Homeಮುಖಪುಟರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ರಾಷ್ಟ್ರಗೀತೆ ಹಾಡುವಂತೆ ರಾಡುಗಳಿಂದ ಹೊಡೆಯಲ್ಪಟ್ಟವರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.

ದೆಹಲಿಯ ವೈರಲ್ ವಿಡಿಯೋವೊಂದರಲ್ಲಿ 23 ವರ್ಷದ ಯುವಕನೊಬ್ಬ ಕಾಣಿಸಿಕೊಂಡಿದ್ದು, ಇದರಲ್ಲಿ ಪೊಲೀಸರು ಮತ್ತು ಇತರ ನಾಲ್ಕು ಯುವಕರು ಸೇರಿ ರಾಷ್ಟ್ರಗೀತೆ ಹಾಡುವಂತೆ ಹಿಂಸೆಗೊಳಪಡಿಸಿದ್ದರು. ಇದನ್ನು ಆಲ್ಟ್ ನ್ಯೂಸ್ ಪರಿಶೀಲಿಸಿತ್ತು.

ಹಿಂಸಾಚಾರಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಯನ್ನು ಈಶಾನ್ಯ ದೆಹಲಿಯ ಕಾರ್ಡಂಪುರಿಯ ನಿವಾಸಿ “ಫೈಜಾನ್” ಎಂದು ಗುರುತಿಸಲಾಗಿದೆ. ಫೈಜಾನ್ ಗುರುವಾರ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಫೈಜಾನ್ ಮೃತಪಟ್ಟಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಗಾಯಗೊಂಡು ಬಿದ್ದಿರುವವರೊಂದಿಗೆ ದುಷ್ಕರ್ಮಿಯೊಬ್ಬ “ಚೆನ್ನಾಗಿ ಹಾಡಿ” ಎನ್ನುವ ಧ್ವನಿಯನ್ನು ಆ ವಿಡಿಯೊದಲ್ಲಿ ಕೇಳಬಹುದು.

ಪೊಲೀಸರು ಫೈಜಾನ್ ರನ್ನು ಕಸ್ಟಡಿಗೆ ತೆಗೆದುಕೊಂಡ ನಂತರವೂ ಥಳಿಸಲಾಯಿತು ಎಂದು ಅವರ ಕುಟುಂಬ ಆರೋಪಿಸಿದೆ.

“ಅವನನ್ನು ಮತ್ತು ಇತರರೊಂದಿಗೆ ತೀವ್ರವಾಗಿ ಥಳಿಸಲಾಗಿದೆ. ಅವನಿಗೆ ಕಬ್ಬಿಣದ ರಾಡ್ ಗಳಿಂದ ಹೊಡೆದಿದ್ದಾರೆ. ಇದರಿಂದಾಗಿ ಅವನ ಕಾಲುಗಳು ಮುರಿದುಹೋಗಿದ್ದವು. ಹೊಡೆತದಿಂದಾಗಿ ಅವನ ಇಡೀ ದೇಹವು ಕಪ್ಪಾಗಿತ್ತು. ಮೊದಲು ಅವನನ್ನು ರಸ್ತೆಯಲ್ಲಿ ಥಳಿಸಲಾಯಿತು. ನಂತರ ಪೊಲೀಸ್ ಅವನನ್ನು ಕರೆದೊಯ್ದಿರಬೇಕು, ಆದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಫೈಜಾನ್ ತಾಯಿ ಹೇಳಿದ್ದಾರೆ.

ಫೈಜಾನ್ ತಾಯಿ “ನನಗೆ ಮಾಹಿತಿ ತಿಳಿದ ನಂತರ ನಾನು ಆಸ್ಪತ್ರೆಗೆ ಹೋದೆ. ಅಲ್ಲಿ ಅವನನ್ನು ಕಾಣದಿದ್ದಾಗ ಜ್ಯೋತಿ ಕಾಲೋನಿಯಲ್ಲಿರುವ ಪೊಲೀಸ್ ಠಾಣೆಗೆ ಹೋದೆ. ಅಲ್ಲಿ ಪೊಲೀಸರಿಗೆ ಫೈಝನ್ ಫೋಟೋವನ್ನು ತೋರಿಸಿದ ನಂತರ ಅವನು ಅಲ್ಲಿದ್ದಾನೆ ಎಂದು ಪೊಲೀಸರು ದೃಡಪಡಿಸಿದರು. ನಾನು ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆ ಪೊಲೀಸರು ನನ್ನನ್ನು ಭೇಟಿಯಾಗಲು ಬಿಡಲಿಲ್ಲ” ಎಂದರಲ್ಲದೆ “ಮರುದಿನ ಬೆಳಿಗ್ಗೆ ಇತರ ಇಬ್ಬರೊಂದಿಗೆ ಪೊಲೀಸ್ ಠಾಣೆಗೆ ಮರಳಿದಾಗ ಬಂಧನದ ಬೆದರಿಕೆ ಹಾಕಲಾಯಿತು. ನಂತರ ರಾತ್ರಿ 11 ಗಂಟೆಗೆ ಅವನು ಸಾಯುತ್ತಿರುವಾಗ ನನ್ನನ್ನು ಕರೆದರು” ಎಂದು ಹೇಳಿದ್ದಾರೆ.

ಫೈಜಾನ್ ಅವರನ್ನು ಪೊಲೀಸರು ಬಿಡುಗಡೆ ಮಾಡಿದ ನಂತರ, ಕುಟುಂಬವು ಅವರನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದೊಯ್ಯಿದಿದ್ದಾರೆ. ಅಲ್ಲಿಗೆ ತಲುಪಿದಾಗ ಫೈಜಾನ್ ರ ರಕ್ತದೊತ್ತಡ ಮತ್ತು ನಾಡಿಮಿಡಿತ ಕಡಿಮೆಯಾಗಿತ್ತು. ತಲೆಗೆ ಮತ್ತು ಆಂತರಿಕ ಗಾಯಗಳಾಗಿದ್ದವು. ಗಾಯಗಳಿಂದ ಬೆನ್ನು ನೀಲಿ ಬಣ್ಣವಾಗಿತ್ತು ಎಂದು ಅಲ್ಲಿನ ವೈದ್ಯರಾದ ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

“ಅವನನ್ನು ನನ್ನ ಬಳಿಗೆ ಕರೆ ತಂದಾಗ, ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಎರಡು ದಿನಗಳ ನಂತರ ಬಿಟ್ಟು ಹೋಗಿದ್ದಾರೆ ಎಂದು ಅವರ ತಾಯಿ ಹೇಳುತ್ತಿದ್ದರು” ಎಂದು ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 500 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಗಳು ನಡೆಯುತ್ತಿದ್ದ ಅನೇಕ ಸ್ಥಳಗಳಲ್ಲಿ, ಕನಿಷ್ಠ ಪೊಲೀಸ್ ಉಪಸ್ಥಿತಿಯಿರಲಿಲ್ಲ ಎಂಬ ಆರೋಪಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...