೆ ಕರೆ ತಂದಾಗ, ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಎರಡು ದಿನಗಳ ನಂತರ ಬಿಟ್ಟು ಹೋಗಿದ್ದಾರೆ ಎಂದು ಅವರ ತಾಯಿ ಹೇಳುತ್ತಿದ್ದರು” ಎಂದು ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 500 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಗಳು ನಡೆಯುತ್ತಿದ್ದ ಅನೇಕ ಸ್ಥಳಗಳಲ್ಲಿ, ಕನಿಷ್ಠ ಪೊಲೀಸ್ ಉಪಸ್ಥಿತಿಯಿರಲಿಲ್ಲ ಎಂಬ ಆರೋಪಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...