Homeಮುಖಪುಟರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ರಾಷ್ಟ್ರಗೀತೆ ಹಾಡುವಂತೆ ರಾಡುಗಳಿಂದ ಹೊಡೆಯಲ್ಪಟ್ಟವರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.

ದೆಹಲಿಯ ವೈರಲ್ ವಿಡಿಯೋವೊಂದರಲ್ಲಿ 23 ವರ್ಷದ ಯುವಕನೊಬ್ಬ ಕಾಣಿಸಿಕೊಂಡಿದ್ದು, ಇದರಲ್ಲಿ ಪೊಲೀಸರು ಮತ್ತು ಇತರ ನಾಲ್ಕು ಯುವಕರು ಸೇರಿ ರಾಷ್ಟ್ರಗೀತೆ ಹಾಡುವಂತೆ ಹಿಂಸೆಗೊಳಪಡಿಸಿದ್ದರು. ಇದನ್ನು ಆಲ್ಟ್ ನ್ಯೂಸ್ ಪರಿಶೀಲಿಸಿತ್ತು.

ಹಿಂಸಾಚಾರಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಯನ್ನು ಈಶಾನ್ಯ ದೆಹಲಿಯ ಕಾರ್ಡಂಪುರಿಯ ನಿವಾಸಿ “ಫೈಜಾನ್” ಎಂದು ಗುರುತಿಸಲಾಗಿದೆ. ಫೈಜಾನ್ ಗುರುವಾರ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಫೈಜಾನ್ ಮೃತಪಟ್ಟಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಗಾಯಗೊಂಡು ಬಿದ್ದಿರುವವರೊಂದಿಗೆ ದುಷ್ಕರ್ಮಿಯೊಬ್ಬ “ಚೆನ್ನಾಗಿ ಹಾಡಿ” ಎನ್ನುವ ಧ್ವನಿಯನ್ನು ಆ ವಿಡಿಯೊದಲ್ಲಿ ಕೇಳಬಹುದು.

ಪೊಲೀಸರು ಫೈಜಾನ್ ರನ್ನು ಕಸ್ಟಡಿಗೆ ತೆಗೆದುಕೊಂಡ ನಂತರವೂ ಥಳಿಸಲಾಯಿತು ಎಂದು ಅವರ ಕುಟುಂಬ ಆರೋಪಿಸಿದೆ.

“ಅವನನ್ನು ಮತ್ತು ಇತರರೊಂದಿಗೆ ತೀವ್ರವಾಗಿ ಥಳಿಸಲಾಗಿದೆ. ಅವನಿಗೆ ಕಬ್ಬಿಣದ ರಾಡ್ ಗಳಿಂದ ಹೊಡೆದಿದ್ದಾರೆ. ಇದರಿಂದಾಗಿ ಅವನ ಕಾಲುಗಳು ಮುರಿದುಹೋಗಿದ್ದವು. ಹೊಡೆತದಿಂದಾಗಿ ಅವನ ಇಡೀ ದೇಹವು ಕಪ್ಪಾಗಿತ್ತು. ಮೊದಲು ಅವನನ್ನು ರಸ್ತೆಯಲ್ಲಿ ಥಳಿಸಲಾಯಿತು. ನಂತರ ಪೊಲೀಸ್ ಅವನನ್ನು ಕರೆದೊಯ್ದಿರಬೇಕು, ಆದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಫೈಜಾನ್ ತಾಯಿ ಹೇಳಿದ್ದಾರೆ.

ಫೈಜಾನ್ ತಾಯಿ “ನನಗೆ ಮಾಹಿತಿ ತಿಳಿದ ನಂತರ ನಾನು ಆಸ್ಪತ್ರೆಗೆ ಹೋದೆ. ಅಲ್ಲಿ ಅವನನ್ನು ಕಾಣದಿದ್ದಾಗ ಜ್ಯೋತಿ ಕಾಲೋನಿಯಲ್ಲಿರುವ ಪೊಲೀಸ್ ಠಾಣೆಗೆ ಹೋದೆ. ಅಲ್ಲಿ ಪೊಲೀಸರಿಗೆ ಫೈಝನ್ ಫೋಟೋವನ್ನು ತೋರಿಸಿದ ನಂತರ ಅವನು ಅಲ್ಲಿದ್ದಾನೆ ಎಂದು ಪೊಲೀಸರು ದೃಡಪಡಿಸಿದರು. ನಾನು ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆ ಪೊಲೀಸರು ನನ್ನನ್ನು ಭೇಟಿಯಾಗಲು ಬಿಡಲಿಲ್ಲ” ಎಂದರಲ್ಲದೆ “ಮರುದಿನ ಬೆಳಿಗ್ಗೆ ಇತರ ಇಬ್ಬರೊಂದಿಗೆ ಪೊಲೀಸ್ ಠಾಣೆಗೆ ಮರಳಿದಾಗ ಬಂಧನದ ಬೆದರಿಕೆ ಹಾಕಲಾಯಿತು. ನಂತರ ರಾತ್ರಿ 11 ಗಂಟೆಗೆ ಅವನು ಸಾಯುತ್ತಿರುವಾಗ ನನ್ನನ್ನು ಕರೆದರು” ಎಂದು ಹೇಳಿದ್ದಾರೆ.

ಫೈಜಾನ್ ಅವರನ್ನು ಪೊಲೀಸರು ಬಿಡುಗಡೆ ಮಾಡಿದ ನಂತರ, ಕುಟುಂಬವು ಅವರನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದೊಯ್ಯಿದಿದ್ದಾರೆ. ಅಲ್ಲಿಗೆ ತಲುಪಿದಾಗ ಫೈಜಾನ್ ರ ರಕ್ತದೊತ್ತಡ ಮತ್ತು ನಾಡಿಮಿಡಿತ ಕಡಿಮೆಯಾಗಿತ್ತು. ತಲೆಗೆ ಮತ್ತು ಆಂತರಿಕ ಗಾಯಗಳಾಗಿದ್ದವು. ಗಾಯಗಳಿಂದ ಬೆನ್ನು ನೀಲಿ ಬಣ್ಣವಾಗಿತ್ತು ಎಂದು ಅಲ್ಲಿನ ವೈದ್ಯರಾದ ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

“ಅವನನ್ನು ನನ್ನ ಬಳಿಗೆ ಕರೆ ತಂದಾಗ, ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಎರಡು ದಿನಗಳ ನಂತರ ಬಿಟ್ಟು ಹೋಗಿದ್ದಾರೆ ಎಂದು ಅವರ ತಾಯಿ ಹೇಳುತ್ತಿದ್ದರು” ಎಂದು ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 500 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಗಳು ನಡೆಯುತ್ತಿದ್ದ ಅನೇಕ ಸ್ಥಳಗಳಲ್ಲಿ, ಕನಿಷ್ಠ ಪೊಲೀಸ್ ಉಪಸ್ಥಿತಿಯಿರಲಿಲ್ಲ ಎಂಬ ಆರೋಪಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...