Homeಮುಖಪುಟರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ರಾಷ್ಟ್ರಗೀತೆ ಹಾಡುವಂತೆ ರಾಡುಗಳಿಂದ ಹೊಡೆಯಲ್ಪಟ್ಟವರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.

ದೆಹಲಿಯ ವೈರಲ್ ವಿಡಿಯೋವೊಂದರಲ್ಲಿ 23 ವರ್ಷದ ಯುವಕನೊಬ್ಬ ಕಾಣಿಸಿಕೊಂಡಿದ್ದು, ಇದರಲ್ಲಿ ಪೊಲೀಸರು ಮತ್ತು ಇತರ ನಾಲ್ಕು ಯುವಕರು ಸೇರಿ ರಾಷ್ಟ್ರಗೀತೆ ಹಾಡುವಂತೆ ಹಿಂಸೆಗೊಳಪಡಿಸಿದ್ದರು. ಇದನ್ನು ಆಲ್ಟ್ ನ್ಯೂಸ್ ಪರಿಶೀಲಿಸಿತ್ತು.

ಹಿಂಸಾಚಾರಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಯನ್ನು ಈಶಾನ್ಯ ದೆಹಲಿಯ ಕಾರ್ಡಂಪುರಿಯ ನಿವಾಸಿ “ಫೈಜಾನ್” ಎಂದು ಗುರುತಿಸಲಾಗಿದೆ. ಫೈಜಾನ್ ಗುರುವಾರ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಫೈಜಾನ್ ಮೃತಪಟ್ಟಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಗಾಯಗೊಂಡು ಬಿದ್ದಿರುವವರೊಂದಿಗೆ ದುಷ್ಕರ್ಮಿಯೊಬ್ಬ “ಚೆನ್ನಾಗಿ ಹಾಡಿ” ಎನ್ನುವ ಧ್ವನಿಯನ್ನು ಆ ವಿಡಿಯೊದಲ್ಲಿ ಕೇಳಬಹುದು.

ಪೊಲೀಸರು ಫೈಜಾನ್ ರನ್ನು ಕಸ್ಟಡಿಗೆ ತೆಗೆದುಕೊಂಡ ನಂತರವೂ ಥಳಿಸಲಾಯಿತು ಎಂದು ಅವರ ಕುಟುಂಬ ಆರೋಪಿಸಿದೆ.

“ಅವನನ್ನು ಮತ್ತು ಇತರರೊಂದಿಗೆ ತೀವ್ರವಾಗಿ ಥಳಿಸಲಾಗಿದೆ. ಅವನಿಗೆ ಕಬ್ಬಿಣದ ರಾಡ್ ಗಳಿಂದ ಹೊಡೆದಿದ್ದಾರೆ. ಇದರಿಂದಾಗಿ ಅವನ ಕಾಲುಗಳು ಮುರಿದುಹೋಗಿದ್ದವು. ಹೊಡೆತದಿಂದಾಗಿ ಅವನ ಇಡೀ ದೇಹವು ಕಪ್ಪಾಗಿತ್ತು. ಮೊದಲು ಅವನನ್ನು ರಸ್ತೆಯಲ್ಲಿ ಥಳಿಸಲಾಯಿತು. ನಂತರ ಪೊಲೀಸ್ ಅವನನ್ನು ಕರೆದೊಯ್ದಿರಬೇಕು, ಆದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಫೈಜಾನ್ ತಾಯಿ ಹೇಳಿದ್ದಾರೆ.

ಫೈಜಾನ್ ತಾಯಿ “ನನಗೆ ಮಾಹಿತಿ ತಿಳಿದ ನಂತರ ನಾನು ಆಸ್ಪತ್ರೆಗೆ ಹೋದೆ. ಅಲ್ಲಿ ಅವನನ್ನು ಕಾಣದಿದ್ದಾಗ ಜ್ಯೋತಿ ಕಾಲೋನಿಯಲ್ಲಿರುವ ಪೊಲೀಸ್ ಠಾಣೆಗೆ ಹೋದೆ. ಅಲ್ಲಿ ಪೊಲೀಸರಿಗೆ ಫೈಝನ್ ಫೋಟೋವನ್ನು ತೋರಿಸಿದ ನಂತರ ಅವನು ಅಲ್ಲಿದ್ದಾನೆ ಎಂದು ಪೊಲೀಸರು ದೃಡಪಡಿಸಿದರು. ನಾನು ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆ ಪೊಲೀಸರು ನನ್ನನ್ನು ಭೇಟಿಯಾಗಲು ಬಿಡಲಿಲ್ಲ” ಎಂದರಲ್ಲದೆ “ಮರುದಿನ ಬೆಳಿಗ್ಗೆ ಇತರ ಇಬ್ಬರೊಂದಿಗೆ ಪೊಲೀಸ್ ಠಾಣೆಗೆ ಮರಳಿದಾಗ ಬಂಧನದ ಬೆದರಿಕೆ ಹಾಕಲಾಯಿತು. ನಂತರ ರಾತ್ರಿ 11 ಗಂಟೆಗೆ ಅವನು ಸಾಯುತ್ತಿರುವಾಗ ನನ್ನನ್ನು ಕರೆದರು” ಎಂದು ಹೇಳಿದ್ದಾರೆ.

ಫೈಜಾನ್ ಅವರನ್ನು ಪೊಲೀಸರು ಬಿಡುಗಡೆ ಮಾಡಿದ ನಂತರ, ಕುಟುಂಬವು ಅವರನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದೊಯ್ಯಿದಿದ್ದಾರೆ. ಅಲ್ಲಿಗೆ ತಲುಪಿದಾಗ ಫೈಜಾನ್ ರ ರಕ್ತದೊತ್ತಡ ಮತ್ತು ನಾಡಿಮಿಡಿತ ಕಡಿಮೆಯಾಗಿತ್ತು. ತಲೆಗೆ ಮತ್ತು ಆಂತರಿಕ ಗಾಯಗಳಾಗಿದ್ದವು. ಗಾಯಗಳಿಂದ ಬೆನ್ನು ನೀಲಿ ಬಣ್ಣವಾಗಿತ್ತು ಎಂದು ಅಲ್ಲಿನ ವೈದ್ಯರಾದ ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

“ಅವನನ್ನು ನನ್ನ ಬಳಿಗೆ ಕರೆ ತಂದಾಗ, ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಎರಡು ದಿನಗಳ ನಂತರ ಬಿಟ್ಟು ಹೋಗಿದ್ದಾರೆ ಎಂದು ಅವರ ತಾಯಿ ಹೇಳುತ್ತಿದ್ದರು” ಎಂದು ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 500 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಗಳು ನಡೆಯುತ್ತಿದ್ದ ಅನೇಕ ಸ್ಥಳಗಳಲ್ಲಿ, ಕನಿಷ್ಠ ಪೊಲೀಸ್ ಉಪಸ್ಥಿತಿಯಿರಲಿಲ್ಲ ಎಂಬ ಆರೋಪಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...