Homeಮುಖಪುಟರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ರಾಷ್ಟ್ರಗೀತೆ ಹಾಡುವಂತೆ ರಾಡುಗಳಿಂದ ಹೊಡೆಯಲ್ಪಟ್ಟವರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.

ದೆಹಲಿಯ ವೈರಲ್ ವಿಡಿಯೋವೊಂದರಲ್ಲಿ 23 ವರ್ಷದ ಯುವಕನೊಬ್ಬ ಕಾಣಿಸಿಕೊಂಡಿದ್ದು, ಇದರಲ್ಲಿ ಪೊಲೀಸರು ಮತ್ತು ಇತರ ನಾಲ್ಕು ಯುವಕರು ಸೇರಿ ರಾಷ್ಟ್ರಗೀತೆ ಹಾಡುವಂತೆ ಹಿಂಸೆಗೊಳಪಡಿಸಿದ್ದರು. ಇದನ್ನು ಆಲ್ಟ್ ನ್ಯೂಸ್ ಪರಿಶೀಲಿಸಿತ್ತು.

ಹಿಂಸಾಚಾರಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಯನ್ನು ಈಶಾನ್ಯ ದೆಹಲಿಯ ಕಾರ್ಡಂಪುರಿಯ ನಿವಾಸಿ “ಫೈಜಾನ್” ಎಂದು ಗುರುತಿಸಲಾಗಿದೆ. ಫೈಜಾನ್ ಗುರುವಾರ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಫೈಜಾನ್ ಮೃತಪಟ್ಟಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಗಾಯಗೊಂಡು ಬಿದ್ದಿರುವವರೊಂದಿಗೆ ದುಷ್ಕರ್ಮಿಯೊಬ್ಬ “ಚೆನ್ನಾಗಿ ಹಾಡಿ” ಎನ್ನುವ ಧ್ವನಿಯನ್ನು ಆ ವಿಡಿಯೊದಲ್ಲಿ ಕೇಳಬಹುದು.

ಪೊಲೀಸರು ಫೈಜಾನ್ ರನ್ನು ಕಸ್ಟಡಿಗೆ ತೆಗೆದುಕೊಂಡ ನಂತರವೂ ಥಳಿಸಲಾಯಿತು ಎಂದು ಅವರ ಕುಟುಂಬ ಆರೋಪಿಸಿದೆ.

“ಅವನನ್ನು ಮತ್ತು ಇತರರೊಂದಿಗೆ ತೀವ್ರವಾಗಿ ಥಳಿಸಲಾಗಿದೆ. ಅವನಿಗೆ ಕಬ್ಬಿಣದ ರಾಡ್ ಗಳಿಂದ ಹೊಡೆದಿದ್ದಾರೆ. ಇದರಿಂದಾಗಿ ಅವನ ಕಾಲುಗಳು ಮುರಿದುಹೋಗಿದ್ದವು. ಹೊಡೆತದಿಂದಾಗಿ ಅವನ ಇಡೀ ದೇಹವು ಕಪ್ಪಾಗಿತ್ತು. ಮೊದಲು ಅವನನ್ನು ರಸ್ತೆಯಲ್ಲಿ ಥಳಿಸಲಾಯಿತು. ನಂತರ ಪೊಲೀಸ್ ಅವನನ್ನು ಕರೆದೊಯ್ದಿರಬೇಕು, ಆದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಫೈಜಾನ್ ತಾಯಿ ಹೇಳಿದ್ದಾರೆ.

ಫೈಜಾನ್ ತಾಯಿ “ನನಗೆ ಮಾಹಿತಿ ತಿಳಿದ ನಂತರ ನಾನು ಆಸ್ಪತ್ರೆಗೆ ಹೋದೆ. ಅಲ್ಲಿ ಅವನನ್ನು ಕಾಣದಿದ್ದಾಗ ಜ್ಯೋತಿ ಕಾಲೋನಿಯಲ್ಲಿರುವ ಪೊಲೀಸ್ ಠಾಣೆಗೆ ಹೋದೆ. ಅಲ್ಲಿ ಪೊಲೀಸರಿಗೆ ಫೈಝನ್ ಫೋಟೋವನ್ನು ತೋರಿಸಿದ ನಂತರ ಅವನು ಅಲ್ಲಿದ್ದಾನೆ ಎಂದು ಪೊಲೀಸರು ದೃಡಪಡಿಸಿದರು. ನಾನು ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆ ಪೊಲೀಸರು ನನ್ನನ್ನು ಭೇಟಿಯಾಗಲು ಬಿಡಲಿಲ್ಲ” ಎಂದರಲ್ಲದೆ “ಮರುದಿನ ಬೆಳಿಗ್ಗೆ ಇತರ ಇಬ್ಬರೊಂದಿಗೆ ಪೊಲೀಸ್ ಠಾಣೆಗೆ ಮರಳಿದಾಗ ಬಂಧನದ ಬೆದರಿಕೆ ಹಾಕಲಾಯಿತು. ನಂತರ ರಾತ್ರಿ 11 ಗಂಟೆಗೆ ಅವನು ಸಾಯುತ್ತಿರುವಾಗ ನನ್ನನ್ನು ಕರೆದರು” ಎಂದು ಹೇಳಿದ್ದಾರೆ.

ಫೈಜಾನ್ ಅವರನ್ನು ಪೊಲೀಸರು ಬಿಡುಗಡೆ ಮಾಡಿದ ನಂತರ, ಕುಟುಂಬವು ಅವರನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದೊಯ್ಯಿದಿದ್ದಾರೆ. ಅಲ್ಲಿಗೆ ತಲುಪಿದಾಗ ಫೈಜಾನ್ ರ ರಕ್ತದೊತ್ತಡ ಮತ್ತು ನಾಡಿಮಿಡಿತ ಕಡಿಮೆಯಾಗಿತ್ತು. ತಲೆಗೆ ಮತ್ತು ಆಂತರಿಕ ಗಾಯಗಳಾಗಿದ್ದವು. ಗಾಯಗಳಿಂದ ಬೆನ್ನು ನೀಲಿ ಬಣ್ಣವಾಗಿತ್ತು ಎಂದು ಅಲ್ಲಿನ ವೈದ್ಯರಾದ ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

“ಅವನನ್ನು ನನ್ನ ಬಳಿಗೆ ಕರೆ ತಂದಾಗ, ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಎರಡು ದಿನಗಳ ನಂತರ ಬಿಟ್ಟು ಹೋಗಿದ್ದಾರೆ ಎಂದು ಅವರ ತಾಯಿ ಹೇಳುತ್ತಿದ್ದರು” ಎಂದು ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 500 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಗಳು ನಡೆಯುತ್ತಿದ್ದ ಅನೇಕ ಸ್ಥಳಗಳಲ್ಲಿ, ಕನಿಷ್ಠ ಪೊಲೀಸ್ ಉಪಸ್ಥಿತಿಯಿರಲಿಲ್ಲ ಎಂಬ ಆರೋಪಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...